Homeಮುಖಪುಟಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

ಮರುಕಳಿಸಿದ ದ್ವೇಷ ಭಾಷಣ: ಹೈಕೋರ್ಟ್ ಆದೇಶ ಉಲ್ಲಂಘಿಸಿ ಮತ್ತೆ ನಾಲಿಗೆ ಹರಿಬಿಟ್ಟ ಶಾಸಕ ರಾಜಾಸಿಂಗ್

- Advertisement -
- Advertisement -

ಕಳೆದ ವರ್ಷ ನವೆಂಬರ್‌ನಲ್ಲಿ ಶಾಸಕ ರಾಜಾ ಸಿಂಗ್‌ ಅವರನ್ನು ಬಿಡುಗಡೆ ಮಾಡುವ ಮುನ್ನ ತೆಲಂಗಾಣ ಹೈಕೋರ್ಟ್ ಮೂರು ಕಠಿಣ ಶರತ್ತುಗಳನ್ನು ವಿಧಿಸಿತ್ತು. 100ಕ್ಕೂ ಹೆಚ್ಚು ಕ್ರಿಮಿನಲ್ ಕೇಸ್‌ಗಳನ್ನು ಹೊಂದಿರುವ ರಾಜಾ ಸಿಂಗ್‌ ಅವರನ್ನು, ಹೈದರಾಬಾದ್‌ನಲ್ಲಿ ಕೋಮು ಸೌದಾರ್ದತೆ ಕದಡಿದಕ್ಕಾಗಿ 76 ದಿನ ಜೈಲಿಗೆ ಕಳುಹಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಎ. ಅಭಿಷೇಕ್ ರೆಡ್ಡಿ ಮತ್ತು ಜುವ್ವಾಡಿ ಶ್ರೀದೇವಿ ಅವರು ನವೆಂಬರ್ 9, 2022ರಂದು ನೀಡಿದ ಆದೇಶದಲ್ಲಿ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಿದರು. “ರಾಜಾಸಿಂಗ್‌ ಬಿಡುಗಡೆಯಾದ ನಂತರ ಯಾವುದೇ ಸಂಭ್ರಮಾಚರಣೆ ರ್‍ಯಾಲಿಗಳಲ್ಲಿ/ಸಭೆಗಳಲ್ಲಿ ಭಾಗವಹಿಸಬಾರದು ಅಥವಾ ನಡೆಸಬಾರದು; ಮುದ್ರಣ ಮಾಧ್ಯಮ ಸೇರಿದಂತೆ ಯಾವುದೇ ರೀತಿಯ ಮಾಧ್ಯಮ ಸಂಸ್ಥೆಗಳಿಗೆ ಯಾವುದೇ ಸಂದರ್ಶನಗಳನ್ನು ಭವಿಷ್ಯದಲ್ಲಿ ನೀಡಬಾರದು; ಯಾವುದೇ ಧರ್ಮದ ವಿರುದ್ಧ ಯಾವುದೇ ಪ್ರಚೋದನಕಾರಿ ಭಾಷಣಗಳನ್ನು ಮಾಡಬಾರದು ಅಥವಾ ಫೇಸ್ಬುಕ್, ಟ್ವಿಟರ್, ವಾಟ್ಸ್‌ಅಪ್‌, ಯೂಟ್ಯೂಬ್‌ ಇತ್ಯಾದಿ ಯಾವುದೇ  ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯಾವುದೇ ಅವಹೇಳನಕಾರಿ ಅಥವಾ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಬಾರದು” ಎಂದು ಕೋರ್ಟ್ ಸೂಚಿಸಿತ್ತು.

