Homeಕರ್ನಾಟಕಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು...

ಮುಸ್ಲಿಂ ಸಮುದಾಯ ವಿರುದ್ಧ ದ್ವೇಷಪೂರಿತ ಸಂಪಾದಕೀಯ: ಸ್ಟಾರ್ ಆಫ್ ಮೈಸೂರು ಪತ್ರಿಕೆಗೆ ಮೂರು ತಿಂಗಳ ಜಾಹೀರಾತು ಸ್ಥಗಿತ

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು

- Advertisement -
- Advertisement -

ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಸಂಪಾದಕೀಯ ಪ್ರಕಟಿಸಿದ್ದ ಮೈಸೂರಿನ ಸ್ಟಾರ್ ಆಫ್ ಮೈಸೂರು ಇಂಗ್ಲಿಷ್ ದಿನಪತ್ರಿಕೆ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಖಂಡನೆ ವ್ಯಕ್ತಪಡಿಸಿದೆ. ಆ ಪತ್ರಿಕೆಗೆ ಸತತ ಮೂರು ತಿಂಗಳ ಕಾಲ ಯಾವುದೇ ಸರ್ಕಾರಿ ಜಾಹೀರಾತುಗಳನ್ನು ನೀಡಬಾರದು ಎಂದು ಆದೇಶಿಸಿದೆ.

ಮೈಸೂರಿನಲ್ಲಿ ಸಂಜೆ ಪ್ರಸಾರವಾಗುವ ಇಂಗ್ಲಿಶ್ ದಿನಪತ್ರಿಕೆ ಸ್ಟಾರ್ ಆಫ್ ಮೈಸೂರ್ 2020ರ ಎಪ್ರಿಲ್ 6 ರಂದು ದ್ವೇಷಪೂರಿತ ಸಂಪಾದಕೀಯ ಪ್ರಕಟಿಸಿತ್ತು. ದೇಶದಲ್ಲಿ ಒಂದು ಸಮುದಾಯದ ಜನರು ಕೊಳೆತ ಸೇಬಿನಂತೆ ಎಂದು ಬರೆದಿದ್ದಲ್ಲದೆ ಅವುಗಳನ್ನು ಸಿಂಗಾಪುರ್ ದೇಶದ ಹಿಂದಿನ ಮುಖಂಡ ಅಥವಾ ಇಸ್ರೇಲ್‌ನ ಪ್ರಸಕ್ತ ಸರ್ಕಾರಾದ ಮಾದರಿಯಲ್ಲಿ ಹೊರಗೆ ಎಸೆಯಬೇಕು ಎಂದು ಅಂದಿನ ಸಂಪಾದಕೀಯ ಹೇಳಿತ್ತು. ಆಗ ಕೆ.ಬಿ.ಗಣಪತಿಯವರು ಮುಖ್ಯ ಸಂಪಾದಕರಾಗಿದ್ದರು.

ಅಂದರೆ ಕೊರೊನಾ ಕುರಿತು ಜಾಗೃತಿ ಮೂಡಿಸುವ ನೆಪದಲ್ಲಿ ಮುಸ್ಲಿಂ ಸಮುದಾಯದ ಮೇಲೆ ಕೋಮುದ್ವೇಷ ಮೂಡಿಸುವ ಸಂಪಾದಕೀಯವೊಂದು ಈ ಪತ್ರಿಕೆಯಲ್ಲಿ ಪ್ರಕಟವಾಗಿ ಭಾರೀ ಟೀಕೆಗೆ ಒಳಗಾಗಿತ್ತು.

ಸಂಪಾದಕೀಯದಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಎಲ್ಲಿಯೂ ನೇರವಾಗಿ ತೆಗೆದುಕೊಳ್ಳದಿದ್ದರೂ, ದೇಶದ 18% ಜನರನ್ನು ಎಂದು ಉಲ್ಲೇಖಿಸಿ ದೂಷಿಸಿದ್ದ ಸಂಪಾದಕೀಯದ ನಿಲುವು ಮುಸ್ಲಿಮರ ವಿರುದ್ಧವಾಗಿದೆ ಎಂದು ಸ್ಪಷ್ಟವಾಗಿದೆ ಎಂದು ಹಲವು ಸಂಘಟನೆಗಳು ಆರೋಪಿಸಿದ್ದವು.

‘ಫೋರಮ್ ಅಗೆನಿಸ್ಟ್ ಫೇಕ್ ನ್ಯೂಸ್’ ಎಂಬ ಮೈಸೂರು ಮೂಲದ ಸಂಘಟನೆ ಈ ಸಂಪಾದಕೀಯ ಮುಸ್ಲಿಮರ ವಿರುದ್ಧ ಇದ್ದು ಇದು ಕೋಮುಗಳ ವಿರುಧ್ದ ದ್ವೇಷಕ್ಕೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿ ಸಂಪಾದಕರಿಗೆ ಪತ್ರ ಬರೆದಿತ್ತು.

