Homeಮುಖಪುಟನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

ನಿಮಗೆ ಮುಖ್ಯಮಂತ್ರಿಯ ನಿಧಿಯಿಂದ 25 ಲಕ್ಷ ರೂಪಾಯಿ ದೊರೆಯುತ್ತಿದೆ. ನಿಮ್ಮ ಮಗಳು ಕೊರೊನಾವೈರಸ್‌ನಿಂದ ಮೃತಪಟ್ಟಿದ್ದರೆ ನಿಮಗೆ ಇಷ್ಟು ಹಣ ಸಿಗುತ್ತಿತ್ತಾ..? ಎಂದು ಡಿಸಿ ಆಮಿಷವೊಡ್ಡಿದ್ದರು ಎಂದು ಸಂತ್ರಸ್ತೆಯ ತಂದೆ ತಿಳಿಸಿದ್ದಾರೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ಉತ್ತರ ಪ್ರದೇಶದ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸರ ಕ್ರಮವನ್ನು ಕಟುವಾಗಿ ಟೀಕಿಸಿದೆ. ಮೃತ ಸಂತ್ರಸ್ತೆಯ ಅಂತ್ಯಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಗಂಭೀರ ಪ್ರಶ್ನೆಗಳನ್ನು ಕೇಳಿದೆ.

ಕಳೆದ ವಾರ ನ್ಯಾಯಾಲಯವು ಈ ಪ್ರಕರಣ ಕುರಿತು ಸುಮೋಟೋ ಕೇಸ್ ದಾಖಲಿಸಿಕೊಂಡಿತ್ತು. ನಿನ್ನೆ ನಡೆದ ವಿಚಾರಣೆಯಲ್ಲಿ ಹತ್ರಾಸ್ ಸಂತ್ರಸ್ತ ಕುಟುಂಬ ನಮ್ಮ ಇಚ್ಛೆಗೆ ವಿರುದ್ಧವಾಗಿ ಶವ ಸಂಸ್ಕಾರ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

“ಸಂತ್ರಸ್ತೆ ಶ್ರೀಮಂತ ಕುಟುಂಬದಿಂದ ಬಂದಿದ್ದರೆ ನೀವು ಆಕೆಯ ಮೃತದೇಹವನ್ನು ಇದೇ ರೀತಿ ಸುಟ್ಟುಹಾಕುತ್ತಿದ್ದಿರೇ.. ?” ಎಂದು ನ್ಯಾಯಮೂರ್ತಿ ಪಂಕಜ್ ಮಿಥಾಲ್ ಮತ್ತು ನ್ಯಾಯಮೂರ್ತಿ ರಾಜನ್ ರಾಯ್ ಅವರನ್ನೊಳಗೊಂಡ ನ್ಯಾಯಪೀಠ, ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಅವರನ್ನು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತೆ ಮನೆ ಸುತ್ತ 8 ಸಿಸಿಟಿವಿ ಅಳವಡಿಕೆ, 60 ಪೊಲೀಸರ ನಿಯೋಜನೆ

ಪ್ರವೀಣ್ ಕುಮಾರ್ ಲಕ್ಷ್ಕರ್ ಮೃತ ಸಂತ್ರಸ್ತೆಯ ಅಂತ್ಯಸಂಸ್ಕಾರವನ್ನು ಮಧ್ಯರಾತ್ರಿಯಲ್ಲಿ, ಯುವತಿಯ  ಕುಟುಂಬ ಸದಸ್ಯರ ಉಪಸ್ಥಿತಿಯಿಲ್ಲದೆ ನಡೆಸಿದ ಶವಸಂಸ್ಕಾರದಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು.
ಜೊತೆಗೆ ’ನಿಮ್ಮ ಸ್ವಂತ ಮಗಳನ್ನು ಇದೇ ರೀತಿ ಅಂತ್ಯಸಂಸ್ಕಾರ ಮಾಡಲು ಅನುಮತಿ ನೀಡುತ್ತೀರಾ..? ಎಂದು ನ್ಯಾಯಪೀಠ ಕುಮಾರ್ ಅವರನ್ನು ಪ್ರಶ್ನಿಸಿದೆ.

