Homeಕರ್ನಾಟಕಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

ಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಚುನಾವಣಾ ಪ್ರಚಾರ ವೇಳೆ ಹಿಂದೂ ಮುಸ್ಲಿಂ ಗಲಭೆ ಸೃಷ್ಟಿಸುವ ರೀತಿಯಲ್ಲಿ ಕೋಮುದ್ವೇಷ ಭಾಷಣ ಮಾಡಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ನೀಡಿರುವ ದೂರಿನ ಅನ್ವಯ ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 153ಎ, 171ಜಿ ಮತ್ತು ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 125ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಕ್ಷಿಪ್ರ ಪರಿಶೀಲನಾ ತಂಡ-4ರಲ್ಲಿ ಕೆಲಸ ಮಾಡುತ್ತಿರುವ ಆರ್‌.ಕುಮಾರಸ್ವಾಮಿಯವರು ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಧಿಕಾರಿ ನೀಡಿರುವ ದೂರಿನಲ್ಲಿ ಏನಿದೆ?

“ನಾನು ಕ್ಷಿಪ್ರ ಪರಿಶೀಲನಾ ತಂಡ- 4ರಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ತಂಡದಲ್ಲಿ ಸಹಾಯಕ ಸಿಬ್ಬಂದಿಗಳಾದ ಸಿ.ಮಹೇಶ, ಪೊಲೀಸ್ ಸಹಾಯಕ ಉಪನಿರೀಕ್ಷಕರಾದ ಕೆ.ಜೆ.ಫ್ರಾನ್ಸಿಸ್, ಛಾಯಾಚಿತ್ರಗಾರ ಕೆ.ರಿಜ್ವಾನ್ನ್‌ ಇದ್ದೆವು.”

“ದಿನಾಂಕ 4-05-2023ರಂದು ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಚಾರದ ಸ್ಥಳವಾದ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ಸುಮಾರು 12.45 ಗಂಟೆಗೆ ಕಾರ್ಯಕ್ರಮ ನಡೆಯುತ್ತಿತ್ತು. ಈ ಕಾರ್ಯಕ್ರಮಕ್ಕೆ ನನ್ನ ತಂಡದವರೊಂದಿಗೆ ಹೋಗಿದ್ದೆವು. ಪೊನ್ನಂಪೇಟೆ ನಗರದಲ್ಲಿ ವಾಸವಿರುವ ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪನವರು ಬಿಜೆಪಿ ಪರ ಪ್ರಚಾರದಲ್ಲಿ ನಿರತರಾಗಿದ್ದರು.”

“ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಮುಸ್ಲಿಂ ಜನಾಂಗಕ್ಕೆ ಘೋಷಿಸಿರುವ ಸೌಲಭ್ಯದ ಕುರಿತು ಕೊಡವ ಮತ್ತು ಕನ್ನಡ ಭಾಷೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕೋಮುದ್ವೇಷ ಭಾಷಣ ಮಾಡಿದ್ದಾರೆ.”

“ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯದವರಿಗೆ ಉಚಿತ ವಸತಿ ನಿಲಯ ನೀಡುವುದಾಗಿ ತಿಳಿಸಿದ್ದು, ಈ ವಸತಿ ಶಾಲೆಗಳಲ್ಲಿ ಹಿಂದೂಗಳನ್ನು ಕೊಲ್ಲಲು ತರಬೇತಿ ನೀಡುವ ಉದ್ದೇಶ ಹೊಂದಿದ್ದಾರೆ. ಅದಕ್ಕಾಗಿ ಈ ಸೌಲಭ್ಯ ನೀಡಿದ್ದಾರೆ ಎಂದು ಆರೋಪಿಸಿ ಭಾಷಣ ಮಾಡಿದ್ದಾರೆ.”

“ಇದರಿಂದ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡಿ, ಶತ್ರುತ್ವವನ್ನು ಉಂಟು ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಭಯ, ಭೀತಿ ಮೂಡಿಸುವ ಹಲವು ರೀತಿಯ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ. ಅಡ್ಡಂಡ ಕಾರ್ಯಪ್ಪ ಪ್ರಚೋದನಾಕಾರಿ ಭಾಷಣ ಮಾಡಿದ್ದು, ಮಾದರಿ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಕಾರ್ಯಪ್ಪ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನು ಪರಿಶೀಲಿಸಲು ಹಾಗೂ ವಿಡಿಯೊ ತುಣುಕುಗಳನ್ನು ಸಿಡಿ ರೂಪದಲ್ಲಿ ಸಲ್ಲಿಸಲು ಕಾಲಾವಕಾಶವನ್ನು ಅಧಿಕಾರಿ ತೆಗೆದುಕೊಂಡಿದ್ದಾರೆ.

