Homeಮುಖಪುಟಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ 'ಬಾಡಿಗೆದಾರರು' ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

- Advertisement -
- Advertisement -

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए रोड नहीं है” ಮತ್ತು ಇಂಗ್ಲಿಷ್‌ನಲ್ಲಿ “This Road Not Allow Muslim” (ಈ ರಸ್ತೆ ಮುಸ್ಲಿಮರಿಗಾಗಿ ಅಲ್ಲ ಅಥವಾ ಈ ರಸ್ತೆಯಲ್ಲಿ ಮುಸ್ಲಿಮರು ಓಡಾಡುವಂತಿಲ್ಲ) ಎಂದು ಸ್ಪ್ರೇ ಪೇಂಟ್ ಮೂಲಕ ಅಳಿಸಲಾಗದಂತೆ ಬರೆದಿದ್ದರು.

ಈ ಕುರಿತು ಆಲ್ಟ್ ನ್ಯೂಸ್ ಹಂಚಿಕೊಂಡ ವಿಡಿಯೋವನ್ನು ಕೆಳಗೆ ನೋಡಬಹುದು

ಕೋಮು ದ್ವೇಷದ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ದೊಡ್ಡ ಮಟ್ಟದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಆ ಮಹಿಳೆಯರು ಬಿಬಿಸಿ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಆ ಸಂದರ್ಶನದಲ್ಲಿ ಅವರು ತಮ್ಮ ಕೃತ್ಯವನ್ನು ಬಹಳ ಗಟ್ಟಿಯಾಗಿ ಸಮರ್ಥಿಸಿಕೊಂಡಿದ್ದಾರೆ.

“ಈ ದೇಶ ನಮ್ಮದು, ನಾವು ಏನು ಬೇಕಾದರೂ ಮಾಡಬಹುದು ಎಂದು ಆ ಮಹಿಳೆಯರು ಪ್ರತಿಪಾದಿಸಿದ್ದು, ಮುಸ್ಲಿಮರು ಭಾರತದಲ್ಲಿ ಬಾಡಿಗೆದಾರರು ಮತ್ತು ಅವರು ಹಾಗೆಯೇ ಬದುಕಬೇಕು” ಎಂದು ಹೇಳಿದ್ದಾರೆ.

ಮಹಿಳೆಯರು ದ್ವೇಷ ಬರಹ ಬರೆದಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋದಲ್ಲಿ, ಹಸಿರು ಬಣ್ಣದ ಬಟ್ಟೆ ಧರಿಸಿದ ಮತ್ತು ಕೇಸರಿ ಬಣ್ಣದ ಶಾಲು ಧರಿಸಿ ಇಬ್ಬರು ಮಹಿಳೆಯರು ಸ್ಪ್ರೇ-ಪೇಂಟಿಂಗ್ ಮಾಡುತ್ತಿರುವುದು ಕಂಡುಬಂದರೆ, ಬಿಳಿ ಬಣ್ಣದ ಬಟ್ಟೆ ಧರಿಸಿದ ವ್ಯಕ್ತಿಯೊಬ್ಬರು ವಿಡಿಯೋದ ಕೊನೆಯಲ್ಲಿ ಸ್ವಲ್ಪ ಸಮಯ ಕಾಣಿಸಿಕೊಂಡಿದ್ದಾರೆ. ಉತ್ತರಾಖಂಡ ರಾಜ್ಯದ ನಂಬರ್ ಪ್ಲೇಟ್ ಹೊಂದಿರುವ ಕೆಂಪು ಸ್ವಿಫ್ಟ್ ಡಿಝೈರ್ ಕಾರು ಕೂಡ ವಿಡಿಯೋದಲ್ಲಿ ಗೋಚರಿಸಿದೆ. ಮಹಿಳೆಯೊಬ್ಬರು ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೋಗಿರುವುವುದು ಕೇಳಿಸುತ್ತದೆ.