ಸಂತ್ರಸ್ತೆಯ ತಂದೆ ನ್ಯಾಯಾಲಯದ ಮುಂದೆ ಜಿಲ್ಲಾ ಮ್ಯಾಜಿಸ್ಟ್ರೇಟ್, ’ನಿಮಗೆ ಮುಖ್ಯಮಂತ್ರಿಯ ನಿಧಿಯಿಂದ 25 ಲಕ್ಷ ರೂಪಾಯಿ ದೊರೆಯುತ್ತಿದೆ. ನಿಮ್ಮ ಮಗಳು ಕೊರೊನಾವೈರಸ್‌ನಿಂದ ಮೃತಪಟ್ಟಿದ್ದರೆ ನಿಮಗೆ ಇಷ್ಟು ಹಣ ಸಿಗುತ್ತಿತ್ತಾ..? ಎಂದು ಹೇಳಿದ್ದರು ಎಂಬುದನ್ನು ಬಹಿರಂಗ ಪಡಿಸಿದ್ದಾರೆ.

ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರವೀಣ್ ಕುಮಾರ್ ಲಕ್ಷ್ಕರ್ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅವಸರದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು ಎಂಬ ಹೇಳಿಕೆ ನ್ಯಾಯಪೀಠದ ಮೇಲೆ ಯಾವುದೇ ಪ್ರಭಾವ ಬೀರಲಿಲ್ಲ.

ಸಂತ್ರಸ್ತೆಯ ಕುಟುಂಬ ಮತ್ತು ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್, ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಅವನಿಶ್ ಕುಮಾರ್ ಅವಾಸ್ತಿ, ಪೊಲೀಸ್ ಮಹಾನಿರ್ದೇಶಕ ಹೆಚ್.ಸಿ.ಅವಾಸ್ತಿ, ಹೆಚ್ಚುವರಿ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಮತ್ತು ಹತ್ರಾಸ್ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ನ್ಯಾಯಾಲಯದಲ್ಲಿ ಹಾಜರಾಗಿದ್ದರು.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತೆಯನ್ನೇ ಬಲಿಪಶುಮಾಡುವ ಹುನ್ನಾರ: ಸುಪ್ರೀಂ ಮೆಟ್ಟಿಲೇರಿದ ಸಿಜೆಪಿ

ನಿರ್ಭಯಾ ಪ್ರಕರಣದಲ್ಲಿ ಸಂತ್ರಸ್ತೆಯ ಕಾನೂನು ಸಲಹೆಗಾರರೂ ಆಗಿದ್ದ ವಕೀಲೆ ಸೀಮಾ ಕುಶ್ವಾಹ ಅವರು ಸಂತ್ರಸ್ತೆಯ ಕುಟುಂಬವನ್ನು ಪ್ರತಿನಿಧಿಸುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿನೋದ್ ಶಾಹಿ ಪ್ರತಿನಿಧಿಸುತ್ತಿದ್ದಾರೆ.

“ಕುಟುಂಬವು ಈ ಪ್ರಕರಣವನ್ನು ರಾಜ್ಯದಿಂದ ಹೊರಗೆ ದೆಹಲಿ ಅಥವಾ ಮುಂಬೈಗೆ ವರ್ಗಾಯಿಸಬೇಕೆಂದು ಬಯಸಿದೆ” ಎಂದು ಕುಟುಂಬ ಸದಸ್ಯರ ಸಲಹೆಗಾರರಾದ ಸೀಮಾ ಕುಶ್ವಾಹ ಹೇಳಿದ್ದಾರೆ.

ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ರಾಜನ್ ರಾಯ್ ಅವರ ವಿಭಾಗೀಯ ಪೀಠ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಉತ್ತರಗಳನ್ನು ಸಲ್ಲಿಸಲು ಸಾಕಷ್ಟು ಸಮಯ ಬೇಕು ಎಂದು ರಾಜ್ಯದ ಮನವಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣದ ವಿಚಾರಣೆಯನ್ನು ನವೆಂಬರ್ 2 ಕ್ಕೆ ನಿಗದಿಪಡಿಸಲಾಗಿದೆ.


ಇದನ್ನೂ ಓದಿ: ಹತ್ರಾಸ್: ಘಟನೆಯನ್ನು ’ಅಸಾಧಾರಣ ಮತ್ತು ಆಘಾತಕಾರಿ’ ಎಂದು ಕರೆದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...