Homeಮುಖಪುಟಹತ್ರಾಸ್ ಅತ್ಯಾಚಾರ ಪ್ರಕರಣ: ವೈದ್ಯರು ಸೂಚಿಸಿದ್ದು ಏಮ್ಸ್‌ಗೆ, ದಾಖಲಿಸಿದ್ದು ದೆಹಲಿ ಸಫ್ದರ್‌ಜಂಗ್ ಆಸ್ಪತ್ರೆಗೆ!

ಹತ್ರಾಸ್ ಅತ್ಯಾಚಾರ ಪ್ರಕರಣ: ವೈದ್ಯರು ಸೂಚಿಸಿದ್ದು ಏಮ್ಸ್‌ಗೆ, ದಾಖಲಿಸಿದ್ದು ದೆಹಲಿ ಸಫ್ದರ್‌ಜಂಗ್ ಆಸ್ಪತ್ರೆಗೆ!

"ಸೆಪ್ಟೆಂಬರ್ 28 ರ ರಾತ್ರಿ, ಸಂತ್ರಸ್ತೆಯ ಕುಟುಂಬವು ಅವಳನ್ನು ಸ್ಥಳಾಂತರಿಸಲು ಅನುಮತಿ ಕೋರಿತು. ಹಾಗಾಗಿ ನಾವು ಸ್ವಯಿಚ್ಚೆಯಿಂದ ಆಕೆಯನ್ನು ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದ್ದೆವು" ಎಂದು ಪ್ರಾಂಶುಪಾಲರು ಹೇಳಿದರು.

- Advertisement -
- Advertisement -

“ಹತ್ರಾಸ್ ಅತ್ಯಾಚಾರ ಸಂತ್ರಸ್ತ ಯುವತಿಯನ್ನು ಏಮ್ಸ್‌ಗೆ ದಾಖಲಿಸಲು ಸೂಚಿಸಿದ್ದಾಗ್ಯೂ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಯಾಕೆ ಸೇರಿಸದರೆಂದು ತಿಳಿಯುತ್ತಿಲ್ಲ” ಎಂದು ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು (JNMC) ಆಸ್ಪತ್ರೆಯ ಪ್ರಾಂಶುಪಾಲರು ಹೇಳಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ, ಯುವತಿ JNMC ಆಸ್ಪತ್ರೆಯಲ್ಲಿ 2 ವಾರಕ್ಕಿಂತ ಹೆಚ್ಚುಕಾಲ ಚಿಕಿತ್ಸೆ ತೆಗೆದುಕೊಂಡಿದ್ದರು.

“ನಾವು ಏಮ್ಸ್‌ಗೆ ಸೂಚಿಸಿದಾಗ್ಯೂ, ಯುವತಿಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಯಾಕೆ ಸೇರಿಸಲಾಯಿತು ಎಂಬುದನ್ನು ನಾವು ವಿವರಿಸುವ ಸ್ಥಿತಿಯಲ್ಲಿಲ್ಲ” ಎಂದು ಪ್ರೊ.ಶಾಹಿದ್ ಸಿದ್ದಿಕಿ ಹೇಳಿದ್ದಾರೆ.

“ಸೆಪ್ಟೆಂಬರ್ 28 ರ ರಾತ್ರಿ, ಸಂತ್ರಸ್ತೆಯ ಕುಟುಂಬವು ಅವಳನ್ನು ಸ್ಥಳಾಂತರಿಸಲು ಅನುಮತಿ ಕೋರಿತು. ಹಾಗಾಗಿ ನಾವು ಸ್ವಯಿಚ್ಚೆಯಿಂದ ಆಕೆಯನ್ನು ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದ್ದೆವು” ಎಂದು ಅವರು ಹೇಳಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ಅದರೆ ಮರುದಿನ ಬೆಳಿಗ್ಗೆ, ಕುಟುಂಬ ಸದಸ್ಯರು ಯುವತಿಯೊಂದಿಗೆ ದೆಹಲಿಗೆ ತೆರಳಿದರು. ಈ ವಿಷಯದ ಬಗ್ಗೆ ಜೆಎನ್‌ಎಂಸಿ ಅಧಿಕಾರಿಗಳನ್ನು ಕೇಳಿದಾಗ, ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಈ ಪ್ರಶ್ನೆಗೆ ಹತ್ರಾಸ್ ಜಿಲ್ಲಾಡಳಿತವು ಪ್ರತಿಕ್ರಿಯಿಸಲು ಸಾಧ್ಯತೆಯಿದೆ. ಇದರಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ” ಹೇಳಿದೆ.

“ಸಾಮಾನ್ಯವಾಗಿ, ಉತ್ತಮ ವೈದ್ಯಕೀಯ ಸೌಲಭ್ಯಗಳಿಗಾಗಿ ರೋಗಿಯನ್ನು ಸ್ಥಳಾಂತರಿಸುವ ನಿರ್ಧಾರವನ್ನು ರೋಗಿಯ ಕುಟುಂಬದೊಂದಿಗೆ ಸಮಾಲೋಚಿಸಿ ವೈದ್ಯರು ತೆಗೆದುಕೊಳ್ಳುತ್ತಾರೆ. ಆದರೆ ಕುಟುಂಬ ಸದಸ್ಯರು ತಮ್ಮ ನಿರ್ಧಾರದಂತೆ ಹೋಗಲು ಬಯಸಿದರೆ, ಅವರು ಹಾಗೆಯೂ ಮಾಡಬಹುದು. ನಾವು ಯಾವಾಗಲೂ ಅದಕ್ಕೆ ಸಹಕರಿಸುತ್ತೇವೆ” ಎಂದು ಸಿದ್ದಿಕಿ ಹೇಳಿದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಯುವತಿಯ ಗಾಯಗಳಿಗೆ ಸಂಬಂಧಿಸಿದಂತೆ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಗಳ ಬಗ್ಗೆ ಪ್ರಶ್ನಿಸಿದಾಗ, “ಅದನ್ನು ತನಿಖಾಧಿಕಾರಿ ಮತ್ತು ನ್ಯಾಯಾಲಯಕ್ಕೆ ಮಾತ್ರ ಸಲ್ಲಿಸುತ್ತೇವೆ. ಊಹಾಪೂಹಗಳಿಗೆ ಅವಕಾಶವಿಲ್ಲ” ಎಂದು ಹೇಳಿದರು.

ಹತ್ರಾಸ್ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಮಂಗಳವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಅಂದು ಮಧ್ಯರಾತ್ರಿ ಪೊಲೀಸರು ಆಕೆಯ ಕುಟುಂಬದವರಿಗೂ ತಿಳಿಸದೇ ಶವಸಂಸ್ಕಾರ ಮಾಡಿದ್ದರು. ಇದರ ವಿರುದ್ಧ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಇಂತಹದ್ದೇ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...