ಲೂಸ್ ಟಾಕ್‌ಗಳಿಗೆ ಹೆಸರಾದ ಅಡ್ಡಂಡ ಕಾರ್ಯಪ್ಪ ಕೋಮುದ್ವೇಷ ಭಾಷಣ ಮಾಡುವುದು ಹೊಸದೇನೂ ಅಲ್ಲ. ಟಿಪ್ಪುವನ್ನು ಕೊಂದಿದ್ದು ಉರಿಗೌಡ, ನಂಜೇಗೌಡ ಎಂದು ತಮ್ಮ ನಾಟಕದಲ್ಲಿ ನಕಲಿ ಇತಿಹಾಸ ಸೃಷ್ಟಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು.

ಒಕ್ಕಲಿಗರು ಮತ್ತು ಮುಸ್ಲಿಮರನ್ನು ಕಾರ್ಯಪ್ಪ ಎತ್ತಿಕಟ್ಟಲು ಯತ್ನಿಸುತ್ತಿದ್ದಾರೆಂಬ ಟೀಕೆಗಳು ವ್ಯಕ್ತವಾಗಿದ್ದವು. ಪ್ರಧಾನಿ ಮೋದಿಯವರು ಮಂಡ್ಯ ಜಿಲ್ಲೆಗೆ ಪ್ರವೇಶಿಸುವ ಸಂದರ್ಭದಲ್ಲಿ ಉರಿಗೌಡ, ನಂಜೇಗೌಡ ಮಹಾದ್ವಾರ ಸೃಷ್ಟಿಸಿ ವಿವಾದವನ್ನು ಮತ್ತಷ್ಟು ದೊಡ್ಡದಾಗಿಸಲಾಗಿತ್ತು. ಬಿಜೆಪಿ ನಾಯಕರೂ ಈ ಪಾತ್ರಗಳನ್ನೇ ಇಟ್ಟುಕೊಂಡು ಹೇಳಿಕೆಗಳನ್ನು ನೀಡುತ್ತಿದ್ದರು.

ಈ ವಿಚಾರವಾಗಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯವರು ಮಧ್ಯಪ್ರವೇಶಿಸಿ, ”ಸಿ.ಟಿ ರವಿ ಇರಬಹುದು, ಅಶ್ವತ್ಥ ನಾರಾಯಣ ಅವರಿರಬಹುದು, ಗೋಪಾಲಯ್ಯ ಅವರಿರಬಹುದು, ಈ ವಿಷಯದಲ್ಲಿ ಯಾರೆಲ್ಲ ಮಾತನಾಡುತ್ತಿದ್ದಾರೋ ಅವರೆಲ್ಲರಿಗೂ ಇತಿಹಾಸದ ಹಿನ್ನೆಲೆಯನ್ನು ಮನದಟ್ಟು ಮಾಡಿಕೊಟ್ಟಿದ್ದರಿಂದ ಅವರೆಲ್ಲರೂ ಸುಮ್ಮನಾಗಬೇಕು, ಸುಮ್ಮನಾಗಿದ್ದಾರೆ ಎಂದು ಭಾವಿಸಿದ್ದೇನೆ” ಎಂದಿದ್ದರು.

”ಕಲ್ಪನೆ ಮಾಡಿಕೊಂಡು ಬರೆಯುವುದು ಕಾದಂಬರಿ ಆಗುತ್ತದೆ, ಶಾಸನಗಳು ಮತ್ತು ಇತಿಹಾಸದ ಹಿನ್ನೆಲೆಯನ್ನು ಇಟ್ಟುಕೊಂಡು ಬರೆದಿರುವುದು ಮುಂದಿನ ಪೀಳಿಗೆಗೆ ಒಂದಿಷ್ಟು ಶಕ್ತಿಯಾಗುತ್ತದೆ. ಅಂತಹುದ್ಯಾವುದೂ ಇದುವರೆಗೆ ಕಂಡುಬಾರದೆ ಇರುವುದರಿಂದ ಹೇಳಿಕೆಗಳ ಮೂಲಕ ಯುವಕರಲ್ಲಿ ಮತ್ತು ಸಮಕಾಲೀನ ಜಗತ್ತಿನಲ್ಲಿ ಗೊಂದಲವನ್ನು ಸೃಷ್ಟಿ ಮಾಡಿ ವ್ಯಕ್ತಿಗಳ ಶಕ್ತಿಯನ್ನು ಹಾಳು ಮಾಡಬಹುದು, ಸಮುದಾಯಕ್ಕೆ ಧಕ್ಕೆಯನ್ನು ಕೂಡಾ ತರಬಾರದು” ಎಂದು ಸ್ವಾಮೀಜಿ ಎಚ್ಚರಿಸಿದ್ದರು.

ಇದಾದ ಬಳಿಕ ಹೇಳಿಕೆ ನೀಡಿದ್ದ ಅಡ್ಡಂಡ ಕಾರ್ಯಪ್ಪ, “”ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ” ಎಂದಿದ್ದರು. ಬಳಿಕ ಸ್ವಾಮೀಜಿಯವರ ಬಳಿ ಕಾರ್ಯಪ್ಪ ಕ್ಷಮೆಯಾಚಿಸಿದ್ದರು.

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...