ಕೇವಲ ಮೂರು ತಿಂಗಳೊಳಗೆ ಎಲ್ಲಾ ಮೂರು ಷರತ್ತುಗಳನ್ನು ರಾಜಾ ಉಲ್ಲಂಘಿಸಿದ್ದಾರೆ. ತೀವ್ರಗಾಮಿ ಹಿಂದೂ ಗುಂಪು ಎಂದೇ ಗುರುತಿಸಿಕೊಂಡಿರುವ ‘ಸಕಲ್ ಹಿಂದೂ ಸಮಾಜ’ ಜನವರಿ 29ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ರಾಜಾ ಬಂದಿದ್ದರು. ಈ ಗುಂಪು ಆಯೋಜಿಸಿದ್ದ ‘ಹಿಂದೂ ಜನಕ್ರೋಶ್ ಮೋರ್ಚಾ’ದಲ್ಲಿ ಪಾಲ್ಗೊಂಡು, “ಮಹಾರಾಷ್ಟ್ರ ರಾಜ್ಯ ಸರ್ಕಾರವು ಮತಾಂತರ ವಿರೋಧಿ ಕಾನೂನನ್ನು ಜಾರಿಗೆ ತರದಿದ್ದರೆ, ಹಿಂದೂಗಳು ಶೀಘ್ರದಲ್ಲೇ ಶಸ್ತ್ರಸಜ್ಜಿತರಾಗುತ್ತಾರೆ” ಎಂದು ವಿಷಕಾರಿದರು.

ದೇಶದ ಅತ್ಯಂತ ವಿವಾದಾತ್ಮಕ ವಿಷಯಗಳಲ್ಲಿ ಒಂದಾದ ಮತಾಂತರ ವಿರೋಧಿ ಕಾನೂನು ಮೇಲ್ನೋಟಕ್ಕೆ ‘ಬಲವಂತದ ಮತಾಂತರ’ವನ್ನು ನಿರ್ಬಂಧಿಸುತ್ತದೆ, ಆದರೆ ಇದು ಧಾರ್ಮಿಕ ಹಕ್ಕಿನ ಮೇಲಿನ ಪ್ರಹಾರವಾಗಿದೆ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

ರಾಜಾ ಕೇವಲ ಹೊಸ ಕಾನೂನಿನ ಬಗ್ಗೆ ಪ್ರಚಾರ ಮಾಡಲಿಲ್ಲ. ಶಸ್ತ್ರಾಸ್ತ್ರಗಳನ್ನು ಎತ್ತಿಕೊಂಡು ಮುಸ್ಲಿಮರ ಮೇಲೆ ದಾಳಿ ಮಾಡುವಂತೆ ಸಭೆಯನ್ನು ಪ್ರಚೋದಿಸಿದರು. ನಿಂದನೀಯ, ಅವಹೇಳನಕಾರಿ ಪದಗಳನ್ನು ಬಳಸಿದರು. ಮುಸ್ಲಿಂ ಸಮುದಾಯದ ವಿರುದ್ಧ ನೇರ ಹಿಂಸಾಚಾರಕ್ಕೆ ಕರೆ ನೀಡಿದರು. ರಾಜಾ ಸಿಂಗ್‌ ಭಾಷಣವು ಕೇವಲ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಲಿಲ್ಲ. ಎರಡು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿತು. ಈ ರೀತಿಯ ದುರುದ್ದೇಶವು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ ಮತ್ತು 295-ಎ ಉಲ್ಲಂಘನೆಯಾಗಿತ್ತು.

ರಾಜಾ ಸಿಂಗ್ ಅವರ ಭಾಷಣದ ನಂತರ, ಮತ್ತೊಬ್ಬ ಹಿಂದುತ್ವ ಮುಖಂಡ ಸಾಕ್ಷಿ ಗಾಯಕ್ವಾಡ್ ಅಷ್ಟೇ ಪ್ರಚೋದನಕಾರಿ ಭಾಷಣ ಮಾಡಿದರು. ಮುಸ್ಲಿಮರ ನರಮೇಧವನ್ನು ಪ್ರಸ್ತಾಪಿಸಿದರು.

