Homeಅಂತರಾಷ್ಟ್ರೀಯಹತ್ರಾಸ್ ಕುರಿತು ಹೇಳಿಕೆ: ವಿಶ್ವಸಂಸ್ಥೆಯ ಭಾರತೀಯ ಅಧಿಕಾರಿ ವಿರುದ್ಧ ವಿದೇಶಾಂಗ ಸಚಿವಾಲಯ ಗರಂ

ಹತ್ರಾಸ್ ಕುರಿತು ಹೇಳಿಕೆ: ವಿಶ್ವಸಂಸ್ಥೆಯ ಭಾರತೀಯ ಅಧಿಕಾರಿ ವಿರುದ್ಧ ವಿದೇಶಾಂಗ ಸಚಿವಾಲಯ ಗರಂ

ಹಿಂದುಳಿದ ಸಾಮಾಜಿಕ ಗುಂಪುಗಳ ಮಹಿಳೆಯರು ಲಿಂಗ-ಆಧಾರಿತ ಹಿಂಸಾಚಾರದ ಹೆಚ್ಚು ಅಪಾಯವನ್ನು ಹೊಂದಿದ್ದಾರೆ ಎಂದು ವಿಶ್ವಸಂಸ್ಥೆಯ ಅಧಿಕಾರಿ ಹೇಳಿದ್ದರು.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಮತ್ತು ಬಲರಾಂಪುರ್ ಜಿಲ್ಲೆಗಳಲ್ಲಿನ ಅತ್ಯಾಚಾರ ಪ್ರಕರಣಗಳ ಬಗ್ಗೆ ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರು ನೀಡಿದ ಹೇಳಿಕೆಯನ್ನು ಭಾರತದ ವಿದೇಶಾಂಗ ಸಚಿವಾಲಯ ಟೀಕಿಸಿದೆ. ಪ್ರಕರಣಗಳ ಕುರಿತು ನಡೆಯುತ್ತಿರುವ ತನಿಖೆಯ ಮಧ್ಯೆ ಬಾಹ್ಯ ಸಂಸ್ಥೆಯ ಅನಗತ್ಯ ಪ್ರತಿಕ್ರಿಯೆಗಳನ್ನು ತಪ್ಪಿಸಬೇಕು ಎಂದು ಹೇಳಿದೆ.

ಭಾರತದಲ್ಲಿ ಮಹಿಳೆಯರ ಮೇಲಿನ ಇತ್ತೀಚಿನ ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ಹೇಳಿಕೆಯನ್ನು ಭಾರತ ‘ಅನಗತ್ಯ’ ಎಂದು ಹೇಳಿದೆ.

ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ರೆನಾಟಾ ಲೋಕ್-ಡೆಸ್ಸಾಲಿಯನ್ ಅವರು ಭಾರತದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಹೇಳಿಕೆಗೆ ಪ್ರತಿಕ್ರಿಯೆಯಾಗಿ ವಿದೇಶಾಂಗ ಸಚಿವಾಲಯದಿಂದ ಈ ಅಭಿಪ್ರಾಯ ಬಂದಿದೆ.

ಲೋಕ್-ಡೆಸ್ಸಾಲಿಯನ್ ಅವರು ಹತ್ರಾಸ್ ಮತ್ತು ಬಲರಾಂಪುರ್ ಪ್ರಕರಣಗಳು ಉಲ್ಲೇಖಿಸಿ, “ಹಿಂದುಳಿದ ಸಾಮಾಜಿಕ ಗುಂಪುಗಳ ಮಹಿಳೆಯರು ಲಿಂಗ-ಆಧಾರಿತ ಹಿಂಸಾಚಾರದ ಹೆಚ್ಚು ಅಪಾಯವನ್ನು ಹೊಂದಿದ್ದಾರೆ ಎಂಬುದನ್ನು ನೆನಪಿಸುತ್ತದೆ” ಎಂದು ಹೇಳಿದ್ದನ್ನು ಪಿಟಿಐ ವರದಿ ಮಾಡಿತ್ತು.