ಹಿಂದೂ ರಕ್ಷಾ ದಳದ ಮುಖ್ಯಸ್ಥ ಪಿಂಕಿ ಚೌಧರಿ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಈ ಸಂದೇಶವು ‘ಜಿಹಾದಿಗಳನ್ನು’ ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ. ಭಾರತದಲ್ಲಿ ಕೇವಲ ಹಿಂದೂಗಳು ಮಾತ್ರ ತೆರಿಗೆ ಪಾವತಿಸುತ್ತಾರೆ ಎಂದು ಯಾವುದೇ ಪುರಾವೆಗಳಿಲ್ಲದೆ ಅವರು ಪ್ರತಿಪಾದಿಸಿದ್ದಾರೆ. “ಹಿಂದೂ ರಕ್ಷಾ ದಳದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರೆದಿರುವುದು ಸರಿಯಾಗಿದೆ, ಏಕೆಂದರೆ ರಸ್ತೆಗಳು ನಿರ್ಮಾಣವಾಗುವುದು ಕೇವಲ ಹಿಂದೂಗಳ ತೆರಿಗೆಯಿಂದ. ಈ ‘ಜಿಹಾದಿ’ ಜನರು ತೆರಿಗೆ ಕಟ್ಟುವುದಿಲ್ಲ, ಹಾಗಾಗಿ ಅವರಿಗೆ ರಾಷ್ಟ್ರೀಯ ಹೆದ್ದಾರಿಯನ್ನು ಬಳಸುವ ಹಕ್ಕಿಲ್ಲ. ಮುಸ್ಲಿಮರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಲು ಬಿಡುವುದಿಲ್ಲ,” ಎಂದು ಅವರು ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಪಿಂಕಿ ಚೌಧರಿ ಅವರು ತಮ್ಮ ಹಳೆಯ ವಾದವನ್ನೇ ಮುಂದುವರಿಸುತ್ತಾ, ಮತ್ತೊಂದು ವಿಡಿಯೋ ಹೇಳಿಕೆಯಲ್ಲಿ ಕೋಮು ಪ್ರಚೋದಕ ಮಾತುಗಳನ್ನು ಆಡಿದ್ದಾರೆ. ಅವರ ಮಾತುಗಳ ಸಾರಾಂಶ ಇಲ್ಲಿದೆ:

“ಭಾರತದಲ್ಲಿ ಎಷ್ಟು ಶೇಕಡ ಮುಸ್ಲಿಮರಿದ್ದಾರೆ ಮತ್ತು ಅವರು ಎಷ್ಟು ತೆರಿಗೆ ಕಟ್ಟುತ್ತಾರೆ ಎಂಬುವುದು ಜನರಿಗೆ ತಿಳಿಯಬೇಕು. ನಾವು ಕಟ್ಟುವ ತೆರಿಗೆಯ ಲಾಭವನ್ನು ಈ ‘ಜಿಹಾದಿಗಳು’ ಪಡೆಯುತ್ತಿರುವುದರ ಬಗ್ಗೆ ಸರ್ಕಾರಕ್ಕೆ ಚಿಂತೆಯಿರಬೇಕು. ದೇವಸ್ಥಾನಗಳ ಕಾಣಿಕೆ ಹಣ ಸರ್ಕಾರಕ್ಕೆ ಹೋಗುತ್ತದೆ, ಆದರೆ ಮಸೀದಿ ಮತ್ತು ಮದರಸಾಗಳಿಂದ ಎಷ್ಟು ಹಣ ಬರುತ್ತದೆ? ದೇವಸ್ಥಾನಗಳಿಂದ ಹಣ ಹರಿಯುತ್ತದೆ, ಆದರೆ ಅದರ ಸೌಲಭ್ಯಗಳನ್ನು ಇವರು ಪಡೆಯುತ್ತಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಮುಸ್ಲಿಮರಿಗೆ ಸರ್ಕಾರಿ ಸೌಲಭ್ಯಗಳನ್ನು ನಿರಾಕರಿಸಬೇಕು. ನಾವು ತೆರಿಗೆ ಕಟ್ಟುತ್ತೇವೆ ಮತ್ತು ಹಿಂದೂಗಳ ಮತಗಳಿಂದಲೇ ಸರ್ಕಾರಗಳು ರಚನೆಯಾಗುತ್ತವೆ, ಆದರೆ ಎಲ್ಲಾ ಲಾಭಗಳು ಮುಸ್ಲಿಮರಿಗೆ ಹೋಗುತ್ತಿವೆ” ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ವಿಡಿಯೋವನ್ನು ಕೆಳಗಡೆ ನೋಡಬಹುದು