‘ಹಿಂದೂ ಜನ ಆಕ್ರೋಶ ಮೋರ್ಚಾ’ ದಾದರ್‌ನ ಶಿವಾಜಿ ಪಾರ್ಕ್‌ನಿಂದ ಪ್ರಾರಂಭವಾಗಿ ಪರೇಲ್‌ನ ಕಾಮ್‌ಗರ್ ಮೈದಾನದವರೆಗೆ (ನಾಲ್ಕು ಕಿಲೋಮೀಟರ್‌ಗಿಂತಲೂ ಹೆಚ್ಚು ದೂರ) ಕ್ರಮಿಸಿತು. ಆರ್‌ಎಸ್‌ಎಸ್‌, ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನಂತಹ ಬಲಪಂಥೀಯ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರು ಈ ರ್‍ಯಾಲಿಯಲ್ಲಿ ಪಾಲ್ಗೊಂಡಿದ್ದರು.

ರಾಜಾ ಸಿಂಗ್ ಮತ್ತು ಇತರರ ಭಾಷಣಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೆಯಾಗಿವೆ. ಕೋಮು ದ್ವೇಷದ ಹೊರತಾಗಿಯೂ, ಮುಂಬೈ ಪೊಲೀಸರು ಭಾಷಣಕಾರರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ.

ಇದರ ನಡುವೆ, ಹೈದರಾಬಾದ್ ಪೊಲೀಸರು ರಾಜಾ ಸಿಂಗ್ ಅವರಿಗೆ ನೋಟಿಸ್ ಜಾರಿ ಮಾಡಿದರು. ಜೈಲಿನಿಂದ ಬಿಡುಗಡೆ ಮಾಡುವ ಮುನ್ನ ತೆಲಂಗಾಣ ಹೈಕೋರ್ಟ್‌ ವಿಧಿಸಿದ್ದ ಷರತ್ತುಗಳನ್ನು ಉಲ್ಲೇಖಿಸಿ ಕಳೆದ ನಾಲ್ಕು ದಿನಗಳಲ್ಲಿ ಹೈದರಾಬಾದ್‌ನ ಮಂಗಲ್‌ಹಟ್ ಪೊಲೀಸರು ಎರಡು ನೋಟಿಸ್‌ಗಳನ್ನು ರಾಜಾಸಿಂಗ್ ಅವರಿಗೆ ನೀಡಿದ್ದಾರೆ. ಭಾಷಣ ಮಾಡಿದ ಕೂಡಲೇ ಮೊದಲ ನೋಟೀಸ್ ಕಳುಹಿಸಲಾಗಿದೆ. ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವ ಸೂಚನೆಯನ್ನೂ ರವಾನಿಸಲಾಗಿದೆ.

“ನಿಮ್ಮ ಭಾಷಣದಲ್ಲಿ ನಿರ್ದಿಷ್ಟ ಸಮುದಾಯವನ್ನು ಪ್ರಯೋಚನೆ ಮಾಡಲಾಗಿದೆ. ಲವ್ ಜಿಹಾದ್, ಗೋಹತ್ಯೆ, ಮತಾಂತರ ಮೊದಲಾದ ಕಾನೂನಿನ ಬಗ್ಗೆ ಮಾತನಾಡಿದ್ದೀರಿ” ಎಂದು ಮಂಗಲ್‌ಹಟ್ ಪೊಲೀಸರು ರಾಜಾ ಸಿಂಗ್ ಅವರಿಗೆ ನೀಡಿದ್ದ ನೋಟಿಸ್‌ನಲ್ಲಿ ತಿಳಿಸಿದ್ದಾರೆ. “ನಿರ್ದಿಷ್ಟ ಧರ್ಮವನ್ನು ಕೆರಳಿಸುವ ನಿಮ್ಮ ಭಾಷಣವು ಹೈಕೋರ್ಟ್ ವಿಧಿಸಿರುವ ಷರತ್ತುಗಳ ಉಲ್ಲಂಘನೆಯಾಗಿದೆ” ಎಂದು ಎಚ್ಚರಿಸಲಾಗಿದೆ.

