Homeಮುಖಪುಟದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಅತ್ಯಾಚಾರ ಆರೋಪಿಗಳು ಅಮಾಯಕರು ಎಂದು ಸಂಘಟನೆಯು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದೆ.

- Advertisement -
- Advertisement -

ಭೀಕರ ಅತ್ಯಾಚಾರಕ್ಕೆ ಒಳಗಾಗಿ ಅಸುನೀಗಿದ ಉತ್ತರ ಪ್ರದೇಶದ ಹತ್ರಾಸ್ ಸಂತ್ರಸ್ತೆಗೆ ನ್ಯಾಯ ಬೇಕು ಎಂದು ದೇಶವೇ ಪ್ರತಿಭಟನೆಗೆ ಇಳಿದಿದ್ದರೆ, ಇಲ್ಲೊಂದು ಸಂಘಟನೆ ಆಕೆಯ ಮೇಲೆ ಅತ್ಯಾಚಾರ, ಹಲ್ಲೆ ನಡೆದಿಲ್ಲ ಎಂದು ಆರೋಪಿಗಳ ಪರ ನಿಂತಿದೆ.

ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಹೆಸರಿಗಷ್ಟೇ ಇರುವ ಸ್ವತಂತ್ರ, ರಕ್ಷಣೆಗಳ ಕರಾಳ ಮುಖ ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ಇದಕ್ಕೆ ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಮತ್ತಷ್ಟು ಸಾಕ್ಷಿಗಳನ್ನು ಒದಗಿಸುತ್ತಲೇ ಇವೆ.

ಅಮಾನುಷವಾಗಿ ಅತ್ಯಾಚಾರ, ಹಲ್ಲೆಗೆ ಒಳಗಾಗಿದ್ದ ಹತ್ರಾಸ್‌ನ 19 ವರ್ಷದ ಯುವತಿ ನಿನ್ನೆ ದೆಹಲಿಯ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ದೇಶಾದ್ಯಂತ ಮಾನವೀಯ ಮನಸ್ಸುಗಳು ಯುವತಿಯ ಪರ ನ್ಯಾಯಕ್ಕಾಗಿ ಪ್ರತಿಭಟನೆಗಿಳಿದಿವೆ. ಆದರೆ ಉತ್ತರ ಪ್ರದೇಶದ ಸವರ್ಣ ಪರಿಷತ್ ಮಾತ್ರ ಆರೋಪಿಗಳು ಅಮಾಯಕರು ಎಂದು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಯುಪಿ ದಲಿತ ಯುವತಿ ಆಸ್ಪತ್ರೆಯಲ್ಲಿ ಸಾವು

ರಾಷ್ಟ್ರೀಯ ಸವರ್ಣ ಪರಿಷತ್‌ನ ರಾಷ್ಟ್ರೀಯ ಪ್ರಚಾರಕ ಪಂಕಜ್ ಧವರಾಯ ನೇತೃತ್ವದಲ್ಲಿ ಹಲವು ಮಂದಿ ಸದಸ್ಯರು ಆರೋಪಿಗಳನ್ನು ರಕ್ಷಿಸಲು ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಿದ್ದರು.  ತಮ್ಮ ರಾಜಕೀಯ ಬೇಳೆ ಬೇಯಿಸಲು ಆರೋಪಿಗಳ ಪರ, ಅವರ ರಕ್ಷಣೆಗೆ ಈ ಸಂಘಟನೆ ಸದಸ್ಯರು ನಿಂತರು ಎಂದು ವರದಿಯಾಗಿರುವ ಪತ್ರಿಕೆ ತುಣುಕು ವೈರಲ್ ಆಗಿದೆ.

