Homeರಾಷ್ಟ್ರೀಯರೈಲಿನಲ್ಲಿ ದ್ವೇಷ ಹರಡುವ ಪತ್ರಿಕೆ ವಿತರಣೆ: ತನಿಖೆ ಪ್ರಾರಂಭಿಸಿದ ರೈಲ್ವೇ ಇಲಾಖೆ

ರೈಲಿನಲ್ಲಿ ದ್ವೇಷ ಹರಡುವ ಪತ್ರಿಕೆ ವಿತರಣೆ: ತನಿಖೆ ಪ್ರಾರಂಭಿಸಿದ ರೈಲ್ವೇ ಇಲಾಖೆ

- Advertisement -
- Advertisement -

ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ದ್ವೇಷ ಹರಡುವ “ಪ್ರೊಪಗಾಂಡ” ಪತ್ರಿಕೆಯನ್ನು ವಿತರಿಸಲಾಗಿರುವ ಘಟನೆ ವಿವಾದಕ್ಕೆ ಸಿಲುಕಿದ್ದು, ಭಾರಿ ಆಕ್ರೊಶ ವ್ಯಕ್ತವಾಗಿದೆ. ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದೇವೆ ಎಂದು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(IRCTC) ಹೇಳಿದೆ. ಪತ್ರಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ IRCTC, ರೈಲಿನಲ್ಲಿ ವಿತರಿಸಲಾಗಿರುವ “ದಿ ಆರ್ಯವರ್ತ್ ಎಕ್ಸ್‌ಪ್ರೆಸ್” ಪತ್ರಿಕೆಯು “ಅನಧಿಕೃತ” ಎಂದು ಒಪ್ಪಿಕೊಂಡಿದೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ಗೋಪಿಕಾ ಬಕ್ಷಿ ಅವರು ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಪ್ರೊಪಗಾಂಡ ಪತ್ರಿಕೆಯನ್ನು ಹಂಚುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ ನಂತರ ಘಟನೆಯು ಬೆಳಕಿಗೆ ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರು, “ಇಂದು ಬೆಳಿಗ್ಗೆ ನಾನು ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್ ಅನ್ನು ಹತ್ತಿದೆ. ಈ ಪ್ರೊಪಗಾಂಡ ಪತ್ರಿಕೆಯಾದ ಆರ್ಯವರ್ತ್ ಎಕ್ಸ್‌ಪ್ರೆಸ್‌ ಎಲ್ಲಾ ಸೀಟಿನ ಮೇಲೆ ಇದ್ದು ಸ್ವಾಗತಿಸುತ್ತಿತ್ತು. ಈ ಪತ್ರಿಕೆಯ ಬಗ್ಗೆ ಎಂದಿಗೂ ಕೇಳಿರಲಿಲ್ಲ. IRCTC ಇದಕ್ಕೆ ಹೇಗೆ ಅನುಮತಿ ನೀಡಿದೆ” ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದರು.

ಕಾಂಗ್ರೆಸ್ ಸಂಸದ ಬಿ. ಮಾಣಿಕಂ ಟ್ಯಾಗೋರ್ ಕೂಡ ಇಂತಹ ಪತ್ರಿಕೆ ರೈಲಿನಲ್ಲಿ ಹೇಗೆ ಬಂತು ಎಂದು ಪ್ರಶ್ನಿಸಿದ್ದಾರೆ.

“ಗೌರವಾನ್ವಿತ ರೈಲ್ವೆ ಸಚಿವರು ಇದರ ಬಗ್ಗೆ ತನಿಖೆಗೆ ಆದೇಶಿಸುತ್ತಾರೆಯೇ? ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಪ್ರೊಪಗಾಂಡ ಸಾಮಗ್ರಿಗಳನ್ನು ಅನುಮತಿಸುವುದು ರೈಲ್ವೇ ಇಲಾಖೆಯ ನೀತಿಯೇ? ಲೋಕಸಭೆಯಲ್ಲಿ ಈ ವಿಷಯವನ್ನು ಬರೆದು ಪ್ರಸ್ತಾಪಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದು, ‘ದ್ವೇಷದ ವಿರುದ್ದ ಭಾರತ’(IndiaAgainstHate)ಎಂಬ ಹ್ಯಾಶ್‌ ಟ್ಯಾಗ್‌ ಬಳಸಿದ್ದಾರೆ.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಮತ್ತೊಬ್ಬ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, IRCTC ಚಂದಾದಾರರಾಗಿರುವ ಪ್ರಕಾಶನಗಳ ಪಟ್ಟಿಗೆ ಇಂತಹ ಪತ್ರಿಕೆ ಹೇಗೆ ಸೇರಿತು ಎಂದು ಪ್ರಶ್ನಿಸಿದ್ದಾರೆ.

“ರೈಲ್ವೆಯ ಟಿಕೆಟಿಂಗ್ ಮತ್ತು ಕ್ಯಾಟರಿಂಗ್ ವಿಭಾಗವು ಡೆಕ್ಕನ್ ಹೆರಾಲ್ಡ್ ಮತ್ತು ಇನ್ನೊಂದು ಸ್ಥಳೀಯ ಪತ್ರಿಕೆಯನ್ನು ಈ ಪ್ರದೇಶದಲ್ಲಿ ರೈಲುಗಳಲ್ಲಿ ವಿತರಿಸಲು ಅನುಮೋದಿಸಿದೆ. ಈ ಪತ್ರಿಕೆಗಳನ್ನು IRCTC ಪರವಾನಗಿದಾರರು ವಿತರಿಸುತ್ತಾರೆ” IRCTC ಮೂಲಗಳನ್ನು ಉಲ್ಲೇಖಿಸಿ ಆನ್‌ ಮನೋರಮಾ ವರದಿ ಮಾಡಿದೆ.

“ಈ ಬಗ್ಗೆ ನಾವು ತನಿಖೆಗೆ ಆದೇಶಿಸಿದ್ದೇವೆ. ಇದಕ್ಕೆ ಹೊಣೆಗಾರರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಈ ಪತ್ರಿಕೆಯು IRCTC ಅನುಮೋದಿತ ಪ್ರಕಟಣೆಗಳಲ್ಲಿಲ್ಲ” ಎಂದು IRCTC ವಕ್ತಾರ ಆನಂದ್ ಝಾ ಹೇಳಿದ್ದಾರೆ.

ಈ ಕುರಿತು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಚೆನ್ನೈ  ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷ ತಡೆಗೆ ಆಗ್ರಹಿಸಿ 13 ವಿಪಕ್ಷಗಳ ನಾಯಕರಿಂದ ಜಂಟಿ ಪತ್ರಿಕಾ ಹೇಳಿಕೆ

“ಇತ್ತೀಚಿನ ಅಪ್‌ಡೇಟ್ ಏನೆಂದರೆ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಅನಧಿಕೃತ ಪತ್ರಿಕೆಯು ರೈಲಿನೊಳಗೆ ಹೇಗೆ ಬಂತು ಎಂಬುದರ ಕುರಿತು ತನಿಖೆ ನಡೆಸುತ್ತಿದೆ. ರೈಲು ಬೆಂಗಳೂರು ವಿಭಾಗಕ್ಕೆ ಸೇರಿದ್ದಾಗಿದ್ದು, ಘಟನೆ ಅಲ್ಲಿ ನಡೆದಿದೆ. ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಮಗೆ ಖಾತ್ರಿಯಿದೆ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...