ಮುಂಬೈಗೆ ಭೇಟಿ ನೀಡುವ ಒಂದು ವಾರದ ಮೊದಲು, ಕಳೆದ ವರ್ಷ ಅಜ್ಮೀರ್ ದರ್ಗಾದಲ್ಲಿ ಇಷ್ಟೇ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ರಾಜಾ ಸಿಂಗ್ ಅವರಿಗೆ ಮತ್ತೊಂದು ನೋಟಿಸ್ ನೀಡಲಾಗಿದೆ. ಉದ್ದೇಶಪೂರ್ವಕವಾಗಿ ಕೋಮು ಭಾವನೆಗಳನ್ನು ಕೆರಳಿಸುವುದು ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ ಬಂಧನ ಮಾಡಲಾಗುವುದು ಎಂದು ಪೊಲೀಸರು ಆ ನೋಟಿಸ್‌ನಲ್ಲಿ ಉಲ್ಲೇಖಿಸಿದ್ದಾರೆ. ಆದಾಗ್ಯೂ, ಪೊಲೀಸರು ಹೆಚ್ಚಿನ ನೋಟಿಸ್‌ಗಳನ್ನು ಮಾತ್ರ ನೀಡಿದ್ದಾರೆ, ರಾಜಾರನ್ನು ತಡೆಯುವ ನಿಟ್ಟಿನಲ್ಲಿ ಯಾವುದೇ ಕ್ರಮ ಜರುಗಿಸಿಲ್ಲ.

ರಾಜಾ ಸಿಂಗ್ ತೆಲಂಗಾಣ ಪೊಲೀಸರಿಗೆ ಸವಾಲು ಹಾಕಿದ್ದಾರೆ. ನೋಟಿಸ್ ನೀಡುವ ಪೊಲೀಸರ ನಿರ್ಧಾರವು ರಾಜಕೀಯ ಪ್ರೇರಿತವಾಗಿದೆ, ಮತ್ತೆ ಜೈಲಿಗೆ ಹೋಗುವ ಭಯವಿಲ್ಲ ಎಂದು ಸಿಂಗ್ ಹೇಳಿಕೊಂಡಿದ್ದಾರೆ. ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವೀಡಿಯೊವನ್ನು ಪೋಸ್ಟ್ ಮಾಡಿದ್ದಕ್ಕಾಗಿ ರಾಜಾ ಸಿಂಗ್‌ ಅವರನ್ನು ಆಗಸ್ಟ್‌ನಲ್ಲಿ ಬಿಜೆಪಿಯಿಂದ ಅಮಾನತು ಮಾಡಲಾಗಿತ್ತು.

ಸಕಲ್ ಹಿಂದೂ ಸಮಾಜವು ಫೆಬ್ರವರಿ 5 ರಂದು ಮುಂಬೈ ನಗರದಲ್ಲಿ ಇದೇ ರೀತಿಯ ಮತ್ತೊಂದು ಸಾರ್ವಜನಿಕ ಕಾರ್ಯಕ್ರಮವನ್ನು ನಿಗದಿಪಡಿಸಿದೆ. ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಮುಂಬೈನಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿರುವ ಈ ರ್‍ಯಾಲಿಗೆ ಅನುಮತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

