Homeಮುಖಪುಟಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

ಹತ್ರಾಸ್ ಪ್ರಕರಣ: ಸಿಎಎ ವಿರೋಧಿ ಮಹಿಳಾ ನಾಯಕಿಯರಿಗೆ ನೋಟಿಸ್!

- Advertisement -
- Advertisement -

2020 ರ ಅಕ್ಟೋಬರ್‌ನಲ್ಲಿ ನಡೆದ ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ದೌರ್ಜನ್ಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ 10 ಮಹಿಳಾ ನಾಯಕಿಯರಿಗೆ ಉತ್ತರ ಪ್ರದೇಶ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.

ಉತ್ತರ ಪ್ರದೇಶದ ಗ್ರಾಮದಲ್ಲಿ ನಾಲ್ಕು ‘ಮೇಲ್ಜಾತಿಯ’ ಠಾಕೂರ್ ಪುರುಷರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಗಾಯಗೊಂಡು 19 ವರ್ಷದ ದಲಿತ ಮಹಿಳೆ ಸಾವನ್ನಪ್ಪಿದ ಘಟನೆಯ ಬಗ್ಗೆ ಸರ್ಕಾರದ ಹೊಣೆಗಾರಿಕೆ ಮತ್ತು ನ್ಯಾಯಯುತ ತನಿಖೆಗಾಗಿ ಈ ನಾಯಕಿಯರು ಧ್ವನಿ ಎತ್ತಿದ್ದರು.

ನೋಟಿಸ್ ಸ್ವೀಕರಿಸಿದವರಲ್ಲಿ ಉಜ್ಮಾ ಪರ್ವೀನ್, ಸುಮಯ್ಯ ರಾಣಾ, ಮಧು ಗರ್ಗ್ ಮತ್ತು ಮೀನಾ ಸಿಂಗ್ ಅವರಂತಹ ನಾಯಕಿಯರು ಸೇರಿದ್ದಾರೆ. ಅವರು 2019 ರಲ್ಲಿ ಲಖನೌದಾದ್ಯಂತ ನಡೆದ ಸಿಎಎ ಎನ್‌ಆರ್‌ಸಿ ವಿರುದ್ಧದ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

2020 ರ ಅಕ್ಟೋಬರ್ 8 ರಂದು ಲಕ್ನೋದ ಗೋಮತಿ ನಗರದ ‘1090 ಕ್ರಾಸಿಂಗ್’ ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ನೋಟಿಸ್ ಜಾರಿ ಮಾಡಲಾಗಿದೆ. ತನಿಖಾ ಅಧಿಕಾರಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

ದಿ ವೈರ್‌ನೊಂದಿಗೆ ಮಾತನಾಡಿದ ಪರ್ವೀನ್, ರಾಣಾ ಮತ್ತು ಸಿಂಗ್ ಎಲ್ಲರೂ ನೋಟಿಸ್ ಬಂದಿದ್ದು ಆಶ್ಚರ್ಯಕರವಾಗಿದೆ ಎಂದು ಹೇಳಿದ್ದಾರೆ. ಸಿಎಎ ವಿರೋಧಿ ಚಳವಳಿಯಲ್ಲಿ ಭಾಗವಹಿಸಿದ್ದ ಪರ್ವೀನ್ ಅವರಿಗೆ ಮಧ್ಯ ಲಖನೌದ ಗೌತಂಪಳ್ಳಿ ಪೊಲೀಸ್ ಠಾಣೆಯಿಂದ ಕರೆ ಬಂದಿದೆ.

ಸಿಆರ್‌ಪಿಸಿಯ ಸೆಕ್ಷನ್ 41 (ಎ) ಅಡಿಯಲ್ಲಿ ಪೊಲೀಸರು ತನ್ನನ್ನು ಕರೆಸಿಕೊಂಡು ಹತ್ರಾಸ್ ಘಟನೆಯ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದು ಅವರು ಹೇಳಿದರು. ಸೆಕ್ಷನ್ 188 (ಸಾರ್ವಜನಿಕ ಸೇವಕರಿಗೆ ಅಸಹಕಾರ), 145 (ಕಾನೂನುಬಾಹಿರ ಗುಂಪುಗೂಡುವಿಕೆ ) ಮತ್ತು 353 (ಸಾರ್ವಜನಿಕ ಸೇವಕರನ್ನು ತಡೆಯಲು ಹಲ್ಲೆ) ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ಪ್ರತಿಭಟನೆಯ ದಿನದಂದು, ಲಕ್ನೋ ಪೊಲೀಸರು ನನ್ನನ್ನು ರಸ್ತೆಯ ಮೂಲಕ ಎಳೆದೊಯ್ದರು. ಪೊಲೀಸರು ನನ್ನನ್ನು ಆರು ಗಂಟೆಗಳ ಕಾಲ ವಶಕ್ಕೆ ಪಡೆದರು. ಪೊಲೀಸರು ನನ್ನನ್ನು ಎಳೆದೊಯ್ಯುವ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಲಭ್ಯವಿದೆ” ಎಂದು ಪರ್ವೀನ್ ಹೇಳಿದ್ದಾರೆ. ಹಿರಿಯ ಮಹಿಳಾ ಹಕ್ಕುಗಳ ಕಾರ್ಯಕರ್ತೆ ಮತ್ತು ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘದ (ಎಐಡಿಡಬ್ಲ್ಯೂಎ) ಹಿರಿಯ ಸದಸ್ಯೆ ಮಧು ಗರ್ಗ್ ಕೂಡ ಇದೇ ರೀತಿಯ ನೋಟಿಸ್ ಸ್ವೀಕರಿಸಿದ್ದಾರೆ. ಇನ್‌ಸ್ಪೆಕ್ಟರ್ ಮಟ್ಟದ ಪೊಲೀಸ್ ಸಿಬ್ಬಂದಿ ತನ್ನ ಕಚೇರಿಗೆ ಬಂದು ವಿಚಾರಣೆ ಮಾಡಿದರು ಎಂದು ಗರ್ಗ್ ದಿ ವೈರ್‌ಗೆ ತಿಳಿಸಿದ್ದಾರೆ, 30 ನಿಮಿಷಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಅವರು ಹೇಳಿದರು.

