Homeಮುಖಪುಟಪೊಲೀಸರು ನಮಗೆ ಬೆದರಿಕೆ ಒಡ್ಡುತ್ತಿದ್ದಾರೆ: ಹತ್ರಾಸ್ ಪ್ರಕರಣ ಸಂತ್ರಸ್ತೆಯ ಸಹೋದರ ಆರೋಪ

ಪೊಲೀಸರು ನಮಗೆ ಬೆದರಿಕೆ ಒಡ್ಡುತ್ತಿದ್ದಾರೆ: ಹತ್ರಾಸ್ ಪ್ರಕರಣ ಸಂತ್ರಸ್ತೆಯ ಸಹೋದರ ಆರೋಪ

ಯಾರೊಬ್ಬರೂ ಹೊರಗೆ ಬರಲು ಅವಕಾಶ ಕೊಡುತ್ತಿಲ್ಲ. ನನ್ನ ಮಾವ ಹೊರಗೆ ಬಂದು ಮಾಧ್ಯಮವನ್ನು ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಜಿಲ್ಲಾ ದಂಡಾಧಿಕಾರಿ ನನ್ನ ಮಾವನ ಎದೆಗೆ ಒದ್ದರು. ಈಗ ಅವರು ಅಸ್ವಸ್ಥರಾಗಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಪ್ರಕರಣದ ಯುವತಿಯ ಸಹೋದರ ಪೊಲೀಸರ ಕಣ್ಣುತಪ್ಪಿಸಿಕೊಂಡು ಬಂದು ಮಾದ್ಯಮಗಳೊಂದಿಗೆ ಮಾತನಾಡಿದ್ದು, “ನಮಗೆ ಪೊಲೀಸರು ಬೆದರಿಕೆ ಒಡ್ಡುತ್ತಿದ್ದಾರೆ” ಎಂದು ಆರೋಪಿಸಿದ್ದಾನೆ.

“ಪೊಲೀಸರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ನಮಗೆ ಬೆದರಿಕೆ ಒಡ್ಡಿ, ನಮ್ಮ ಕುಟುಂಬದವರು ಹೊರಗೆ ಹೋಗಲು, ಯಾರನ್ನೂ ಸಂಪರ್ಕಿಸಲು ಅಥವಾ ಮಾಧ್ಯಮದವರನ್ನು ಬೇಟಿಯಾಗಲೂ ಬಿಡುತ್ತಿಲ್ಲ. ನಮ್ಮ ಮೊಬೈಲನ್ನು ಕಿತ್ತುಕೊಂಡಿದ್ದಾರೆ. ಈಗ ಹೊಲದ ಮೂಲಕ ತಪ್ಪಿಸಿಕೊಂಡು ಓಡಿ ಬಂದಿದ್ದೇನೆ” ಎಂದು ಶುಕ್ರವಾರ ಮಾಧ್ಯಮಗಳೊಟ್ಟಿಗೆ ಮಾತನಾಡಿದ್ದಾನೆ.

ಗ್ರಾಮ ಹಾಗೂ ಸಂತ್ರಸ್ತೆಯ ಮನೆಗೆ ಹೋಗುವ ದಾರಿ ಮತ್ತು ಬೀದಿಯನ್ನು ಯುಪಿ ಪೊಲೀಸರು ಸುತ್ತುವರೆದಿದ್ದಾರೆ. “ಮಾಧ್ಯಮವನ್ನು ಸಂಪರ್ಕಿಸುವಂತೆ ನನ್ನ ತಾಯಿ ಹಾಗೂ ಅತ್ತೆ ನನಗೆ ಹೇಳಿದರು. ಯಾರೊಬ್ಬರೂ ಹೊರಗೆ ಬರಲು ಅವಕಾಶ ಕೊಡುತ್ತಿಲ್ಲ. ನನ್ನ ಮಾವ ಹೊರಗೆ ಬಂದು ಮಾಧ್ಯಮವನ್ನು ಸಂಪರ್ಕಿಸಲು ಪ್ರಯತ್ನಿಸಿದರು. ಆದರೆ ಜಿಲ್ಲಾ ದಂಡಾಧಿಕಾರಿ ನನ್ನ ಮಾವನ ಎದೆಗೆ ಒದ್ದರು. ಈಗ ಅವರು ಅಸ್ವಸ್ಥರಾಗಿದ್ದಾರೆ” ಎಂದು ತಮ್ಮ ಸಂಕಷ್ಟವನ್ನು ತೋಡಿಕೊಂಡಿದ್ದಾನೆ.

ಸಂತ್ರಸ್ತೆಯ ಸಹೋದರನ ಮಾತುಗಳನ್ನು ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ದಲಿತ ಯುವತಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಹಲವು ಕಾಂಗ್ರೆಸ್ ಮುಖಂಡರು ಹೊರಟಿದ್ದರು. ಹತ್ರಾಸ್‌ಗೆ ಭೇಟಿ ನೀಡಲು ಹೊರಟ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿಷೇದಾಜ್ಞೆ ನಡುವೆಯೂ ಹೊರಟ ಕಾಂಗ್ರೆಸ್ ನಾಯಕರ ಕಾರುಗಳನ್ನು ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ತಡೆಯಲಾಗಿತ್ತು. ಆದರೆ ತಾವು ಹತ್ರಾಸ್‌ಗೆ ಭೇಟಿ ನೀಡಿಯೇ ನೀಡುತ್ತೇವೆ ಎಂದು ಪಾದಯಾತ್ರೆ ಹೊರಟ್ಟಿದ್ದ ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಆ ವೇಳೆ ನೂಕುನುಗ್ಗಲು, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ದೆಹಲಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಬಟ್ಟೆ ಹರಿದುಹೋಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.


ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...