Homeಮುಖಪುಟಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ಹತ್ರಾಸ್ ಗ್ಯಾಂಗ್ ರೇಪ್ ಕೇಸ್: ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಗೊಂಡ ಆಕ್ರೋಶ

ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ, ಪೊಲೀಸರು ಜಾತಿಯಾಧಾರದಲ್ಲಿ ಅಪರಾಧ ಮತ್ತು ಅಪರಾಧಿಯನ್ನು ಗಣನೆಗೆ ತೆಗೆದುಕೊಳ್ಳುವುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಕಾರಣವಾಗಿದೆ.

- Advertisement -
- Advertisement -

ಕಣ್ಣುಗಳಲ್ಲಿ ಭವಿಷ್ಯದ ಕನಸುಗಳನ್ನು ಕಟ್ಟಿಕೊಂಡು, ತನ್ನ ಕುಟುಂಬದ ಜೊತೆಗೆ ಖುಷಿಯಿಂದ ಜೀವನ ನಡೆಸುತ್ತಿದ್ದ ಹೆಣ್ಣು ಮಗಳ ಕನಸನ್ನು ಅಮಾನುಷವಾಗಿ ಆ ನಾಲ್ವರು ಕಿತ್ತುಕೊಂಡಿದ್ದಾರೆ. ಅದಕ್ಕಿಂತ ಘೋರವಾದ ವಿಚಾರವೆಂದರೆ ಅಂತಹ ವಿಕೃತ ಮನಸ್ಸಿನ ಆರೋಪಿಗಳ ಪರ ಸರ್ಕಾರ, ಪೊಲೀಸರು, ಜಾತಿವಾರು ಸಂಘಟನೆಗಳು ನಿಂತಿರುವುದು.

ಅತ್ಯಾಚಾರ ನಡೆದಿರುವುದಕ್ಕೆ ಸಾಕ್ಷಿಯಿದ್ದರೂ ಕಿರುಕುಳದ ಎಫ್‌ಐಆರ್ ದಾಖಲಿಸುವ ಪೊಲೀಸರು, ಜಾತಿಯಾಧಾರದಲ್ಲಿ ಅಪರಾಧ ಮತ್ತು ಅಪರಾಧಿಯನ್ನು ಗಣನೆಗೆ ತೆಗೆದುಕೊಳ್ಳುವುದು, ಇವೆಲ್ಲವೂ ಜನರಿಗೆ ವ್ಯವಸ್ಥೆ ಮೇಲೆ ಮತ್ತಷ್ಟು ಆಕ್ರೋಶ ಹುಟ್ಟಿಸುತ್ತಿದೆ.

ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ. ದಲಿತ ಯುವತಿಯರು, ಬಡ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳು ಬೆಳಕಿಗೆ ಬರುವುದೇ ಕಡಿಮೆಯಾಗಿದೆ. ಪೊಲೀಸ್ ವ್ಯವಸ್ಥೆ ಆರೋಪಿಗಳ ಪರ ನಿಂತು ಪ್ರಕರಣಗಳು ನ್ಯಾಯಾಲಯದವರೆಗೆ ಹೋಗಲು ಬಿಡುವುದೆ ಇಲ್ಲ. ಪೊಲೀಸ್ ಪಂಚಾಯಿತಿಗಳ ಮೂಲಕ ಪ್ರಕರಣ ಬಗೆ ಹರಿಸಲಾಗುತ್ತಿದೆ. ಇಲ್ಲವೇ ಹೆದರಿಸಿಯೋ, ಕೊಲೆ ಮಾಡಿಯೋ ಪ್ರಕರಣವನ್ನು ಮುಚ್ಚಿಹಾಕಲಾಗುತ್ತಿದೆ. ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರಿಗಳು ಇವರೇ ಎಂದು ಗೊತ್ತಿದ್ದರೂ ಶಿಕ್ಷೆ ನೀಡಲು ವರ್ಷಗಳೇ ಕಾಯಬೇಕಾಯಿತು.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ಈಗ ಮತ್ತೊಮ್ಮೆ ಹತ್ರಾಸ್ ಸಂತ್ರಸ್ತೆ, ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ದೇಶದಲ್ಲಿ ಸಂಚಲನ ಹುಟ್ಟು ಹಾಕಿದೆ. ಮಾನವೀಯತೆ, ಮನುಷ್ಯ ಕಷ್ಟಗಳಿಗೆ ಸ್ಪಂದಿಸುವ ಕೋಟ್ಯಾಂತರ ಮಂದಿ ಮೃತ ಸಂತ್ರಸ್ತೆಗೆ ನ್ಯಾಯ ಸಿಗಲಿ ಎಂದು ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘಟನೆ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ ಮತ್ತೊಬ್ಬ ಮಗಳು ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ. ಆದರೆ ಆಕೆಯ ಅಂತ್ಯಸಂಸ್ಕಾರಕ್ಕೂ ಸಹ ಆಕೆಯ ಕುಟುಂಬವನ್ನೇ ದೂರವಿಡಲಾಗಿದೆ. ದಲಿತ ಸಮುದಾಯದ ಮೇಲೆ ನಡೆಸುತ್ತಿರುವ ದೌರ್ಜನ್ಯ, ನಾಚಿಕೆಯಾಗಬೇಕು ಸರ್ಕಾರಕ್ಕೆ ಎಂದಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಘಟನೆಯನ್ನು ಖಂಡಿಸಿದ್ದು, ಹತ್ರಾಸ್‌ನಲ್ಲಿ ನಡೆದದ್ದು ಅಮಾನವೀಯ ಮತ್ತು ಕ್ರೌರ್ಯವನ್ನು ಮೀರಿದೆ ಎಂದಿದ್ದಾರೆ.

