Homeರಾಷ್ಟ್ರೀಯರೈಲಿನಲ್ಲಿ ದ್ವೇಷ ಹರಡುವ ಪತ್ರಿಕೆ ವಿತರಣೆ: ತನಿಖೆ ಪ್ರಾರಂಭಿಸಿದ ರೈಲ್ವೇ ಇಲಾಖೆ

ರೈಲಿನಲ್ಲಿ ದ್ವೇಷ ಹರಡುವ ಪತ್ರಿಕೆ ವಿತರಣೆ: ತನಿಖೆ ಪ್ರಾರಂಭಿಸಿದ ರೈಲ್ವೇ ಇಲಾಖೆ

- Advertisement -
- Advertisement -

ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ದ್ವೇಷ ಹರಡುವ “ಪ್ರೊಪಗಾಂಡ” ಪತ್ರಿಕೆಯನ್ನು ವಿತರಿಸಲಾಗಿರುವ ಘಟನೆ ವಿವಾದಕ್ಕೆ ಸಿಲುಕಿದ್ದು, ಭಾರಿ ಆಕ್ರೊಶ ವ್ಯಕ್ತವಾಗಿದೆ. ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದೇವೆ ಎಂದು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ(IRCTC) ಹೇಳಿದೆ. ಪತ್ರಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ IRCTC, ರೈಲಿನಲ್ಲಿ ವಿತರಿಸಲಾಗಿರುವ “ದಿ ಆರ್ಯವರ್ತ್ ಎಕ್ಸ್‌ಪ್ರೆಸ್” ಪತ್ರಿಕೆಯು “ಅನಧಿಕೃತ” ಎಂದು ಒಪ್ಪಿಕೊಂಡಿದೆ.

ಮಾನವ ಹಕ್ಕುಗಳ ಹೋರಾಟಗಾರ್ತಿ ಗೋಪಿಕಾ ಬಕ್ಷಿ ಅವರು ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಪ್ರೊಪಗಾಂಡ ಪತ್ರಿಕೆಯನ್ನು ಹಂಚುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ ನಂತರ ಘಟನೆಯು ಬೆಳಕಿಗೆ ಬಂದಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರು, “ಇಂದು ಬೆಳಿಗ್ಗೆ ನಾನು ಬೆಂಗಳೂರು-ಚೆನ್ನೈ ಶತಾಬ್ದಿ ಎಕ್ಸ್‌ಪ್ರೆಸ್ ಅನ್ನು ಹತ್ತಿದೆ. ಈ ಪ್ರೊಪಗಾಂಡ ಪತ್ರಿಕೆಯಾದ ಆರ್ಯವರ್ತ್ ಎಕ್ಸ್‌ಪ್ರೆಸ್‌ ಎಲ್ಲಾ ಸೀಟಿನ ಮೇಲೆ ಇದ್ದು ಸ್ವಾಗತಿಸುತ್ತಿತ್ತು. ಈ ಪತ್ರಿಕೆಯ ಬಗ್ಗೆ ಎಂದಿಗೂ ಕೇಳಿರಲಿಲ್ಲ. IRCTC ಇದಕ್ಕೆ ಹೇಗೆ ಅನುಮತಿ ನೀಡಿದೆ” ಎಂದು ಟ್ವೀಟ್ ಮಾಡಿ ಪ್ರಶ್ನಿಸಿದ್ದರು.

ಕಾಂಗ್ರೆಸ್ ಸಂಸದ ಬಿ. ಮಾಣಿಕಂ ಟ್ಯಾಗೋರ್ ಕೂಡ ಇಂತಹ ಪತ್ರಿಕೆ ರೈಲಿನಲ್ಲಿ ಹೇಗೆ ಬಂತು ಎಂದು ಪ್ರಶ್ನಿಸಿದ್ದಾರೆ.

