Homeಮುಖಪುಟಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

"19 ವರ್ಷದ  ದಲಿತ ಯುವತಿ ಅತ್ಯಾಚಾರಕ್ಕೊಳಗಾದ 11 ದಿನಗಳ ನಂತರ ಎಫ್‌ಎಸ್‌ಎಲ್‌ಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಹೀಗಿದ್ದಾಗ ಅತ್ಯಾಚಾರವನ್ನು ಈ ವರದಿಯಿಂದ ಖಚಿತಪಡಿಸಲು ಸಾಧ್ಯವಿಲ್ಲ” ಎಂದು ಡಾ.ಮಲಿಕ್ ಹೇಳಿದ್ದರು

- Advertisement -
- Advertisement -

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನ ಇಬ್ಬರು ವೈದ್ಯರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇದರಲ್ಲಿ ಒಬ್ಬರು ಪ್ರಕರಣ ಸಂಬಂಧಿಸಿದಂತೆ ವಿಧಿವಿಜ್ಞಾನ (FSL) ವರದಿಯನ್ನು ಪ್ರಶ್ನಿಸಿದ್ದರು.

ಸಿಬಿಐ ತಂಡವು ಆಸ್ಪತ್ರೆಗೆ ಭೇಟಿ ನೀಡಿ, ಡಾ. ಮೊಹಮ್ಮದ್ ಅಜೀಮುದ್ದೀನ್ ಮಲಿಕ್ ಮತ್ತು ಡಾ. ಓಬೈದ್ ಇಮ್ತಿಯಾಜುಲ್ ಹಕ್ ಎಂಬ ಇಬ್ಬರು ವೈದ್ಯರನ್ನು ವಿಚಾರಣೆ ನಡೆಸಿದ ನಂತರ ಅವರನ್ನು ವಜಾಗೊಳಿಸಲಾಗಿದೆ.

“19 ವರ್ಷದ ದಲಿತ ಯುವತಿ ಅತ್ಯಾಚಾರಕ್ಕೊಳಗಾದ 11 ದಿನಗಳ ನಂತರ FSL‌ಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ, ಆದರೆ ಸರ್ಕಾರದ ಮಾರ್ಗಸೂಚಿಗಳು ಘಟನೆಯ 96 ಗಂಟೆಗಳ ಒಳಗೆ ಮಾತ್ರ ವಿಧಿವಿಜ್ಞಾನದ ಪುರಾವೆಗಳನ್ನು ಕಂಡುಹಿಡಿಯಬಹುದು ಎಂದು ಹೇಳುತ್ತದೆ. ಈ ಘಟನೆಯಲ್ಲಿ ಅತ್ಯಾಚಾರವನ್ನು ಈ ವರದಿಯಿಂದ ಖಚಿತಪಡಿಸಲು ಸಾಧ್ಯವಿಲ್ಲ” ಎಂದು ಡಾ.ಮಲಿಕ್ ಹೇಳಿದ್ದರು.

FSL ವರದಿಯನ್ನು ಉಲ್ಲೇಖಿಸಿ ಉತ್ತರ ಪ್ರದೇಶದ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಹತ್ರಾಸ್ ತನಿಖೆಯ ಮೇಲ್ವಿಚಾರಣೆ ಅಲಹಾಬಾದ್ ಹೈಕೋರ್ಟ್ ನಡೆಸಲಿದೆ: ಸುಪ್ರೀಂ

ಅಮಾನತಾಗಿರುವ ಮತ್ತೊಬ್ಬ ವೈದ್ಯ ಡಾ. ಹಕ್, ಎಎಮ್‌ಯು ಆಸ್ಪತ್ರೆಯು ನೀಡಿದ ತಾತ್ಕಾಲಿಕ ಅಭಿಪ್ರಾಯದ ಅಡಿಯಲ್ಲಿ ಎಂಎಲ್‌ಸಿಯನ್ನು ದೃಢಿಕರಿಸಿ, ಸಂತ್ರಸ್ತೆ ಮೇಲೆ ಬಲ ಪ್ರಯೋಗದ ಗುರುತುಗಳಿವೆ ಎಂದಿದ್ದರು.