ನಟಿ ಸ್ವರಾ ಭಾಸ್ಕರ್‌ ತಮ್ಮ ಟ್ವೀಟ್‌ನಲ್ಲಿ ಜಾತಿಯನ್ನು ನಿರಾಕರಿಸುವವರು, ಭಾರತದಲ್ಲಿ ಜಾತಿ ತಾರತಮ್ಯ ಇಲ್ಲ ಎನ್ನುವವರು ಇದನ್ನು ನೋಡಿ ಎಂದು ಮನೀಷ್ ಪಾಂಡೆಯವರು ಮಾಡಿರುವ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ಗ್ರೌಂಡ್ ರಿಪೋರ್ಟ್ ಶೇರ್‌ ಮಾಡಿದ್ದಾರೆ.

ನಟ ಅಕ್ಷಯ್ ಕುಮಾರ್ ಕೂಡ ಟ್ವಿಟ್ಟರ್‌ನಲ್ಲಿ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಅತ್ಯಂತ ಕ್ರೂರ, ಇಂತಹ ಘಟನೆಗಳು ಯಾವಾಗ ನಿಲ್ಲುತ್ತದೆ ಎಂದು ಪ್ರಶ್ನಿಸಿದ್ದಾರೆ. ಅತ್ಯಾಚಾರಿಗಳಿಗೆ ಎಷ್ಟು ಕಠಿಣ ಶಿಕ್ಷೆಯಾಗಬೇಕು ಎಂದರೇ, ಶಿಕ್ಷೆಯ ಆಲೋಚನೆಯೇ ಅತ್ಯಾಚಾರಿಗಳನ್ನು ಭಯದಿಂದ ನಡುಗಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಯುಪಿ ಅತ್ಯಾಚಾರ ಪ್ರಕರಣ: ಕುಟುಂಬದವರಿಗೆ ತಿಳಿಸದೆ ಯುವತಿಯ ಶವಕ್ಕೆ ಬೆಂಕಿಯಿಟ್ಟ ಪೊಲೀಸರು!

ನಟ, ಹೋರಾಟಗಾರ ಚೇತನ್, ಜಾತಿ,ಲಿಂಗ ಆಧಾರಿತ ಹಿಂಸಾಚಾರಕ್ಕೆ ಬಲಿಯಾದವರಿಗೆ ಇಂದಿನ ಭಾರತದಲ್ಲಿ ನ್ಯಾಯ ಬಹುದೊಡ್ಡ ಕನಸು. ಪೊಲೀಸ್ ಇಲಾಖೆಯ ನಿರಾಸಕ್ತಿ, ಬೇಜವಾಬ್ದಾರಿತನ, ನಿಂದನೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಪೊಲೀಸ್ ನೇತೃತ್ವದ ಹತ್ರಾಸ್ ಅತ್ಯಾಚಾರ, ಕೊಲೆ ಸಂತ್ರಸ್ತೆಯ ಶವಸಂಸ್ಕಾರ ಪೊಲೀಸ್ ಇಲಾಖೆಯು ಪ್ರಭಲರಿಗೆ ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ತಿಳಿಸುತ್ತದೆ ಎಂದು ತಮ್ಮ ಟ್ವಿಟ್ಟರ್‌ ಮತ್ತು ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

