Homeರಾಷ್ಟ್ರೀಯದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

ದ್ವೇಷ ಭಾಷಣ: ಹಿಮಾಚಲ ಸರ್ಕಾರಕ್ಕೆ ತರಾಟೆ, ಉತ್ತರಾಖಂಡ್‌ಗೆ ಖಡಕ್‌ ಎಚ್ಚರಿಕೆ ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಉತ್ತರಾಖಂಡದ ರೂರ್ಕಿಯಲ್ಲಿ ಬುಧವಾರ ನಡೆಯಲಿರುವ ಧಾರ್ಮಿಕ ಸಮಾವೇಶವು ಮುಸ್ಲಿಮರನ್ನು ಗುರಿಯಾಗಿಸುವ ವಿಶಿಷ್ಟ ‘ದ್ವೇಷ ಉತ್ಸವ’ವಾಗಿ ಬದಲಾಗಬಾರದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಈ ತಿಂಗಳ ಆರಂಭದಲ್ಲಿ ನಡೆದ ಇದೇ ರೀತಿಯ ಘಟನೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನೆರೆಯ ಹಿಮಾಚಲ ಪ್ರದೇಶಕ್ಕೂ ತೀಕ್ಷ್ಣವಾದ ಪ್ರಶ್ನೆಗಳನ್ನು ಸುಪ್ರೀಂಕೋರ್ಟ್‌ ಕೇಳಿದೆ.

“ದ್ವೇಷದ ಭಾಷಣವನ್ನು ನಿಲ್ಲಿಸದಿದ್ದರೆ, ಉತ್ತರಾಖಂಡ ಮುಖ್ಯ ಕಾರ್ಯದರ್ಶಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ನಾವು ಮುಖ್ಯ ಕಾರ್ಯದರ್ಶಿಯನ್ನು ನ್ಯಾಯಾಲಯಕ್ಕೆ ಕರೆಸುತ್ತೇವೆ” ಎಂದು ನ್ಯಾಯಾಮೂರ್ತಿಗಳು ಹೇಳಿದ್ದು, ‘ಧರಮ್ ಸಂಸದ್’ನಲ್ಲಿ ಯಾವುದೇ ‘ಅಹಿತಕರ ಹೇಳಿಕೆ’ ನೀಡಲಾಗುವುದಿಲ್ಲ ಎಂದು ಖಚಿತಪಡಿಸಲು ರಾಜ್ಯದ ಉನ್ನತ ಅಧಿಕಾರಿಗಳಿಗೆ ಕೇಳಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಯನ್ನು ಅನುಸರಿಸಿ. ದ್ವೇಷದ ಭಾಷಣವನ್ನು ನಿಲ್ಲಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ” ಎಂದು ಸುಪ್ರೀಂಕೋರ್ಟ್‌ ಮುಂದಿನ ಬುಧವಾರದಂದು ನಿಗದಿಪಡಿಸಲಾದ ಕಾರ್ಯಕ್ರಮಕ್ಕೆ ಮುಂಚಿತವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕಾರ್ಕಳ-ಹೆಬ್ರಿ: ಅಹಿಂಸೆಯ ಜೈನ ಕಾಶಿಯಲ್ಲಿ ಹಿಂಸೋನ್ಮಾದದ ಹಿಂದುತ್ವ ಕಾಳಗ!

ಪ್ರತ್ಯೇಕ ವಿಚಾರಣೆಯೊಂದರಲ್ಲಿ, ಈ ತಿಂಗಳ ಆರಂಭದಲ್ಲಿ ಮುಸ್ಲಿಮರ ವಿರುದ್ಧ ಮಾಡಲಾದ ದ್ವೇಷಪೂರಿತ ಭಾಷಣಗಳು ಮತ್ತು ಹಿಂದೂಗಳು ಹಿಂಸಾಚಾರ ನಡೆಸುವಂತೆ ಕರೆ ನೀಡಿದ ಘಟನೆಯ ಕುರಿತು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಂಭೀರ ಪ್ರಶ್ನೆಗಳನ್ನು ಕೇಳಿದೆ.

