Homeಮುಖಪುಟಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

"19 ವರ್ಷದ  ದಲಿತ ಯುವತಿ ಅತ್ಯಾಚಾರಕ್ಕೊಳಗಾದ 11 ದಿನಗಳ ನಂತರ ಎಫ್‌ಎಸ್‌ಎಲ್‌ಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಹೀಗಿದ್ದಾಗ ಅತ್ಯಾಚಾರವನ್ನು ಈ ವರದಿಯಿಂದ ಖಚಿತಪಡಿಸಲು ಸಾಧ್ಯವಿಲ್ಲ” ಎಂದು ಡಾ.ಮಲಿಕ್ ಹೇಳಿದ್ದರು

- Advertisement -
- Advertisement -

ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜಿನ ಇಬ್ಬರು ವೈದ್ಯರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಇದರಲ್ಲಿ ಒಬ್ಬರು ಪ್ರಕರಣ ಸಂಬಂಧಿಸಿದಂತೆ ವಿಧಿವಿಜ್ಞಾನ (FSL) ವರದಿಯನ್ನು ಪ್ರಶ್ನಿಸಿದ್ದರು.

ಸಿಬಿಐ ತಂಡವು ಆಸ್ಪತ್ರೆಗೆ ಭೇಟಿ ನೀಡಿ, ಡಾ. ಮೊಹಮ್ಮದ್ ಅಜೀಮುದ್ದೀನ್ ಮಲಿಕ್ ಮತ್ತು ಡಾ. ಓಬೈದ್ ಇಮ್ತಿಯಾಜುಲ್ ಹಕ್ ಎಂಬ ಇಬ್ಬರು ವೈದ್ಯರನ್ನು ವಿಚಾರಣೆ ನಡೆಸಿದ ನಂತರ ಅವರನ್ನು ವಜಾಗೊಳಿಸಲಾಗಿದೆ.

“19 ವರ್ಷದ ದಲಿತ ಯುವತಿ ಅತ್ಯಾಚಾರಕ್ಕೊಳಗಾದ 11 ದಿನಗಳ ನಂತರ FSL‌ಗಾಗಿ ಮಾದರಿಗಳನ್ನು ಸಂಗ್ರಹಿಸಲಾಗಿದೆ, ಆದರೆ ಸರ್ಕಾರದ ಮಾರ್ಗಸೂಚಿಗಳು ಘಟನೆಯ 96 ಗಂಟೆಗಳ ಒಳಗೆ ಮಾತ್ರ ವಿಧಿವಿಜ್ಞಾನದ ಪುರಾವೆಗಳನ್ನು ಕಂಡುಹಿಡಿಯಬಹುದು ಎಂದು ಹೇಳುತ್ತದೆ. ಈ ಘಟನೆಯಲ್ಲಿ ಅತ್ಯಾಚಾರವನ್ನು ಈ ವರದಿಯಿಂದ ಖಚಿತಪಡಿಸಲು ಸಾಧ್ಯವಿಲ್ಲ” ಎಂದು ಡಾ.ಮಲಿಕ್ ಹೇಳಿದ್ದರು.

FSL ವರದಿಯನ್ನು ಉಲ್ಲೇಖಿಸಿ ಉತ್ತರ ಪ್ರದೇಶದ ಎಡಿಜಿ (ಕಾನೂನು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಈ ಹಿಂದೆ ಪತ್ರಿಕಾಗೋಷ್ಠಿಯಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಹೇಳಿದ್ದರು.

ಇದನ್ನೂ ಓದಿ: ಹತ್ರಾಸ್ ತನಿಖೆಯ ಮೇಲ್ವಿಚಾರಣೆ ಅಲಹಾಬಾದ್ ಹೈಕೋರ್ಟ್ ನಡೆಸಲಿದೆ: ಸುಪ್ರೀಂ

ಅಮಾನತಾಗಿರುವ ಮತ್ತೊಬ್ಬ ವೈದ್ಯ ಡಾ. ಹಕ್, ಎಎಮ್‌ಯು ಆಸ್ಪತ್ರೆಯು ನೀಡಿದ ತಾತ್ಕಾಲಿಕ ಅಭಿಪ್ರಾಯದ ಅಡಿಯಲ್ಲಿ ಎಂಎಲ್‌ಸಿಯನ್ನು ದೃಢಿಕರಿಸಿ, ಸಂತ್ರಸ್ತೆ ಮೇಲೆ ಬಲ ಪ್ರಯೋಗದ ಗುರುತುಗಳಿವೆ ಎಂದಿದ್ದರು.

