Homeಮುಖಪುಟಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ, ಪೊಲೀಸರು ಜಾತಿಯಾಧಾರದಲ್ಲಿ ಅಪರಾಧ ಮತ್ತು ಅಪರಾಧಿಯನ್ನು ಗಣನೆಗೆ ತೆಗೆದುಕೊಳ್ಳುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -
- Advertisement -

ಕಣ್ಣುಗಳಲ್ಲಿ ಭವಿಷ್ಯದ ಕನಸುಗಳನ್ನು ಕಟ್ಟಿಕೊಂಡು, ತನ್ನ ಕುಟುಂಬದ ಜೊತೆಗೆ ಖುಷಿಯಿಂದ ಜೀವನ ನಡೆಸುತ್ತಿದ್ದ ಹೆಣ್ಣು ಮಗಳ ಕನಸನ್ನು ಅಮಾನುಷವಾಗಿ ಆ ನಾಲ್ವರು ಕಿತ್ತುಕೊಂಡಿದ್ದಾರೆ. ಅದಕ್ಕಿಂತ ಘೋರವಾದ ವಿಚಾರವೆಂದರೆ ಅಂತಹ ವಿಕೃತ ಮನಸ್ಸಿನ ಆರೋಪಿಗಳ ಪರ ಸರ್ಕಾರ, ಪೊಲೀಸರು, ಜಾತಿವಾರು ಸಂಘಟನೆಗಳು ನಿಂತಿರುವುದು.

ಅತ್ಯಾಚಾರ ನಡೆದಿರುವುದಕ್ಕೆ ಸಾಕ್ಷಿಯಿದ್ದರೂ ಕಿರುಕುಳದ ಎಫ್‌ಐಆರ್ ದಾಖಲಿಸುವ ಪೊಲೀಸರು, ಜಾತಿಯಾಧಾರದಲ್ಲಿ ಅಪರಾಧ ಮತ್ತು ಅಪರಾಧಿಯನ್ನು ಗಣನೆಗೆ ತೆಗೆದುಕೊಳ್ಳುವುದು, ಇವೆಲ್ಲವೂ ಜನರಿಗೆ ವ್ಯವಸ್ಥೆ ಮೇಲೆ ಮತ್ತಷ್ಟು ಆಕ್ರೋಶ ಹುಟ್ಟಿಸುತ್ತಿದೆ.

ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ದಲಿತ ಯುವತಿಯರು, ಬಡ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ಬೆಳಕಿಗೆ ಬರುವುದೇ ಕಡಿಮೆಯಾಗಿದೆ. ಪೊಲೀಸ್ ವ್ಯವಸ್ಥೆ ಆರೋಪಿಗಳ ಪರ ನಿಂತು ಪ್ರಕರಣಗಳು ನ್ಯಾಯಾಲಯದವರೆಗೆ ಹೋಗಲು ಬಿಡುವುದೆ ಇಲ್ಲ. ಪೊಲೀಸ್ ಪಂಚಾಯಿತಿಗಳ ಮೂಲಕ ಪ್ರಕರಣ ಬಗೆ ಹರಿಸಲಾಗುತ್ತಿದೆ. ಇಲ್ಲವೇ ಹೆದರಿಸಿಯೋ, ಕೊಲೆ ಮಾಡಿಯೋ ಪ್ರಕರಣವನ್ನು ಮುಚ್ಚಿಹಾಕಲಾಗುತ್ತಿದೆ. ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರಿಗಳು ಇವರೇ ಎಂದು ಗೊತ್ತಿದ್ದರೂ ಶಿಕ್ಷೆ ನೀಡಲು ವರ್ಷಗಳೇ ಕಾಯಬೇಕಾಯಿತು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಈಗ ಮತ್ತೊಮ್ಮೆ ಹತ್ರಾಸ್ ಸಂತ್ರಸ್ತೆ, ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ದೇಶದಲ್ಲಿ ಸಂಚಲನ ಹುಟ್ಟು ಹಾಕಿದೆ. ಮಾನವೀಯತೆ, ಮನುಷ್ಯ ಕಷ್ಟಗಳಿಗೆ ಸ್ಪಂದಿಸುವ ಕೋಟ್ಯಾಂತರ ಮಂದಿ ಮೃತ ಸಂತ್ರಸ್ತೆಗೆ ನ್ಯಾಯ ಸಿಗಲಿ ಎಂದು ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘಟನೆ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಮತ್ತೊಬ್ಬ ಮಗಳು ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಆದರೆ ಆಕೆಯ ಅಂತ್ಯಸಂಸ್ಕಾರಕ್ಕೂ ಸಹ ಆಕೆಯ ಕುಟುಂಬವನ್ನೇ ದೂರವಿಡಲಾಗಿದೆ. ದಲಿತ ಸಮುದಾಯದ ಮೇಲೆ ನಡೆಸುತ್ತಿರುವ ದೌರ್ಜನ್ಯ, ನಾಚಿಕೆಯಾಗಬೇಕು ಸರ್ಕಾರಕ್ಕೆ ಎಂದಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಘಟನೆಯನ್ನು ಖಂಡಿಸಿದ್ದು, ಹತ್ರಾಸ್‌ನಲ್ಲಿ ನಡೆದದ್ದು ಅಮಾನವೀಯ ಮತ್ತು ಕ್ರೌರ್ಯವನ್ನು ಮೀರಿದೆ ಎಂದಿದ್ದಾರೆ.

