Homeಮುಖಪುಟಹತ್ರಾಸ್ ಸಂತ್ರಸ್ತ ಕುಟುಂಬ ಭೇಟಿಗೆ ಪಾದಯಾತ್ರೆ: ರಾಹುಲ್, ಪ್ರಿಯಾಂಕಾ ಬಂಧನ

ಹತ್ರಾಸ್ ಸಂತ್ರಸ್ತ ಕುಟುಂಬ ಭೇಟಿಗೆ ಪಾದಯಾತ್ರೆ: ರಾಹುಲ್, ಪ್ರಿಯಾಂಕಾ ಬಂಧನ

ರಾಹುಲ್ ಗಾಂಧಿಯವರ ಬಂಧನವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂಸಾಚಾರವು ಅಸಮರ್ಥರ ಕೊನೆಯ ಆಶ್ರಯ ತಾಣವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಹತ್ರಾಸ್ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಇಂದು ಸಂತ್ರಸ್ತೆಯ ಕುಟುಂಬದವರನ್ನು ನೋಡಲು ರಾಹುಲ್ ಮತ್ತು ಪ್ರಿಯಾಂಕ ಹೊರಟಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಹತ್ರಾಸ್ ಜಿಲ್ಲೆಯಲ್ಲಿ ಅಕ್ಟೋಬರ್‌ 31 ರವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಕೆ.ಲಕ್ಷಕಾರ್‌ ತಿಳಿಸಿದ್ದಾರೆ.

ನಿಷೇದಾಜ್ಞೆ ನಡುವೆಯೂ ಹೊರಟ ಅವರನ್ನು ಯಮುನಾ ಎಕ್ಸ್‌ಪ್ರೆಸ್ ವೇ ಬಳಿಯೇ ತಡೆಹಿಡಿಯಲಾಗಿದೆ. ಅವರ ಕಾರಿಗೆ ಅವಕಾಶ ನೀಡದಿದ್ದಾಗ ಅವರು ಪಾದಯಾತ್ರೆ ಮೂಲಕ ಹತ್ರಾಸ್ ತಲುಪಲು ಮುಂದಾಗಿದ್ದಾರೆ. ಈ ನಡುವೆ ಉತ್ತರ ಪ್ರದೇಶ ಪೊಲೀಸರು ಮತ್ತು ರಾಹುಲ್ ಗಾಂಧಿ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ಕಾರ್ಯಕರ್ತರ ಜೊತೆ ನಡೆದು ಹೋಗುತ್ತಿದ್ದ ರಾಹುಲ್ ಗಾಂಧಿಗೆ ಮತ್ತೆ ಪೊಲೀಸರು ಅಡ್ಡಹಾಕಿದ್ದಾರೆ. ಪಟ್ಟು ಬಿಡದೇ ಮುಂದೆ ಸಾಗಿದಾಗ ಪೊಲೀಸರೊಬ್ಬರು ರಾಹುಲ್ ಗಾಂಧಿಯನ್ನು ತಳ್ಳುತ್ತಿರುವ ದೃಶ್ಯ ವೈರಲ್ ಆಗಿದೆ. ಪೊಲೀಸರು ತಳ್ಳಾಡಿದ್ದರಿಂದ ರಾಹುಲ್ ಕುಸಿದು ಬಿದ್ದ ಘಟನೆ ಜರುಗಿದೆ. ನಿಷೇದಾಜ್ಞೆ ಆದೇಶದ ಉಲ್ಲಂಘನೆ ಆರೋಪದ ಮೇಲೆ ಬಂಧಿಸುವುದಾಗಿ ಹೇಳಿ ಸೆಕ್ಷನ್ 188 ಐಪಿಸಿ ಅಡಿಯಲ್ಲಿ ರಾಹುಲ್ ಗಾಂಧಿ  ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಹುಲ್ ಗಾಂಧಿಯವರ ಬಂಧನವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂಸಾಚಾರವು ಅಸಮರ್ಥರ ಕೊನೆಯ ಆಶ್ರಯ ತಾಣವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆದಿತ್ಯನಾಥ್ ಹಿಂಸೆಯಿಂದ ಸ್ಪೂರ್ತಿ ಪಡೆಯುತ್ತಾರೆ ಎಂದು ಸಾಬೀತು ಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಆದಿತ್ಯನಾಥ್ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ.

ಮೊರಾದಾಬಾದ್, ಸಹರಾನ್ಪುರ್, ಜಲೌನ್ ಮತ್ತು ಕಾಸ್‌ಗಂಜ್ ಸೇರಿದಂತೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ವಾಲ್ಮೀಕಿ ಸಮುದಾಯ ಪ್ರತಿಭಟನೆ ಘೋಷಿಸಿದೆ. ಪ್ರತಿಭಟನೆ ತೀವ್ರಗೊಂಡಿದ್ದು, ಸಂಜೆ 5 ರ ಸುಮಾರಿಗೆ ದೆಹಲಿಯಲ್ಲಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...