Homeಮುಖಪುಟಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

"19 ವರ್ಷದ  ದಲಿತ ಯುವತಿ ಅತ್ಯಾಚಾರಕ್ಕೊಳಗಾದ 11 ದಿನಗಳ ನಂತರ ಎಫ್‌ಎಸ್‌ಎಲ್‌ಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಹೀಗಿದ್ದಾಗ ಅತ್ಯಾಚಾರವನ್ನು ಈ ವರದಿಯಿಂದ ಖಚಿತಪಡಿಸಲು ಸಾಧ್ಯವಿಲ್ಲ” ಎಂದು ಡಾ.ಮಲಿಕ್ ಹೇಳಿದ್ದರು

- Advertisement -
- Advertisement -

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನ ಇಬ್ಬರು ವೈದ್ಯರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇದರಲ್ಲಿ ಒಬ್ಬರು ಪ್ರಕರಣ ಸಂಬಂಧಿಸಿದಂತೆ ವಿಧಿವಿಜ್ಞಾನ (FSL) ವರದಿಯನ್ನು ಪ್ರಶ್ನಿಸಿದ್ದರು.

ಸಿಬಿಐ ತಂಡವು ಆಸ್ಪತ್ರೆಗೆ ಭೇಟಿ ನೀಡಿ, ಡಾ. ಮೊಹಮ್ಮದ್ ಅಜೀಮುದ್ದೀನ್ ಮಲಿಕ್ ಮತ್ತು ಡಾ. ಓಬೈದ್ ಇಮ್ತಿಯಾಜುಲ್ ಹಕ್ ಎಂಬ ಇಬ್ಬರು ವೈದ್ಯರನ್ನು ವಿಚಾರಣೆ ನಡೆಸಿದ ನಂತರ ಅವರನ್ನು ವಜಾಗೊಳಿಸಲಾಗಿದೆ.

“19 ವರ್ಷದ ದಲಿತ ಯುವತಿ ಅತ್ಯಾಚಾರಕ್ಕೊಳಗಾದ 11 ದಿನಗಳ ನಂತರ FSL‌ಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ, ಆದರೆ ಸರ್ಕಾರದ ಮಾರ್ಗಸೂಚಿಗಳು ಘಟನೆಯ 96 ಗಂಟೆಗಳ ಒಳಗೆ ಮಾತ್ರ ವಿಧಿವಿಜ್ಞಾನದ ಪುರಾವೆಗಳನ್ನು ಕಂಡುಹಿಡಿಯಬಹುದು ಎಂದು ಹೇಳುತ್ತದೆ. ಈ ಘಟನೆಯಲ್ಲಿ ಅತ್ಯಾಚಾರವನ್ನು ಈ ವರದಿಯಿಂದ ಖಚಿತಪಡಿಸಲು ಸಾಧ್ಯವಿಲ್ಲ” ಎಂದು ಡಾ.ಮಲಿಕ್ ಹೇಳಿದ್ದರು.

FSL ವರದಿಯನ್ನು ಉಲ್ಲೇಖಿಸಿ ಉತ್ತರ ಪ್ರದೇಶದ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಹತ್ರಾಸ್ ತನಿಖೆಯ ಮೇಲ್ವಿಚಾರಣೆ ಅಲಹಾಬಾದ್ ಹೈಕೋರ್ಟ್ ನಡೆಸಲಿದೆ: ಸುಪ್ರೀಂ

ಅಮಾನತಾಗಿರುವ ಮತ್ತೊಬ್ಬ ವೈದ್ಯ ಡಾ. ಹಕ್, ಎಎಮ್‌ಯು ಆಸ್ಪತ್ರೆಯು ನೀಡಿದ ತಾತ್ಕಾಲಿಕ ಅಭಿಪ್ರಾಯದ ಅಡಿಯಲ್ಲಿ ಎಂಎಲ್‌ಸಿಯನ್ನು ದೃಢಿಕರಿಸಿ, ಸಂತ್ರಸ್ತೆ ಮೇಲೆ ಬಲ ಪ್ರಯೋಗದ ಗುರುತುಗಳಿವೆ ಎಂದಿದ್ದರು.

