Homeಮುಖಪುಟಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

ಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

- Advertisement -
- Advertisement -

2020 ರ ಅಕ್ಟೋಬರ್‌ನಲ್ಲಿ ನಡೆದ ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ದೌರ್ಜನ್ಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ 10 ಮಹಿಳಾ ನಾಯಕಿಯರಿಗೆ ಉತ್ತರ ಪ್ರದೇಶ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

ಉತ್ತರ ಪ್ರದೇಶದ ಗ್ರಾಮದಲ್ಲಿ ನಾಲ್ಕು ‘ಮೇಲ್ಜಾತಿಯ’ ಠಾಕೂರ್ ಪುರುಷರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡು 19 ವರ್ಷದ ದಲಿತ ಮಹಿಳೆ ಸಾವನ್ನಪ್ಪಿದ ಘಟನೆಯ ಬಗ್ಗೆ ಸರ್ಕಾರದ ಹೊಣೆಗಾರಿಕೆ ಮತ್ತು ನ್ಯಾಯಯುತ ತನಿಖೆಗಾಗಿ ಈ ನಾಯಕಿಯರು ಧ್ವನಿ ಎತ್ತಿದ್ದರು.

ನೋಟಿಸ್ ಸ್ವೀಕರಿಸಿದವರಲ್ಲಿ ಉಜ್ಮಾ ಪರ್ವೀನ್, ಸುಮಯ್ಯ ರಾಣಾ, ಮಧು ಗರ್ಗ್ ಮತ್ತು ಮೀನಾ ಸಿಂಗ್ ಅವರಂತಹ ನಾಯಕಿಯರು ಸೇರಿದ್ದಾರೆ. ಅವರು 2019 ರಲ್ಲಿ ಲಖನೌದಾದ್ಯಂತ ನಡೆದ ಸಿಎಎ ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

2020 ರ ಅಕ್ಟೋಬರ್ 8 ರಂದು ಲಕ್ನೋದ ಗೋಮತಿ ನಗರದ ‘1090 ಕ್ರಾಸಿಂಗ್’ ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ನೋಟಿಸ್ ಜಾರಿ ಮಾಡಲಾಗಿದೆ. ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ದಿ ವೈರ್‌ನೊಂದಿಗೆ ಮಾತನಾಡಿದ ಪರ್ವೀನ್, ರಾಣಾ ಮತ್ತು ಸಿಂಗ್ ಎಲ್ಲರೂ ನೋಟಿಸ್ ಬಂದಿದ್ದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ. ಸಿಎಎ ವಿರೋಧಿ ಚಳವಳಿಯಲ್ಲಿ ಭಾಗವಹಿಸಿದ್ದ ಪರ್ವೀನ್ ಅವರಿಗೆ ಮಧ್ಯ ಲಖನೌದ ಗೌತಂಪಳ್ಳಿ ಪೊಲೀಸ್ ಠಾಣೆಯಿಂದ ಕರೆ ಬಂದಿದೆ.

ಸಿಆರ್‌ಪಿಸಿಯ ಸೆಕ್ಷನ್ 41 (ಎ) ಅಡಿಯಲ್ಲಿ ಪೊಲೀಸರು ತನ್ನನ್ನು ಕರೆಸಿಕೊಂಡು ಹತ್ರಾಸ್ ಘಟನೆಯ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ಅವರು ಹೇಳಿದರು. ಸೆಕ್ಷನ್ 188 (ಸಾರ್ವಜನಿಕ ಸೇವಕರಿಗೆ ಅಸಹಕಾರ), 145 (ಕಾನೂನುಬಾಹಿರ ಗುಂಪುಗೂಡುವಿಕೆ ) ಮತ್ತು 353 (ಸಾರ್ವಜನಿಕ ಸೇವಕರನ್ನು ತಡೆಯಲು ಹಲ್ಲೆ) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ಪ್ರತಿಭಟನೆಯ ದಿನದಂದು, ಲಕ್ನೋ ಪೊಲೀಸರು ನನ್ನನ್ನು ರಸ್ತೆಯ ಮೂಲಕ ಎಳೆದೊಯ್ದರು. ಪೊಲೀಸರು ನನ್ನನ್ನು ಆರು ಗಂಟೆಗಳ ಕಾಲ ವಶಕ್ಕೆ ಪಡೆದರು. ಪೊಲೀಸರು ನನ್ನನ್ನು ಎಳೆದೊಯ್ಯುವ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಲಭ್ಯವಿದೆ” ಎಂದು ಪರ್ವೀನ್ ಹೇಳಿದ್ದಾರೆ. ಹಿರಿಯ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಮತ್ತು ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘದ (ಎಐಡಿಡಬ್ಲ್ಯೂಎ) ಹಿರಿಯ ಸದಸ್ಯೆ ಮಧು ಗರ್ಗ್ ಕೂಡ ಇದೇ ರೀತಿಯ ನೋಟಿಸ್ ಸ್ವೀಕರಿಸಿದ್ದಾರೆ. ಇನ್‌ಸ್ಪೆಕ್ಟರ್ ಮಟ್ಟದ ಪೊಲೀಸ್ ಸಿಬ್ಬಂದಿ ತನ್ನ ಕಚೇರಿಗೆ ಬಂದು ವಿಚಾರಣೆ ಮಾಡಿದರು ಎಂದು ಗರ್ಗ್ ದಿ ವೈರ್‌ಗೆ ತಿಳಿಸಿದ್ದಾರೆ, 30 ನಿಮಿಷಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಅವರು ಹೇಳಿದರು.

