Homeಮುಖಪುಟಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ 'ಬಾಡಿಗೆದಾರರು' ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

- Advertisement -
- Advertisement -

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए रोड नहीं है” ಮತ್ತು ಇಂಗ್ಲಿಷ್‌ನಲ್ಲಿ “This Road Not Allow Muslim” (ಈ ರಸ್ತೆ ಮುಸ್ಲಿಮರಿಗಾಗಿ ಅಲ್ಲ ಅಥವಾ ಈ ರಸ್ತೆಯಲ್ಲಿ ಮುಸ್ಲಿಮರು ಓಡಾಡುವಂತಿಲ್ಲ) ಎಂದು ಸ್ಪ್ರೇ ಪೇಂಟ್ ಮೂಲಕ ಅಳಿಸಲಾಗದಂತೆ ಬರೆದಿದ್ದರು.

ಈ ಕುರಿತು ಆಲ್ಟ್ ನ್ಯೂಸ್ ಹಂಚಿಕೊಂಡ ವಿಡಿಯೋವನ್ನು ಕೆಳಗೆ ನೋಡಬಹುದು

ಕೋಮು ದ್ವೇಷದ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಆ ಮಹಿಳೆಯರು ಬಿಬಿಸಿ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಆ ಸಂದರ್ಶನದಲ್ಲಿ ಅವರು ತಮ್ಮ ಕೃತ್ಯವನ್ನು ಬಹಳ ಗಟ್ಟಿಯಾಗಿ ಸಮರ್ಥಿಸಿಕೊಂಡಿದ್ದಾರೆ.

“ಈ ದೇಶ ನಮ್ಮದು, ನಾವು ಏನು ಬೇಕಾದರೂ ಮಾಡಬಹುದು ಎಂದು ಆ ಮಹಿಳೆಯರು ಪ್ರತಿಪಾದಿಸಿದ್ದು, ಮುಸ್ಲಿಮರು ಭಾರತದಲ್ಲಿ ಬಾಡಿಗೆದಾರರು ಮತ್ತು ಅವರು ಹಾಗೆಯೇ ಬದುಕಬೇಕು” ಎಂದು ಹೇಳಿದ್ದಾರೆ.

ಮಹಿಳೆಯರು ದ್ವೇಷ ಬರಹ ಬರೆದಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋದಲ್ಲಿ, ಹಸಿರು ಬಣ್ಣದ ಬಟ್ಟೆ ಧರಿಸಿದ ಮತ್ತು ಕೇಸರಿ ಬಣ್ಣದ ಶಾಲು ಧರಿಸಿ ಇಬ್ಬರು ಮಹಿಳೆಯರು ಸ್ಪ್ರೇ-ಪೇಂಟಿಂಗ್ ಮಾಡುತ್ತಿರುವುದು ಕಂಡುಬಂದರೆ, ಬಿಳಿ ಬಣ್ಣದ ಬಟ್ಟೆ ಧರಿಸಿದ ವ್ಯಕ್ತಿಯೊಬ್ಬರು ವಿಡಿಯೋದ ಕೊನೆಯಲ್ಲಿ ಸ್ವಲ್ಪ ಸಮಯ ಕಾಣಿಸಿಕೊಂಡಿದ್ದಾರೆ. ಉತ್ತರಾಖಂಡ ರಾಜ್ಯದ ನಂಬರ್ ಪ್ಲೇಟ್ ಹೊಂದಿರುವ ಕೆಂಪು ಸ್ವಿಫ್ಟ್ ಡಿಝೈರ್ ಕಾರು ಕೂಡ ವಿಡಿಯೋದಲ್ಲಿ ಗೋಚರಿಸಿದೆ. ಮಹಿಳೆಯೊಬ್ಬರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೋಗಿರುವುವುದು ಕೇಳಿಸುತ್ತದೆ.