ಮಂಗಳವಾರ ಬೆಳಿಗ್ಗೆ ಡಾ. ಮಲಿಕ್ ಮತ್ತು ಡಾ. ಹಕ್ ಇಬ್ಬರಿಗೂ ಆಡಳಿತ ಮಂಡಳಿ ಪತ್ರಗಳನ್ನು ಬರೆದು ಹೆಚ್ಚಿನ ಕರ್ತವ್ಯಗಳನ್ನು ನಿರ್ವಹಿಸದಂತೆ ಅವರಿಗೆ ಸೂಚನೆ ನೀಡಿತ್ತು.

ಅಮಾನತಿನ ಕುರಿತು ಎಎಂಯು ಆಡಳಿತವು “ಹತ್ರಾಸ್ ಘಟನೆಗೆ ಸಂಬಂಧಿಸಿದ ಯಾವುದೇ ವೈದ್ಯರನ್ನು ಆಡಳಿತ ಅಮಾನತುಗೊಳಿಸಿಲ್ಲ. ಎರಡು ತಿಂಗಳ ಹಿಂದೆ, ಕೆಲವು ವೈದ್ಯರು ಕೊರೊನಾ ಸೋಂಕಿಗೆ ಒಳಗಾಗಿದ್ದರಿಂದ ಈ ಹುದ್ದೆಗಳು ಖಾಲಿ ಇದ್ದವು.  ತುರ್ತು ಪರಿಸ್ಥಿತಿ ಇದ್ದ ಕಾರಣ ಮತ್ತು ಡಾ. ಮಲಿಕ್ ಮತ್ತು ಡಾ.ಹಕ್ ಎಂಬ ಇಬ್ಬರು ವೈದ್ಯರನ್ನು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮಾತ್ರ ನೇಮಿಸಲಾಯಿತು. ಈಗ ಸಿಎಮ್‌ಒಗಳು ಹಿಂತಿರುಗಿದ್ದಾರೆ, ಆದ್ದರಿಂದ ಅವರ ಸೇವೆಗಳು ಅಗತ್ಯವಿಲ್ಲ” ಎಂದಿದೆ.

ನಂತರ “ಈ ನಿರ್ಧಾರಕ್ಕೆ ವೈದ್ಯರು ಅಸಮಾಧಾನ ಹೊಂದಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ನಾವು ಅವರ ಕುಂದುಕೊರತೆಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಆಸ್ಪತ್ರೆಯಲ್ಲಿ ಬೇರೆಲ್ಲಿಯಾದರೂ ಅವರಿಗೆ ಕೆಲಸ ನೀಡಬಹುದು” ಎಂದಿದ್ದಾರೆ.

ಇದನ್ನೂ ಓದಿ: ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

ಇಬ್ಬರು ವೈದ್ಯರಿಗೂ ಆಗಸ್ಟ್ ತಿಂಗಳಿನಿಂದ ಸಂಬಳ ನೀಡಿಲ್ಲ. ಸಂಬಳ ಮಾಧ್ಯಮಗಳಿಗೆ ತಮ್ಮ ವೈಯಕ್ತಿಕ ಅಭಿಪ್ರಾಯ ನೀಡಿದ ಕಾರಣ ಮುಂದಿಟ್ಟು ಹಿರಿಯ ಅಧಿಕಾರಿಗಳಿಂದ ಗದರಿಸಲ್ಪಡುತ್ತಿದ್ದರು ಎಂದು ವರದಿಯಾಗಿದೆ. ಹಿರಿಯ ವೈದ್ಯರ ಹೇಳಿಕೆಯಂತೆ ಎಲ್ಲಾ ಪ್ರಕ್ರಿಯೆಗಳು ಮುಗಿದ ನಂತರ ಅವರಿಗೆ ಸಂಬಳ ನೀಡಬಹುದು ಎಂದಿದ್ದಾರೆ.

ಇಬ್ಬರು ವೈದ್ಯರು ಹತ್ರಾಸ್‌ನ 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯಲ್ಲಿ ಭಾಗವಹಿಸಿದ್ದರು. ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಪೊಲೀಸರು ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ. ಕುಟುಂಬದ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ.


ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...