Homeಮುಖಪುಟಹತ್ರಾಸ್ ಪ್ರಕರಣ: ’ಯುವತಿ ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಳು’-ಸೋನಿಯಾ ಗಾಂಧಿ ಆಕ್ರೋಶ

ಹತ್ರಾಸ್ ಪ್ರಕರಣ: ’ಯುವತಿ ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಳು’-ಸೋನಿಯಾ ಗಾಂಧಿ ಆಕ್ರೋಶ

ಪೊಲೀಸರು "ಬಲವಂತವಾಗಿ ಸಂತ್ರಸ್ತೆ ಮೃತದೇಹವನ್ನು ಸುಟ್ಟುಹಾಕಿದ್ದಾರೆ. ಯುವತಿ ಸಾವಿನಲ್ಲೂ ಸಹ ತನ್ನ ಘನತೆಯನ್ನು ಕಳೆದುಕೊಂಡಿದ್ದಾಳೆ ಮತ್ತು ಅನಾಥೆಯಂತೆ ಆಕೆಯನ್ನು ಸುಟ್ಟುಹಾಕಲಾಗಿದೆ" ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

- Advertisement -
- Advertisement -

ಹತ್ರಾಸ್‌ನಲ್ಲಿ ನಡೆದ ಭೀಕರ ದುರ್ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಆದಿತ್ಯಾನಾಥ್ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂತ್ರಸ್ತೆಯು ನಿರ್ದಯಿ ಸರ್ಕಾರದಿಂದ ಕೊಲ್ಲಲ್ಪಟ್ಟಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಲ್ಕು ಮೇಲ್ಜಾತಿಯ ಪುರುಷರು ಹದಿನೈದು ದಿನಗಳ ಹಿಂದೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ, ಚಿತ್ರಹಿಂಸೆ ನೀಡಿ ಆಕೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ಪೊಲೀಸರು ಕೂಡಾ ಸಂತ್ರಸ್ತೆಯ ಕುಟುಂಬವನ್ನು ದೂರವಿಟ್ಟು, ಮೃತದೇಹವನ್ನು ಮಧ್ಯರಾತ್ರಿಯಲ್ಲಿ ಸುಟ್ಟುಹಾಕಿದ್ದರು. ಮೃತದೇಹ ನೀಡುವಂತೆ ಸಂತ್ರಸ್ತೆ ಕುಟುಂಬ ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿರುವ ಮತ್ತು ಅಳುತ್ತಿರುವ ಹೃದಯವಿದ್ರಾವಕ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ಈ ಘಟನೆ ದೇಶಾದ್ಯಂತ ತೀವ್ರ ಪ್ರತಿಭಟನೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ “ಹತ್ರಾಸ್‌ನ ನಿರ್ಭಯಾ ಸಾಯಲಿಲ್ಲ. ಬದಲಾಗಿ ಆಕೆ ನಿರ್ದಯಿ ಸರ್ಕಾರದಿಂದ, ಅದರ ಆಡಳಿತದಿಂದ ಮತ್ತು ಯುಪಿ ಸರ್ಕಾರದ ಅಜ್ಞಾನದಿಂದ ಕೊಲ್ಲಲ್ಪಟ್ಟಳು” ಎಂದಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ ಪಕ್ಷಕ್ಕೆ ರಾಜಕೀಯ ಹಾನಿಯುಂಟುಮಾಡಿದೆ: BJP ದಲಿತ ಸಂಸದರ ಉವಾಚ

ಕಾಂಗ್ರೆಸ್ಸಿನ ಅಧಿಕೃತ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಈ ಹೇಳಿಕೆಗಳನ್ನು ಅವರು ನೀಡಿದ್ದಾರೆ. ಮೊದಲು ಈ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಸಂತ್ರಸ್ತೆಗೆ ಸಮಯೋಚಿತ ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಿದ್ದಾರೆ.

