Homeಮುಖಪುಟದ್ವೇಷ ಭಾಷಣ ಮಾಡುವವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲೇಬೇಕು: ಆರ್‌ಎಸ್‌ಎಸ್‌ ಮುಖಂಡ

ದ್ವೇಷ ಭಾಷಣ ಮಾಡುವವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲೇಬೇಕು: ಆರ್‌ಎಸ್‌ಎಸ್‌ ಮುಖಂಡ

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಬಹಿರಂಗವಾಗಿ ಕರೆ ನೀಡಿದ ದ್ವೇಷ ಭಾಷಣಗಳನ್ನು ಖಂಡಿಸಿರುವ ಆರ್‌ಎಸ್‌ಎಸ್‌ನ ಹಿರಿಯ ನಾಯಕ ಇಂದ್ರೇಶ್ ಕುಮಾರ್, ‘ಪ್ರಚೋದನಕಾರಿ ಮತ್ತು ಜನರನ್ನು ವಿಭಜಿಸುವಂತಹ ಹೇಳಿಕೆಗಳನ್ನು ನೀಡುವ ಎಲ್ಲರಿಗೂ ಯಾವುದೇ ವಿನಾಯಿತಿ ಇಲ್ಲದೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು’ ಎಂದಿದ್ದಾರೆ.

ದ್ವೇಷದ ರಾಜಕೀಯವನ್ನು “ಭ್ರಷ್ಟಾಚಾರ” ಎಂದು ಕರೆದಿರುವವರು, ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅದರ ನಾಯಕರು ದ್ವೇಷ ಭಾಷಣ ಮಾಡುವುದು ಮತ್ತು ಸಮಾಜದ ಒಂದು ವರ್ಗವನ್ನು ಇನ್ನೊಂದು ವರ್ಗದ ವಿರುದ್ಧ ಎತ್ತಿಕಟ್ಟುವುದನ್ನು ತಡೆಯಬೇಕೆಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕರೆ ನೀಡಿದ್ದಾರೆ.

’ಯಾವುದೇ ಸಮುದಾಯ, ಜಾತಿ, ಸಮುದಾಯದ ವಿರುದ್ಧ ಪ್ರಚೋದನಕಾರಿ ಮತ್ತು ವಿಭಜಿಸುವ ಟೀಕೆಗಳನ್ನು ಮಾಡುವ ಬದಲು, ದೇಶ ಮತ್ತು ಜನರ ಹಿತದೃಷ್ಟಿಯಿಂದ ಸಹೋದರತೆ ಮತ್ತು ಅಭಿವೃದ್ಧಿಯ ರಾಜಕಾರಣ ಮಾಡಬೇಕು’ ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿರುವ ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

“ಯಾವುದೇ ರೀತಿಯ ದ್ವೇಷದ ಭಾಷಣಗಳು ಖಂಡನೀಯ. ಎಲ್ಲಾ ದ್ವೇಷದ ಭಾಷಣಗಳನ್ನು ಕಾನೂನಿನ ಪ್ರಕಾರ ಖಂಡಿಸಬೇಕು ಮತ್ತು ಶಿಕ್ಷಿಸಬೇಕು. ಯಾರಿಗೂ ವಿನಾಯಿತಿ ನೀಡಬಾರದು” ಎಂದು ಉತ್ತರಾಖಂಡದ ಹರಿದ್ವಾರ, ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್‌ನ ದ್ವೇಷದ ಭಾಷಣಗಳ ಬಗ್ಗೆ ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

’ದೇಶದ ವಾತಾವರಣವನ್ನು ಹಾಳುಮಾಡುವ ಇಂತಹ ಎಲ್ಲಾ ವಿಭಜಕ ಕೃತ್ಯಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಈ ಸಮಯದ ಅಗತ್ಯವಾಗಿದೆ. “ಕ್ರೂರ” ದ್ವೇಷದ ಭಾಷಣಗಳಿಗೆ ಹಲವಾರು ಉದಾಹರಣೆಗಳಿವೆ’ ಎಂದು ಹೇಳಿದ್ದಾರೆ.

ಮಹಾತ್ಮಾ ಗಾಂಧಿಯವರ ಹತ್ಯೆಗೆ ಆರ್‌ಎಸ್‌ಎಸ್ ಮತ್ತು ಅದರ ಸಿದ್ಧಾಂತವನ್ನು ದೂಷಿಸುತ್ತಿರುವ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಟೀಕಿಸಿರುವ ಅವರು, ತಮ್ಮ ಆರೋಪವನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲದಿದ್ದರೂ, ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

ಆರ್‌ಎಸ್‌ಎಸ್ ವಿರುದ್ಧದ ಆಧಾರರಹಿತ ಆರೋಪಗಳು ಸಹ ದ್ವೇಷದ ಭಾಷಣವಾಗಿದೆ. ಇದುವರೆಗೆ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ..?  ಒಂದು ವರ್ಗದ ಜನರು ಅಥವಾ ಸಂಘಟನೆಯ ವಿರುದ್ಧ ದ್ವೇಷವನ್ನು ಉಂಟುಮಾಡುವ ಆಧಾರರಹಿತ ಆರೋಪಗಳನ್ನು “ದ್ವೇಷ ಭಾಷಣಗಳು” ಎಂದು ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಇಂದ್ರೇಶ್ ಕುಮಾರ್ ಅವರು ಸಂಘದ ಅಂಗಸಂಸ್ಥೆ ಮುಸ್ಲಿಂ ರಾಷ್ಟ್ರೀಯ ಮಂಚ್‌ನ ಸಂಸ್ಥಾಪಕರೂ ಆಗಿದ್ದಾರೆ. ಜೊತೆಗೆ RSS ನ ಮುಸ್ಲಿಂ ಘಟಕದ ರೀತಿಯಲ್ಲಿ ಕೆಲವು ವರ್ಷಗಳ ಹಿಂದೆ ಕ್ರಿಶ್ಚಿಯನ್ ರಾಷ್ಟ್ರೀಯ ಮಂಚ್ ಎಂಬ ಮತ್ತೊಂದು ಸಂಘಟನೆಯನ್ನು ಸ್ಥಾಪಿಸಿದ್ದಾರೆ.


ಇದನ್ನೂ ಓದಿ: ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...