Homeಕರ್ನಾಟಕಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು...

ಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು ಸ್ಥಗಿತ

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು

- Advertisement -
- Advertisement -

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಸಂಪಾದಕೀಯ ಪ್ರಕಟಿಸಿದ್ದ ಮೈಸೂರಿನ ಸ್ಟಾರ್ ಆಫ್ ಮೈಸೂರು ಇಂಗ್ಲಿಷ್ ದಿನಪತ್ರಿಕೆ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಖಂಡನೆ ವ್ಯಕ್ತಪಡಿಸಿದೆ. ಆ ಪತ್ರಿಕೆಗೆ ಸತತ ಮೂರು ತಿಂಗಳ ಕಾಲ ಯಾವುದೇ ಸರ್ಕಾರಿ ಜಾಹೀರಾತುಗಳನ್ನು ನೀಡಬಾರದು ಎಂದು ಆದೇಶಿಸಿದೆ.

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರ್ 2020ರ ಎಪ್ರಿಲ್ 6 ರಂದು ದ್ವೇಷಪೂರಿತ ಸಂಪಾದಕೀಯ ಪ್ರಕಟಿಸಿತ್ತು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಅಂದಿನ ಸಂಪಾದಕೀಯ ಹೇಳಿತ್ತು. ಆಗ ಕೆ.ಬಿ.ಗಣಪತಿಯವರು ಮುಖ್ಯ ಸಂಪಾದಕರಾಗಿದ್ದರು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿತ್ತು.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ಎಂದು ಉಲ್ಲೇಖಿಸಿ ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು.

ಆಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿತ್ತು. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿತ್ತು. ಆದರೆ 400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು. ಅದರ ಆಧಾರದಲ್ಲಿ ಪಿಸಿಐ ವಿಚಾರಣಾ ಸಮಿತಿ ನೇಮಿಸಿತ್ತು. ತನಿಖೆಯ ನಂತರ ವಿಚಾರಣಾ ಸಮಿತಿಯು “ಪತ್ರಿಕೆಯು ಸಮಾಜದಲ್ಲಿ ಶಾಂತಿ ಕದಡುವಂತಹ ಅಥವಾ ಸಂವಿಧಾನದ ಉದ್ದೇಶಗಳ ಉಲ್ಲಂಘನೆ ಆಗುವಂತಹ ಯಾವುದೇ ರೀತಿಯ ಪ್ರಚೋದನಾಕಾರಿ ಬರವಣಿಗೆಗಳು ಪ್ರಕಟಗೊಳ್ಳದಿರುವುದನ್ನು ಖಾತ್ರಿಪಡಿಸುವಂತೆ” ಸೂಚಿಸಿದೆ.

ಮುಂದುವರಿದು ಪತ್ರಿಕೋದ್ಯಮವು ಇಂತಹ ವಿಭವಿಸುವ ವಿಚಾರಗಳಲ್ಲಿ ತೊಡಗಿಕೊಳ್ಳಬಾರದು. ಎಲ್ಲಾ ಸಮುದಾಯದವರಲ್ಲಿ ಭ್ರಾತೃತ್ವದ ಸಂದೇಶವನ್ನು ಹರಡಬೇಕೆಂದು, ಭಾರತದ ಒಗ್ಗಟ್ಟಿನಲ್ಲಿ ವೈವಿಧ್ಯತೆಯನ್ನು ಪ್ರದರ್ಶಿಸುವಂತೆಯೂ ಹಾಗೂ ಕೋಮುವಾದವನ್ನು ಉತ್ತೇಜಿಸುವ ಯಾವುದೇ ರೀತಿಯ ಬರವಣಿಗೆಗಳನ್ನು ಪ್ರಕಟಿಸದಂತೆಯೂ ಸೂಚಿಸಿದೆ.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನವು ಪಿಸಿಐ ಆದೇಶವನ್ನು ಸ್ವಾಗತಿಸಿದ್ದು, ಇತರೆ ಮಾಧ್ಯಮಗಳಿಗೂ ಸಹ ಇದೊಂದು ಪಾಠವಾಗಬೇಕೆಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ: ಕೋಮು ಪ್ರಚೋದನಾ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...