Homeಮುಖಪುಟಹತ್ರಾಸ್ ಸಂತ್ರಸ್ತ ಕುಟುಂಬ ಭೇಟಿಗೆ ಪಾದಯಾತ್ರೆ: ರಾಹುಲ್, ಪ್ರಿಯಾಂಕಾ ಬಂಧನ

ಹತ್ರಾಸ್ ಸಂತ್ರಸ್ತ ಕುಟುಂಬ ಭೇಟಿಗೆ ಪಾದಯಾತ್ರೆ: ರಾಹುಲ್, ಪ್ರಿಯಾಂಕಾ ಬಂಧನ

ರಾಹುಲ್ ಗಾಂಧಿಯವರ ಬಂಧನವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂಸಾಚಾರವು ಅಸಮರ್ಥರ ಕೊನೆಯ ಆಶ್ರಯ ತಾಣವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ಹತ್ರಾಸ್ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿಯಾಗಲು ಹೊರಟಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಇಂದು ಸಂತ್ರಸ್ತೆಯ ಕುಟುಂಬದವರನ್ನು ನೋಡಲು ರಾಹುಲ್ ಮತ್ತು ಪ್ರಿಯಾಂಕ ಹೊರಟಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಹತ್ರಾಸ್ ಜಿಲ್ಲೆಯಲ್ಲಿ ಅಕ್ಟೋಬರ್‌ 31 ರವರೆಗೆ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಕೆ.ಲಕ್ಷಕಾರ್‌ ತಿಳಿಸಿದ್ದಾರೆ.

ನಿಷೇದಾಜ್ಞೆ ನಡುವೆಯೂ ಹೊರಟ ಅವರನ್ನು ಯಮುನಾ ಎಕ್ಸ್‌ಪ್ರೆಸ್ ವೇ ಬಳಿಯೇ ತಡೆಹಿಡಿಯಲಾಗಿದೆ. ಅವರ ಕಾರಿಗೆ ಅವಕಾಶ ನೀಡದಿದ್ದಾಗ ಅವರು ಪಾದಯಾತ್ರೆ ಮೂಲಕ ಹತ್ರಾಸ್ ತಲುಪಲು ಮುಂದಾಗಿದ್ದಾರೆ. ಈ ನಡುವೆ ಉತ್ತರ ಪ್ರದೇಶ ಪೊಲೀಸರು ಮತ್ತು ರಾಹುಲ್ ಗಾಂಧಿ ನಡುವೆ ಮಾತಿನ ಚಕಮಕಿ ನಡೆದಿದೆ.

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ಕಾರ್ಯಕರ್ತರ ಜೊತೆ ನಡೆದು ಹೋಗುತ್ತಿದ್ದ ರಾಹುಲ್ ಗಾಂಧಿಗೆ ಮತ್ತೆ ಪೊಲೀಸರು ಅಡ್ಡಹಾಕಿದ್ದಾರೆ. ಪಟ್ಟು ಬಿಡದೇ ಮುಂದೆ ಸಾಗಿದಾಗ ಪೊಲೀಸರೊಬ್ಬರು ರಾಹುಲ್ ಗಾಂಧಿಯನ್ನು ತಳ್ಳುತ್ತಿರುವ ದೃಶ್ಯ ವೈರಲ್ ಆಗಿದೆ. ಪೊಲೀಸರು ತಳ್ಳಾಡಿದ್ದರಿಂದ ರಾಹುಲ್ ಕುಸಿದು ಬಿದ್ದ ಘಟನೆ ಜರುಗಿದೆ. ನಿಷೇದಾಜ್ಞೆ ಆದೇಶದ ಉಲ್ಲಂಘನೆ ಆರೋಪದ ಮೇಲೆ ಬಂಧಿಸುವುದಾಗಿ ಹೇಳಿ ಸೆಕ್ಷನ್ 188 ಐಪಿಸಿ ಅಡಿಯಲ್ಲಿ ರಾಹುಲ್ ಗಾಂಧಿ  ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಹುಲ್ ಗಾಂಧಿಯವರ ಬಂಧನವನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂಸಾಚಾರವು ಅಸಮರ್ಥರ ಕೊನೆಯ ಆಶ್ರಯ ತಾಣವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆದಿತ್ಯನಾಥ್ ಹಿಂಸೆಯಿಂದ ಸ್ಪೂರ್ತಿ ಪಡೆಯುತ್ತಾರೆ ಎಂದು ಸಾಬೀತು ಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಇಬ್ಬರು ನಾಯಕರ ಬಂಧನ ಮತ್ತು ಅವರ ಜೊತೆಗಿನ ಪೊಲೀಸರ ದುರ್ವರ್ತನೆಗೆ ಆದಿತ್ಯನಾಥ್ ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ.

ಮೊರಾದಾಬಾದ್, ಸಹರಾನ್ಪುರ್, ಜಲೌನ್ ಮತ್ತು ಕಾಸ್‌ಗಂಜ್ ಸೇರಿದಂತೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ವಾಲ್ಮೀಕಿ ಸಮುದಾಯ ಪ್ರತಿಭಟನೆ ಘೋಷಿಸಿದೆ. ಪ್ರತಿಭಟನೆ ತೀವ್ರಗೊಂಡಿದ್ದು, ಸಂಜೆ 5 ರ ಸುಮಾರಿಗೆ ದೆಹಲಿಯಲ್ಲಿ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಅನ್ಯಾಯದ ಈ ಘೋರ ಸಾವು ಯಾವ ಹೆಣ್ಣಿಗೂ ಬರದಿರಲಿ: ಎಚ್.ಎಸ್.ಅನುಪಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...