Homeಮುಖಪುಟಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

ಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

- Advertisement -
- Advertisement -

2020 ರ ಅಕ್ಟೋಬರ್‌ನಲ್ಲಿ ನಡೆದ ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ದೌರ್ಜನ್ಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ 10 ಮಹಿಳಾ ನಾಯಕಿಯರಿಗೆ ಉತ್ತರ ಪ್ರದೇಶ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

ಉತ್ತರ ಪ್ರದೇಶದ ಗ್ರಾಮದಲ್ಲಿ ನಾಲ್ಕು ‘ಮೇಲ್ಜಾತಿಯ’ ಠಾಕೂರ್ ಪುರುಷರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡು 19 ವರ್ಷದ ದಲಿತ ಮಹಿಳೆ ಸಾವನ್ನಪ್ಪಿದ ಘಟನೆಯ ಬಗ್ಗೆ ಸರ್ಕಾರದ ಹೊಣೆಗಾರಿಕೆ ಮತ್ತು ನ್ಯಾಯಯುತ ತನಿಖೆಗಾಗಿ ಈ ನಾಯಕಿಯರು ಧ್ವನಿ ಎತ್ತಿದ್ದರು.

ನೋಟಿಸ್ ಸ್ವೀಕರಿಸಿದವರಲ್ಲಿ ಉಜ್ಮಾ ಪರ್ವೀನ್, ಸುಮಯ್ಯ ರಾಣಾ, ಮಧು ಗರ್ಗ್ ಮತ್ತು ಮೀನಾ ಸಿಂಗ್ ಅವರಂತಹ ನಾಯಕಿಯರು ಸೇರಿದ್ದಾರೆ. ಅವರು 2019 ರಲ್ಲಿ ಲಖನೌದಾದ್ಯಂತ ನಡೆದ ಸಿಎಎ ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

2020 ರ ಅಕ್ಟೋಬರ್ 8 ರಂದು ಲಕ್ನೋದ ಗೋಮತಿ ನಗರದ ‘1090 ಕ್ರಾಸಿಂಗ್’ ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ನೋಟಿಸ್ ಜಾರಿ ಮಾಡಲಾಗಿದೆ. ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ದಿ ವೈರ್‌ನೊಂದಿಗೆ ಮಾತನಾಡಿದ ಪರ್ವೀನ್, ರಾಣಾ ಮತ್ತು ಸಿಂಗ್ ಎಲ್ಲರೂ ನೋಟಿಸ್ ಬಂದಿದ್ದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ. ಸಿಎಎ ವಿರೋಧಿ ಚಳವಳಿಯಲ್ಲಿ ಭಾಗವಹಿಸಿದ್ದ ಪರ್ವೀನ್ ಅವರಿಗೆ ಮಧ್ಯ ಲಖನೌದ ಗೌತಂಪಳ್ಳಿ ಪೊಲೀಸ್ ಠಾಣೆಯಿಂದ ಕರೆ ಬಂದಿದೆ.

ಸಿಆರ್‌ಪಿಸಿಯ ಸೆಕ್ಷನ್ 41 (ಎ) ಅಡಿಯಲ್ಲಿ ಪೊಲೀಸರು ತನ್ನನ್ನು ಕರೆಸಿಕೊಂಡು ಹತ್ರಾಸ್ ಘಟನೆಯ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ಅವರು ಹೇಳಿದರು. ಸೆಕ್ಷನ್ 188 (ಸಾರ್ವಜನಿಕ ಸೇವಕರಿಗೆ ಅಸಹಕಾರ), 145 (ಕಾನೂನುಬಾಹಿರ ಗುಂಪುಗೂಡುವಿಕೆ ) ಮತ್ತು 353 (ಸಾರ್ವಜನಿಕ ಸೇವಕರನ್ನು ತಡೆಯಲು ಹಲ್ಲೆ) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ಪ್ರತಿಭಟನೆಯ ದಿನದಂದು, ಲಕ್ನೋ ಪೊಲೀಸರು ನನ್ನನ್ನು ರಸ್ತೆಯ ಮೂಲಕ ಎಳೆದೊಯ್ದರು. ಪೊಲೀಸರು ನನ್ನನ್ನು ಆರು ಗಂಟೆಗಳ ಕಾಲ ವಶಕ್ಕೆ ಪಡೆದರು. ಪೊಲೀಸರು ನನ್ನನ್ನು ಎಳೆದೊಯ್ಯುವ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಲಭ್ಯವಿದೆ” ಎಂದು ಪರ್ವೀನ್ ಹೇಳಿದ್ದಾರೆ. ಹಿರಿಯ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಮತ್ತು ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘದ (ಎಐಡಿಡಬ್ಲ್ಯೂಎ) ಹಿರಿಯ ಸದಸ್ಯೆ ಮಧು ಗರ್ಗ್ ಕೂಡ ಇದೇ ರೀತಿಯ ನೋಟಿಸ್ ಸ್ವೀಕರಿಸಿದ್ದಾರೆ. ಇನ್‌ಸ್ಪೆಕ್ಟರ್ ಮಟ್ಟದ ಪೊಲೀಸ್ ಸಿಬ್ಬಂದಿ ತನ್ನ ಕಚೇರಿಗೆ ಬಂದು ವಿಚಾರಣೆ ಮಾಡಿದರು ಎಂದು ಗರ್ಗ್ ದಿ ವೈರ್‌ಗೆ ತಿಳಿಸಿದ್ದಾರೆ, 30 ನಿಮಿಷಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಅವರು ಹೇಳಿದರು.

