Homeಕರ್ನಾಟಕಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು...

ಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು ಸ್ಥಗಿತ

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು

- Advertisement -
- Advertisement -

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಸಂಪಾದಕೀಯ ಪ್ರಕಟಿಸಿದ್ದ ಮೈಸೂರಿನ ಸ್ಟಾರ್ ಆಫ್ ಮೈಸೂರು ಇಂಗ್ಲಿಷ್ ದಿನಪತ್ರಿಕೆ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಖಂಡನೆ ವ್ಯಕ್ತಪಡಿಸಿದೆ. ಆ ಪತ್ರಿಕೆಗೆ ಸತತ ಮೂರು ತಿಂಗಳ ಕಾಲ ಯಾವುದೇ ಸರ್ಕಾರಿ ಜಾಹೀರಾತುಗಳನ್ನು ನೀಡಬಾರದು ಎಂದು ಆದೇಶಿಸಿದೆ.

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರ್ 2020ರ ಎಪ್ರಿಲ್ 6 ರಂದು ದ್ವೇಷಪೂರಿತ ಸಂಪಾದಕೀಯ ಪ್ರಕಟಿಸಿತ್ತು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಅಂದಿನ ಸಂಪಾದಕೀಯ ಹೇಳಿತ್ತು. ಆಗ ಕೆ.ಬಿ.ಗಣಪತಿಯವರು ಮುಖ್ಯ ಸಂಪಾದಕರಾಗಿದ್ದರು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿತ್ತು.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ಎಂದು ಉಲ್ಲೇಖಿಸಿ ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು.

ಆಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿತ್ತು. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿತ್ತು. ಆದರೆ 400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು. ಅದರ ಆಧಾರದಲ್ಲಿ ಪಿಸಿಐ ವಿಚಾರಣಾ ಸಮಿತಿ ನೇಮಿಸಿತ್ತು. ತನಿಖೆಯ ನಂತರ ವಿಚಾರಣಾ ಸಮಿತಿಯು “ಪತ್ರಿಕೆಯು ಸಮಾಜದಲ್ಲಿ ಶಾಂತಿ ಕದಡುವಂತಹ ಅಥವಾ ಸಂವಿಧಾನದ ಉದ್ದೇಶಗಳ ಉಲ್ಲಂಘನೆ ಆಗುವಂತಹ ಯಾವುದೇ ರೀತಿಯ ಪ್ರಚೋದನಾಕಾರಿ ಬರವಣಿಗೆಗಳು ಪ್ರಕಟಗೊಳ್ಳದಿರುವುದನ್ನು ಖಾತ್ರಿಪಡಿಸುವಂತೆ” ಸೂಚಿಸಿದೆ.

ಮುಂದುವರಿದು ಪತ್ರಿಕೋದ್ಯಮವು ಇಂತಹ ವಿಭವಿಸುವ ವಿಚಾರಗಳಲ್ಲಿ ತೊಡಗಿಕೊಳ್ಳಬಾರದು. ಎಲ್ಲಾ ಸಮುದಾಯದವರಲ್ಲಿ ಭ್ರಾತೃತ್ವದ ಸಂದೇಶವನ್ನು ಹರಡಬೇಕೆಂದು, ಭಾರತದ ಒಗ್ಗಟ್ಟಿನಲ್ಲಿ ವೈವಿಧ್ಯತೆಯನ್ನು ಪ್ರದರ್ಶಿಸುವಂತೆಯೂ ಹಾಗೂ ಕೋಮುವಾದವನ್ನು ಉತ್ತೇಜಿಸುವ ಯಾವುದೇ ರೀತಿಯ ಬರವಣಿಗೆಗಳನ್ನು ಪ್ರಕಟಿಸದಂತೆಯೂ ಸೂಚಿಸಿದೆ.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನವು ಪಿಸಿಐ ಆದೇಶವನ್ನು ಸ್ವಾಗತಿಸಿದ್ದು, ಇತರೆ ಮಾಧ್ಯಮಗಳಿಗೂ ಸಹ ಇದೊಂದು ಪಾಠವಾಗಬೇಕೆಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ: ಕೋಮು ಪ್ರಚೋದನಾ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...