Homeಮುಖಪುಟಹತ್ರಾಸ್ ಪ್ರಕರಣ: ’ಯುವತಿ ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಳು’-ಸೋನಿಯಾ ಗಾಂಧಿ ಆಕ್ರೋಶ

ಹತ್ರಾಸ್ ಪ್ರಕರಣ: ’ಯುವತಿ ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಳು’-ಸೋನಿಯಾ ಗಾಂಧಿ ಆಕ್ರೋಶ

ಪೊಲೀಸರು "ಬಲವಂತವಾಗಿ ಸಂತ್ರಸ್ತೆ ಮೃತದೇಹವನ್ನು ಸುಟ್ಟುಹಾಕಿದ್ದಾರೆ. ಯುವತಿ ಸಾವಿನಲ್ಲೂ ಸಹ ತನ್ನ ಘನತೆಯನ್ನು ಕಳೆದುಕೊಂಡಿದ್ದಾಳೆ ಮತ್ತು ಅನಾಥೆಯಂತೆ ಆಕೆಯನ್ನು ಸುಟ್ಟುಹಾಕಲಾಗಿದೆ" ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

- Advertisement -
- Advertisement -

ಹತ್ರಾಸ್‌ನಲ್ಲಿ ನಡೆದ ಭೀಕರ ದುರ್ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಆದಿತ್ಯಾನಾಥ್ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂತ್ರಸ್ತೆಯು ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ಮೇಲ್ಜಾತಿಯ ಪುರುಷರು ಹದಿನೈದು ದಿನಗಳ ಹಿಂದೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಚಿತ್ರಹಿಂಸೆ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ಪೊಲೀಸರು ಕೂಡಾ ಸಂತ್ರಸ್ತೆಯ ಕುಟುಂಬವನ್ನು ದೂರವಿಟ್ಟು, ಮೃತದೇಹವನ್ನು ಮಧ್ಯರಾತ್ರಿಯಲ್ಲಿ ಸುಟ್ಟುಹಾಕಿದ್ದರು. ಮೃತದೇಹ ನೀಡುವಂತೆ ಸಂತ್ರಸ್ತೆ ಕುಟುಂಬ ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿರುವ ಮತ್ತು ಅಳುತ್ತಿರುವ ಹೃದಯವಿದ್ರಾವಕ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ಈ ಘಟನೆ ದೇಶಾದ್ಯಂತ ತೀವ್ರ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ “ಹತ್ರಾಸ್‌ನ ನಿರ್ಭಯಾ ಸಾಯಲಿಲ್ಲ. ಬದಲಾಗಿ ಆಕೆ ನಿರ್ದಯಿ ಸರ್ಕಾರದಿಂದ, ಅದರ ಆಡಳಿತದಿಂದ ಮತ್ತು ಯುಪಿ ಸರ್ಕಾರದ ಅಜ್ಞಾನದಿಂದ ಕೊಲ್ಲಲ್ಪಟ್ಟಳು” ಎಂದಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ಕಾಂಗ್ರೆಸ್ಸಿನ ಅಧಿಕೃತ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಈ ಹೇಳಿಕೆಗಳನ್ನು ಅವರು ನೀಡಿದ್ದಾರೆ. ಮೊದಲು ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಸಂತ್ರಸ್ತೆಗೆ ಸಮಯೋಚಿತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.

“ಆಕೆ ಜೀವಂತವಾಗಿದ್ದಾಗ ಆಕೆಯ ಮಾತುಗಳನ್ನು ಕೇಳಿಸಿಕೊಂಡು, ಆಕೆಯನ್ನು ರಕ್ಷಿಸಿಲ್ಲ. ಮರಣದ ನಂತರವೂ, ಆಕೆಯನ್ನು ಅವರ ಕುಟುಂಬಕ್ಕೆ ಒಪ್ಪಿಸಿಲ್ಲ. ದುಖಃದಿಂದ ಅಳುವ ತಾಯಿಗೆ ತನ್ನ ಮಗಳಿಗೆ ಕೊನೆಯ ವಿದಾಯ ಹೇಳಲು ಸಹ ಅವಕಾಶ ನೀಡಲಿಲ್ಲ. ಇದು ಅತಿ ದೊಡ್ಡ ಪಾಪ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಪೊಲೀಸರು “ಬಲವಂತವಾಗಿ ಸಂತ್ರಸ್ತೆ ಮೃತದೇಹವನ್ನು ಸುಟ್ಟುಹಾಕಿದ್ದಾರೆ. ಯುವತಿ ಸಾವಿನಲ್ಲೂ ಸಹ ತನ್ನ ಘನತೆಯನ್ನು ಕಳೆದುಕೊಂಡಿದ್ದು, ಅನಾಥೆಯಂತೆ ಆಕೆಯನ್ನು ಸುಟ್ಟುಹಾಕಲಾಗಿದೆ” ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಆದಿತ್ಯನಾಥ್ ಸರ್ಕಾರದ ಅಡಿಯಲ್ಲಿ ಉತ್ತರಪ್ರದೇಶದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ವಿರುದ್ಧ ದೇಶ ಮಾತನಾಡಲಿದೆ ಎಂದು ಸೋನಿಯಾ ಗಾಂಧಿ ಹೇಳಿದರು. “ಇದು ಯಾವ ರೀತಿಯ ನ್ಯಾಯ..? ಇದು ಯಾವ ರೀತಿಯ ಸರ್ಕಾರ…? ನೀವು ಏನು ಮಾಡಿದರೂ, ದೇಶ ಸುಮ್ಮನೆ ನೋಡುತ್ತಲೇ ಇರುತ್ತದೆ ಎಂದು ಭಾವಿಸಿದ್ದೀರಿ.. ಆದರೆ ಇಲ್ಲ, ನಿಮ್ಮ ಅನ್ಯಾಯದ ವಿರುದ್ಧ ದೇಶವು ಮಾತನಾಡುತ್ತದೆ” ಎಂದಿದ್ದಾರೆ.

ಸದ್ಯ ದೇಶದಲ್ಲಿ ತೀವ್ರ ಪ್ರತಿಭಟನೆಯಲ್ಲಿ ತೊಡಗಿರುವ ವಿರೋಧ ಪಕ್ಷಗಳಲ್ಲಿ ಕಾಂಗ್ರೆಸ್ ಮೊದಲ ಸಾಲಿನಲ್ಲಿದೆ. ಮೊರಾದಾಬಾದ್, ಸಹರಾನ್ಪುರ್, ಜಲೌನ್ ಮತ್ತು ಕಾಸ್‌ಗಂಜ್ ಸೇರಿದಂತೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ವಾಲ್ಮೀಕಿ ಸಮುದಾಯ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆ ತೀವ್ರಗೊಂಡಿದ್ದು, ಸಂಜೆ 5 ರ ಸುಮಾರಿಗೆ ದೆಹಲಿಯಲ್ಲಿ ದೊಡ್ಡ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...