Homeಮುಖಪುಟಪೊಲೀಸರು ನಮಗೆ ಬೆದರಿಕೆ ಒಡ್ಡುತ್ತಿದ್ದಾರೆ: ಹತ್ರಾಸ್ ಪ್ರಕರಣ ಸಂತ್ರಸ್ತೆಯ ಸಹೋದರ ಆರೋಪ

ಪೊಲೀಸರು ನಮಗೆ ಬೆದರಿಕೆ ಒಡ್ಡುತ್ತಿದ್ದಾರೆ: ಹತ್ರಾಸ್ ಪ್ರಕರಣ ಸಂತ್ರಸ್ತೆಯ ಸಹೋದರ ಆರೋಪ

ಯಾರೊಬ್ಬರೂ ಹೊರಗೆ ಬರಲು ಅವಕಾಶ ಕೊಡುತ್ತಿಲ್ಲ. ನನ್ನ ಮಾವ ಹೊರಗೆ ಬಂದು ಮಾಧ್ಯಮವನ್ನು ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಜಿಲ್ಲಾ ದಂಡಾಧಿಕಾರಿ ನನ್ನ ಮಾವನ ಎದೆಗೆ ಒದ್ದರು. ಈಗ ಅವರು ಅಸ್ವಸ್ಥರಾಗಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಪ್ರಕರಣದ ಯುವತಿಯ ಸಹೋದರ ಪೊಲೀಸರ ಕಣ್ಣುತಪ್ಪಿಸಿಕೊಂಡು ಬಂದು ಮಾದ್ಯಮಗಳೊಂದಿಗೆ ಮಾತನಾಡಿದ್ದು, “ನಮಗೆ ಪೊಲೀಸರು ಬೆದರಿಕೆ ಒಡ್ಡುತ್ತಿದ್ದಾರೆ” ಎಂದು ಆರೋಪಿಸಿದ್ದಾನೆ.

“ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ನಮಗೆ ಬೆದರಿಕೆ ಒಡ್ಡಿ, ನಮ್ಮ ಕುಟುಂಬದವರು ಹೊರಗೆ ಹೋಗಲು, ಯಾರನ್ನೂ ಸಂಪರ್ಕಿಸಲು ಅಥವಾ ಮಾಧ್ಯಮದವರನ್ನು ಬೇಟಿಯಾಗಲೂ ಬಿಡುತ್ತಿಲ್ಲ. ನಮ್ಮ ಮೊಬೈಲನ್ನು ಕಿತ್ತುಕೊಂಡಿದ್ದಾರೆ. ಈಗ ಹೊಲದ ಮೂಲಕ ತಪ್ಪಿಸಿಕೊಂಡು ಓಡಿ ಬಂದಿದ್ದೇನೆ” ಎಂದು ಶುಕ್ರವಾರ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾನೆ.

ಗ್ರಾಮ ಹಾಗೂ ಸಂತ್ರಸ್ತೆಯ ಮನೆಗೆ ಹೋಗುವ ದಾರಿ ಮತ್ತು ಬೀದಿಯನ್ನು ಯುಪಿ ಪೊಲೀಸರು ಸುತ್ತುವರೆದಿದ್ದಾರೆ. “ಮಾಧ್ಯಮವನ್ನು ಸಂಪರ್ಕಿಸುವಂತೆ ನನ್ನ ತಾಯಿ ಹಾಗೂ ಅತ್ತೆ ನನಗೆ ಹೇಳಿದರು. ಯಾರೊಬ್ಬರೂ ಹೊರಗೆ ಬರಲು ಅವಕಾಶ ಕೊಡುತ್ತಿಲ್ಲ. ನನ್ನ ಮಾವ ಹೊರಗೆ ಬಂದು ಮಾಧ್ಯಮವನ್ನು ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಜಿಲ್ಲಾ ದಂಡಾಧಿಕಾರಿ ನನ್ನ ಮಾವನ ಎದೆಗೆ ಒದ್ದರು. ಈಗ ಅವರು ಅಸ್ವಸ್ಥರಾಗಿದ್ದಾರೆ” ಎಂದು ತಮ್ಮ ಸಂಕಷ್ಟವನ್ನು ತೋಡಿಕೊಂಡಿದ್ದಾನೆ.

ಸಂತ್ರಸ್ತೆಯ ಸಹೋದರನ ಮಾತುಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ದಲಿತ ಯುವತಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಹಲವು ಕಾಂಗ್ರೆಸ್ ಮುಖಂಡರು ಹೊರಟಿದ್ದರು. ಹತ್ರಾಸ್‌ಗೆ ಭೇಟಿ ನೀಡಲು ಹೊರಟ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿಷೇದಾಜ್ಞೆ ನಡುವೆಯೂ ಹೊರಟ ಕಾಂಗ್ರೆಸ್ ನಾಯಕರ ಕಾರುಗಳನ್ನು ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ತಡೆಯಲಾಗಿತ್ತು. ಆದರೆ ತಾವು ಹತ್ರಾಸ್‌ಗೆ ಭೇಟಿ ನೀಡಿಯೇ ನೀಡುತ್ತೇವೆ ಎಂದು ಪಾದಯಾತ್ರೆ ಹೊರಟ್ಟಿದ್ದ ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಆ ವೇಳೆ ನೂಕುನುಗ್ಗಲು, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ದೆಹಲಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಬಟ್ಟೆ ಹರಿದುಹೋಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...