Homeಮುಖಪುಟದ್ವೇಷ ಭಾಷಣ ಮಾಡುವವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲೇಬೇಕು: ಆರ್‌ಎಸ್‌ಎಸ್‌ ಮುಖಂಡ

ದ್ವೇಷ ಭಾಷಣ ಮಾಡುವವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲೇಬೇಕು: ಆರ್‌ಎಸ್‌ಎಸ್‌ ಮುಖಂಡ

- Advertisement -
- Advertisement -

ಹರಿದ್ವಾರದಲ್ಲಿ ಇತ್ತೀಚೆಗೆ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಬಹಿರಂಗವಾಗಿ ಕರೆ ನೀಡಿದ ದ್ವೇಷ ಭಾಷಣಗಳನ್ನು ಖಂಡಿಸಿರುವ ಆರ್‌ಎಸ್‌ಎಸ್‌ನ ಹಿರಿಯ ನಾಯಕ ಇಂದ್ರೇಶ್ ಕುಮಾರ್, ‘ಪ್ರಚೋದನಕಾರಿ ಮತ್ತು ಜನರನ್ನು ವಿಭಜಿಸುವಂತಹ ಹೇಳಿಕೆಗಳನ್ನು ನೀಡುವ ಎಲ್ಲರಿಗೂ ಯಾವುದೇ ವಿನಾಯಿತಿ ಇಲ್ಲದೆ ಕಾನೂನಿನ ಪ್ರಕಾರ ಶಿಕ್ಷೆಯಾಗಬೇಕು’ ಎಂದಿದ್ದಾರೆ.

ದ್ವೇಷದ ರಾಜಕೀಯವನ್ನು “ಭ್ರಷ್ಟಾಚಾರ” ಎಂದು ಕರೆದಿರುವವರು, ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಅದರ ನಾಯಕರು ದ್ವೇಷ ಭಾಷಣ ಮಾಡುವುದು ಮತ್ತು ಸಮಾಜದ ಒಂದು ವರ್ಗವನ್ನು ಇನ್ನೊಂದು ವರ್ಗದ ವಿರುದ್ಧ ಎತ್ತಿಕಟ್ಟುವುದನ್ನು ತಡೆಯಬೇಕೆಂದು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕರೆ ನೀಡಿದ್ದಾರೆ.

’ಯಾವುದೇ ಸಮುದಾಯ, ಜಾತಿ, ಸಮುದಾಯದ ವಿರುದ್ಧ ಪ್ರಚೋದನಕಾರಿ ಮತ್ತು ವಿಭಜಿಸುವ ಟೀಕೆಗಳನ್ನು ಮಾಡುವ ಬದಲು, ದೇಶ ಮತ್ತು ಜನರ ಹಿತದೃಷ್ಟಿಯಿಂದ ಸಹೋದರತೆ ಮತ್ತು ಅಭಿವೃದ್ಧಿಯ ರಾಜಕಾರಣ ಮಾಡಬೇಕು’ ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿರುವ ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ, ಜಾತಿ ಆಧಾರಿತ ಹಿಂಸಾಚಾರದ ವಿರುದ್ಧ ಮಾತನಾಡುವಂತೆ ಪ್ರಧಾನಿ ಮೋದಿಗೆ ಐಐಎಂ ವಿದ್ಯಾರ್ಥಿಗಳು, ಅಧ್ಯಾಪಕರ ಪತ್ರ

“ಯಾವುದೇ ರೀತಿಯ ದ್ವೇಷದ ಭಾಷಣಗಳು ಖಂಡನೀಯ. ಎಲ್ಲಾ ದ್ವೇಷದ ಭಾಷಣಗಳನ್ನು ಕಾನೂನಿನ ಪ್ರಕಾರ ಖಂಡಿಸಬೇಕು ಮತ್ತು ಶಿಕ್ಷಿಸಬೇಕು. ಯಾರಿಗೂ ವಿನಾಯಿತಿ ನೀಡಬಾರದು” ಎಂದು ಉತ್ತರಾಖಂಡದ ಹರಿದ್ವಾರ, ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದಲ್ಲಿ ನಡೆದ ಧರ್ಮ ಸಂಸದ್‌ನ ದ್ವೇಷದ ಭಾಷಣಗಳ ಬಗ್ಗೆ ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

’ದೇಶದ ವಾತಾವರಣವನ್ನು ಹಾಳುಮಾಡುವ ಇಂತಹ ಎಲ್ಲಾ ವಿಭಜಕ ಕೃತ್ಯಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಈ ಸಮಯದ ಅಗತ್ಯವಾಗಿದೆ. “ಕ್ರೂರ” ದ್ವೇಷದ ಭಾಷಣಗಳಿಗೆ ಹಲವಾರು ಉದಾಹರಣೆಗಳಿವೆ’ ಎಂದು ಹೇಳಿದ್ದಾರೆ.

ಮಹಾತ್ಮಾ ಗಾಂಧಿಯವರ ಹತ್ಯೆಗೆ ಆರ್‌ಎಸ್‌ಎಸ್ ಮತ್ತು ಅದರ ಸಿದ್ಧಾಂತವನ್ನು ದೂಷಿಸುತ್ತಿರುವ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಟೀಕಿಸಿರುವ ಅವರು, ತಮ್ಮ ಆರೋಪವನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲದಿದ್ದರೂ, ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

ಆರ್‌ಎಸ್‌ಎಸ್ ವಿರುದ್ಧದ ಆಧಾರರಹಿತ ಆರೋಪಗಳು ಸಹ ದ್ವೇಷದ ಭಾಷಣವಾಗಿದೆ. ಇದುವರೆಗೆ ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ..?  ಒಂದು ವರ್ಗದ ಜನರು ಅಥವಾ ಸಂಘಟನೆಯ ವಿರುದ್ಧ ದ್ವೇಷವನ್ನು ಉಂಟುಮಾಡುವ ಆಧಾರರಹಿತ ಆರೋಪಗಳನ್ನು “ದ್ವೇಷ ಭಾಷಣಗಳು” ಎಂದು ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಇಂದ್ರೇಶ್ ಕುಮಾರ್ ಅವರು ಸಂಘದ ಅಂಗಸಂಸ್ಥೆ ಮುಸ್ಲಿಂ ರಾಷ್ಟ್ರೀಯ ಮಂಚ್‌ನ ಸಂಸ್ಥಾಪಕರೂ ಆಗಿದ್ದಾರೆ. ಜೊತೆಗೆ RSS ನ ಮುಸ್ಲಿಂ ಘಟಕದ ರೀತಿಯಲ್ಲಿ ಕೆಲವು ವರ್ಷಗಳ ಹಿಂದೆ ಕ್ರಿಶ್ಚಿಯನ್ ರಾಷ್ಟ್ರೀಯ ಮಂಚ್ ಎಂಬ ಮತ್ತೊಂದು ಸಂಘಟನೆಯನ್ನು ಸ್ಥಾಪಿಸಿದ್ದಾರೆ.


ಇದನ್ನೂ ಓದಿ: ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...