ನಟಿ ಸ್ವರಾ ಭಾಸ್ಕರ್‌ ತಮ್ಮ ಟ್ವೀಟ್‌ನಲ್ಲಿ ಜಾತಿಯನ್ನು ನಿರಾಕರಿಸುವವರು, ಭಾರತದಲ್ಲಿ ಜಾತಿ ತಾರತಮ್ಯ ಇಲ್ಲ ಎನ್ನುವವರು ಇದನ್ನು ನೋಡಿ ಎಂದು ಮನೀಷ್ ಪಾಂಡೆಯವರು ಮಾಡಿರುವ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಗ್ರೌಂಡ್ ರಿಪೋರ್ಟ್ ಶೇರ್‌ ಮಾಡಿದ್ದಾರೆ.

ನಟ ಅಕ್ಷಯ್ ಕುಮಾರ್ ಕೂಡ ಟ್ವಿಟ್ಟರ್‌ನಲ್ಲಿ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಅತ್ಯಂತ ಕ್ರೂರ, ಇಂತಹ ಘಟನೆಗಳು ಯಾವಾಗ ನಿಲ್ಲುತ್ತದೆ ಎಂದು ಪ್ರಶ್ನಿಸಿದ್ದಾರೆ. ಅತ್ಯಾಚಾರಿಗಳಿಗೆ ಎಷ್ಟು ಕಠಿಣ ಶಿಕ್ಷೆಯಾಗಬೇಕು ಎಂದರೇ, ಶಿಕ್ಷೆಯ ಆಲೋಚನೆಯೇ ಅತ್ಯಾಚಾರಿಗಳನ್ನು ಭಯದಿಂದ ನಡುಗಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ನಟ, ಹೋರಾಟಗಾರ ಚೇತನ್, ಜಾತಿ,ಲಿಂಗ ಆಧಾರಿತ ಹಿಂಸಾಚಾರಕ್ಕೆ ಬಲಿಯಾದವರಿಗೆ ಇಂದಿನ ಭಾರತದಲ್ಲಿ ನ್ಯಾಯ ಬಹುದೊಡ್ಡ ಕನಸು. ಪೊಲೀಸ್ ಇಲಾಖೆಯ ನಿರಾಸಕ್ತಿ, ಬೇಜವಾಬ್ದಾರಿತನ, ನಿಂದನೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಪೊಲೀಸ್ ನೇತೃತ್ವದ ಹತ್ರಾಸ್ ಅತ್ಯಾಚಾರ, ಕೊಲೆ ಸಂತ್ರಸ್ತೆಯ ಶವಸಂಸ್ಕಾರ ಪೊಲೀಸ್ ಇಲಾಖೆಯು ಪ್ರಭಲರಿಗೆ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ತಿಳಿಸುತ್ತದೆ ಎಂದು ತಮ್ಮ ಟ್ವಿಟ್ಟರ್‌ ಮತ್ತು ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

