Homeಮುಖಪುಟಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ಈ ದುರ್ಘಟನೆ ಅಕ್ಟೋಬರ್ 28 ರಿಂದ ಪ್ರಾರಂಭವಾಗುವ ಬಿಹಾರ ಚುನಾವಣೆಯಲ್ಲಿ ಪಕ್ಷದ ಭವಿಷ್ಯವನ್ನು ಹಾಳುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಬಿಜೆಪಿಯ ದಲಿತ ಸಂಸದರೊಬ್ಬರು ಎಚ್ಚರಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮೇಲ್ಜಾತಿ ಯುವಕರಿಂದ ಅತ್ಯಾಚಾರ ಮತ್ತು ಕೊಲೆಗಿಡಾದ ದಲಿತ ಯುವತಿಯ ಪ್ರಕರಣ ದೇಶದಾದ್ಯಂತ ತೀವ್ರ ಪ್ರತಿಭಟನೆ, ಆಕ್ರೋಶಕ್ಕೆ ಕಾರಣವಾಗಿದೆ. ಈ ಅಮಾನವೀಯ ಘಟನೆ ದೇಶದ ಲಕ್ಷಾಂತರ ಜನಕ್ಕೆ ಆಘಾತ ತಂದಿದ್ದರೆ, ಉತ್ತರ ಪ್ರದೇಶದ ಬಿಜೆಪಿಯ ದಲಿತ ಸಂಸದರು ಮಾತ್ರ ಇದು ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ ಎಂದಿದ್ದಾರೆ!

ಉತ್ತರ ಪ್ರದೇಶದ ಆಡಳಿತ ಪಕ್ಷ ಬಿಜೆಪಿಯ ಹಲವು ದಲಿತ ಸಂಸದರು ಈ ಘಟನೆ ಆಡಳಿತದ ಚಿತ್ರಣವನ್ನು ದುರ್ಬಲಗೊಳಿಸಿದೆ. ಜೊತೆಗೆ ರಾಜಕೀಯವಾಗಿ ಹಾನಿಯುಂಟು ಮಾಡುತ್ತದೆ ಎಂದಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರದ ಆಡಳಿತದ ಮೇಲೆ ವಿಶ್ವಾಸ ವ್ಯಕ್ತಪಡಿಸಿರುವ ದಲಿತ ಸಂಸದರು ಪೊಲೀಸರಲ್ಲಿ ಆಳವಾಗಿ ಬೇರೂರಿರುವ ಜಾತಿವಾದ ಮತ್ತು ಭ್ರಷ್ಟಾಚಾರವೇ ಘಟನೆಗೆ ಕಾರಣ ಎಂದು ದೂಷಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಉತ್ತರ ಪ್ರದೇಶ ಬಿಜೆಪಿಯ ಕನಿಷ್ಠ ನಾಲ್ಕು ದಲಿತ ಸಂಸದರು ಮೃತ ಸಂತ್ರಸ್ತೆಯ ಕುಟುಂಬವನ್ನು ಒಳಗೊಳ್ಳದೆ ಅವಸರದಲ್ಲಿ ಮೃತದೇಹವನ್ನು ದಹನ ಮಾಡಿದ ಪೊಲೀಸ್ ಕ್ರಮವನ್ನು “ಖಂಡನೀಯ” ಎಂದಿದ್ದಾರೆ. ಜೊತೆಗೆ ಪ್ರಕರಣದ ಸಮರ್ಪಕ ತನಿಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಇತ್ತೀಚಿನವರೆಗೂ ಬಿಜೆಪಿಯ ಎಸ್‌ಸಿ ಮೋರ್ಚಾದ ಮುಖ್ಯಸ್ಥರಾಗಿದ್ದ ಕೌಶಂಬಿ ಸಂಸದ ವಿನೋದ್ ಕುಮಾರ್ ಸೋಂಕರ್ ಹೇಳುವಂತೆ, “ಖಂಡಿತವಾಗಿಯೂ, ಈ ಘಟನೆಯು ರಾಜ್ಯ ಮತ್ತು ಸರ್ಕಾರದ ಚಿತ್ರಣವನ್ನು ದುರ್ಬಲಗೊಳಿಸಿದೆ. ಜನರನ್ನು ಸರ್ಕಾರದ ವಿರುದ್ಧ ಕೆರಳಿಸಿದೆ. ಇದು ರಾಜಕೀಯವಾಗಿ ನಮಗೆ ಹಾನಿಕಾರಕವಾಗಿದೆ. ಆದರೆ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ದೊರಕಿಸಲು ರಾಜ್ಯ ಸರ್ಕಾರ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ. ಘಟನೆಗೆ ಪೊಲೀಸ್ ಅಧಿಕಾರಶಾಹಿ ವರ್ಗದ ಭ್ರಷ್ಟಾಚಾರ ಮತ್ತು ಜಾತಿವಾದವೇ ಕಾರಣ ಎಂದು ಸೋಂಕರ್ ಆರೋಪಿಸಿದ್ದಾರೆ.

