Homeಮುಖಪುಟದ್ವೇಷ ಭಾಷಣ ಮಾಡುವವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲೇಬೇಕು: ಆರ್‌ಎಸ್‌ಎಸ್‌ ಮುಖಂಡ

ದ್ವೇಷ ಭಾಷಣ ಮಾಡುವವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲೇಬೇಕು: ಆರ್‌ಎಸ್‌ಎಸ್‌ ಮುಖಂಡ

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಬಹಿರಂಗವಾಗಿ ಕರೆ ನೀಡಿದ ದ್ವೇಷ ಭಾಷಣಗಳನ್ನು ಖಂಡಿಸಿರುವ ಆರ್‌ಎಸ್‌ಎಸ್‌ನ ಹಿರಿಯ ನಾಯಕ ಇಂದ್ರೇಶ್ ಕುಮಾರ್, ‘ಪ್ರಚೋದನಕಾರಿ ಮತ್ತು ಜನರನ್ನು ವಿಭಜಿಸುವಂತಹ ಹೇಳಿಕೆಗಳನ್ನು ನೀಡುವ ಎಲ್ಲರಿಗೂ ಯಾವುದೇ ವಿನಾಯಿತಿ ಇಲ್ಲದೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು’ ಎಂದಿದ್ದಾರೆ.

ದ್ವೇಷದ ರಾಜಕೀಯವನ್ನು “ಭ್ರಷ್ಟಾಚಾರ” ಎಂದು ಕರೆದಿರುವವರು, ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅದರ ನಾಯಕರು ದ್ವೇಷ ಭಾಷಣ ಮಾಡುವುದು ಮತ್ತು ಸಮಾಜದ ಒಂದು ವರ್ಗವನ್ನು ಇನ್ನೊಂದು ವರ್ಗದ ವಿರುದ್ಧ ಎತ್ತಿಕಟ್ಟುವುದನ್ನು ತಡೆಯಬೇಕೆಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕರೆ ನೀಡಿದ್ದಾರೆ.

’ಯಾವುದೇ ಸಮುದಾಯ, ಜಾತಿ, ಸಮುದಾಯದ ವಿರುದ್ಧ ಪ್ರಚೋದನಕಾರಿ ಮತ್ತು ವಿಭಜಿಸುವ ಟೀಕೆಗಳನ್ನು ಮಾಡುವ ಬದಲು, ದೇಶ ಮತ್ತು ಜನರ ಹಿತದೃಷ್ಟಿಯಿಂದ ಸಹೋದರತೆ ಮತ್ತು ಅಭಿವೃದ್ಧಿಯ ರಾಜಕಾರಣ ಮಾಡಬೇಕು’ ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿರುವ ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

“ಯಾವುದೇ ರೀತಿಯ ದ್ವೇಷದ ಭಾಷಣಗಳು ಖಂಡನೀಯ. ಎಲ್ಲಾ ದ್ವೇಷದ ಭಾಷಣಗಳನ್ನು ಕಾನೂನಿನ ಪ್ರಕಾರ ಖಂಡಿಸಬೇಕು ಮತ್ತು ಶಿಕ್ಷಿಸಬೇಕು. ಯಾರಿಗೂ ವಿನಾಯಿತಿ ನೀಡಬಾರದು” ಎಂದು ಉತ್ತರಾಖಂಡದ ಹರಿದ್ವಾರ, ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್‌ನ ದ್ವೇಷದ ಭಾಷಣಗಳ ಬಗ್ಗೆ ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

’ದೇಶದ ವಾತಾವರಣವನ್ನು ಹಾಳುಮಾಡುವ ಇಂತಹ ಎಲ್ಲಾ ವಿಭಜಕ ಕೃತ್ಯಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಈ ಸಮಯದ ಅಗತ್ಯವಾಗಿದೆ. “ಕ್ರೂರ” ದ್ವೇಷದ ಭಾಷಣಗಳಿಗೆ ಹಲವಾರು ಉದಾಹರಣೆಗಳಿವೆ’ ಎಂದು ಹೇಳಿದ್ದಾರೆ.

ಮಹಾತ್ಮಾ ಗಾಂಧಿಯವರ ಹತ್ಯೆಗೆ ಆರ್‌ಎಸ್‌ಎಸ್ ಮತ್ತು ಅದರ ಸಿದ್ಧಾಂತವನ್ನು ದೂಷಿಸುತ್ತಿರುವ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಟೀಕಿಸಿರುವ ಅವರು, ತಮ್ಮ ಆರೋಪವನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲದಿದ್ದರೂ, ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

ಆರ್‌ಎಸ್‌ಎಸ್ ವಿರುದ್ಧದ ಆಧಾರರಹಿತ ಆರೋಪಗಳು ಸಹ ದ್ವೇಷದ ಭಾಷಣವಾಗಿದೆ. ಇದುವರೆಗೆ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ..?  ಒಂದು ವರ್ಗದ ಜನರು ಅಥವಾ ಸಂಘಟನೆಯ ವಿರುದ್ಧ ದ್ವೇಷವನ್ನು ಉಂಟುಮಾಡುವ ಆಧಾರರಹಿತ ಆರೋಪಗಳನ್ನು “ದ್ವೇಷ ಭಾಷಣಗಳು” ಎಂದು ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಇಂದ್ರೇಶ್ ಕುಮಾರ್ ಅವರು ಸಂಘದ ಅಂಗಸಂಸ್ಥೆ ಮುಸ್ಲಿಂ ರಾಷ್ಟ್ರೀಯ ಮಂಚ್‌ನ ಸಂಸ್ಥಾಪಕರೂ ಆಗಿದ್ದಾರೆ. ಜೊತೆಗೆ RSS ನ ಮುಸ್ಲಿಂ ಘಟಕದ ರೀತಿಯಲ್ಲಿ ಕೆಲವು ವರ್ಷಗಳ ಹಿಂದೆ ಕ್ರಿಶ್ಚಿಯನ್ ರಾಷ್ಟ್ರೀಯ ಮಂಚ್ ಎಂಬ ಮತ್ತೊಂದು ಸಂಘಟನೆಯನ್ನು ಸ್ಥಾಪಿಸಿದ್ದಾರೆ.


ಇದನ್ನೂ ಓದಿ: ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...