ಮಂಗಳವಾರ ಬೆಳಿಗ್ಗೆ ಡಾ. ಮಲಿಕ್ ಮತ್ತು ಡಾ. ಹಕ್ ಇಬ್ಬರಿಗೂ ಆಡಳಿತ ಮಂಡಳಿ ಪತ್ರಗಳನ್ನು ಬರೆದು ಹೆಚ್ಚಿನ ಕರ್ತವ್ಯಗಳನ್ನು ನಿರ್ವಹಿಸದಂತೆ ಅವರಿಗೆ ಸೂಚನೆ ನೀಡಿತ್ತು.

ಅಮಾನತಿನ ಕುರಿತು ಎಎಂಯು ಆಡಳಿತವು “ಹತ್ರಾಸ್ ಘಟನೆಗೆ ಸಂಬಂಧಿಸಿದ ಯಾವುದೇ ವೈದ್ಯರನ್ನು ಆಡಳಿತ ಅಮಾನತುಗೊಳಿಸಿಲ್ಲ. ಎರಡು ತಿಂಗಳ ಹಿಂದೆ, ಕೆಲವು ವೈದ್ಯರು ಕೊರೊನಾ ಸೋಂಕಿಗೆ ಒಳಗಾಗಿದ್ದರಿಂದ ಈ ಹುದ್ದೆಗಳು ಖಾಲಿ ಇದ್ದವು.  ತುರ್ತು ಪರಿಸ್ಥಿತಿ ಇದ್ದ ಕಾರಣ ಮತ್ತು ಡಾ. ಮಲಿಕ್ ಮತ್ತು ಡಾ.ಹಕ್ ಎಂಬ ಇಬ್ಬರು ವೈದ್ಯರನ್ನು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮಾತ್ರ ನೇಮಿಸಲಾಯಿತು. ಈಗ ಸಿಎಮ್‌ಒಗಳು ಹಿಂತಿರುಗಿದ್ದಾರೆ, ಆದ್ದರಿಂದ ಅವರ ಸೇವೆಗಳು ಅಗತ್ಯವಿಲ್ಲ” ಎಂದಿದೆ.

ನಂತರ “ಈ ನಿರ್ಧಾರಕ್ಕೆ ವೈದ್ಯರು ಅಸಮಾಧಾನ ಹೊಂದಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ನಾವು ಅವರ ಕುಂದುಕೊರತೆಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಆಸ್ಪತ್ರೆಯಲ್ಲಿ ಬೇರೆಲ್ಲಿಯಾದರೂ ಅವರಿಗೆ ಕೆಲಸ ನೀಡಬಹುದು” ಎಂದಿದ್ದಾರೆ.

ಇದನ್ನೂ ಓದಿ: ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

ಇಬ್ಬರು ವೈದ್ಯರಿಗೂ ಆಗಸ್ಟ್ ತಿಂಗಳಿನಿಂದ ಸಂಬಳ ನೀಡಿಲ್ಲ. ಸಂಬಳ ಮಾಧ್ಯಮಗಳಿಗೆ ತಮ್ಮ ವೈಯಕ್ತಿಕ ಅಭಿಪ್ರಾಯ ನೀಡಿದ ಕಾರಣ ಮುಂದಿಟ್ಟು ಹಿರಿಯ ಅಧಿಕಾರಿಗಳಿಂದ ಗದರಿಸಲ್ಪಡುತ್ತಿದ್ದರು ಎಂದು ವರದಿಯಾಗಿದೆ. ಹಿರಿಯ ವೈದ್ಯರ ಹೇಳಿಕೆಯಂತೆ ಎಲ್ಲಾ ಪ್ರಕ್ರಿಯೆಗಳು ಮುಗಿದ ನಂತರ ಅವರಿಗೆ ಸಂಬಳ ನೀಡಬಹುದು ಎಂದಿದ್ದಾರೆ.

ಇಬ್ಬರು ವೈದ್ಯರು ಹತ್ರಾಸ್‌ನ 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯಲ್ಲಿ ಭಾಗವಹಿಸಿದ್ದರು. ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಪೊಲೀಸರು ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ. ಕುಟುಂಬದ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ.


ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...