ಹಿಂದೂ ರಕ್ಷಾ ದಳದ ಮುಖ್ಯಸ್ಥ ಪಿಂಕಿ ಚೌಧರಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಈ ಸಂದೇಶವು ‘ಜಿಹಾದಿಗಳನ್ನು’ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಕೇವಲ ಹಿಂದೂಗಳು ಮಾತ್ರ ತೆರಿಗೆ ಪಾವತಿಸುತ್ತಾರೆ ಎಂದು ಯಾವುದೇ ಪುರಾವೆಗಳಿಲ್ಲದೆ ಅವರು ಪ್ರತಿಪಾದಿಸಿದ್ದಾರೆ. “ಹಿಂದೂ ರಕ್ಷಾ ದಳದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರೆದಿರುವುದು ಸರಿಯಾಗಿದೆ, ಏಕೆಂದರೆ ರಸ್ತೆಗಳು ನಿರ್ಮಾಣವಾಗುವುದು ಕೇವಲ ಹಿಂದೂಗಳ ತೆರಿಗೆಯಿಂದ. ಈ ‘ಜಿಹಾದಿ’ ಜನರು ತೆರಿಗೆ ಕಟ್ಟುವುದಿಲ್ಲ, ಹಾಗಾಗಿ ಅವರಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಬಳಸುವ ಹಕ್ಕಿಲ್ಲ. ಮುಸ್ಲಿಮರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಬಿಡುವುದಿಲ್ಲ,” ಎಂದು ಅವರು ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪಿಂಕಿ ಚೌಧರಿ ಅವರು ತಮ್ಮ ಹಳೆಯ ವಾದವನ್ನೇ ಮುಂದುವರಿಸುತ್ತಾ, ಮತ್ತೊಂದು ವಿಡಿಯೋ ಹೇಳಿಕೆಯಲ್ಲಿ ಕೋಮು ಪ್ರಚೋದಕ ಮಾತುಗಳನ್ನು ಆಡಿದ್ದಾರೆ. ಅವರ ಮಾತುಗಳ ಸಾರಾಂಶ ಇಲ್ಲಿದೆ:

“ಭಾರತದಲ್ಲಿ ಎಷ್ಟು ಶೇಕಡ ಮುಸ್ಲಿಮರಿದ್ದಾರೆ ಮತ್ತು ಅವರು ಎಷ್ಟು ತೆರಿಗೆ ಕಟ್ಟುತ್ತಾರೆ ಎಂಬುವುದು ಜನರಿಗೆ ತಿಳಿಯಬೇಕು. ನಾವು ಕಟ್ಟುವ ತೆರಿಗೆಯ ಲಾಭವನ್ನು ಈ ‘ಜಿಹಾದಿಗಳು’ ಪಡೆಯುತ್ತಿರುವುದರ ಬಗ್ಗೆ ಸರ್ಕಾರಕ್ಕೆ ಚಿಂತೆಯಿರಬೇಕು. ದೇವಸ್ಥಾನಗಳ ಕಾಣಿಕೆ ಹಣ ಸರ್ಕಾರಕ್ಕೆ ಹೋಗುತ್ತದೆ, ಆದರೆ ಮಸೀದಿ ಮತ್ತು ಮದರಸಾಗಳಿಂದ ಎಷ್ಟು ಹಣ ಬರುತ್ತದೆ? ದೇವಸ್ಥಾನಗಳಿಂದ ಹಣ ಹರಿಯುತ್ತದೆ, ಆದರೆ ಅದರ ಸೌಲಭ್ಯಗಳನ್ನು ಇವರು ಪಡೆಯುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಮುಸ್ಲಿಮರಿಗೆ ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಬೇಕು. ನಾವು ತೆರಿಗೆ ಕಟ್ಟುತ್ತೇವೆ ಮತ್ತು ಹಿಂದೂಗಳ ಮತಗಳಿಂದಲೇ ಸರ್ಕಾರಗಳು ರಚನೆಯಾಗುತ್ತವೆ, ಆದರೆ ಎಲ್ಲಾ ಲಾಭಗಳು ಮುಸ್ಲಿಮರಿಗೆ ಹೋಗುತ್ತಿವೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ವಿಡಿಯೋವನ್ನು ಕೆಳಗಡೆ ನೋಡಬಹುದು

