Homeಮುಖಪುಟಹತ್ರಾಸ್ ಪ್ರಕರಣ: ’ಯುವತಿ ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಳು’-ಸೋನಿಯಾ ಗಾಂಧಿ ಆಕ್ರೋಶ

ಹತ್ರಾಸ್ ಪ್ರಕರಣ: ’ಯುವತಿ ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಳು’-ಸೋನಿಯಾ ಗಾಂಧಿ ಆಕ್ರೋಶ

ಪೊಲೀಸರು "ಬಲವಂತವಾಗಿ ಸಂತ್ರಸ್ತೆ ಮೃತದೇಹವನ್ನು ಸುಟ್ಟುಹಾಕಿದ್ದಾರೆ. ಯುವತಿ ಸಾವಿನಲ್ಲೂ ಸಹ ತನ್ನ ಘನತೆಯನ್ನು ಕಳೆದುಕೊಂಡಿದ್ದಾಳೆ ಮತ್ತು ಅನಾಥೆಯಂತೆ ಆಕೆಯನ್ನು ಸುಟ್ಟುಹಾಕಲಾಗಿದೆ" ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

- Advertisement -
- Advertisement -

ಹತ್ರಾಸ್‌ನಲ್ಲಿ ನಡೆದ ಭೀಕರ ದುರ್ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಆದಿತ್ಯಾನಾಥ್ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂತ್ರಸ್ತೆಯು ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ಮೇಲ್ಜಾತಿಯ ಪುರುಷರು ಹದಿನೈದು ದಿನಗಳ ಹಿಂದೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಚಿತ್ರಹಿಂಸೆ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ಪೊಲೀಸರು ಕೂಡಾ ಸಂತ್ರಸ್ತೆಯ ಕುಟುಂಬವನ್ನು ದೂರವಿಟ್ಟು, ಮೃತದೇಹವನ್ನು ಮಧ್ಯರಾತ್ರಿಯಲ್ಲಿ ಸುಟ್ಟುಹಾಕಿದ್ದರು. ಮೃತದೇಹ ನೀಡುವಂತೆ ಸಂತ್ರಸ್ತೆ ಕುಟುಂಬ ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿರುವ ಮತ್ತು ಅಳುತ್ತಿರುವ ಹೃದಯವಿದ್ರಾವಕ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ಈ ಘಟನೆ ದೇಶಾದ್ಯಂತ ತೀವ್ರ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ “ಹತ್ರಾಸ್‌ನ ನಿರ್ಭಯಾ ಸಾಯಲಿಲ್ಲ. ಬದಲಾಗಿ ಆಕೆ ನಿರ್ದಯಿ ಸರ್ಕಾರದಿಂದ, ಅದರ ಆಡಳಿತದಿಂದ ಮತ್ತು ಯುಪಿ ಸರ್ಕಾರದ ಅಜ್ಞಾನದಿಂದ ಕೊಲ್ಲಲ್ಪಟ್ಟಳು” ಎಂದಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ಕಾಂಗ್ರೆಸ್ಸಿನ ಅಧಿಕೃತ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಈ ಹೇಳಿಕೆಗಳನ್ನು ಅವರು ನೀಡಿದ್ದಾರೆ. ಮೊದಲು ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಸಂತ್ರಸ್ತೆಗೆ ಸಮಯೋಚಿತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.

“ಆಕೆ ಜೀವಂತವಾಗಿದ್ದಾಗ ಆಕೆಯ ಮಾತುಗಳನ್ನು ಕೇಳಿಸಿಕೊಂಡು, ಆಕೆಯನ್ನು ರಕ್ಷಿಸಿಲ್ಲ. ಮರಣದ ನಂತರವೂ, ಆಕೆಯನ್ನು ಅವರ ಕುಟುಂಬಕ್ಕೆ ಒಪ್ಪಿಸಿಲ್ಲ. ದುಖಃದಿಂದ ಅಳುವ ತಾಯಿಗೆ ತನ್ನ ಮಗಳಿಗೆ ಕೊನೆಯ ವಿದಾಯ ಹೇಳಲು ಸಹ ಅವಕಾಶ ನೀಡಲಿಲ್ಲ. ಇದು ಅತಿ ದೊಡ್ಡ ಪಾಪ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಪೊಲೀಸರು “ಬಲವಂತವಾಗಿ ಸಂತ್ರಸ್ತೆ ಮೃತದೇಹವನ್ನು ಸುಟ್ಟುಹಾಕಿದ್ದಾರೆ. ಯುವತಿ ಸಾವಿನಲ್ಲೂ ಸಹ ತನ್ನ ಘನತೆಯನ್ನು ಕಳೆದುಕೊಂಡಿದ್ದು, ಅನಾಥೆಯಂತೆ ಆಕೆಯನ್ನು ಸುಟ್ಟುಹಾಕಲಾಗಿದೆ” ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಆದಿತ್ಯನಾಥ್ ಸರ್ಕಾರದ ಅಡಿಯಲ್ಲಿ ಉತ್ತರಪ್ರದೇಶದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ವಿರುದ್ಧ ದೇಶ ಮಾತನಾಡಲಿದೆ ಎಂದು ಸೋನಿಯಾ ಗಾಂಧಿ ಹೇಳಿದರು. “ಇದು ಯಾವ ರೀತಿಯ ನ್ಯಾಯ..? ಇದು ಯಾವ ರೀತಿಯ ಸರ್ಕಾರ…? ನೀವು ಏನು ಮಾಡಿದರೂ, ದೇಶ ಸುಮ್ಮನೆ ನೋಡುತ್ತಲೇ ಇರುತ್ತದೆ ಎಂದು ಭಾವಿಸಿದ್ದೀರಿ.. ಆದರೆ ಇಲ್ಲ, ನಿಮ್ಮ ಅನ್ಯಾಯದ ವಿರುದ್ಧ ದೇಶವು ಮಾತನಾಡುತ್ತದೆ” ಎಂದಿದ್ದಾರೆ.

ಸದ್ಯ ದೇಶದಲ್ಲಿ ತೀವ್ರ ಪ್ರತಿಭಟನೆಯಲ್ಲಿ ತೊಡಗಿರುವ ವಿರೋಧ ಪಕ್ಷಗಳಲ್ಲಿ ಕಾಂಗ್ರೆಸ್ ಮೊದಲ ಸಾಲಿನಲ್ಲಿದೆ. ಮೊರಾದಾಬಾದ್, ಸಹರಾನ್ಪುರ್, ಜಲೌನ್ ಮತ್ತು ಕಾಸ್‌ಗಂಜ್ ಸೇರಿದಂತೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ವಾಲ್ಮೀಕಿ ಸಮುದಾಯ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆ ತೀವ್ರಗೊಂಡಿದ್ದು, ಸಂಜೆ 5 ರ ಸುಮಾರಿಗೆ ದೆಹಲಿಯಲ್ಲಿ ದೊಡ್ಡ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...