ಸವರ್ಣ ಪರಿಷತ್‌ ಸದಸ್ಯರ ಪ್ರಕಾರ ಯುವತಿಯ ಮೇಲೆ ಅತ್ಯಾಚಾರ ನಡೆದಿಲ್ಲ ಮತ್ತು ಆರೋಪಿಗಳನ್ನು ಸುಮ್ಮನೆ ಪ್ರಕರಣದಲ್ಲಿ ಸಿಕ್ಕಿಹಾಕಿಸಲಾಗುತ್ತಿದೆ ಎಂದಿದ್ದಾರೆ. ಆದರೆ ಯುವತಿಯ ವೈದ್ಯಕೀಯ ವರದಿಯಲ್ಲಿ ಎಲ್ಲವೂ ಬೆಳಕಿಗೆ ಬಂದಿದೆ. ಇದರಲರ್‍ಲಿ ಗಮನಿಸಬೇಕಾದ ವಿಷಯವೆಂದರೆ ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಈ ನಾಲ್ವರು ಆರೋಪಿಗಳು ಮೇಲ್ಜಾತಿಗೆ ಸೇರಿದ ಸಮಾಜದಿಂದ ಬಂದವರಾಗಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಈ ಪತ್ರಿಕೆಯ ತುಣುಕು ನೋಡಿದ ನಂತರ, ಜನರ ಪ್ರತಿಕ್ರಿಯೆಗಳು ಮತ್ತಷ್ಟು ತೀವ್ರಗೊಂಡಿವೆ. ರಾಜ್ಯದಲ್ಲಿ ಜಾತಿಯಾಧಾರದಲ್ಲಿ ಪೊಲೀಸರು ಅಪರಾಧ ಮತ್ತು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಮತ್ತೊಂದು ಘಟನೆ; 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

ಜಾತಿಯ ಆಧಾರದ ಮೇಲೆ ಅತ್ಯಾಚಾರದಂತಹ ಗಂಭೀರ ಆರೋಪಗಳಲ್ಲಿ ತಪ್ಪಿತಸ್ಥರನ್ನು ಉಳಿಸಲು ಆರೋಪಿಗಳ ಪರ ಒಂದು ಸಂಸ್ಥೆ ಮುಂದಾಗಿರುವುದು ನಾಚಿಕೆಗೇಡು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ಘಟನೆಯ ನಂತರ, ಸವರ್ಣ ಪರಿಷತ್ ಪ್ರಚಾರಕರನ್ನು ಸಂಪರ್ಕಿಸಲು ಕೆಲ ಮಾಧ್ಯಮಗಳು ಪ್ರಯತ್ನಿಸಿದ್ದರು ಸಂಪರ್ಕಿಸಲು ಸಾಧ್ಯವಾಗಿಲ್ಲ ಎನ್ನಲಾಗಿದೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ಸೆ.14 ಸಾಮೂಹಿಕ ಅತ್ಯಾಚಾರ ನಡೆದರು ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿದ್ದರು, ನಂತರ ಪ್ರಕರಣದ ಕಾವು ಹೆಚ್ಚಾದಾಗ ಮತ್ತು ಯುವತಿಯ ಸ್ಥಿತಿ ಗಂಭೀರವಾದ ಹಿನ್ನೆಲೆ, ಸ್ಥಳೀಯ ನಾಯಕರ ಒತ್ತಡಕ್ಕೆ ಮಣಿದು, ಸೆ. 21 ರಂದು 376 ಮತ್ತು 376ಡಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವತಿ ನಿನ್ನೆ ಸಾವನ್ನಪ್ಪಿದ ನಂತರ ಅವರ ಅಂತ್ಯ ಸಂಸ್ಕಾರಕ್ಕೆ ಕುಟುಂಬದವರನ್ನೇ ದೂರವಿಟ್ಟ ಪೊಲೀಸರ ಕ್ರಮ ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿದೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2019 ರಲ್ಲಿ ಪ್ರತಿದಿನ ಸರಾಸರಿ 87 ಅತ್ಯಾಚಾರ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 4,05,861 ಪ್ರಕರಣಗಳು ದಾಖಲಾಗಿವೆ. ಇದು, ಹಿಂದಿನ ವರ್ಷಕ್ಕಿಂತ (2018) ಶೇ. 7ರಷ್ಟು ಹೆಚ್ಚಾಗಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...