Homeಮುಖಪುಟಹತ್ರಾಸ್ ಪ್ರಕರಣದ ಆರೋಪಿಗಳು ಈಗ 'ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ರಾಷ್ಟ್ರವ್ಯಾಪಿ ಕೋಲಾಹಲದ ಮಧ್ಯೆಯೇ ಬಿಜೆಪಿ ಮಾಜಿ ಶಾಸಕ ರಾಜವೀರ್ ಪಹಲ್ವಾನ್ ಹತ್ರಾಸ್‌ನ ತಮ್ಮ ನಿವಾಸದಲ್ಲಿ ಮೇಲ್ವರ್ಗದ ಸದಸ್ಯರ ಮಹಾಪಂಚಾಯತ್ ನಡೆಸಿದ್ದಾರೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ರಕ್ಷಿಸುವ ಕೆಲಸ ಮೇಲ್ಜಾತಿ ಸಮುದಾಯದಿಂದ ನಡೆಯುತ್ತಿದೆ. ಆರೋಪಿಗಳು ಅಮಾಯಕರು, ಅವರನ್ನು ಸುಕಾ ಸುಮ್ಮನೆ ಪ್ರಕರಣದಲ್ಲಿ ಎಳೆದು ತರಲಾಗುತ್ತಿದೆ ಎನ್ನುತ್ತಿದ್ದಾರೆ. ಹತ್ರಾಸ್‌ನಲ್ಲಿ ಇಂದು ನಡೆದ ಮೇಲ್ವರ್ಗದ ಸದಸ್ಯರ ಮಹಾಪಂಚಾಯತ್ 2ನೇ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮಾಜಿ ಶಾಸಕ ರಾಜವೀರ್ ಪಹಲ್ವಾನ್, ’ಈ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಗಳು ಈಗ ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ನಾಲ್ವರು ಮೇಲ್ಜಾತಿಯ ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ಯುವತಿ ಸಾವನ್ನಪ್ಪಿದ್ದರು. ಸ್ಥಳೀಯ ಪೊಲೀಸರು ಮರುದಿನ ಮುಂಜಾನೆ 2.30ಕ್ಕೆ ಮೃತ ಯುವತಿಯ ದೇಹವನ್ನು ಕುಟುಂಬಕ್ಕೆ ಒಪ್ಪಿಸದೇ ಸುಟ್ಟುಹಾಕಿದ್ದರು. ಈ ಪ್ರಕರಣ ದೇಶಾದ್ಯಂತ ಭಾರಿ ಪ್ರತಿಭಟನೆಗೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗುತ್ತಿದೆ.

ಇದನ್ನೂ ಓದು: ಸಂತ್ರಸ್ತ ಕುಟುಂಬದ ಮೇಲೆ FIR ದಾಖಲಿಸಿ: ಮೇಲ್ಜಾತಿಗಳ ಬೃಹತ್ ಸಭೆಯಲ್ಲಿ ಒತ್ತಾಯ!

ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬಗ್ಗೆ ರಾಷ್ಟ್ರವ್ಯಾಪಿ ಕೋಲಾಹಲದ ಮಧ್ಯೆಯೇ, ಬಿಜೆಪಿ ಮಾಜಿ ಶಾಸಕ ರಾಜವೀರ್ ಪಹಲ್ವಾನ್ ಹತ್ರಾಸ್‌ನ ತಮ್ಮ ನಿವಾಸದಲ್ಲಿ ಮೇಲ್ವರ್ಗದ ಸದಸ್ಯರ ಮಹಾಪಂಚಾಯತ್ ಸಭೆ ನಡೆಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿರುವುದನ್ನು ಸ್ವಾಗತಿಸಿರುವ ಪಹಲ್ವಾನ್, ತನಿಖೆ ಘಟನೆಯ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದರು. ಸಭೆಯಲ್ಲಿ ಮೇಲ್ಜಾತಿಯ ಸದಸ್ಯರು, ಸಂತ್ರಸ್ತೆಯ ಕುಟುಂಬ ನಾರ್ಕೋ ಪರೀಕ್ಷೆ ನಿರಾಕರಿಸುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಇನ್ನು, ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ ವಕೀಲರು, ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ಭೇಟಿಯಾಗುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವದ ಬೆಳವಣಿಗೆ: ಮೇಲ್ಜಾತಿಗಳ ಧ್ರುವೀಕರಣದ ಬಂಡಾಯವೇ? – ಜಾನ್ ಡ್ರೀಜ್ ವಿಶೇಷ ಲೇಖನ

ಯುವತಿಯ ಕುಟುಂಬ ಸದಸ್ಯರು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಿಗೂ ನಾರ್ಕೊ-ಅನಾಲಿಸಿಸ್ ಪಾಲಿಗ್ರಾಫ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ಶುಕ್ರವಾರ ಆದೇಶಿಸಿತ್ತು. ಸೆಪ್ಟೆಂಬರ್ 14 ರಂದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂಬ ಯುವತಿಯ ಆರೋಪಕ್ಕೆ ರಾಜ್ಯ ಸರ್ಕಾರ ನಡೆಸಿದ ಶವಪರೀಕ್ಷೆಯ ವರದಿಯು ವಿರುದ್ಧವಾಗಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ಸಂತ್ರಸ್ತೆ ಕುಟುಂಬ ನಾರ್ಕೊ ಪರೀಕ್ಷೆಗೆ ಒಳಗಾಗಲು ನಿರಾಕರಿಸಿದೆ ಮತ್ತು ಈ ವಿಷಯದಲ್ಲಿ ಸುಪ್ರೀಂಕೋರ್ಟ್ ಮೂಲಕ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ.

ಶುಕ್ರವಾರವೂ (ಅ.02) ಸಹ ಮೃತ ಸಂತ್ರಸ್ತ ಯುವತಿ ವಾಸಿಸುತ್ತಿದ್ದ ಹಳ್ಳಿಯ ಸಮೀಪದಲ್ಲೇ ಮೇಲ್ಜಾತಿ ಸಮುದಾಯದವರು ಸಭೆ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮೊದಲ ಸಭೆಯಲ್ಲಿ ಪ್ರಕರಣದ ನಾಲ್ವರು ಆರೋಪಿಗಳು ನಿರಪರಾಧಿಗಳು ಎಂದು ಹೇಳಿದರು. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು. ಬಂಧಿತ ಆರೋಪಿಗಳನ್ನು ಬಿಡುಗಡೆ ಮಾಡದಿದ್ದರೆ ಆಂದೋಲನ ನಡೆಸುವುದಾಗಿ ಬೆದರಿಕೆ ಕೂಡ ಹಾಕಿದರು.


ಇದನ್ನೂ ಓದಿ: ಇದು ಎಲ್ಲಾ ಮೇಲ್ಜಾತಿ ಜನರೂ ಪ್ರತಿಕ್ರಿಯಿಸಲೇಬೇಕಾದ ಸಮಯ, ಮಾಧ್ಯಮಗಳಲ್ಲಿರುವ ಮೇಲ್ಜಾತಿಯವರನ್ನೂ ಒಳಗೊಂಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...