“ಇದು ಕಳೆದ ಕೆಲವು ವರ್ಷಗಳಿಂದ ಸೃಷ್ಠಿಯಾಗಿರುವ ಸಮಸ್ಯೆಯಲ್ಲ, ಇದು ತುಂಬಾ ಸಮಯದಿಂದಲೂ ಇರುವಂತಹದ್ದು. ರಾಜ್ಯದಲ್ಲಿ ಹಿಂದಿನ ಎಸ್‌ಪಿ ಮತ್ತು ಬಿಎಸ್‌ಪಿ ಸರ್ಕಾರಗಳು ಜಾತಿ ಹೆಸರಿನಲ್ಲಿ ಪೊಲೀಸ್ ವ್ಯವಸ್ಥೆಯಲ್ಲಿ ಮತ್ತು ಅಧಿಕಾರಶಾಹಿಯಲ್ಲಿ ಹುದ್ದೆಗಳನ್ನು ವಿತರಿಸಿದ್ದವು. ವಾಸ್ತವವಾಗಿ, ಈ ಪಕ್ಷಗಳಿಗೆ ಇನ್ನೂ ನಿಷ್ಠರಾಗಿರುವವರು ಬಿಜೆಪಿ ಮತ್ತು ಈಗಿನ ಸರ್ಕಾರವನ್ನು ದೂಷಿಸುತ್ತಿದ್ದಾರೆ ಎಂದು ನಮ್ಮಲ್ಲಿ ಕೆಲವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ”ಎಂದು ಸಂಸದ ಸೋಂಕರ್‌ ಹೇಳಿದ್ದಾರೆ.

ಇನ್ನು ಹೆಸರು ಹೇಳಲು ಇಚ್ಚಿಸದ ಮತ್ತೊಬ್ಬ ದಲಿತ ಸಂಸದ, ಈ ದುರ್ಘಟನೆ ಅಕ್ಟೋಬರ್ 28 ರಿಂದ ಪ್ರಾರಂಭವಾಗುವ ಬಿಹಾರ ಚುನಾವಣೆಯಲ್ಲಿ ಪಕ್ಷದ ಭವಿಷ್ಯವನ್ನು ಹಾಳುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ಮೋಹನ್ ಲಾಲ್‌ಗಂಜ್ ಸಂಸದ ಕೌಶಲ್ ಕಿಶೋರ್ “ಯುಪಿ ಪೊಲೀಸರು ಬಡವರು ಮತ್ತು ದಲಿತರಿಗೆ ಕಿರುಕುಳ ನೀಡುತ್ತಿದ್ದಾರೆ. ಅವರು ತಮ್ಮ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಮುಚ್ಚಿಹಾಕುತ್ತಾರೆ. ಅಂತಹ ಪೊಲೀಸರಿಗೆ ಶಿಕ್ಷೆಯಾಗುವಂತೆ ಸರ್ಕಾರ ಮಾಡಬೇಕು. ಈ ಸರ್ಕಾರ ಅಂತಹ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತದೆ ಎಂಬ ವಿಶ್ವಾಸ ನನಗಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

PC: India Today

ಇನ್ನು ಬರಾಬಂಕಿ ಸಂಸದ ಉಪೇಂದ್ರ ಸಿಂಗ್ ರಾವತ್ ಅವರು ಈ ಘಟನೆಯ ಬಗ್ಗೆ ರಾಜ್ಯದ ದಲಿತರು ತುಂಬಾ ಅಸಮಾಧಾನಗೊಂಡಿದ್ದಾರೆ ಎಂದಿದ್ದಾರೆ. “ಈ ಕೃತ್ಯವನ್ನು ಖಂಡಿಸಬೇಕಾಗಿದೆ. ಅದು ಕೇವಲ ದಲಿತ ಯುವತಿ ಎಂಬ ಕಾರಣದಿಂದಲ್ಲ, ಇಂತಹ ದುರ್ಘಟನೆ ಯಾರಿಗೂ ಸಂಭವಿಸಬಾರದು. ಅಪರಾಧಿಗಳು ಪೊಲೀಸರೇ ಆಗಿರಲಿ ಅಥವಾ ಬೇರೆಯವರೇ ಆಗಿರಲಿ ಸರ್ಕಾರವು ಯಾರನ್ನೂ ಬಿಡುವುದಿಲ್ಲ ಎಂಬ ಖಾತ್ರಿ ನನಗಿದೆ” ಎಂದಿದ್ದಾರೆ.