ಮಂಗಳವಾರ ಬೆಳಿಗ್ಗೆ ಡಾ. ಮಲಿಕ್ ಮತ್ತು ಡಾ. ಹಕ್ ಇಬ್ಬರಿಗೂ ಆಡಳಿತ ಮಂಡಳಿ ಪತ್ರಗಳನ್ನು ಬರೆದು ಹೆಚ್ಚಿನ ಕರ್ತವ್ಯಗಳನ್ನು ನಿರ್ವಹಿಸದಂತೆ ಅವರಿಗೆ ಸೂಚನೆ ನೀಡಿತ್ತು.

ಅಮಾನತಿನ ಕುರಿತು ಎಎಂಯು ಆಡಳಿತವು “ಹತ್ರಾಸ್ ಘಟನೆಗೆ ಸಂಬಂಧಿಸಿದ ಯಾವುದೇ ವೈದ್ಯರನ್ನು ಆಡಳಿತ ಅಮಾನತುಗೊಳಿಸಿಲ್ಲ. ಎರಡು ತಿಂಗಳ ಹಿಂದೆ, ಕೆಲವು ವೈದ್ಯರು ಕೊರೊನಾ ಸೋಂಕಿಗೆ ಒಳಗಾಗಿದ್ದರಿಂದ ಈ ಹುದ್ದೆಗಳು ಖಾಲಿ ಇದ್ದವು.  ತುರ್ತು ಪರಿಸ್ಥಿತಿ ಇದ್ದ ಕಾರಣ ಮತ್ತು ಡಾ. ಮಲಿಕ್ ಮತ್ತು ಡಾ.ಹಕ್ ಎಂಬ ಇಬ್ಬರು ವೈದ್ಯರನ್ನು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮಾತ್ರ ನೇಮಿಸಲಾಯಿತು. ಈಗ ಸಿಎಮ್‌ಒಗಳು ಹಿಂತಿರುಗಿದ್ದಾರೆ, ಆದ್ದರಿಂದ ಅವರ ಸೇವೆಗಳು ಅಗತ್ಯವಿಲ್ಲ” ಎಂದಿದೆ.

ನಂತರ “ಈ ನಿರ್ಧಾರಕ್ಕೆ ವೈದ್ಯರು ಅಸಮಾಧಾನ ಹೊಂದಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ನಾವು ಅವರ ಕುಂದುಕೊರತೆಗಳನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಆಸ್ಪತ್ರೆಯಲ್ಲಿ ಬೇರೆಲ್ಲಿಯಾದರೂ ಅವರಿಗೆ ಕೆಲಸ ನೀಡಬಹುದು” ಎಂದಿದ್ದಾರೆ.

ಇದನ್ನೂ ಓದಿ: ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

ಇಬ್ಬರು ವೈದ್ಯರಿಗೂ ಆಗಸ್ಟ್ ತಿಂಗಳಿನಿಂದ ಸಂಬಳ ನೀಡಿಲ್ಲ. ಸಂಬಳ ಮಾಧ್ಯಮಗಳಿಗೆ ತಮ್ಮ ವೈಯಕ್ತಿಕ ಅಭಿಪ್ರಾಯ ನೀಡಿದ ಕಾರಣ ಮುಂದಿಟ್ಟು ಹಿರಿಯ ಅಧಿಕಾರಿಗಳಿಂದ ಗದರಿಸಲ್ಪಡುತ್ತಿದ್ದರು ಎಂದು ವರದಿಯಾಗಿದೆ. ಹಿರಿಯ ವೈದ್ಯರ ಹೇಳಿಕೆಯಂತೆ ಎಲ್ಲಾ ಪ್ರಕ್ರಿಯೆಗಳು ಮುಗಿದ ನಂತರ ಅವರಿಗೆ ಸಂಬಳ ನೀಡಬಹುದು ಎಂದಿದ್ದಾರೆ.

ಇಬ್ಬರು ವೈದ್ಯರು ಹತ್ರಾಸ್‌ನ 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯಲ್ಲಿ ಭಾಗವಹಿಸಿದ್ದರು. ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದರು, ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಪೊಲೀಸರು ಸುಟ್ಟುಹಾಕಿದ್ದರು. ತಮ್ಮ ಒಪ್ಪಿಗೆಯಿಲ್ಲದೇ ಶವಸಂಸ್ಕಾರ ಬಲವಂತವಾಗಿ ಮಾಡಲಾಯಿತು ಎಂದು ಕುಟುಂಬವು ಆರೋಪಿಸಿದೆ. ಕುಟುಂಬದ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಈ ವಿಷಯದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ.


ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...