“ಈ ಕೃತ್ಯದ ಕುರಿತು ವಿಚಾರಿಸಲು ನಾವು ಸಹರಾನ್‌ಪುರ (ಗ್ರಾಮಾಂತರ) ಎಸ್‌ಪಿ ಸಾಗರ್ ಜೈನ್ ಅವರೊಂದಿಗೆ ಮಾತನಾಡಿದ್ದು, ಅವರು ಫೆಬ್ರವರಿ 27ರ ಬೆಳಗ್ಗೆಯೇ ಈ ಬಗ್ಗೆ ಎಫ್‌ಐಆರ್ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ. “ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಹೆಚ್‌ಎಐ) ಅಧಿಕಾರಿಯೊಬ್ಬರಿಂದ ನಮಗೆ ದೂರು ಬಂದಿದ್ದು, ಅದರ ಆಧಾರದ ಮೇಲೆ ನಾವು ಹಿಂದೂ ರಕ್ಷಾ ದಳದ ಕೆಲವು ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಈ ಕೃತ್ಯ ಎಸಗಿದವರನ್ನು ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ. ಅವರು ಯಾರೆಂದು ಗುರುತಿಸಿದ ನಂತರ, ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂಬುವುದಾಗಿ ತಿಳಿಸಿದ್ದಾರೆ ಎಂದು ಆಲ್ಟ್ ನ್ಯೂಸ್ ಮಾ.2ರಂದು ವರದಿ ಮಾಡಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353(2) ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಇದು ಧಾರ್ಮಿಕ, ಜನಾಂಗೀಯ, ಭಾಷಾ, ಪ್ರಾದೇಶಿಕ ಗುಂಪುಗಳು ಅಥವಾ ಜಾತಿಗಳ ನಡುವೆ ದ್ವೇಷ, ಅಥವಾ ಕೆಟ್ಟ ಇಚ್ಛೆಯನ್ನು ಪ್ರಚೋದಿಸುವ ಉದ್ದೇಶದಿಂದ ಸುಳ್ಳು ಮಾಹಿತಿ, ವದಂತಿಗಳು ಅಥವಾ ಆತಂಕಕಾರಿ ವಿಷಯಗಳ ಪ್ರಕಟಣೆ ಅಥವಾ ಪ್ರಸರಣವನ್ನು ಅಪರಾಧೀಕರಿಸುತ್ತದೆ. ಈ ಅಪರಾಧವು ಗುರುತಿಸಬಹುದಾದ ಮತ್ತು ಜಾಮೀನು ರಹಿತವಾಗಿದೆ ಎಂದು ಆಲ್ಟ್ ನ್ಯೂಸ್ ಉಲ್ಲೇಖಿಸಿದೆ.

ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯು ಎನ್‌ಹೆಚ್‌ಎಐ ಅಧಿಕಾರಿಯನ್ನು ಸುನಿಲ್ ಕುಮಾರ್ ಎಂದು ಗುರುತಿಸಿದೆ.

ಈ ಘಟನೆಯ ವಿಡಿಯೋ ವೈರಲ್ ಆದ ಮರುದಿನವೇ ಬಿಬಿಸಿ ಪತ್ರಕರ್ತ ದಿಲ್‌ನವಾಜ್ ಪಾಶಾ ದ್ವೇಷ ಬರಹ ಬರೆದಿದ್ದಾರೆ ಎನ್ನಲಾದ ಇಬ್ಬರು ಮಹಿಳೆಯರೊಂದಿಗೆ ಮಾತನಾಡಿದ್ದು, ಅವರಲ್ಲಿ ಒಬ್ಬರು ತಮ್ಮನ್ನು ಹಿಂದೂ ರಕ್ಷಾ ದಳದ ಜಿಲ್ಲಾ ಮುಖ್ಯಸ್ಥೆ ಶ್ರದ್ಧಾ ಸಿಂಗ್ ಎಂದು ಪರಿಚಯಿಸಿಕೊಂಡಿದ್ದಾರೆ. ಸಂದರ್ಶನದ ವೇಳೆ ಈ ಇಬ್ಬರೂ ಮಹಿಳೆಯರು ತಾವು ಮಾಡಿದ ಕೆಲಸದ ಬಗ್ಗೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ, ಬದಲಾಗಿ ತಾವು ಮಾಡಿದ್ದು ಸರಿ ಎಂಬಂತೆ ಉದ್ಧಟತನದ ಸಮರ್ಥನೆ ನೀಡಿದ್ದಾರೆ.

