Homeಮುಖಪುಟಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ಹಿಂದೂ-ಮುಸ್ಲಿಂ ಸಮುದಾಯದಲ್ಲಿ ದ್ವೇಷ ಸೃಷ್ಟಿಸಲು ಮತ್ತು ಪ್ರಕರಣದ ವಿಚಾರಣೆಯ ಗಮನವನ್ನು ಬೇರೆಡೆ ಸೆಳೆಯಲು (ಪಿಎಫ್‌ಐ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಕುಟುಂಬ ಸದಸ್ಯರು ಗೃಹಬಂಧನಕ್ಕೆ ಸಮಾನವಾದ ಪರಿಸ್ಥಿತಿಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ನೀಡಿದ್ದ ಸಿಆರ್‌ಪಿಎಫ್‌ ಭದ್ರತೆ ಹಿಂತೆಗೆದುಕೊಂಡ ನಂತರ, ಕುಟುಂಬ ಸದಸ್ಯರು ಜೀವಭಯಕ್ಕೆ ಒಳಗಾಗಿದ್ದಾರೆ ಎಂದು ನಾಗರಿಕ ಹಕ್ಕುಗಳ ಸಂಘಟನೆಗಳು ತಿಳಿಸಿವೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL) ಈ ಪ್ರಕರಣದ ಬಗ್ಗೆ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ನಿಧಿಯ ಮೂಲಕ ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಭದ್ರತೆ ಮತ್ತು ಪುನರ್ವಸತಿ ಕಲ್ಪಿಸಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.

ಲಕ್ನೋದಲ್ಲಿ ಸುದ್ದಿಗೋಷ್ಠಿ ನಡೆಸಿದ ಪಿಯುಸಿಎಲ್ ಸದಸ್ಯರಾದ ಕಮಲ್ ಸಿಂಗ್, ಫರ್ಮನ್ ನಖ್ವಿ, ಅಲೋಕ್, ಶಶಿಕಾಂತ್ ಮತ್ತು ಕೆ.ಬಿ.ಮೌರ್ಯ, ಇಡೀ ಕುಟುಂಬವು ಗೃಹಬಂಧನದ ಪರಿಸ್ಥಿತಿಯಲ್ಲಿದೆ ಮತ್ತು ಅವರ ಸಾಮಾಜಿಕ ಬದುಕು ಸಮಾಜದಿಂದ ಪ್ರತ್ಯೇಕಗೊಂಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು

’CRPF ರಕ್ಷಣೆಯನ್ನು ಹಿಂತೆಗೆದುಕೊಂಡ ನಂತರ ಸಂತ್ರಸ್ತೆ ಕುಟುಂಬ ಸದಸ್ಯರು ಭಯದಲ್ಲಿ ಬದುಕುತ್ತಿದ್ದಾರೆ. ಕುಟುಂಬದ ಒಪ್ಪಿಗೆಯಿಲ್ಲದೆ ಮೃತ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಬೇಕು ಎಂದು ಪಿಯುಸಿಎಲ್ ಸದಸ್ಯರು ಒತ್ತಾಯಿಸಿದ್ದಾರೆ.

ಹಿಂದೂ-ಮುಸ್ಲಿಂ ಸಮುದಾಯದಲ್ಲಿ ದ್ವೇಷ ಸೃಷ್ಟಿಸಲು ಮತ್ತು ಪ್ರಕರಣದ ವಿಚಾರಣೆಯ ಗಮನವನ್ನು ಬೇರೆಡೆ ಸೆಳೆಯಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ ಎಂದು ಅಲೋಕ್ ಮತ್ತು ಫರ್ಮನ್ ನಖ್ವಿ ಆರೋಪಿಸಿದರು.

ಪಿಎಫ್‌ಐ ನಿಷೇಧಿತ ಸಂಸ್ಥೆಗಳ ಪಟ್ಟಿಯಲ್ಲಿಲ್ಲ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದನ್ನು ಉಗ್ರಗಾಮಿ ಸಂಸ್ಥೆ ಎಂದಿದ್ದಾರೆ ಎಂದು ಕಮಲ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಸೇರಿ ಮೂವರನ್ನು ಪಿಎಫ್‌ಐ ಸಂಘಟನೆಯವರು ಎಂದು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ಹೈಕೋರ್ಟ್ ಮೇಲ್ವಿಚಾರಣೆ ಮಾಡಲಿ: ಹತ್ರಾಸ್ CBI ತನಿಖೆ ಮೇಲ್ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...