ಗರ್ಗ್ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ತೀವ್ರ ವಿಮರ್ಶಕರಾಗಿದ್ದಾರೆ, ಮಹಿಳೆಯರ ಹಕ್ಕುಗಳಿಗಾಗಿ ಸಕ್ರಿಯ ಪ್ರಚಾರಕರಾಗಿದ್ದಾರೆ ಮತ್ತು ಕಳೆದ ಮೂರು ದಶಕಗಳಲ್ಲಿ ಅನೇಕ ಚಳುವಳಿಗಳಿಗೆ ಕಾರಣರಾಗಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಅವರು ಕೂಡ ಗಮನ ಸೆಳೆದ ವ್ಯಕ್ತಿಯಾಗಿದ್ದರು.

ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘದ (ಎಐಪಿಡಬ್ಲ್ಯೂಎ) ಮೀನಾ ಸಿಂಗ್ ಕೂಡ ಪೊಲೀಸರ ಮುಂದೆ ಹಾಜರಾಗಲು ಕರೆ ಸ್ವೀಕರಿಸಿದ್ದಾರೆ.. ಆದರೆ ಈವರೆಗೆ ನೋಟಿಸ್‌ನ ಭೌತಿಕ ಪ್ರತಿಯನ್ನು ಪೊಲೀಸರು ಕಳುಹಿಸದ ಕಾರಣ ಅವರು ತನ್ನ ಹೇಳಿಕೆಯನ್ನು ನೋಂದಾಯಿಸಲು ಪೊಲೀಸ್ ಠಾಣೆಗೆ ಭೇಟಿ ನೀಡಿಲ್ಲ. “ಪೊಲೀಸರು ನನಗೆ ಕಾನೂನು ನೋಟೀಸ್ ಕಳುಹಿಸುವವರೆಗೆ ನಾನು ಅಲ್ಲಿಗೆ ಹೋಗುವುದಿಲ್ಲ” ಎಂದು ಅವರು ಹೇಳಿದರು.

ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಖ್ಯಾತ ಉರ್ದು ಕವಿ ಮುನಾವ್ವರ್ ರಾಣಾ ಅವರ ಪುತ್ರಿಯರಾದ ಸುಮಯ್ಯ ರಾಣಾ ಮತ್ತು ಫೌಜಿಯಾ ರಾಣಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

188, 145, ಮತ್ತು 353 ಸೆಕ್ಷನ್‌ಗಳನ್ನು ಹೊರತುಪಡಿಸಿ, ಎಲ್ಲಾ ಕಾರ್ಯಕರ್ತರ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ, 1897, ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 56 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

2020 ರ ಡಿಸೆಂಬರ್ 29 ರಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕೆಲವೇ ದಿನಗಳ ಮೊದಲು ಸುಮಯ್ಯ ರಾಣಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ನವೆಂಬರ್‌ನಲ್ಲಿ, ಸರ್ಕಾರದ ನೀತಿಗಳನ್ನು ವಿರೋಧಿಸಿದರು ಮತ್ತು ಸಾರ್ವಜನಿಕ ಆಕ್ರೋಶವನ್ನು ಹರಡಿದರು ಎಂದು ಕೈಸರ್ಬಾಗ್ ಪೊಲೀಸರು ಆರೋಪಿಸಿ ಅವರಿಗೆ ನೋಟಿಸ್ ಕಳುಹಿಸಿದ್ದರು. ಸಿಆರ್‌ಪಿಸಿಯ ಸೆಕ್ಷನ್ 107/116 ರ ಅಡಿಯಲ್ಲಿ ನೋಟಿಸ್ ಕಳುಹಿಸಲಾಗಿದೆ.