“ಹೌದು, ನಾವೇ ಆ ಗೋಡೆ ಬರಹಗಳನ್ನು ಬರೆದಿದ್ದೇವೆ… ಮುಸ್ಲಿಮರು ತೆರಿಗೆ ಪಾವತಿಸುವುದಿಲ್ಲ” ಎಂದು ಶ್ರದ್ಧಾ ಸಿಂಗ್ ಹೇಳಿದ್ದಾರೆ. ಮುಸ್ಲಿಮರು ಕೂಡ ಜಿಎಸ್‌ಟಿ ಅಡಿಯಲ್ಲಿ ಪರೋಕ್ಷ ತೆರಿಗೆಗಳನ್ನು ಪಾವತಿಸುತ್ತಾರೆ ಎಂದು ಪತ್ರಕರ್ತರು ತಿಳಿಸಿದಾಗ, ಅದಕ್ಕೆ ಉತ್ತರಿಸಿದ ಸಿಂಗ್, “ಹಿಂದೂಗಳೂ ತೆರಿಗೆ ಕಟ್ಟುತ್ತಾರೆ. ಅವರು ಕಷ್ಟಪಟ್ಟು ಕೆಲಸ ಮಾಡಿ ತೆರಿಗೆ ಪಾವತಿಸುತ್ತಾರೆ… ಆದರೆ ಮುಸ್ಲಿಮರು ತೆರಿಗೆ ಕಟ್ಟುವುದಿಲ್ಲ” ಎಂದು ವಾದಿಸಿದ್ದಾರೆ. ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಕೆಡಿಸುವ ಬಗ್ಗೆ ತಮಗೆ ಯಾವುದೇ ಭಯವಿಲ್ಲ ಎಂದು ಪುನರುಚ್ಚರಿಸಿದ ಸಿಂಗ್, ಈ ದೇಶ ತಮ್ಮದಾಗಿರುವುದರಿಂದ ತಮಗೆ ಇಷ್ಟ ಬಂದಿದ್ದನ್ನು ಮಾಡಬಹುದು ಮತ್ತು ಯಾರಿಗೆ ಇದು ಇಷ್ಟವಿಲ್ಲವೋ ಅವರು ಪಾಕಿಸ್ತಾನಕ್ಕೆ ಹೋಗಬಹುದು” ಎಂದು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ.

“ಮುಸ್ಲಿಮರು ಈ ದೇಶದಲ್ಲಿ ಬಾಡಿಗೆದಾರರಿದ್ದಂತೆ; ಅವರು ಹಾಗೆಯೇ ಬದುಕಬೇಕು. ಅವರಿಗೆ ಏನನ್ನೂ ಮಾಡಲು ಅವಕಾಶ ನೀಡಬಾರದು” ಎಂದು ಮತ್ತೊಬ್ಬ ಮಹಿಳೆ ಹೇಳಿದ್ದಾರೆ. ತಮ್ಮ ಮೇಲೆ ಎಫ್‌ಐಆರ್ ದಾಖಲಾಗುವ ಬಗ್ಗೆ ತಮಗೆ ಯಾವುದೇ ಭಯವಿಲ್ಲ ಎಂದು ಹೇಳಿದ ಅವರು, ತಾವು ‘ಸರಿಯಾದ ಕೆಲಸ’ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ಹಿಂದೂ ರಕ್ಷಾ ದಳವು ತಮ್ಮ ಬೆನ್ನಿಗೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ. “ಈ ದೇಶ ನಮ್ಮದು, ಇಲ್ಲಿ ನಮಗೆ ಇಷ್ಟ ಬಂದಿದ್ದನ್ನು ನಾವು ಮಾಡುತ್ತೇವೆ” ಎಂದು ಅವರು ಉದ್ಧಟತನದಿಂದ ಮಾತನಾಡಿದ್ದಾರೆ.

ಬಿಬಿಸಿ ಪತ್ರಕರ್ತ (ಮುಸ್ಲಿಂ ಸಮುದಾಯದವರು) ತಾನು ಮನೆಗೆ ಮರಳಲು ಅದೇ ಹೆದ್ದಾರಿಯನ್ನು ಬಳಸಬೇಕಾಗುತ್ತದೆ ಎಂದು ಹೇಳಿದಾಗ, ಆ ಮಹಿಳೆ ಹೀಗೆ ಉತ್ತರಿಸಿದ್ದಾರೆ: “ನೀವು ರಸ್ತೆಯ ಕೆಳಗಿನಿಂದ ಹೋಗಿ. ನಿಮಗಾಗಿ ಪ್ರತ್ಯೇಕವಾದ ರಸ್ತೆಯನ್ನು ನೀವೇ ಮಾಡಿಕೊಂಡು ಅದರ ಮೂಲಕ ಹೋಗಿ.”

ಮಹಿಳೆಯರೊಂದಿಗೆ ಪತ್ರಕರ್ತ ನಡೆಸಿದ ಮಾತುಕತೆಯ ವಿಡಿಯೋವನ್ನು ಕೆಳಗಡೆ ನೋಡಬಹುದು

View this post on Instagram

A post shared by Dilnawaz Pasha (@dilnawazpasha)

COURTESY : altnews.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...