ಗರ್ಗ್ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ತೀವ್ರ ವಿಮರ್ಶಕರಾಗಿದ್ದಾರೆ, ಮಹಿಳೆಯರ ಹಕ್ಕುಗಳಿಗಾಗಿ ಸಕ್ರಿಯ ಪ್ರಚಾರಕರಾಗಿದ್ದಾರೆ ಮತ್ತು ಕಳೆದ ಮೂರು ದಶಕಗಳಲ್ಲಿ ಅನೇಕ ಚಳುವಳಿಗಳಿಗೆ ಕಾರಣರಾಗಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಅವರು ಕೂಡ ಗಮನ ಸೆಳೆದ ವ್ಯಕ್ತಿಯಾಗಿದ್ದರು.

ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘದ (ಎಐಪಿಡಬ್ಲ್ಯೂಎ) ಮೀನಾ ಸಿಂಗ್ ಕೂಡ ಪೊಲೀಸರ ಮುಂದೆ ಹಾಜರಾಗಲು ಕರೆ ಸ್ವೀಕರಿಸಿದ್ದಾರೆ.. ಆದರೆ ಈವರೆಗೆ ನೋಟಿಸ್‌ನ ಭೌತಿಕ ಪ್ರತಿಯನ್ನು ಪೊಲೀಸರು ಕಳುಹಿಸದ ಕಾರಣ ಅವರು ತನ್ನ ಹೇಳಿಕೆಯನ್ನು ನೋಂದಾಯಿಸಲು ಪೊಲೀಸ್ ಠಾಣೆಗೆ ಭೇಟಿ ನೀಡಿಲ್ಲ. “ಪೊಲೀಸರು ನನಗೆ ಕಾನೂನು ನೋಟೀಸ್ ಕಳುಹಿಸುವವರೆಗೆ ನಾನು ಅಲ್ಲಿಗೆ ಹೋಗುವುದಿಲ್ಲ” ಎಂದು ಅವರು ಹೇಳಿದರು.

ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಖ್ಯಾತ ಉರ್ದು ಕವಿ ಮುನಾವ್ವರ್ ರಾಣಾ ಅವರ ಪುತ್ರಿಯರಾದ ಸುಮಯ್ಯ ರಾಣಾ ಮತ್ತು ಫೌಜಿಯಾ ರಾಣಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

188, 145, ಮತ್ತು 353 ಸೆಕ್ಷನ್‌ಗಳನ್ನು ಹೊರತುಪಡಿಸಿ, ಎಲ್ಲಾ ಕಾರ್ಯಕರ್ತರ ಮೇಲೆ ಸಾಂಕ್ರಾಮಿಕ ರೋಗಗಳ ಕಾಯ್ದೆ, 1897, ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 56 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

2020 ರ ಡಿಸೆಂಬರ್ 29 ರಂದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕೆಲವೇ ದಿನಗಳ ಮೊದಲು ಸುಮಯ್ಯ ರಾಣಾ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ನವೆಂಬರ್‌ನಲ್ಲಿ, ಸರ್ಕಾರದ ನೀತಿಗಳನ್ನು ವಿರೋಧಿಸಿದರು ಮತ್ತು ಸಾರ್ವಜನಿಕ ಆಕ್ರೋಶವನ್ನು ಹರಡಿದರು ಎಂದು ಕೈಸರ್ಬಾಗ್ ಪೊಲೀಸರು ಆರೋಪಿಸಿ ಅವರಿಗೆ ನೋಟಿಸ್ ಕಳುಹಿಸಿದ್ದರು. ಸಿಆರ್‌ಪಿಸಿಯ ಸೆಕ್ಷನ್ 107/116 ರ ಅಡಿಯಲ್ಲಿ ನೋಟಿಸ್ ಕಳುಹಿಸಲಾಗಿದೆ.

