Homeಮುಖಪುಟಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ಭಯದಲ್ಲಿ ಬದುಕುತ್ತಿದೆ ಹತ್ರಾಸ್ ಸಂತ್ರಸ್ತೆ ಕುಟುಂಬ: PUCL ಸತ್ಯಶೋಧನಾ ವರದಿ

ಹಿಂದೂ-ಮುಸ್ಲಿಂ ಸಮುದಾಯದಲ್ಲಿ ದ್ವೇಷ ಸೃಷ್ಟಿಸಲು ಮತ್ತು ಪ್ರಕರಣದ ವಿಚಾರಣೆಯ ಗಮನವನ್ನು ಬೇರೆಡೆ ಸೆಳೆಯಲು (ಪಿಎಫ್‌ಐ ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ಥೆಯ ಕುಟುಂಬ ಸದಸ್ಯರು ಗೃಹಬಂಧನಕ್ಕೆ ಸಮಾನವಾದ ಪರಿಸ್ಥಿತಿಗಳಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ನೀಡಿದ್ದ ಸಿಆರ್‌ಪಿಎಫ್‌ ಭದ್ರತೆ ಹಿಂತೆಗೆದುಕೊಂಡ ನಂತರ, ಕುಟುಂಬ ಸದಸ್ಯರು ಜೀವಭಯಕ್ಕೆ ಒಳಗಾಗಿದ್ದಾರೆ ಎಂದು ನಾಗರಿಕ ಹಕ್ಕುಗಳ ಸಂಘಟನೆಗಳು ತಿಳಿಸಿವೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL) ಈ ಪ್ರಕರಣದ ಬಗ್ಗೆ ಸತ್ಯಶೋಧನಾ ವರದಿಯನ್ನು ಬಿಡುಗಡೆ ಮಾಡಿದೆ. ನಿರ್ಭಯಾ ನಿಧಿಯ ಮೂಲಕ ಹತ್ರಾಸ್ ಸಂತ್ರಸ್ತ ಕುಟುಂಬಕ್ಕೆ ಭದ್ರತೆ ಮತ್ತು ಪುನರ್ವಸತಿ ಕಲ್ಪಿಸಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.

ಲಕ್ನೋದಲ್ಲಿ ಸುದ್ದಿಗೋಷ್ಠಿ ನಡೆಸಿದ ಪಿಯುಸಿಎಲ್ ಸದಸ್ಯರಾದ ಕಮಲ್ ಸಿಂಗ್, ಫರ್ಮನ್ ನಖ್ವಿ, ಅಲೋಕ್, ಶಶಿಕಾಂತ್ ಮತ್ತು ಕೆ.ಬಿ.ಮೌರ್ಯ, ಇಡೀ ಕುಟುಂಬವು ಗೃಹಬಂಧನದ ಪರಿಸ್ಥಿತಿಯಲ್ಲಿದೆ ಮತ್ತು ಅವರ ಸಾಮಾಜಿಕ ಬದುಕು ಸಮಾಜದಿಂದ ಪ್ರತ್ಯೇಕಗೊಂಡಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣ:’ಸೇಡು ತೀರಿಸಿಕೊಳ್ಳುವುದಲ್ಲ, ಬದಲಾವಣೆ ಬೇಕು’; ಮಹಿಳಾ ಸಂಘಟನೆಗಳು

’CRPF ರಕ್ಷಣೆಯನ್ನು ಹಿಂತೆಗೆದುಕೊಂಡ ನಂತರ ಸಂತ್ರಸ್ತೆ ಕುಟುಂಬ ಸದಸ್ಯರು ಭಯದಲ್ಲಿ ಬದುಕುತ್ತಿದ್ದಾರೆ. ಕುಟುಂಬದ ಒಪ್ಪಿಗೆಯಿಲ್ಲದೆ ಮೃತ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಬೇಕು ಎಂದು ಪಿಯುಸಿಎಲ್ ಸದಸ್ಯರು ಒತ್ತಾಯಿಸಿದ್ದಾರೆ.

ಹಿಂದೂ-ಮುಸ್ಲಿಂ ಸಮುದಾಯದಲ್ಲಿ ದ್ವೇಷ ಸೃಷ್ಟಿಸಲು ಮತ್ತು ಪ್ರಕರಣದ ವಿಚಾರಣೆಯ ಗಮನವನ್ನು ಬೇರೆಡೆ ಸೆಳೆಯಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಹೆಸರನ್ನು ಅನಗತ್ಯವಾಗಿ ಎಳೆದು ತರಲಾಗಿದೆ ಎಂದು ಅಲೋಕ್ ಮತ್ತು ಫರ್ಮನ್ ನಖ್ವಿ ಆರೋಪಿಸಿದರು.

ಪಿಎಫ್‌ಐ ನಿಷೇಧಿತ ಸಂಸ್ಥೆಗಳ ಪಟ್ಟಿಯಲ್ಲಿಲ್ಲ. ಆದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇದನ್ನು ಉಗ್ರಗಾಮಿ ಸಂಸ್ಥೆ ಎಂದಿದ್ದಾರೆ ಎಂದು ಕಮಲ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಸೇರಿ ಮೂವರನ್ನು ಪಿಎಫ್‌ಐ ಸಂಘಟನೆಯವರು ಎಂದು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.


ಇದನ್ನೂ ಓದಿ: ಹೈಕೋರ್ಟ್ ಮೇಲ್ವಿಚಾರಣೆ ಮಾಡಲಿ: ಹತ್ರಾಸ್ CBI ತನಿಖೆ ಮೇಲ್ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...