ಆಗ ಸ್ಟಾರ್ ಆಫ್ ಮೈಸೂರು ಪತ್ರಿಕೆ ಕ್ಷಮಾಪಣೆಯನ್ನು ಪ್ರಕಟಿಸಿತ್ತು. ಕೋವಿಡ್-19 ಹೋರಾಟಕ್ಕೆ ಸಂಬಂಧಿಸಿದಂತೆ ಬರೆದ ಈ ಲೇಖನ ಯಾವುದಾದರೂ ಸಮುದಾಯಕ್ಕೆ ನೋವುಂಟು ಮಾಡಿದ್ದರೆ ಕ್ಷಮಿಸುವುಂತೆ ಕೇಳಿಕೊಂಡಿದ್ದು ಸಂಪಾದಕ ಮಂಡಳಿಯಿಂದ ತಪ್ಪಾಗಿರುವುದನ್ನು ಒಪ್ಪಿಕೊಂಡಿತ್ತು. ಆದರೆ 400 ಪದದ ಸಂಪಾದಕೀಯ ಬರೆದು ಕೇವಲ 50 ಪದದ ಕ್ಷಮಾಪಣೆಯನ್ನು ಈ ಪತ್ರಿಕೆ ಪ್ರಕಟಿಸಿದೆ. ಇದರಿಂದ ಉಳಿದ ಮಾಧ್ಯಮಗಳು ಪಾಠ ಕಲಿಯುವಂತಾಗಲಿ ಎಂದು ಹಲವರು ಅಭಿಪ್ರಾಯಪಟ್ಟಿದ್ದರು.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನ ಸಂಘಟನೆಯು ಪತ್ರಿಕೆಯ ವಿರುದ್ಧ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ನೀಡಿತ್ತು. ಅದರ ಆಧಾರದಲ್ಲಿ ಪಿಸಿಐ ವಿಚಾರಣಾ ಸಮಿತಿ ನೇಮಿಸಿತ್ತು. ತನಿಖೆಯ ನಂತರ ವಿಚಾರಣಾ ಸಮಿತಿಯು “ಪತ್ರಿಕೆಯು ಸಮಾಜದಲ್ಲಿ ಶಾಂತಿ ಕದಡುವಂತಹ ಅಥವಾ ಸಂವಿಧಾನದ ಉದ್ದೇಶಗಳ ಉಲ್ಲಂಘನೆ ಆಗುವಂತಹ ಯಾವುದೇ ರೀತಿಯ ಪ್ರಚೋದನಾಕಾರಿ ಬರವಣಿಗೆಗಳು ಪ್ರಕಟಗೊಳ್ಳದಿರುವುದನ್ನು ಖಾತ್ರಿಪಡಿಸುವಂತೆ” ಸೂಚಿಸಿದೆ.

ಮುಂದುವರಿದು ಪತ್ರಿಕೋದ್ಯಮವು ಇಂತಹ ವಿಭವಿಸುವ ವಿಚಾರಗಳಲ್ಲಿ ತೊಡಗಿಕೊಳ್ಳಬಾರದು. ಎಲ್ಲಾ ಸಮುದಾಯದವರಲ್ಲಿ ಭ್ರಾತೃತ್ವದ ಸಂದೇಶವನ್ನು ಹರಡಬೇಕೆಂದು, ಭಾರತದ ಒಗ್ಗಟ್ಟಿನಲ್ಲಿ ವೈವಿಧ್ಯತೆಯನ್ನು ಪ್ರದರ್ಶಿಸುವಂತೆಯೂ ಹಾಗೂ ಕೋಮುವಾದವನ್ನು ಉತ್ತೇಜಿಸುವ ಯಾವುದೇ ರೀತಿಯ ಬರವಣಿಗೆಗಳನ್ನು ಪ್ರಕಟಿಸದಂತೆಯೂ ಸೂಚಿಸಿದೆ.

ದ್ವೇಷದ ಮಾತುಗಳ ವಿರುದ್ಧದ ಜನಾಂದೋಲನವು ಪಿಸಿಐ ಆದೇಶವನ್ನು ಸ್ವಾಗತಿಸಿದ್ದು, ಇತರೆ ಮಾಧ್ಯಮಗಳಿಗೂ ಸಹ ಇದೊಂದು ಪಾಠವಾಗಬೇಕೆಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ: ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ: ಕೋಮು ಪ್ರಚೋದನಾ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...