“ಆಕೆ ಜೀವಂತವಾಗಿದ್ದಾಗ ಆಕೆಯ ಮಾತುಗಳನ್ನು ಕೇಳಿಸಿಕೊಂಡು, ಆಕೆಯನ್ನು ರಕ್ಷಿಸಿಲ್ಲ. ಮರಣದ ನಂತರವೂ, ಆಕೆಯನ್ನು ಅವರ ಕುಟುಂಬಕ್ಕೆ ಒಪ್ಪಿಸಿಲ್ಲ. ದುಖಃದಿಂದ ಅಳುವ ತಾಯಿಗೆ ತನ್ನ ಮಗಳಿಗೆ ಕೊನೆಯ ವಿದಾಯ ಹೇಳಲು ಸಹ ಅವಕಾಶ ನೀಡಲಿಲ್ಲ. ಇದು ಅತಿ ದೊಡ್ಡ ಪಾಪ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಪೊಲೀಸರು “ಬಲವಂತವಾಗಿ ಸಂತ್ರಸ್ತೆ ಮೃತದೇಹವನ್ನು ಸುಟ್ಟುಹಾಕಿದ್ದಾರೆ. ಯುವತಿ ಸಾವಿನಲ್ಲೂ ಸಹ ತನ್ನ ಘನತೆಯನ್ನು ಕಳೆದುಕೊಂಡಿದ್ದು, ಅನಾಥೆಯಂತೆ ಆಕೆಯನ್ನು ಸುಟ್ಟುಹಾಕಲಾಗಿದೆ” ಎಂದು ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.

ಆದಿತ್ಯನಾಥ್ ಸರ್ಕಾರದ ಅಡಿಯಲ್ಲಿ ಉತ್ತರಪ್ರದೇಶದಲ್ಲಿ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ವಿರುದ್ಧ ದೇಶ ಮಾತನಾಡಲಿದೆ ಎಂದು ಸೋನಿಯಾ ಗಾಂಧಿ ಹೇಳಿದರು. “ಇದು ಯಾವ ರೀತಿಯ ನ್ಯಾಯ..? ಇದು ಯಾವ ರೀತಿಯ ಸರ್ಕಾರ…? ನೀವು ಏನು ಮಾಡಿದರೂ, ದೇಶ ಸುಮ್ಮನೆ ನೋಡುತ್ತಲೇ ಇರುತ್ತದೆ ಎಂದು ಭಾವಿಸಿದ್ದೀರಿ.. ಆದರೆ ಇಲ್ಲ, ನಿಮ್ಮ ಅನ್ಯಾಯದ ವಿರುದ್ಧ ದೇಶವು ಮಾತನಾಡುತ್ತದೆ” ಎಂದಿದ್ದಾರೆ.

ಸದ್ಯ ದೇಶದಲ್ಲಿ ತೀವ್ರ ಪ್ರತಿಭಟನೆಯಲ್ಲಿ ತೊಡಗಿರುವ ವಿರೋಧ ಪಕ್ಷಗಳಲ್ಲಿ ಕಾಂಗ್ರೆಸ್ ಮೊದಲ ಸಾಲಿನಲ್ಲಿದೆ. ಮೊರಾದಾಬಾದ್, ಸಹರಾನ್ಪುರ್, ಜಲೌನ್ ಮತ್ತು ಕಾಸ್‌ಗಂಜ್ ಸೇರಿದಂತೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ವಾಲ್ಮೀಕಿ ಸಮುದಾಯ ಪ್ರತಿಭಟನೆ ಮಾಡುತ್ತಿದೆ. ಪ್ರತಿಭಟನೆ ತೀವ್ರಗೊಂಡಿದ್ದು, ಸಂಜೆ 5 ರ ಸುಮಾರಿಗೆ ದೆಹಲಿಯಲ್ಲಿ ದೊಡ್ಡ ಆಂದೋಲನವನ್ನು ಸಹ ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....