Homeಅಂತರಾಷ್ಟ್ರೀಯಹತ್ರಾಸ್ ಕುರಿತು ಹೇಳಿಕೆ: ವಿಶ್ವಸಂಸ್ಥೆಯ ಭಾರತೀಯ ಅಧಿಕಾರಿ ವಿರುದ್ಧ ವಿದೇಶಾಂಗ ಸಚಿವಾಲಯ ಗರಂ

ಹತ್ರಾಸ್ ಕುರಿತು ಹೇಳಿಕೆ: ವಿಶ್ವಸಂಸ್ಥೆಯ ಭಾರತೀಯ ಅಧಿಕಾರಿ ವಿರುದ್ಧ ವಿದೇಶಾಂಗ ಸಚಿವಾಲಯ ಗರಂ

ಹಿಂದುಳಿದ ಸಾಮಾಜಿಕ ಗುಂಪುಗಳ ಮಹಿಳೆಯರು ಲಿಂಗ-ಆಧಾರಿತ ಹಿಂಸಾಚಾರದ ಹೆಚ್ಚು ಅಪಾಯವನ್ನು ಹೊಂದಿದ್ದಾರೆ ಎಂದು ವಿಶ್ವಸಂಸ್ಥೆಯ ಅಧಿಕಾರಿ ಹೇಳಿದ್ದರು.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಮತ್ತು ಬಲರಾಂಪುರ್ ಜಿಲ್ಲೆಗಳಲ್ಲಿನ ಅತ್ಯಾಚಾರ ಪ್ರಕರಣಗಳ ಬಗ್ಗೆ ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರು ನೀಡಿದ ಹೇಳಿಕೆಯನ್ನು ಭಾರತದ ವಿದೇಶಾಂಗ ಸಚಿವಾಲಯ ಟೀಕಿಸಿದೆ. ಪ್ರಕರಣಗಳ ಕುರಿತು ನಡೆಯುತ್ತಿರುವ ತನಿಖೆಯ ಮಧ್ಯೆ ಬಾಹ್ಯ ಸಂಸ್ಥೆಯ ಅನಗತ್ಯ ಪ್ರತಿಕ್ರಿಯೆಗಳನ್ನು ತಪ್ಪಿಸಬೇಕು ಎಂದು ಹೇಳಿದೆ.

ಭಾರತದಲ್ಲಿ ಮಹಿಳೆಯರ ಮೇಲಿನ ಇತ್ತೀಚಿನ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ಹೇಳಿಕೆಯನ್ನು ಭಾರತ ‘ಅನಗತ್ಯ’ ಎಂದು ಹೇಳಿದೆ.

ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ರೆನಾಟಾ ಲೋಕ್-ಡೆಸ್ಸಾಲಿಯನ್ ಅವರು ಭಾರತದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ವಿದೇಶಾಂಗ ಸಚಿವಾಲಯದಿಂದ ಈ ಅಭಿಪ್ರಾಯ ಬಂದಿದೆ.

ಲೋಕ್-ಡೆಸ್ಸಾಲಿಯನ್ ಅವರು ಹತ್ರಾಸ್ ಮತ್ತು ಬಲರಾಂಪುರ್ ಪ್ರಕರಣಗಳು ಉಲ್ಲೇಖಿಸಿ, “ಹಿಂದುಳಿದ ಸಾಮಾಜಿಕ ಗುಂಪುಗಳ ಮಹಿಳೆಯರು ಲಿಂಗ-ಆಧಾರಿತ ಹಿಂಸಾಚಾರದ ಹೆಚ್ಚು ಅಪಾಯವನ್ನು ಹೊಂದಿದ್ದಾರೆ ಎಂಬುದನ್ನು ನೆನಪಿಸುತ್ತದೆ” ಎಂದು ಹೇಳಿದ್ದನ್ನು ಪಿಟಿಐ ವರದಿ ಮಾಡಿತ್ತು.

ಇದನ್ನೂ ಓದಿ: ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ

’ಮಹಿಳೆಯರ ಮೇಲಿನ ಇತ್ತೀಚಿನ ಕೆಲವು ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ಕೆಲವು ಅನಗತ್ಯ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. “ಭಾರತದ ಸರ್ಕಾರ ಈ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ತಿಳಿದಿರಬೇಕು’ ಎಂದು ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ಅನುರಾಗ್ ಶ್ರೀವಾಸ್ತವ ಟ್ವೀಟ್ ಮಾಡಿದ್ದಾರೆ.

ಪ್ರಕರಣಗಳ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವುದನ್ನು ತಡೆಯುವಂತೆ ಭಾರತದ ವಿದೇಶಾಂಗ ಸಚಿವಾಲಯ ಬಾಹ್ಯ ಸಂಸ್ಥೆಗಳನ್ನು ಕೇಳಿದೆ.

“ತನಿಖಾ ಪ್ರಕ್ರಿಯೆಯು ಇನ್ನೂ ನಡೆಯುತ್ತಿರುವುದರಿಂದ, ಬಾಹ್ಯ ಏಜೆನ್ಸಿಯ ಯಾವುದೇ ಅನಗತ್ಯ ಕಾಮೆಂಟ್‌ಗಳನ್ನು ತಪ್ಪಿಸಬೇಕಾಗಿದೆ. ಭಾರತ ಸಂವಿಧಾನವು ಭಾರತದ ಎಲ್ಲ ನಾಗರಿಕರಿಗೆ ಸಮಾನತೆಯನ್ನು ಖಾತರಿಪಡಿಸುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಮ್ಮ ಸಮಾಜದ ಎಲ್ಲಾ ವರ್ಗದವರಿಗೆ ನ್ಯಾಯ ಒದಗಿಸುವ ಸಮಯ-ಪರೀಕ್ಷಿತ ದಾಖಲೆ ನಮ್ಮಲ್ಲಿದೆ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ.

ಹತ್ರಾಸ್‌ನ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ  ಪ್ರಕರಣವು ದೇಶದಲ್ಲಿ ಅಪಾರ ಆಕ್ರೋಶಕ್ಕೆ ನಾಂದಿ ಹಾಡಿತು, ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆದಿವೆ, ಬಂಧಿತ ನಾಲ್ವರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಲಾಗುತ್ತಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರದ ಕೆಲವು ದಿನಗಳ ನಂತರ, ಉತ್ತರಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಇಬ್ಬರು ಪುರುಷರಿಂದ ಅತ್ಯಾಚಾರಕ್ಕೊಳಗಾಗಿದ್ದ ಮತ್ತೊಬ್ಬ ದಲಿತ ಯುವತಿ ಸಾವನ್ನಪ್ಪಿದ್ದಳು.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...