#Hathras #Police #Abuseಜಾತಿ / ಲಿಂಗ ಆಧಾರಿತ ಹಿಂಸಾಚಾರಕ್ಕೆ ಬಲಿಯಾದವರಿಗೆ ನ್ಯಾಯ ಇಂದಿನ ಭಾರತದಲ್ಲಿ ಬಹುದೊಡ್ಡ ಕನಸುಪೊಲೀಸ್ ಇಲಾಖೆಯ…

Posted by Chetan Ahimsa on Wednesday, September 30, 2020

 

ನಟಿ ಕಂಗನಾ ರಾಣಾವತ್ ಸರ್ಕಾರ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವ ನಂಬಿಕೆ ಇದೆ ಎಂದಿದ್ದಾರೆ.

ಉತ್ತರ ಪ್ರದೇಶದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಜೊತೆಗೆ ಅವರನ್ನು ಬೆಮಬಲಿಸುವ ಪ್ರಧಾನಿಗಳು, ಸಂಘಪರಿವಾರದವರು ಹೊರಬೇಕು ಎಂದಿದ್ದಾರೆ. ಜೊತೆಗೆ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ ಆಗಿದ್ದಾರೆ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಈ ದುರ್ಘಟನೆಗೆ ಅತ್ಯಾಚಾರಿಗಳು ಎಷ್ಟು ಕಾರಣವೋ ಉತ್ತರಪ್ರದೇಶ ಸರ್ಕಾರ ಕೂಡ ಅಷ್ಟೇ ಕಾರಣ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆಯನ್ನು ಏಮ್ಸ್ ಗೆ ಸೇರಿಸಿಕೊಳ್ಳಬೇಕೆಂದು ನಾನು ಒತ್ತಾಯಿಸುತ್ತಲೇ ಇದ್ದೆ, ಆದರೆ ಬಿಜೆಪಿ ಸರ್ಕಾರ ಹಾಗೆ ಮಾಡಲಿಲ್ಲ. ನಮ್ಮ ಸಹೋದರಿಯ ಸಾವಿಗೆ ಕಾರಣವಾದ ಅತ್ಯಾಚಾರಿಗಳು ಉತ್ತರ ಪ್ರದೇಶ ಸರ್ಕಾರಕ್ಕೂ ಅಷ್ಟೇ ಕಾರಣ ಎಂದು ಟ್ವೀಟ್ ಮಾಡಿದ್ದಾರೆ.

#HathrasHorrorShocksIndia #Hathras #HatrasCase #HathrasHorror #JusticeForManisha, #JusticeForManishaValmiki, #JusticeForManishaValmiki ಹ್ಯಾಶ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿವೆ.

ಜನರ ಆಕ್ರೋಶ ಹೆಚ್ಚಾದ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಹತ್ರಾಸ್‌ನಲ್ಲಿ  ನಡೆದ ದುರ್ಘಟನೆಯ ಅಪರಾಧಿಗಳು ಬದುಕುಳಿಯುವುದಿಲ್ಲ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಮುಂದಿನ ಏಳು ದಿನಗಳಲ್ಲಿ ಈ ತಂಡ ತನ್ನ ವರದಿಯನ್ನು ಸಲ್ಲಿಸಲಿದೆ. ಈ ಪ್ರಕರಣದ ವಿಚಾರಣೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ನಡೆಯುತ್ತದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೃತ ಸಂತ್ರಸ್ತೆಗೆ ನ್ಯಾಯಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾಕಾರರನ್ನು ಬಂಧಿಸುವ ಕೆಲಸ ಕೂಡ ಉತ್ತರ ಪ್ರದೇಶ ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಮನೆ ಮುಂದೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿಯ ಯುಪಿ ಭವನದ ಮುಂದೆ ಪ್ರತಿಭಟನೆ ನಡೆಸಲು ಒಟ್ಟುಗೂಡುತ್ತಿದ್ದ ಸುಮಾರು 60 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...