Homeಮುಖಪುಟದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಅತ್ಯಾಚಾರ ಆರೋಪಿಗಳು ಅಮಾಯಕರು ಎಂದು ಸಂಘಟನೆಯು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದೆ.

- Advertisement -
- Advertisement -

ಭೀಕರ ಅತ್ಯಾಚಾರಕ್ಕೆ ಒಳಗಾಗಿ ಅಸುನೀಗಿದ ಉತ್ತರ ಪ್ರದೇಶದ ಹತ್ರಾಸ್ ಸಂತ್ರಸ್ತೆಗೆ ನ್ಯಾಯ ಬೇಕು ಎಂದು ದೇಶವೇ ಪ್ರತಿಭಟನೆಗೆ ಇಳಿದಿದ್ದರೆ, ಇಲ್ಲೊಂದು ಸಂಘಟನೆ ಆಕೆಯ ಮೇಲೆ ಅತ್ಯಾಚಾರ, ಹಲ್ಲೆ ನಡೆದಿಲ್ಲ ಎಂದು ಆರೋಪಿಗಳ ಪರ ನಿಂತಿದೆ.

ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಹೆಸರಿಗಷ್ಟೇ ಇರುವ ಸ್ವತಂತ್ರ, ರಕ್ಷಣೆಗಳ ಕರಾಳ ಮುಖ ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಇದಕ್ಕೆ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಮತ್ತಷ್ಟು ಸಾಕ್ಷಿಗಳನ್ನು ಒದಗಿಸುತ್ತಲೇ ಇವೆ.

ಅಮಾನುಷವಾಗಿ ಅತ್ಯಾಚಾರ, ಹಲ್ಲೆಗೆ ಒಳಗಾಗಿದ್ದ ಹತ್ರಾಸ್‌ನ 19 ವರ್ಷದ ಯುವತಿ ನಿನ್ನೆ ದೆಹಲಿಯ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ದೇಶಾದ್ಯಂತ ಮಾನವೀಯ ಮನಸ್ಸುಗಳು ಯುವತಿಯ ಪರ ನ್ಯಾಯಕ್ಕಾಗಿ ಪ್ರತಿಭಟನೆಗಿಳಿದಿವೆ. ಆದರೆ ಉತ್ತರ ಪ್ರದೇಶದ ಸವರ್ಣ ಪರಿಷತ್ ಮಾತ್ರ ಆರೋಪಿಗಳು ಅಮಾಯಕರು ಎಂದು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ರಾಷ್ಟ್ರೀಯ ಸವರ್ಣ ಪರಿಷತ್‌ನ ರಾಷ್ಟ್ರೀಯ ಪ್ರಚಾರಕ ಪಂಕಜ್ ಧವರಾಯ ನೇತೃತ್ವದಲ್ಲಿ ಹಲವು ಮಂದಿ ಸದಸ್ಯರು ಆರೋಪಿಗಳನ್ನು ರಕ್ಷಿಸಲು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದ್ದರು.  ತಮ್ಮ ರಾಜಕೀಯ ಬೇಳೆ ಬೇಯಿಸಲು ಆರೋಪಿಗಳ ಪರ, ಅವರ ರಕ್ಷಣೆಗೆ ಈ ಸಂಘಟನೆ ಸದಸ್ಯರು ನಿಂತರು ಎಂದು ವರದಿಯಾಗಿರುವ ಪತ್ರಿಕೆ ತುಣುಕು ವೈರಲ್ ಆಗಿದೆ.

ಸವರ್ಣ ಪರಿಷತ್‌ ಸದಸ್ಯರ ಪ್ರಕಾರ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಮತ್ತು ಆರೋಪಿಗಳನ್ನು ಸುಮ್ಮನೆ ಪ್ರಕರಣದಲ್ಲಿ ಸಿಕ್ಕಿಹಾಕಿಸಲಾಗುತ್ತಿದೆ ಎಂದಿದ್ದಾರೆ. ಆದರೆ ಯುವತಿಯ ವೈದ್ಯಕೀಯ ವರದಿಯಲ್ಲಿ ಎಲ್ಲವೂ ಬೆಳಕಿಗೆ ಬಂದಿದೆ. ಇದರಲರ್‍ಲಿ ಗಮನಿಸಬೇಕಾದ ವಿಷಯವೆಂದರೆ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಈ ನಾಲ್ವರು ಆರೋಪಿಗಳು ಮೇಲ್ಜಾತಿಗೆ ಸೇರಿದ ಸಮಾಜದಿಂದ ಬಂದವರಾಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಪತ್ರಿಕೆಯ ತುಣುಕು ನೋಡಿದ ನಂತರ, ಜನರ ಪ್ರತಿಕ್ರಿಯೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜ್ಯದಲ್ಲಿ ಜಾತಿಯಾಧಾರದಲ್ಲಿ ಪೊಲೀಸರು ಅಪರಾಧ ಮತ್ತು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಜಾತಿಯ ಆಧಾರದ ಮೇಲೆ ಅತ್ಯಾಚಾರದಂತಹ ಗಂಭೀರ ಆರೋಪಗಳಲ್ಲಿ ತಪ್ಪಿತಸ್ಥರನ್ನು ಉಳಿಸಲು ಆರೋಪಿಗಳ ಪರ ಒಂದು ಸಂಸ್ಥೆ ಮುಂದಾಗಿರುವುದು ನಾಚಿಕೆಗೇಡು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆಯ ನಂತರ, ಸವರ್ಣ ಪರಿಷತ್ ಪ್ರಚಾರಕರನ್ನು ಸಂಪರ್ಕಿಸಲು ಕೆಲ ಮಾಧ್ಯಮಗಳು ಪ್ರಯತ್ನಿಸಿದ್ದರು ಸಂಪರ್ಕಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ಸೆ.14 ಸಾಮೂಹಿಕ ಅತ್ಯಾಚಾರ ನಡೆದರು ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದ್ದರು, ನಂತರ ಪ್ರಕರಣದ ಕಾವು ಹೆಚ್ಚಾದಾಗ ಮತ್ತು ಯುವತಿಯ ಸ್ಥಿತಿ ಗಂಭೀರವಾದ ಹಿನ್ನೆಲೆ, ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು, ಸೆ. 21 ರಂದು 376 ಮತ್ತು 376ಡಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ನಿನ್ನೆ ಸಾವನ್ನಪ್ಪಿದ ನಂತರ ಅವರ ಅಂತ್ಯ ಸಂಸ್ಕಾರಕ್ಕೆ ಕುಟುಂಬದವರನ್ನೇ ದೂರವಿಟ್ಟ ಪೊಲೀಸರ ಕ್ರಮ ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2019 ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 4,05,861 ಪ್ರಕರಣಗಳು ದಾಖಲಾಗಿವೆ. ಇದು, ಹಿಂದಿನ ವರ್ಷಕ್ಕಿಂತ (2018) ಶೇ. 7ರಷ್ಟು ಹೆಚ್ಚಾಗಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...