“ಈ ಕೃತ್ಯದ ಕುರಿತು ವಿಚಾರಿಸಲು ನಾವು ಸಹರಾನ್‌ಪುರ (ಗ್ರಾಮಾಂತರ) ಎಸ್‌ಪಿ ಸಾಗರ್ ಜೈನ್ ಅವರೊಂದಿಗೆ ಮಾತನಾಡಿದ್ದು, ಅವರು ಫೆಬ್ರವರಿ 27ರ ಬೆಳಗ್ಗೆಯೇ ಈ ಬಗ್ಗೆ ಎಫ್‌ಐಆರ್ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ. “ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಹೆಚ್‌ಎಐ) ಅಧಿಕಾರಿಯೊಬ್ಬರಿಂದ ನಮಗೆ ದೂರು ಬಂದಿದ್ದು, ಅದರ ಆಧಾರದ ಮೇಲೆ ನಾವು ಹಿಂದೂ ರಕ್ಷಾ ದಳದ ಕೆಲವು ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಈ ಕೃತ್ಯ ಎಸಗಿದವರನ್ನು ಪತ್ತೆಹಚ್ಚುವ ಕೆಲಸ ನಡೆಯುತ್ತಿದೆ. ಅವರು ಯಾರೆಂದು ಗುರುತಿಸಿದ ನಂತರ, ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂಬುವುದಾಗಿ ತಿಳಿಸಿದ್ದಾರೆ ಎಂದು ಆಲ್ಟ್ ನ್ಯೂಸ್ ಮಾ.2ರಂದು ವರದಿ ಮಾಡಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353(2) ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಇದು ಧಾರ್ಮಿಕ, ಜನಾಂಗೀಯ, ಭಾಷಾ, ಪ್ರಾದೇಶಿಕ ಗುಂಪುಗಳು ಅಥವಾ ಜಾತಿಗಳ ನಡುವೆ ದ್ವೇಷ, ಅಥವಾ ಕೆಟ್ಟ ಇಚ್ಛೆಯನ್ನು ಪ್ರಚೋದಿಸುವ ಉದ್ದೇಶದಿಂದ ಸುಳ್ಳು ಮಾಹಿತಿ, ವದಂತಿಗಳು ಅಥವಾ ಆತಂಕಕಾರಿ ವಿಷಯಗಳ ಪ್ರಕಟಣೆ ಅಥವಾ ಪ್ರಸರಣವನ್ನು ಅಪರಾಧೀಕರಿಸುತ್ತದೆ. ಈ ಅಪರಾಧವು ಗುರುತಿಸಬಹುದಾದ ಮತ್ತು ಜಾಮೀನು ರಹಿತವಾಗಿದೆ ಎಂದು ಆಲ್ಟ್ ನ್ಯೂಸ್ ಉಲ್ಲೇಖಿಸಿದೆ.

ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯು ಎನ್‌ಹೆಚ್‌ಎಐ ಅಧಿಕಾರಿಯನ್ನು ಸುನಿಲ್ ಕುಮಾರ್ ಎಂದು ಗುರುತಿಸಿದೆ.

ಈ ಘಟನೆಯ ವಿಡಿಯೋ ವೈರಲ್ ಆದ ಮರುದಿನವೇ ಬಿಬಿಸಿ ಪತ್ರಕರ್ತ ದಿಲ್‌ನವಾಜ್ ಪಾಶಾ ದ್ವೇಷ ಬರಹ ಬರೆದಿದ್ದಾರೆ ಎನ್ನಲಾದ ಇಬ್ಬರು ಮಹಿಳೆಯರೊಂದಿಗೆ ಮಾತನಾಡಿದ್ದು, ಅವರಲ್ಲಿ ಒಬ್ಬರು ತಮ್ಮನ್ನು ಹಿಂದೂ ರಕ್ಷಾ ದಳದ ಜಿಲ್ಲಾ ಮುಖ್ಯಸ್ಥೆ ಶ್ರದ್ಧಾ ಸಿಂಗ್ ಎಂದು ಪರಿಚಯಿಸಿಕೊಂಡಿದ್ದಾರೆ. ಸಂದರ್ಶನದ ವೇಳೆ ಈ ಇಬ್ಬರೂ ಮಹಿಳೆಯರು ತಾವು ಮಾಡಿದ ಕೆಲಸದ ಬಗ್ಗೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ, ಬದಲಾಗಿ ತಾವು ಮಾಡಿದ್ದು ಸರಿ ಎಂಬಂತೆ ಉದ್ಧಟತನದ ಸಮರ್ಥನೆ ನೀಡಿದ್ದಾರೆ.