“ಗೌರವಾನ್ವಿತ ರೈಲ್ವೆ ಸಚಿವರು ಇದರ ಬಗ್ಗೆ ತನಿಖೆಗೆ ಆದೇಶಿಸುತ್ತಾರೆಯೇ? ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಪ್ರೊಪಗಾಂಡ ಸಾಮಗ್ರಿಗಳನ್ನು ಅನುಮತಿಸುವುದು ರೈಲ್ವೇ ಇಲಾಖೆಯ ನೀತಿಯೇ? ಲೋಕಸಭೆಯಲ್ಲಿ ಈ ವಿಷಯವನ್ನು ಬರೆದು ಪ್ರಸ್ತಾಪಿಸುತ್ತೇನೆ” ಎಂದು ಅವರು ಟ್ವೀಟ್ ಮಾಡಿದ್ದು, ‘ದ್ವೇಷದ ವಿರುದ್ದ ಭಾರತ’(IndiaAgainstHate)ಎಂಬ ಹ್ಯಾಶ್‌ ಟ್ಯಾಗ್‌ ಬಳಸಿದ್ದಾರೆ.

ಇದನ್ನೂ ಓದಿ: ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಮತ್ತೊಬ್ಬ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, IRCTC ಚಂದಾದಾರರಾಗಿರುವ ಪ್ರಕಾಶನಗಳ ಪಟ್ಟಿಗೆ ಇಂತಹ ಪತ್ರಿಕೆ ಹೇಗೆ ಸೇರಿತು ಎಂದು ಪ್ರಶ್ನಿಸಿದ್ದಾರೆ.

“ರೈಲ್ವೆಯ ಟಿಕೆಟಿಂಗ್ ಮತ್ತು ಕ್ಯಾಟರಿಂಗ್ ವಿಭಾಗವು ಡೆಕ್ಕನ್ ಹೆರಾಲ್ಡ್ ಮತ್ತು ಇನ್ನೊಂದು ಸ್ಥಳೀಯ ಪತ್ರಿಕೆಯನ್ನು ಈ ಪ್ರದೇಶದಲ್ಲಿ ರೈಲುಗಳಲ್ಲಿ ವಿತರಿಸಲು ಅನುಮೋದಿಸಿದೆ. ಈ ಪತ್ರಿಕೆಗಳನ್ನು IRCTC ಪರವಾನಗಿದಾರರು ವಿತರಿಸುತ್ತಾರೆ” IRCTC ಮೂಲಗಳನ್ನು ಉಲ್ಲೇಖಿಸಿ ಆನ್‌ ಮನೋರಮಾ ವರದಿ ಮಾಡಿದೆ.

“ಈ ಬಗ್ಗೆ ನಾವು ತನಿಖೆಗೆ ಆದೇಶಿಸಿದ್ದೇವೆ. ಇದಕ್ಕೆ ಹೊಣೆಗಾರರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಈ ಪತ್ರಿಕೆಯು IRCTC ಅನುಮೋದಿತ ಪ್ರಕಟಣೆಗಳಲ್ಲಿಲ್ಲ” ಎಂದು IRCTC ವಕ್ತಾರ ಆನಂದ್ ಝಾ ಹೇಳಿದ್ದಾರೆ.

ಈ ಕುರಿತು ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಚೆನ್ನೈ  ವಿಭಾಗೀಯ ರೈಲ್ವೆ ವ್ಯವಸ್ಥಾಪಕ ತಿಳಿಸಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷ ತಡೆಗೆ ಆಗ್ರಹಿಸಿ 13 ವಿಪಕ್ಷಗಳ ನಾಯಕರಿಂದ ಜಂಟಿ ಪತ್ರಿಕಾ ಹೇಳಿಕೆ

“ಇತ್ತೀಚಿನ ಅಪ್‌ಡೇಟ್ ಏನೆಂದರೆ, ಬೆಂಗಳೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಅನಧಿಕೃತ ಪತ್ರಿಕೆಯು ರೈಲಿನೊಳಗೆ ಹೇಗೆ ಬಂತು ಎಂಬುದರ ಕುರಿತು ತನಿಖೆ ನಡೆಸುತ್ತಿದೆ. ರೈಲು ಬೆಂಗಳೂರು ವಿಭಾಗಕ್ಕೆ ಸೇರಿದ್ದಾಗಿದ್ದು, ಘಟನೆ ಅಲ್ಲಿ ನಡೆದಿದೆ. ಅವರು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಮಗೆ ಖಾತ್ರಿಯಿದೆ” ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...