ಇದನ್ನೂ ಓದಿ: ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ

’ಮಹಿಳೆಯರ ಮೇಲಿನ ಇತ್ತೀಚಿನ ಕೆಲವು ಹಿಂಸಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ಕೆಲವು ಅನಗತ್ಯ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ. “ಭಾರತದ ಸರ್ಕಾರ ಈ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಯುಎನ್ ರೆಸಿಡೆಂಟ್ ಕೋಆರ್ಡಿನೇಟರ್ ತಿಳಿದಿರಬೇಕು’ ಎಂದು ವಿದೇಶಾಂಗ ಸಚಿವಾಲಯದ (ಎಂಇಎ) ವಕ್ತಾರ ಅನುರಾಗ್ ಶ್ರೀವಾಸ್ತವ ಟ್ವೀಟ್ ಮಾಡಿದ್ದಾರೆ.

ಪ್ರಕರಣಗಳ ಕುರಿತು ವಿಚಾರಣೆ ನಡೆಯುತ್ತಿರುವುದರಿಂದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವುದನ್ನು ತಡೆಯುವಂತೆ ಭಾರತದ ವಿದೇಶಾಂಗ ಸಚಿವಾಲಯ ಬಾಹ್ಯ ಸಂಸ್ಥೆಗಳನ್ನು ಕೇಳಿದೆ.

“ತನಿಖಾ ಪ್ರಕ್ರಿಯೆಯು ಇನ್ನೂ ನಡೆಯುತ್ತಿರುವುದರಿಂದ, ಬಾಹ್ಯ ಏಜೆನ್ಸಿಯ ಯಾವುದೇ ಅನಗತ್ಯ ಕಾಮೆಂಟ್‌ಗಳನ್ನು ತಪ್ಪಿಸಬೇಕಾಗಿದೆ. ಭಾರತ ಸಂವಿಧಾನವು ಭಾರತದ ಎಲ್ಲ ನಾಗರಿಕರಿಗೆ ಸಮಾನತೆಯನ್ನು ಖಾತರಿಪಡಿಸುತ್ತದೆ. ಪ್ರಜಾಪ್ರಭುತ್ವ ರಾಷ್ಟ್ರವಾಗಿ ನಮ್ಮ ಸಮಾಜದ ಎಲ್ಲಾ ವರ್ಗದವರಿಗೆ ನ್ಯಾಯ ಒದಗಿಸುವ ಸಮಯ-ಪರೀಕ್ಷಿತ ದಾಖಲೆ ನಮ್ಮಲ್ಲಿದೆ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ.

ಹತ್ರಾಸ್‌ನ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ  ಪ್ರಕರಣವು ದೇಶದಲ್ಲಿ ಅಪಾರ ಆಕ್ರೋಶಕ್ಕೆ ನಾಂದಿ ಹಾಡಿತು, ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆದಿವೆ, ಬಂಧಿತ ನಾಲ್ವರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಲಾಗುತ್ತಿದೆ.

ಹತ್ರಾಸ್ ಸಾಮೂಹಿಕ ಅತ್ಯಾಚಾರದ ಕೆಲವು ದಿನಗಳ ನಂತರ, ಉತ್ತರಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಇಬ್ಬರು ಪುರುಷರಿಂದ ಅತ್ಯಾಚಾರಕ್ಕೊಳಗಾಗಿದ್ದ ಮತ್ತೊಬ್ಬ ದಲಿತ ಯುವತಿ ಸಾವನ್ನಪ್ಪಿದ್ದಳು.


ಇದನ್ನೂ ಓದಿ: ಸುಶಾಂತ್ ಸಿಂಗ್ ಕೊಲೆಯಾಗಿಲ್ಲ; ಇದು ಆತ್ಮಹತ್ಯೆ: ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...