Homeಮುಖಪುಟಜನಪ್ರಿಯ ಚಾನೆಲ್‌ ಪ್ಯಾಕ್‌ನಿಂದ NDTV ಹೊರಗಿಟ್ಟು ವಿವಾದ ಸೃಷ್ಟಿಸಿದ ಹಾತ್‌ವೇ ಕೇಬಲ್‌

ಜನಪ್ರಿಯ ಚಾನೆಲ್‌ ಪ್ಯಾಕ್‌ನಿಂದ NDTV ಹೊರಗಿಟ್ಟು ವಿವಾದ ಸೃಷ್ಟಿಸಿದ ಹಾತ್‌ವೇ ಕೇಬಲ್‌

ಗೋದಿ ಮಿಡೀಯಾ ಪ್ರತಿದಿನ ಲಕ್ಷಾಂತರ ಪ್ರಜಾತಂತ್ರವಾದಿಗಳ ಕನಸನ್ನು ಹತ್ಯೆ ಮಾಡುತ್ತಿದೆ. ಅದನ್ನು ನಾವು ದಾಖಲೆಗಳ ಸಮೇತ ನಿಮ್ಮ ಮುಂದಿಡುತ್ತಿದ್ದೇವೆ. ಹಾಗಾಗಿ ಪ್ರೈಮ್‌ ಟೈಮ್ ಕಾರ್ಯಕ್ರಮ ಬೇಕೆಂದು ನೀವು ದನಿಯೆತ್ತಿ..

- Advertisement -
- Advertisement -

ಜನಪರ ಪತ್ರಿಕೋದ್ಯಮದ ಮೂಲಕ ದೇಶಾದ್ಯಂತ ಪ್ರಖ್ಯಾತಿ ಗಳಿಸಿರುವ NDTV ಹಿಂದಿ ಸುದ್ದಿವಾಹಿನಿಯನ್ನು ಭಾರತದ ಜನಪ್ರಿಯ ಚಾನೆಲ್‌ ಪ್ಯಾಕ್‌ನಿಂದ ಹೊರಗಿಟ್ಟು ಹಾತ್‌ವೇ ಕೇಬಲ್‌‌ ವಿವಾದ ಸೃಷ್ಟಿಸಿದೆ.

ಈ ಕುರಿತು ಟ್ವಿಟ್‌ ಮಾಡಿರುವ ಎನ್‌ಡಿಟಿವಿ ಕನ್ವರ್‍ಜೆನ್ಸ್‌ ಮುಖ್ಯಸ್ಥರಾದ ಸುಪರ್ಣಾ ಸಿಂಗ್‌ ಹಾಗೂ ಹಿರಿಯ ಕಾರ್ಯನಿರ್ವಾಹಕ ಸಂಪಾದಕ ರವೀಶ್‌ ಕುಮಾರ್‌, ಟಿವಿ ಕೇಬಲ್‌ ನಿರ್ವಹಣೆ ಮಾಡುವ ಹಾತ್‌ ವೇ ಕೇಬಲ್‌ ಹಾಗೂ ಡೇಟಾಕಾಮ್‌ ಯಾಕೆ ಈ ಕ್ರಮ ಕೈಗೊಂಡಿದೆ ಎಂದು ಗ್ರಾಹಕರ ಸೇವೆಗೆ ಕರೆ ಮಾಡಿ ವೀಕ್ಷಕರು ಪ್ರಶ್ನಿಸಬೇಕೆಂದು ಕೋರಿದ್ದಾರೆ.

ಪ್ರೈಮ್‌ಟೈಮ್ ಕಾರ್ಯಕ್ರಮಗಳಿಗಾಗಿ NDTV ತಂಡವು ಸಾಕಷ್ಟು ಶ್ರಮಪಡುತ್ತಿದೆ. ಈ ರೀತಿಯ ಹೇರಿಕೆಯಿಂದಾಗಿ ಕಾರ್ಯಕ್ರಮಗಳು ಜನರಿಗೆ ತಲುಪದಿದ್ದರೆ ಕಷ್ಟವಾಗುತ್ತದೆ. ಇಂದಿನ ಕಾರ್ಯಕ್ರಮ ವೀಕ್ಷಕರನ್ನು ತಲುಪುವುದಿಲ್ಲ. ಆದರೂ ನಮ್ಮ ಕೆಲಸವನ್ನು ನಾವು ಮಾಡುತ್ತೇವೆ. ನೋಡಲು ಯೋಗ್ಯವಾದ ಕಾರ್ಯಕ್ರಮ ಇದೆಂದು ಇತಿಹಾಸ ನೆನಪಿಡುತ್ತದೆ ಎಂದು ರವೀಶ್‌ ಕುಮಾರ್ ವಿಡಿಯೋದಲ್ಲಿ ತಿಳಿಸಿದ್ದಾರೆ.

ಬೇರೆ ಚಾನೆಲ್‌ಗಳ ರೀತಿ ಇಬ್ಬರು ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಎದುರು ಬದುರು ಕೂರಿಸಿ ಅರಚಾಡುವುದಿಲ್ಲ. ನಾನು ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೂತು ಕಾರ್ಯಕ್ರಮ ಸಿದ್ದಪಡಿಸುತ್ತೇವೆ. ಮಾತನಾಡಬೇಕಾದ ಸಾವಿರಾರು ಪದಗಳನ್ನು ಖುದ್ದು ಬರೆಯುತ್ತೇನೆ. ಇಷ್ಟು ಕಷ್ಟಪಟ್ಟು ತಯಾರಿಸಿದ ಕೆಲಸ ನಿಮಗೆ ತಲುಪಿದ್ದರೆ ಅದು ಸರಿಯಲ್ಲ. ಇದು ಕೇವಲ ಒಂದು ಕಾರ್ಯಕ್ರವಲ್ಲ. ಗೋದಿ ಮಿಡೀಯಾ ಪ್ರತಿದಿನ ಲಕ್ಷಾಂತರ ಪ್ರಜಾತಂತ್ರವಾದಿಗಳ ಕನಸನ್ನು ಹತ್ಯೆ ಮಾಡುತ್ತಿದೆ. ಅದನ್ನು ನಾವು ದಾಖಲೆಗಳ ಸಮೇತ ನಿಮ್ಮ ಮುಂದಿಡುತ್ತಿದ್ದೇವೆ. ಹಾಗಾಗಿ ಪ್ರೈಮ್‌ ಟೈಮ್ ಕಾರ್ಯಕ್ರಮ ಬೇಕೆಂದು ನೀವು ದನಿಯೆತ್ತಿ ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಭಾರತದ ಮಾನವ ಹಕ್ಕುಗಳು ಬಗ್ಗೆ ಯುಎಸ್ ರಕ್ಷಣಾ ಕಾರ್ಯದರ್ಶಿ ಹೇಳಿಕೆ: ಸತ್ಯ ಹೇಳಿದ ಎನ್‌ಡಿಟಿವಿ ಟಾರ್ಗೆಟ್ ಮಾಡಿದ ಬಿಜೆಪಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...