ಗರ್ಗ್ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ತೀವ್ರ ವಿಮರ್ಶಕರಾಗಿದ್ದಾರೆ, ಮಹಿಳೆಯರ ಹಕ್ಕುಗಳಿಗಾಗಿ ಸಕ್ರಿಯ ಪ್ರಚಾರಕರಾಗಿದ್ದಾರೆ ಮತ್ತು ಕಳೆದ ಮೂರು ದಶಕಗಳಲ್ಲಿ ಅನೇಕ ಚಳುವಳಿಗಳಿಗೆ ಕಾರಣರಾಗಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಅವರು ಕೂಡ ಗಮನ ಸೆಳೆದ ವ್ಯಕ್ತಿಯಾಗಿದ್ದರು.

ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘದ (ಎಐಪಿಡಬ್ಲ್ಯೂಎ) ಮೀನಾ ಸಿಂಗ್ ಕೂಡ ಪೊಲೀಸರ ಮುಂದೆ ಹಾಜರಾಗಲು ಕರೆ ಸ್ವೀಕರಿಸಿದ್ದಾರೆ.. ಆದರೆ ಈವರೆಗೆ ನೋಟಿಸ್‌ನ ಭೌತಿಕ ಪ್ರತಿಯನ್ನು ಪೊಲೀಸರು ಕಳುಹಿಸದ ಕಾರಣ ಅವರು ತನ್ನ ಹೇಳಿಕೆಯನ್ನು ನೋಂದಾಯಿಸಲು ಪೊಲೀಸ್ ಠಾಣೆಗೆ ಭೇಟಿ ನೀಡಿಲ್ಲ. “ಪೊಲೀಸರು ನನಗೆ ಕಾನೂನು ನೋಟೀಸ್ ಕಳುಹಿಸುವವರೆಗೆ ನಾನು ಅಲ್ಲಿಗೆ ಹೋಗುವುದಿಲ್ಲ” ಎಂದು ಅವರು ಹೇಳಿದರು.

ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಖ್ಯಾತ ಉರ್ದು ಕವಿ ಮುನಾವ್ವರ್ ರಾಣಾ ಅವರ ಪುತ್ರಿಯರಾದ ಸುಮಯ್ಯ ರಾಣಾ ಮತ್ತು ಫೌಜಿಯಾ ರಾಣಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

188, 145, ಮತ್ತು 353 ಸೆಕ್ಷನ್‌ಗಳನ್ನು ಹೊರತುಪಡಿಸಿ, ಎಲ್ಲಾ ಕಾರ್ಯಕರ್ತರ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ, 1897, ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 56 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

2020 ರ ಡಿಸೆಂಬರ್ 29 ರಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕೆಲವೇ ದಿನಗಳ ಮೊದಲು ಸುಮಯ್ಯ ರಾಣಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ನವೆಂಬರ್‌ನಲ್ಲಿ, ಸರ್ಕಾರದ ನೀತಿಗಳನ್ನು ವಿರೋಧಿಸಿದರು ಮತ್ತು ಸಾರ್ವಜನಿಕ ಆಕ್ರೋಶವನ್ನು ಹರಡಿದರು ಎಂದು ಕೈಸರ್ಬಾಗ್ ಪೊಲೀಸರು ಆರೋಪಿಸಿ ಅವರಿಗೆ ನೋಟಿಸ್ ಕಳುಹಿಸಿದ್ದರು. ಸಿಆರ್‌ಪಿಸಿಯ ಸೆಕ್ಷನ್ 107/116 ರ ಅಡಿಯಲ್ಲಿ ನೋಟಿಸ್ ಕಳುಹಿಸಲಾಗಿದೆ.