ಬಾಂಡ್ ತುಂಬಲು ಕೈಸರ್ಬಾಗ್ ಕೊಟ್ವಾಲಿಯಲ್ಲಿರುವ ಅವರ ಕಚೇರಿಯಲ್ಲಿ ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದೇನೆ ಎಂದು ರಾಣಾ ಹೇಳಿದ್ದಾರೆ. “ನಾನು ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಮೌನವಾಗಿ ಕುಳಿತುಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಈಗ ಸಮಾಜವಾದಿ ಪಕ್ಷದ ರಾಷ್ಟ್ರೀಯ ವಕ್ತಾರರಾಗಿರುವ ರಾಣಾ, ಬಿಜೆಪಿ ಸರ್ಕಾರವು “ಎಲ್ಲಾ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕಲು ಬಯಸಿದೆ ಆದರೆ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಇದು ಅಸಾಧ್ಯ, ಭಾರತದ ಸಂವಿಧಾನವು ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕನ್ನು ನೀಡಿದೆ” ಎಂದು ಹೇಳಿದರು.

ಘಂಟಾ ಘರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ರಾಣಾ ಕಾಣಿಸಿಕೊಂಡಿದ್ದರು ಮತ್ತು ಸಿಎಎ ಕುರಿತು ಭಾಷಣ ಮಾಡಲು ಇತರ ಪಟ್ಟಣಗಳಿಗೆ ಭೇಟಿ ನೀಡಿದ್ದರು. ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಅವರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ.
ಲಕ್ನೋದಲ್ಲಿ ದಾಖಲಾದ ಸುಮಾರು 7,000 ಪ್ರಕರಣಗಳ ಬಗ್ಗೆ ಯುಪಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾ ಅಧಿಕಾರಿ ಸಂತೋಷ್ ಕುಮಾರ್ ಗೌಡ್ ಮಾತನಾಡಿ “10 ಮಹಿಳೆಯರ ವಿರುದ್ಧ ಪ್ರಕರಣಗಳು ದಾಖಲಾಗಿವೆ, ಮತ್ತು ಈಗ ಪೊಲೀಸ್ ಸಿಬ್ಬಂದಿ ಅವರನ್ನು ಕರೆದು ಹೇಳಿಕೆಗಳನ್ನು ದಾಖಲಿಸುತ್ತಿದ್ದಾರೆ” ಎಂದು ಹೇಳಿದರು.

ಸುಮಯ್ಯ ರಾಣಾ ಅವರ ನೇತೃತ್ವದಲ್ಲಿ 30 ರಿಂದ 35 ಮಹಿಳೆಯರ ಗುಂಪು “ಸರ್ಕಾರ ವಿರೋಧಿ ಮೆರವಣಿಗೆ” ನಡೆಸಿ ಸಿಆರ್‌ಪಿಸಿಯ ಸೆಕ್ಷನ್ 144 ಅನ್ನು ಉಲ್ಲಂಘಿಸಿದೆ ಎಂದು ಯುಪಿ ಪೊಲೀಸರು ತಮ್ಮ ವರದಿಯಲ್ಲಿ ಹೇಳಿಕೊಂಡಿದ್ದಾರೆ,.

ಹುಸೇನಾಬಾದ್‌ನ ಐತಿಹಾಸಿಕ ಘಂಟಾ ಘರ್‌ನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ನಡೆಸಿದ ನಂತರ ಲಖನೌದ ಠಾಕೂರ್‌ಗಂಜ್ ಪೊಲೀಸ್ ಠಾಣೆಯಲ್ಲಿ 300 ಪ್ರತಿಭಟನಾಕಾರರ ವಿರುದ್ಧ, ಹೆಚ್ಚಾಗಿ ಮಹಿಳೆಯರ ವಿರುದ್ಧ ಸುಮಾರು 16 ಎಫ್‌ಐಆರ್ ದಾಖಲಿಸಲಾಗಿದೆ. ಸಾಂಕ್ರಾಮಿಕ ರೋಗದ ನಡುವೆಯೂ ಪ್ರತಿಭಟನಾ ನಿರತ ಮಹಿಳೆಯರು ಮಾಸ್ಕ್ ಧರಿಸಿರಲಿಲ್ಲ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಗಲಾಟೆ ಮಾಡಿದ್ದಾರೆ ಎಂದು ಪೊಲೀಸರು ಎಫ್‌ಐಆರ್‌ನಲ್ಲಿ ಆರೋಪಿಸಿದ್ದಾರೆ.


ಇದನ್ನೂ ಓದಿ: ಉತ್ತರಪ್ರದೇಶ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ- ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...