#Hathras #Police #Abuseಜಾತಿ / ಲಿಂಗ ಆಧಾರಿತ ಹಿಂಸಾಚಾರಕ್ಕೆ ಬಲಿಯಾದವರಿಗೆ ನ್ಯಾಯ ಇಂದಿನ ಭಾರತದಲ್ಲಿ ಬಹುದೊಡ್ಡ ಕನಸುಪೊಲೀಸ್ ಇಲಾಖೆಯ…

Posted by Chetan Ahimsa on Wednesday, September 30, 2020

 

ನಟಿ ಕಂಗನಾ ರಾಣಾವತ್ ಸರ್ಕಾರ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವ ನಂಬಿಕೆ ಇದೆ ಎಂದಿದ್ದಾರೆ.

ಉತ್ತರ ಪ್ರದೇಶದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಜೊತೆಗೆ ಅವರನ್ನು ಬೆಮಬಲಿಸುವ ಪ್ರಧಾನಿಗಳು, ಸಂಘಪರಿವಾರದವರು ಹೊರಬೇಕು ಎಂದಿದ್ದಾರೆ. ಜೊತೆಗೆ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ ಆಗಿದ್ದಾರೆ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಈ ದುರ್ಘಟನೆಗೆ ಅತ್ಯಾಚಾರಿಗಳು ಎಷ್ಟು ಕಾರಣವೋ ಉತ್ತರಪ್ರದೇಶ ಸರ್ಕಾರ ಕೂಡ ಅಷ್ಟೇ ಕಾರಣ ಎಂದು ಆರೋಪಿಸಿದ್ದಾರೆ. ಸಂತ್ರಸ್ತೆಯನ್ನು ಏಮ್ಸ್ ಗೆ ಸೇರಿಸಿಕೊಳ್ಳಬೇಕೆಂದು ನಾನು ಒತ್ತಾಯಿಸುತ್ತಲೇ ಇದ್ದೆ, ಆದರೆ ಬಿಜೆಪಿ ಸರ್ಕಾರ ಹಾಗೆ ಮಾಡಲಿಲ್ಲ. ನಮ್ಮ ಸಹೋದರಿಯ ಸಾವಿಗೆ ಕಾರಣವಾದ ಅತ್ಯಾಚಾರಿಗಳು ಉತ್ತರ ಪ್ರದೇಶ ಸರ್ಕಾರಕ್ಕೂ ಅಷ್ಟೇ ಕಾರಣ ಎಂದು ಟ್ವೀಟ್ ಮಾಡಿದ್ದಾರೆ.

#HathrasHorrorShocksIndia #Hathras #HatrasCase #HathrasHorror #JusticeForManisha, #JusticeForManishaValmiki, #JusticeForManishaValmiki ಹ್ಯಾಶ್‌ಟ್ಯಾಗ್‌ಗಳು ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿವೆ.

ಜನರ ಆಕ್ರೋಶ ಹೆಚ್ಚಾದ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಹತ್ರಾಸ್‌ನಲ್ಲಿ  ನಡೆದ ದುರ್ಘಟನೆಯ ಅಪರಾಧಿಗಳು ಬದುಕುಳಿಯುವುದಿಲ್ಲ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಮುಂದಿನ ಏಳು ದಿನಗಳಲ್ಲಿ ಈ ತಂಡ ತನ್ನ ವರದಿಯನ್ನು ಸಲ್ಲಿಸಲಿದೆ. ಈ ಪ್ರಕರಣದ ವಿಚಾರಣೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯದಲ್ಲಿ ನಡೆಯುತ್ತದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಮೃತ ಸಂತ್ರಸ್ತೆಗೆ ನ್ಯಾಯಬೇಕು ಎಂದು ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನಾಕಾರರನ್ನು ಬಂಧಿಸುವ ಕೆಲಸ ಕೂಡ ಉತ್ತರ ಪ್ರದೇಶ ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಮನೆ ಮುಂದೆ ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ದೆಹಲಿಯ ಯುಪಿ ಭವನದ ಮುಂದೆ ಪ್ರತಿಭಟನೆ ನಡೆಸಲು ಒಟ್ಟುಗೂಡುತ್ತಿದ್ದ ಸುಮಾರು 60 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಇದನ್ನೂ ಓದಿ: ಲಾಕಪ್ ಡೆತ್: ಉತ್ತರ ಪ್ರದೇಶದಲ್ಲಿ ಅತಿಹೆಚ್ಚು ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...