ಬಾಂಡ್ ತುಂಬಲು ಕೈಸರ್ಬಾಗ್ ಕೊಟ್ವಾಲಿಯಲ್ಲಿರುವ ಅವರ ಕಚೇರಿಯಲ್ಲಿ ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದೇನೆ ಎಂದು ರಾಣಾ ಹೇಳಿದ್ದಾರೆ. “ನಾನು ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಮೌನವಾಗಿ ಕುಳಿತುಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಈಗ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರರಾಗಿರುವ ರಾಣಾ, ಬಿಜೆಪಿ ಸರ್ಕಾರವು “ಎಲ್ಲಾ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಬಯಸಿದೆ ಆದರೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಇದು ಅಸಾಧ್ಯ, ಭಾರತದ ಸಂವಿಧಾನವು ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ನೀಡಿದೆ” ಎಂದು ಹೇಳಿದರು.

ಘಂಟಾ ಘರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ರಾಣಾ ಕಾಣಿಸಿಕೊಂಡಿದ್ದರು ಮತ್ತು ಸಿಎಎ ಕುರಿತು ಭಾಷಣ ಮಾಡಲು ಇತರ ಪಟ್ಟಣಗಳಿಗೆ ಭೇಟಿ ನೀಡಿದ್ದರು. ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಅವರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.
ಲಕ್ನೋದಲ್ಲಿ ದಾಖಲಾದ ಸುಮಾರು 7,000 ಪ್ರಕರಣಗಳ ಬಗ್ಗೆ ಯುಪಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾ ಅಧಿಕಾರಿ ಸಂತೋಷ್ ಕುಮಾರ್ ಗೌಡ್ ಮಾತನಾಡಿ “10 ಮಹಿಳೆಯರ ವಿರುದ್ಧ ಪ್ರಕರಣಗಳು ದಾಖಲಾಗಿವೆ, ಮತ್ತು ಈಗ ಪೊಲೀಸ್ ಸಿಬ್ಬಂದಿ ಅವರನ್ನು ಕರೆದು ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ” ಎಂದು ಹೇಳಿದರು.

ಸುಮಯ್ಯ ರಾಣಾ ಅವರ ನೇತೃತ್ವದಲ್ಲಿ 30 ರಿಂದ 35 ಮಹಿಳೆಯರ ಗುಂಪು “ಸರ್ಕಾರ ವಿರೋಧಿ ಮೆರವಣಿಗೆ” ನಡೆಸಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ಉಲ್ಲಂಘಿಸಿದೆ ಎಂದು ಯುಪಿ ಪೊಲೀಸರು ತಮ್ಮ ವರದಿಯಲ್ಲಿ ಹೇಳಿಕೊಂಡಿದ್ದಾರೆ,.

ಹುಸೇನಾಬಾದ್‌ನ ಐತಿಹಾಸಿಕ ಘಂಟಾ ಘರ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆಸಿದ ನಂತರ ಲಖನೌದ ಠಾಕೂರ್‌ಗಂಜ್ ಪೊಲೀಸ್ ಠಾಣೆಯಲ್ಲಿ 300 ಪ್ರತಿಭಟನಾಕಾರರ ವಿರುದ್ಧ, ಹೆಚ್ಚಾಗಿ ಮಹಿಳೆಯರ ವಿರುದ್ಧ ಸುಮಾರು 16 ಎಫ್‌ಐಆರ್ ದಾಖಲಿಸಲಾಗಿದೆ. ಸಾಂಕ್ರಾಮಿಕ ರೋಗದ ನಡುವೆಯೂ ಪ್ರತಿಭಟನಾ ನಿರತ ಮಹಿಳೆಯರು ಮಾಸ್ಕ್ ಧರಿಸಿರಲಿಲ್ಲ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಗಲಾಟೆ ಮಾಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...