“ಹೌದು, ನಾವೇ ಆ ಗೋಡೆ ಬರಹಗಳನ್ನು ಬರೆದಿದ್ದೇವೆ… ಮುಸ್ಲಿಮರು ತೆರಿಗೆ ಪಾವತಿಸುವುದಿಲ್ಲ” ಎಂದು ಶ್ರದ್ಧಾ ಸಿಂಗ್ ಹೇಳಿದ್ದಾರೆ. ಮುಸ್ಲಿಮರು ಕೂಡ ಜಿಎಸ್‌ಟಿ ಅಡಿಯಲ್ಲಿ ಪರೋಕ್ಷ ತೆರಿಗೆಗಳನ್ನು ಪಾವತಿಸುತ್ತಾರೆ ಎಂದು ಪತ್ರಕರ್ತರು ತಿಳಿಸಿದಾಗ, ಅದಕ್ಕೆ ಉತ್ತರಿಸಿದ ಸಿಂಗ್, “ಹಿಂದೂಗಳೂ ತೆರಿಗೆ ಕಟ್ಟುತ್ತಾರೆ. ಅವರು ಕಷ್ಟಪಟ್ಟು ಕೆಲಸ ಮಾಡಿ ತೆರಿಗೆ ಪಾವತಿಸುತ್ತಾರೆ… ಆದರೆ ಮುಸ್ಲಿಮರು ತೆರಿಗೆ ಕಟ್ಟುವುದಿಲ್ಲ” ಎಂದು ವಾದಿಸಿದ್ದಾರೆ. ಸಮಾಜದ ಶಾಂತಿ ಮತ್ತು ಸೌಹಾರ್ದತೆಯನ್ನು ಕೆಡಿಸುವ ಬಗ್ಗೆ ತಮಗೆ ಯಾವುದೇ ಭಯವಿಲ್ಲ ಎಂದು ಪುನರುಚ್ಚರಿಸಿದ ಸಿಂಗ್, ಈ ದೇಶ ತಮ್ಮದಾಗಿರುವುದರಿಂದ ತಮಗೆ ಇಷ್ಟ ಬಂದಿದ್ದನ್ನು ಮಾಡಬಹುದು ಮತ್ತು ಯಾರಿಗೆ ಇದು ಇಷ್ಟವಿಲ್ಲವೋ ಅವರು ಪಾಕಿಸ್ತಾನಕ್ಕೆ ಹೋಗಬಹುದು” ಎಂದು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ.

“ಮುಸ್ಲಿಮರು ಈ ದೇಶದಲ್ಲಿ ಬಾಡಿಗೆದಾರರಿದ್ದಂತೆ; ಅವರು ಹಾಗೆಯೇ ಬದುಕಬೇಕು. ಅವರಿಗೆ ಏನನ್ನೂ ಮಾಡಲು ಅವಕಾಶ ನೀಡಬಾರದು” ಎಂದು ಮತ್ತೊಬ್ಬ ಮಹಿಳೆ ಹೇಳಿದ್ದಾರೆ. ತಮ್ಮ ಮೇಲೆ ಎಫ್‌ಐಆರ್ ದಾಖಲಾಗುವ ಬಗ್ಗೆ ತಮಗೆ ಯಾವುದೇ ಭಯವಿಲ್ಲ ಎಂದು ಹೇಳಿದ ಅವರು, ತಾವು ‘ಸರಿಯಾದ ಕೆಲಸ’ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ಹಿಂದೂ ರಕ್ಷಾ ದಳವು ತಮ್ಮ ಬೆನ್ನಿಗೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ. “ಈ ದೇಶ ನಮ್ಮದು, ಇಲ್ಲಿ ನಮಗೆ ಇಷ್ಟ ಬಂದಿದ್ದನ್ನು ನಾವು ಮಾಡುತ್ತೇವೆ” ಎಂದು ಅವರು ಉದ್ಧಟತನದಿಂದ ಮಾತನಾಡಿದ್ದಾರೆ.

ಬಿಬಿಸಿ ಪತ್ರಕರ್ತ (ಮುಸ್ಲಿಂ ಸಮುದಾಯದವರು) ತಾನು ಮನೆಗೆ ಮರಳಲು ಅದೇ ಹೆದ್ದಾರಿಯನ್ನು ಬಳಸಬೇಕಾಗುತ್ತದೆ ಎಂದು ಹೇಳಿದಾಗ, ಆ ಮಹಿಳೆ ಹೀಗೆ ಉತ್ತರಿಸಿದ್ದಾರೆ: “ನೀವು ರಸ್ತೆಯ ಕೆಳಗಿನಿಂದ ಹೋಗಿ. ನಿಮಗಾಗಿ ಪ್ರತ್ಯೇಕವಾದ ರಸ್ತೆಯನ್ನು ನೀವೇ ಮಾಡಿಕೊಂಡು ಅದರ ಮೂಲಕ ಹೋಗಿ.”

ಮಹಿಳೆಯರೊಂದಿಗೆ ಪತ್ರಕರ್ತ ನಡೆಸಿದ ಮಾತುಕತೆಯ ವಿಡಿಯೋವನ್ನು ಕೆಳಗಡೆ ನೋಡಬಹುದು

View this post on Instagram

A post shared by Dilnawaz Pasha (@dilnawazpasha)

COURTESY : altnews.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...