Homeಕರ್ನಾಟಕಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು...

ಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು ಸ್ಥಗಿತ

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು

- Advertisement -
- Advertisement -

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಸಂಪಾದಕೀಯ ಪ್ರಕಟಿಸಿದ್ದ ಮೈಸೂರಿನ ಸ್ಟಾರ್ ಆಫ್ ಮೈಸೂರು ಇಂಗ್ಲಿಷ್ ದಿನಪತ್ರಿಕೆ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಖಂಡನೆ ವ್ಯಕ್ತಪಡಿಸಿದೆ. ಆ ಪತ್ರಿಕೆಗೆ ಸತತ ಮೂರು ತಿಂಗಳ ಕಾಲ ಯಾವುದೇ ಸರ್ಕಾರಿ ಜಾಹೀರಾತುಗಳನ್ನು ನೀಡಬಾರದು ಎಂದು ಆದೇಶಿಸಿದೆ.

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರ್ 2020ರ ಎಪ್ರಿಲ್ 6 ರಂದು ದ್ವೇಷಪೂರಿತ ಸಂಪಾದಕೀಯ ಪ್ರಕಟಿಸಿತ್ತು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಅಂದಿನ ಸಂಪಾದಕೀಯ ಹೇಳಿತ್ತು. ಆಗ ಕೆ.ಬಿ.ಗಣಪತಿಯವರು ಮುಖ್ಯ ಸಂಪಾದಕರಾಗಿದ್ದರು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿತ್ತು.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ಎಂದು ಉಲ್ಲೇಖಿಸಿ ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು.

ಆಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿತ್ತು. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿತ್ತು. ಆದರೆ 400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು. ಅದರ ಆಧಾರದಲ್ಲಿ ಪಿಸಿಐ ವಿಚಾರಣಾ ಸಮಿತಿ ನೇಮಿಸಿತ್ತು. ತನಿಖೆಯ ನಂತರ ವಿಚಾರಣಾ ಸಮಿತಿಯು “ಪತ್ರಿಕೆಯು ಸಮಾಜದಲ್ಲಿ ಶಾಂತಿ ಕದಡುವಂತಹ ಅಥವಾ ಸಂವಿಧಾನದ ಉದ್ದೇಶಗಳ ಉಲ್ಲಂಘನೆ ಆಗುವಂತಹ ಯಾವುದೇ ರೀತಿಯ ಪ್ರಚೋದನಾಕಾರಿ ಬರವಣಿಗೆಗಳು ಪ್ರಕಟಗೊಳ್ಳದಿರುವುದನ್ನು ಖಾತ್ರಿಪಡಿಸುವಂತೆ” ಸೂಚಿಸಿದೆ.

ಮುಂದುವರಿದು ಪತ್ರಿಕೋದ್ಯಮವು ಇಂತಹ ವಿಭವಿಸುವ ವಿಚಾರಗಳಲ್ಲಿ ತೊಡಗಿಕೊಳ್ಳಬಾರದು. ಎಲ್ಲಾ ಸಮುದಾಯದವರಲ್ಲಿ ಭ್ರಾತೃತ್ವದ ಸಂದೇಶವನ್ನು ಹರಡಬೇಕೆಂದು, ಭಾರತದ ಒಗ್ಗಟ್ಟಿನಲ್ಲಿ ವೈವಿಧ್ಯತೆಯನ್ನು ಪ್ರದರ್ಶಿಸುವಂತೆಯೂ ಹಾಗೂ ಕೋಮುವಾದವನ್ನು ಉತ್ತೇಜಿಸುವ ಯಾವುದೇ ರೀತಿಯ ಬರವಣಿಗೆಗಳನ್ನು ಪ್ರಕಟಿಸದಂತೆಯೂ ಸೂಚಿಸಿದೆ.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನವು ಪಿಸಿಐ ಆದೇಶವನ್ನು ಸ್ವಾಗತಿಸಿದ್ದು, ಇತರೆ ಮಾಧ್ಯಮಗಳಿಗೂ ಸಹ ಇದೊಂದು ಪಾಠವಾಗಬೇಕೆಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ: ಕೋಮು ಪ್ರಚೋದನಾ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...