Homeಮುಖಪುಟಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಅಕ್ಟೋಬರ್ 03 ರಂದು ಗಾಜಿಯಾಬಾದ್‌ ನಗರದಾದ್ಯಂತ ಪೌರಕಾರ್ಮಿಕರು ಸ್ವಚ್ಛತಾ ಕೆಲಸ ತ್ಯಜಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಲ್ಮಿಕಿ ಸಮಾಜದ ಅನಿಲ್ ಕಲ್ಯಾಣಿ ತಿಳಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಜರುಗಿದ 19 ವರ್ಷದ ದಲಿತ ಹೆಣ್ಣುಮಗಳ ಮೇಲಿನ ಅತ್ಯಾಚಾರ, ಕೊಲೆ ಮತ್ತು ಶವವನ್ನು ಆಕೆಯ ಕುಟುಂಬದವರಿಗೆ ನೀಡದೇ ಪೊಲೀಸರೇ ಸುಟ್ಟುಹಾಕಿದ ದುರ್ಘಟನೆಗೆ ರಾಷ್ಟ್ರಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬೆನ್ನಲ್ಲೇ ಗಾಜಿಯಾಬಾದ್ ವಕೀಲರು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಒತ್ತಾಯಿಸಿದ್ದಾರೆ.

“ಉತ್ತರ ಪ್ರದೇಶದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣಗಳು ಮಿತಿ ಮೀರಿವೆ. ಇವುಗಳನ್ನು ನಿಯಂತ್ರಿಸಿ ಮಹಿಳೆಯರಿಗೆ ರಕ್ಷಣೆ ನೀಡಲು ಮುಖ್ಯಮಂತ್ರಿ ಆದಿತ್ಯನಾಥ್ ವಿಫಲರಾಗಿದ್ದಾರೆ. ಬದಲಿಗೆ ಸರ್ಕಾರ ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದು ಇದು ಇನ್ನಷ್ಟು ಅತ್ಯಾಚಾರಗಳಿಗೆ ಕಾರಣವಾಗುತ್ತಿದೆ. ಹಾಗಾಗಿ ಕೂಡಲೇ ಆದಿತ್ಯನಾಥ್‌ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿ ರಾಷ್ಟ್ರಪತಿ ಆಡಳಿತ ಜಾರಿಯಾಗಬೇಕು” ಎಂದು ವಕೀಲರು ಒತ್ತಾಯಿಸಿದ್ದಾರೆ.

ಆದಿವಕ್ತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಗಾಜಿಯಾಬಾದ್‌ನ ಸಿವಿಲ್ ಕೋರ್ಟ್ ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಿದ ವಕೀಲರು, ಜಿಲ್ಲಾಧಿಕಾರಿ ಅಜಯ್ ಶಂಕರ್ ಪಾಂಡೆ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮೆರವಣಿಗೆಯುದ್ದಕ್ಕೂ ಸಿಎಂ ಆದಿತ್ಯನಾಥ್ ಮತ್ತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ವಕೀಲರು, ಆದಿತ್ಯನಾಥ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರಂತರವಾಗಿ ಏರುತ್ತಿರುವ ಮಹಿಳೆಯರ ಮೇಲಿನ ಅಪರಾಧ ತಡೆಯಲು ಆದಿತ್ಯನಾಥ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ದೂರಿದ್ದಾರೆ.

ವಕೀಲರ ತಂಡದ ನಹರ್ ಸಿಂಗ್ ಯಾದವ್ ಮಾತನಾಡಿ “ರಾಜ್ಯದಲ್ಲಿ ಅಪರಾಧಗಳನ್ನು, ಮಹಿಳೆಯರ ಮೇಲಿನ ಹಿಂಸೆಯನ್ನು ತಡೆಯುವಲ್ಲಿ ಸಿಎಂ ಆದಿತ್ಯನಾಥ್ ಸಂಪೂರ್ಣ ವಿಫಲರಾಗಿದ್ದಾರೆ. ಪ್ರಸ್ತುತ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಪೊಲೀಸರು ಸಾಕ್ಷಿಗಳನ್ನು ಮುಚ್ಚಿಹಾಕಲು ಯುವತಿಯ ಮೃತದೇಹವನ್ನು ನೀಡದೇ ಸುಟ್ಟುಹಾಕಿದ್ದಾರೆ. ನಮಗೆ ರಾಜ್ಯ ಸರ್ಕಾರದ ಮೇಲಿನ ನಂಬಿಕೆ ಉಳಿದಿಲ್ಲ. ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಕರಣದ ನಿಷ್ಪಕ್ಷಪಾತ ತನಿಖೆಯಾಗಬೇಕೆಂದು” ಒತ್ತಾಯಿಸಿದ್ದಾರೆ.

Photo Courtesty: Deccan Herald

ಈಗಿನಿಂದಲೇ ಸಂತ್ರಸ್ತೆಯ ಕುಟುಂಬಕ್ಕೆ ಸರ್ಕಾರ ರಕ್ಷಣೆ ನೀಡಬೇಕು. 2 ಕೋಟಿ ರೂ ಪರಿಹಾರ, ಸರ್ಕಾರಿ ಉದ್ಯೋಗ ಮತ್ತು ದೆಹಲಿಯಲ್ಲಿ ಮನೆ ನೀಡಬೇಕು. ನಿಷ್ಪಕ್ಷಪಾತ ತನಿಖೆಗಾಗಿ ಬೇರೆ ರಾಜ್ಯದ ತ್ವರಿತ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾಯಿಸಬೇಕು ಎಂದು ವಕೀಲರು ಒತ್ತಾಯಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಲ್ಮಿಕಿ ಸಮಾಜದ ಕಾರ್ಯಕರ್ತರು ಗಾಜಿಯಾಬಾದ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ರಸ್ತೆಗಳನ್ನು ನಿರ್ಭಂಧಿಸಿದ್ದಾರೆ. ಸಿಎಂ ಆದಿತ್ಯಾನಾಥ್‌ರವರ ವಿರುದ್ಧ ಘೋಷಣೆಗಳನ್ನು ಕೂಗಿದ ಅವರು, ಕುಟುಂಬದ ಒಪ್ಪಿಗೆಯಿಲ್ಲದೇ ಶವವನ್ನು ಸುಟ್ಟು ಹಾಕಿದ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.  ಅಕ್ಟೋಬರ್ 03 ರಂದು ಗಾಜಿಯಾಬಾದ್‌ ನಗರದಾದ್ಯಂತ ಪೌರಕಾರ್ಮಿಕರು ಸ್ವಚ್ಛತಾ ಕೆಲಸ ತ್ಯಜಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಲ್ಮಿಕಿ ಸಮಾಜದ ಅನಿಲ್ ಕಲ್ಯಾಣಿ ತಿಳಿಸಿದ್ದಾರೆ.


ಇದನ್ನೂ ಓದಿ: ಹತ್ರಾಸ್: ತೀವ್ರಗೊಂಡ ಆಕ್ರೋಶ, ಪ್ರತಿಭಟನೆ ಹತ್ತಿಕ್ಕಲು ಇಂಡಿಯಾ ಗೇಟ್ ಬಳಿ ನಿಷೇದಾಜ್ಞೆ ಹೇರಿದ ದೆಹಲಿ ಪೊಲೀಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...