ಬಾಂಡ್ ತುಂಬಲು ಕೈಸರ್ಬಾಗ್ ಕೊಟ್ವಾಲಿಯಲ್ಲಿರುವ ಅವರ ಕಚೇರಿಯಲ್ಲಿ ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದೇನೆ ಎಂದು ರಾಣಾ ಹೇಳಿದ್ದಾರೆ. “ನಾನು ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಮೌನವಾಗಿ ಕುಳಿತುಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಈಗ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರರಾಗಿರುವ ರಾಣಾ, ಬಿಜೆಪಿ ಸರ್ಕಾರವು “ಎಲ್ಲಾ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಬಯಸಿದೆ ಆದರೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಇದು ಅಸಾಧ್ಯ, ಭಾರತದ ಸಂವಿಧಾನವು ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ನೀಡಿದೆ” ಎಂದು ಹೇಳಿದರು.

ಘಂಟಾ ಘರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ರಾಣಾ ಕಾಣಿಸಿಕೊಂಡಿದ್ದರು ಮತ್ತು ಸಿಎಎ ಕುರಿತು ಭಾಷಣ ಮಾಡಲು ಇತರ ಪಟ್ಟಣಗಳಿಗೆ ಭೇಟಿ ನೀಡಿದ್ದರು. ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಅವರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.
ಲಕ್ನೋದಲ್ಲಿ ದಾಖಲಾದ ಸುಮಾರು 7,000 ಪ್ರಕರಣಗಳ ಬಗ್ಗೆ ಯುಪಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾ ಅಧಿಕಾರಿ ಸಂತೋಷ್ ಕುಮಾರ್ ಗೌಡ್ ಮಾತನಾಡಿ “10 ಮಹಿಳೆಯರ ವಿರುದ್ಧ ಪ್ರಕರಣಗಳು ದಾಖಲಾಗಿವೆ, ಮತ್ತು ಈಗ ಪೊಲೀಸ್ ಸಿಬ್ಬಂದಿ ಅವರನ್ನು ಕರೆದು ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ” ಎಂದು ಹೇಳಿದರು.

ಸುಮಯ್ಯ ರಾಣಾ ಅವರ ನೇತೃತ್ವದಲ್ಲಿ 30 ರಿಂದ 35 ಮಹಿಳೆಯರ ಗುಂಪು “ಸರ್ಕಾರ ವಿರೋಧಿ ಮೆರವಣಿಗೆ” ನಡೆಸಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ಉಲ್ಲಂಘಿಸಿದೆ ಎಂದು ಯುಪಿ ಪೊಲೀಸರು ತಮ್ಮ ವರದಿಯಲ್ಲಿ ಹೇಳಿಕೊಂಡಿದ್ದಾರೆ,.

ಹುಸೇನಾಬಾದ್‌ನ ಐತಿಹಾಸಿಕ ಘಂಟಾ ಘರ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆಸಿದ ನಂತರ ಲಖನೌದ ಠಾಕೂರ್‌ಗಂಜ್ ಪೊಲೀಸ್ ಠಾಣೆಯಲ್ಲಿ 300 ಪ್ರತಿಭಟನಾಕಾರರ ವಿರುದ್ಧ, ಹೆಚ್ಚಾಗಿ ಮಹಿಳೆಯರ ವಿರುದ್ಧ ಸುಮಾರು 16 ಎಫ್‌ಐಆರ್ ದಾಖಲಿಸಲಾಗಿದೆ. ಸಾಂಕ್ರಾಮಿಕ ರೋಗದ ನಡುವೆಯೂ ಪ್ರತಿಭಟನಾ ನಿರತ ಮಹಿಳೆಯರು ಮಾಸ್ಕ್ ಧರಿಸಿರಲಿಲ್ಲ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಗಲಾಟೆ ಮಾಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....