“ಸರ್ಕಾರವು ಇಂತಹ ಚಟುವಟಿಕೆಯನ್ನು ನಿಲ್ಲಿಸಬೇಕು. ಇದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಯಾವುದಾದರೂ ಕ್ರಮಗಳನ್ನು ತೆಗೆದುಕೊಂಡಿದೆಯೇ ಅಥವಾ ಇಲ್ಲವೇ ಎಂಬುದನ್ನು ನಮಗೆ ತಿಳಿಸಬೇಕು” ಎಂದು ಹೇಳಿದ ನ್ಯಾಯಾಲಯವು, ದ್ವೇಷ ಭಾಷಣಕಾರರ ವಿರುದ್ಧ ತಕ್ಷಣವೇ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಆಡಳಿತವನ್ನು ಕೇಳಿದೆ.

“ಈ ಬಗ್ಗೆ ಸರ್ಕಾರವು ಮೇ 7ರೊಳಗೆ ಅಫಿಡವಿಟ್ ಸಲ್ಲಿಸಬೇಕು. ಅಂತಹ ಘಟನೆಗಳನ್ನು ತಡೆಯಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ನಮಗೆ ತಿಳಿಸಬೇಕು” ಎಂದು ಅದು ಹೇಳಿದ್ದು, ಪ್ರಕರಣವನ್ನು ಮೇ 9 ರಂದು ವಿಚಾರಣೆ ಮಾಡುವುದಾಗಿ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

“ಈ ಘಟನೆಗಳು ಇದ್ದಕ್ಕಿದ್ದಂತೆ, ರಾತ್ರೋರಾತ್ರಿ ಸಂಭವಿಸುವುದಿಲ್ಲ. ಕಾರ್ಯಕ್ರಮಗಳನ್ನು ಮುಂಚಿತವಾಗಿ ಘೋಷಿಸಲಾಗಿರುತ್ತದೆ. ನೀವು ಆಗಿನಿಂದಲೇ ಏಕೆ ಕಾರ್ಯನಿರ್ವಹಿಸಲಿಲ್ಲ? ದ್ವೇಷ ಭಾಷಣಗಳ ಕುರಿತು ಈಗಾಗಲೇ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳಿವೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಬುಧವಾರ ಉತ್ತರಾಖಂಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಾವುದೇ ‘ಅಹಿತಕರ ಹೇಳಿಕೆ’ ನೀಡುವುದಿಲ್ಲ ಮತ್ತು ನ್ಯಾಯಾಲಯದ ಆದೇಶಗಳ ಪ್ರಕಾರ ಅಧಿಕಾರಿಗಳು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ” ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಭರವಸೆ ನೀಡಿದೆ.

ಕಳೆದ ಡಿಸೆಂಬರ್‌ನಲ್ಲಿ ಬಿಜೆಪಿ ಆಡಳಿತವಿರುವ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದ ಮೂರು ದಿನಗಳ ಧರಮ್ ಸಂಸದ್‌ನಲ್ಲಿ ಪಾಲ್ಗೊಂಡ ದುಷ್ಕರ್ಮಿಗಳು ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣಗಳನ್ನು ಮಾಡಿದ್ದರು. ಈ ಭಾಷಣಗಳು ಮುಸ್ಲಿಮರ ನರಮೇಧಕ್ಕೆ ಕರೆ ನೀಡುವವರೆಗೂ ಹೋಗಿತ್ತು. ಇದರ ವಿರುದ್ದ ದೇಶದಾದ್ಯಂತ ಆಕ್ರೋಶ ವ್ಯಕ್ತವಾದ ನಂತರ ಪ್ರಕರಣ ದಾಖಲಾಗಿ ಬಂಧನಗಳು ನಡೆದವು.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಈ ತಿಂಗಳ ಆರಂಭದಲ್ಲಿ, ಕಾರ್ಯಕ್ರಮದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಯತಿ ನರಸಿಂಹಾನಂದ್‌ ತನ್ನ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾನೆ. ಹಿಮಾಚಲ ಪ್ರದೇಶದ ಉನಾದ ‘ಧಾರ್ಮಿಕ ಸಮಾವೇಶ’ದಲ್ಲಿ ಮಾತನಾಡಿದ ದುಷ್ಕರ್ಮಿ, “ಶಸ್ತ್ರಾಸ್ತ್ರಗಳನ್ನು ಎತ್ತಿಕೊಳ್ಳುವಂತೆ ಮತ್ತು ಮುಸ್ಲಿಮರ ಹತ್ಯೆಗಳನ್ನು ಮಾಡುವಂತೆ’ ಹಿಂದೂಗಳಿಗೆ ಬಹಿರಂಗವಾಗಿ ಕರೆ ನೀಡಿದ್ದಾನೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...