‘ಹಿಂದೂ ಜನಾಕ್ರೋಶ ಸಭೆ’ಯ ವಿಡಿಯೊ ರೆಕಾರ್ಡಿಂಗ್ ಮಾಡಿ ಮತ್ತು ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಜೆ.ಬಿ.ಪರ್ದಿವಾಲಾ ಅವರಿದ್ದ ಪೀಠವು ಎಚ್ಚರಿಸಿದೆ. “ಕಾನೂನನ್ನು ಧಿಕ್ಕರಿಸಿ ಮತ್ತು ಸಾರ್ವಜನಿಕ ಆದೇಶವನ್ನು ಉಲ್ಲಂಘಿಸುವ ಯಾವುದೇ ದ್ವೇಷದ ಭಾಷಣವನ್ನು ಯಾರೂ ಮಾಡಬಾರದು ಎಂಬ ಷರತ್ತಿಗೆ ಒಳಪಟ್ಟು ಅನುಮತಿ ನೀಡಬಹುದು” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಹಿಂದುತ್ವ ಸಂಘಟನೆಗಳ ಒಕ್ಕೂಟ ಸಂಸ್ಥೆಯಾದ ‘ಸಕಲ್ ಹಿಂದೂ ಸಮಾಜ’ದ ಈ ಕಾರ್ಯಕ್ರಮವನ್ನು ನಿಷೇಧಿಸುವಂತೆ ಕೋರಿ ಶಹೀನ್ ಅಬ್ದುಲ್ಲಾ ಎಂಬುವರು ಸಲ್ಲಿಸಿದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ಜನವರಿ 29ರಂದು ಒಕ್ಕೂಟವು ನಡೆಸಿದ ರ್‍ಯಾಲಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಭಾಷಣಗಳನ್ನು ಮಾಡಲಾಗಿದೆ ಎಂದು ಅಬ್ದುಲ್ಲಾ ವಾದಿಸಿದರು.

ಇದನ್ನೂ ಓದಿರಿ: ಬಿಬಿಸಿ ಸಾಕ್ಷ್ಯಚಿತ್ರಕ್ಕೆ ತಡೆ ವಿವಾದ; ಮೂರು ವಾರಗಳಲ್ಲಿ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ಜನವರಿ 29 ರಂದು ನಡೆದ ರ್‍ಯಾಲಿಯಲ್ಲಿ ಬಿಜೆಪಿಯ ಹಲವು ಮುಖಂಡರು ಪಾಲ್ಗೊಂಡಿದ್ದರು. ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್, ಮಹಾರಾಷ್ಟ್ರ ಸಂಸದರಾದ ಗೋಪಾಲ್ ಶೆಟ್ಟಿ ಮತ್ತು ಮನೋಜ್ ಕೋಟಕ್, ಮಾಜಿ ಸಂಸದ ಕಿರಿತ್ ಸೋಮಯ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗವಹಿಸಿದ್ದರು. ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಬಣದ ಹಲವಾರು ನಾಯಕರು ಕೂಡ ಕಾರ್ಯಕ್ರಮದಲ್ಲಿ ಇದ್ದರು.

ಕಾರ್ಯಕ್ರಮದ ಭಾಷಣಕಾರರಲ್ಲಿ ಒಬ್ಬರಾದ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಅವರು, “ಮುಸ್ಲಿಮರು ನಡೆಸುವ ಅಂಗಡಿಗಳಿಂದ ವಸ್ತುಗಳನ್ನು ಹಿಂದೂಗಳು ಕೊಳ್ಳಬಾರದು” ಎಂದು ದ್ವೇಷ ಕಾರಿದ್ದರು. ಹಿಂದುತ್ವ ಗುಂಪಿನ ಪಿತೂರಿ ಸಿದ್ಧಾಂತವೆಂದೇ ಬಣ್ಣಿಸಲಾದ ‘ಲವ್ ಜಿಹಾದ್’ ಮತ್ತು ‘ಧಾರ್ಮಿಕ ಮತಾಂತರಗಳ ವಿರುದ್ಧ’ದ ಕಾನೂನುಗಳಿಗೆ ಸಂಬಂಧಿಸಿದಂತೆ ಹಲವರು ಮಾತನಾಡಿದ್ದರು.

ಮಾಹಿತಿ ಕೃಪೆ: ‘ದಿ ವೈರ್‌’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...