Homeಮುಖಪುಟಹತ್ರಾಸ್ ಪ್ರಕರಣ: ’ಯುವತಿ ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಳು’-ಸೋನಿಯಾ ಗಾಂಧಿ ಆಕ್ರೋಶ

ಹತ್ರಾಸ್ ಪ್ರಕರಣ: ’ಯುವತಿ ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಳು’-ಸೋನಿಯಾ ಗಾಂಧಿ ಆಕ್ರೋಶ

ಪೊಲೀಸರು "ಬಲವಂತವಾಗಿ ಸಂತ್ರಸ್ತೆ ಮೃತದೇಹವನ್ನು ಸುಟ್ಟುಹಾಕಿದ್ದಾರೆ. ಯುವತಿ ಸಾವಿನಲ್ಲೂ ಸಹ ತನ್ನ ಘನತೆಯನ್ನು ಕಳೆದುಕೊಂಡಿದ್ದಾಳೆ ಮತ್ತು ಅನಾಥೆಯಂತೆ ಆಕೆಯನ್ನು ಸುಟ್ಟುಹಾಕಲಾಗಿದೆ" ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

- Advertisement -
- Advertisement -

ಹತ್ರಾಸ್‌ನಲ್ಲಿ ನಡೆದ ಭೀಕರ ದುರ್ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಆದಿತ್ಯಾನಾಥ್ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂತ್ರಸ್ತೆಯು ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ಮೇಲ್ಜಾತಿಯ ಪುರುಷರು ಹದಿನೈದು ದಿನಗಳ ಹಿಂದೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಚಿತ್ರಹಿಂಸೆ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ಪೊಲೀಸರು ಕೂಡಾ ಸಂತ್ರಸ್ತೆಯ ಕುಟುಂಬವನ್ನು ದೂರವಿಟ್ಟು, ಮೃತದೇಹವನ್ನು ಮಧ್ಯರಾತ್ರಿಯಲ್ಲಿ ಸುಟ್ಟುಹಾಕಿದ್ದರು. ಮೃತದೇಹ ನೀಡುವಂತೆ ಸಂತ್ರಸ್ತೆ ಕುಟುಂಬ ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿರುವ ಮತ್ತು ಅಳುತ್ತಿರುವ ಹೃದಯವಿದ್ರಾವಕ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ಈ ಘಟನೆ ದೇಶಾದ್ಯಂತ ತೀವ್ರ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ “ಹತ್ರಾಸ್‌ನ ನಿರ್ಭಯಾ ಸಾಯಲಿಲ್ಲ. ಬದಲಾಗಿ ಆಕೆ ನಿರ್ದಯಿ ಸರ್ಕಾರದಿಂದ, ಅದರ ಆಡಳಿತದಿಂದ ಮತ್ತು ಯುಪಿ ಸರ್ಕಾರದ ಅಜ್ಞಾನದಿಂದ ಕೊಲ್ಲಲ್ಪಟ್ಟಳು” ಎಂದಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ಕಾಂಗ್ರೆಸ್ಸಿನ ಅಧಿಕೃತ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಈ ಹೇಳಿಕೆಗಳನ್ನು ಅವರು ನೀಡಿದ್ದಾರೆ. ಮೊದಲು ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಸಂತ್ರಸ್ತೆಗೆ ಸಮಯೋಚಿತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.

“ಆಕೆ ಜೀವಂತವಾಗಿದ್ದಾಗ ಆಕೆಯ ಮಾತುಗಳನ್ನು ಕೇಳಿಸಿಕೊಂಡು, ಆಕೆಯನ್ನು ರಕ್ಷಿಸಿಲ್ಲ. ಮರಣದ ನಂತರವೂ, ಆಕೆಯನ್ನು ಅವರ ಕುಟುಂಬಕ್ಕೆ ಒಪ್ಪಿಸಿಲ್ಲ. ದುಖಃದಿಂದ ಅಳುವ ತಾಯಿಗೆ ತನ್ನ ಮಗಳಿಗೆ ಕೊನೆಯ ವಿದಾಯ ಹೇಳಲು ಸಹ ಅವಕಾಶ ನೀಡಲಿಲ್ಲ. ಇದು ಅತಿ ದೊಡ್ಡ ಪಾಪ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಪೊಲೀಸರು “ಬಲವಂತವಾಗಿ ಸಂತ್ರಸ್ತೆ ಮೃತದೇಹವನ್ನು ಸುಟ್ಟುಹಾಕಿದ್ದಾರೆ. ಯುವತಿ ಸಾವಿನಲ್ಲೂ ಸಹ ತನ್ನ ಘನತೆಯನ್ನು ಕಳೆದುಕೊಂಡಿದ್ದು, ಅನಾಥೆಯಂತೆ ಆಕೆಯನ್ನು ಸುಟ್ಟುಹಾಕಲಾಗಿದೆ” ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಆದಿತ್ಯನಾಥ್ ಸರ್ಕಾರದ ಅಡಿಯಲ್ಲಿ ಉತ್ತರಪ್ರದೇಶದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ವಿರುದ್ಧ ದೇಶ ಮಾತನಾಡಲಿದೆ ಎಂದು ಸೋನಿಯಾ ಗಾಂಧಿ ಹೇಳಿದರು. “ಇದು ಯಾವ ರೀತಿಯ ನ್ಯಾಯ..? ಇದು ಯಾವ ರೀತಿಯ ಸರ್ಕಾರ…? ನೀವು ಏನು ಮಾಡಿದರೂ, ದೇಶ ಸುಮ್ಮನೆ ನೋಡುತ್ತಲೇ ಇರುತ್ತದೆ ಎಂದು ಭಾವಿಸಿದ್ದೀರಿ.. ಆದರೆ ಇಲ್ಲ, ನಿಮ್ಮ ಅನ್ಯಾಯದ ವಿರುದ್ಧ ದೇಶವು ಮಾತನಾಡುತ್ತದೆ” ಎಂದಿದ್ದಾರೆ.

ಸದ್ಯ ದೇಶದಲ್ಲಿ ತೀವ್ರ ಪ್ರತಿಭಟನೆಯಲ್ಲಿ ತೊಡಗಿರುವ ವಿರೋಧ ಪಕ್ಷಗಳಲ್ಲಿ ಕಾಂಗ್ರೆಸ್ ಮೊದಲ ಸಾಲಿನಲ್ಲಿದೆ. ಮೊರಾದಾಬಾದ್, ಸಹರಾನ್ಪುರ್, ಜಲೌನ್ ಮತ್ತು ಕಾಸ್‌ಗಂಜ್ ಸೇರಿದಂತೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ವಾಲ್ಮೀಕಿ ಸಮುದಾಯ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆ ತೀವ್ರಗೊಂಡಿದ್ದು, ಸಂಜೆ 5 ರ ಸುಮಾರಿಗೆ ದೆಹಲಿಯಲ್ಲಿ ದೊಡ್ಡ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...