“ಸಂತ್ರಸ್ತರು ದಲಿತರಾಗಿದ್ದಾಗ ಅಥವಾ ಹಿಂದುಳಿದ ಜಾತಿಯವರಾಗಿದ್ದಾಗ, ನ್ಯಾಯ ಸಿಗುವುದು ಮತ್ತು ವ್ಯವಸ್ಥೆ ಕ್ರಮಗೊಳ್ಳು ವುದು ಕೆಲವೊಮ್ಮೆ ವಿಳಂಬವಾಗುತ್ತದೆ. ಏಕೆಂದರೆ ಅವರು ದುರ್ಬಲರು ಎಂಬ ಕಾರಣಕ್ಕೆ. ಆದರೆ  ಅಪರಾಧಿಗಳಿಗೆ ಶಿಕ್ಷೆಯಾಗದಿದ್ದರೆ ಸರ್ಕಾರ ತುಂಬಾ ನಷ್ಟವನ್ನು ಅನುಭವಿಸುತ್ತದೆ” ಎಂದು ಘಟನೆಯ ತೀವ್ರತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ಉತ್ತರ ಪ್ರದೇಶ ಸರ್ಕಾರ ಪ್ರಕರಣ ಕುರಿತು ಮೂರು ಮಂದಿ ಸದಸ್ಯರ ಎಸ್‌ಐಟಿ ತಂಡವನ್ನು ರಚನೆ ಮಾಡಿದ್ದು, 7 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದೆ. ಪ್ರಧಾನಿ ನರೇಂದ್ರ ಮೋದಿಯವರ ಸೂಚನೆ ಮೇರೆಗೆ ಈ ಎಸ್‌ಐಟಿ ತಂಡ ರಚಿಸಲಾಗಿದ ಎಂದು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ತಿಳಿಸಿದ್ದಾರೆ.

ದೇಶದೆಲ್ಲೆಡೆ ಪ್ರತಿಭಟನೆ ಮತ್ತು ವ್ಯಾಪಕ ಆಕ್ರೋಶವನ್ನು ಎದುರಿಸುತ್ತಿರುವ ಉತ್ತರ ಪ್ರದೇಶ ರಾಜ್ಯವು ಈ ಪ್ರಕರಣದ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವನ್ನು ಸ್ಥಾಪಿಸುವುದಾಗಿ ಹೇಳಿದೆ. ಇದಲ್ಲದೆ, ಸಂತ್ರಸ್ತೆಯ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರ, ಕುಟುಂಬ ಸದಸ್ಯರಿಗೆ ಸರ್ಕಾರಿ ಕೆಲಸ, ಮತ್ತು ರಾಜ್ಯ ನಗರಾಭಿವೃದ್ಧಿ ಏಜೆನ್ಸಿಯ ಅಡಿಯಲ್ಲಿ ಹತ್ರಾಸ್ ನಗರದಲ್ಲಿ ಒಂದು ಮನೆ ಕೊಡುವುದಾಗಿ ಘೋಷಿಸಿದೆ.

ದಲಿತ ಯುವತಿ ಮೇಲೆ ನಡೆದ ಕ್ರೂರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಥವಾ ವಿಶೇಷ ತನಿಖಾ ತಂಡ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿ ಕೂಡ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಲಾಗಿದೆ ಎಂದಿದೆ.

Hathras gangrape: Section 144 imposed ahead of Priyanka, Rahul Gandhi's visit
PC:Scroll.in

ಒಟ್ಟಾರೆ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬರಲು ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಕಾರಣವಾಗಿದೆ. ತಮ್ಮದೆ ಪಕ್ಷದ ನಾಯಕರು ರಾಜ್ಯದ ಜನತೆ ಸರ್ಕಾರದ ಮೇಲೆ  ವಿಶ್ವಾಸ ಕಳೆದುಕೊಳ್ಳುತ್ತಿರುವುದು ಮತ್ತು ಮುಂದಿನ ಚುನಾವಣೆಯಲ್ಲಿ ಪರಿಣಾಮ ಬೀರುತ್ತದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ, ದೇಶದ ಜನತೆ ಹತ್ರಾಸ್ ಪ್ರಕರಣದ ಮೇಲೆ ಕಣ್ಣಿಟ್ಟಿರುವಾಗ, ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡುವ ಕೆಲಸ ಆಗಬೇಕಿದೆ. ಮತ್ತೆ ಇಂತಹ ದುರ್ಘಟನೆಗಳು ನಡೆಯದ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಅಗತ್ಯ ಸರ್ಕಾರದ ಮೇಲಿದೆ.


ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...