Homeಮುಖಪುಟಹತ್ರಾಸ್ ಅತ್ಯಾಚಾರ ಪ್ರಕರಣ: ವೈದ್ಯರು ಸೂಚಿಸಿದ್ದು ಏಮ್ಸ್‌ಗೆ, ದಾಖಲಿಸಿದ್ದು ದೆಹಲಿ ಸಫ್ದರ್‌ಜಂಗ್ ಆಸ್ಪತ್ರೆಗೆ!

ಹತ್ರಾಸ್ ಅತ್ಯಾಚಾರ ಪ್ರಕರಣ: ವೈದ್ಯರು ಸೂಚಿಸಿದ್ದು ಏಮ್ಸ್‌ಗೆ, ದಾಖಲಿಸಿದ್ದು ದೆಹಲಿ ಸಫ್ದರ್‌ಜಂಗ್ ಆಸ್ಪತ್ರೆಗೆ!

"ಸೆಪ್ಟೆಂಬರ್ 28 ರ ರಾತ್ರಿ, ಸಂತ್ರಸ್ತೆಯ ಕುಟುಂಬವು ಅವಳನ್ನು ಸ್ಥಳಾಂತರಿಸಲು ಅನುಮತಿ ಕೋರಿತು. ಹಾಗಾಗಿ ನಾವು ಸ್ವಯಿಚ್ಚೆಯಿಂದ ಆಕೆಯನ್ನು ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದ್ದೆವು" ಎಂದು ಪ್ರಾಂಶುಪಾಲರು ಹೇಳಿದರು.

- Advertisement -
- Advertisement -

“ಹತ್ರಾಸ್ ಅತ್ಯಾಚಾರ ಸಂತ್ರಸ್ತ ಯುವತಿಯನ್ನು ಏಮ್ಸ್‌ಗೆ ದಾಖಲಿಸಲು ಸೂಚಿಸಿದ್ದಾಗ್ಯೂ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಯಾಕೆ ಸೇರಿಸದರೆಂದು ತಿಳಿಯುತ್ತಿಲ್ಲ” ಎಂದು ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು (JNMC) ಆಸ್ಪತ್ರೆಯ ಪ್ರಾಂಶುಪಾಲರು ಹೇಳಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ, ಯುವತಿ JNMC ಆಸ್ಪತ್ರೆಯಲ್ಲಿ 2 ವಾರಕ್ಕಿಂತ ಹೆಚ್ಚುಕಾಲ ಚಿಕಿತ್ಸೆ ತೆಗೆದುಕೊಂಡಿದ್ದರು.

“ನಾವು ಏಮ್ಸ್‌ಗೆ ಸೂಚಿಸಿದಾಗ್ಯೂ, ಯುವತಿಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಯಾಕೆ ಸೇರಿಸಲಾಯಿತು ಎಂಬುದನ್ನು ನಾವು ವಿವರಿಸುವ ಸ್ಥಿತಿಯಲ್ಲಿಲ್ಲ” ಎಂದು ಪ್ರೊ.ಶಾಹಿದ್ ಸಿದ್ದಿಕಿ ಹೇಳಿದ್ದಾರೆ.

“ಸೆಪ್ಟೆಂಬರ್ 28 ರ ರಾತ್ರಿ, ಸಂತ್ರಸ್ತೆಯ ಕುಟುಂಬವು ಅವಳನ್ನು ಸ್ಥಳಾಂತರಿಸಲು ಅನುಮತಿ ಕೋರಿತು. ಹಾಗಾಗಿ ನಾವು ಸ್ವಯಿಚ್ಚೆಯಿಂದ ಆಕೆಯನ್ನು ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದ್ದೆವು” ಎಂದು ಅವರು ಹೇಳಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ಅದರೆ ಮರುದಿನ ಬೆಳಿಗ್ಗೆ, ಕುಟುಂಬ ಸದಸ್ಯರು ಯುವತಿಯೊಂದಿಗೆ ದೆಹಲಿಗೆ ತೆರಳಿದರು. ಈ ವಿಷಯದ ಬಗ್ಗೆ ಜೆಎನ್‌ಎಂಸಿ ಅಧಿಕಾರಿಗಳನ್ನು ಕೇಳಿದಾಗ, ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಈ ಪ್ರಶ್ನೆಗೆ ಹತ್ರಾಸ್ ಜಿಲ್ಲಾಡಳಿತವು ಪ್ರತಿಕ್ರಿಯಿಸಲು ಸಾಧ್ಯತೆಯಿದೆ. ಇದರಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ” ಹೇಳಿದೆ.

“ಸಾಮಾನ್ಯವಾಗಿ, ಉತ್ತಮ ವೈದ್ಯಕೀಯ ಸೌಲಭ್ಯಗಳಿಗಾಗಿ ರೋಗಿಯನ್ನು ಸ್ಥಳಾಂತರಿಸುವ ನಿರ್ಧಾರವನ್ನು ರೋಗಿಯ ಕುಟುಂಬದೊಂದಿಗೆ ಸಮಾಲೋಚಿಸಿ ವೈದ್ಯರು ತೆಗೆದುಕೊಳ್ಳುತ್ತಾರೆ. ಆದರೆ ಕುಟುಂಬ ಸದಸ್ಯರು ತಮ್ಮ ನಿರ್ಧಾರದಂತೆ ಹೋಗಲು ಬಯಸಿದರೆ, ಅವರು ಹಾಗೆಯೂ ಮಾಡಬಹುದು. ನಾವು ಯಾವಾಗಲೂ ಅದಕ್ಕೆ ಸಹಕರಿಸುತ್ತೇವೆ” ಎಂದು ಸಿದ್ದಿಕಿ ಹೇಳಿದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಯುವತಿಯ ಗಾಯಗಳಿಗೆ ಸಂಬಂಧಿಸಿದಂತೆ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಗಳ ಬಗ್ಗೆ ಪ್ರಶ್ನಿಸಿದಾಗ, “ಅದನ್ನು ತನಿಖಾಧಿಕಾರಿ ಮತ್ತು ನ್ಯಾಯಾಲಯಕ್ಕೆ ಮಾತ್ರ ಸಲ್ಲಿಸುತ್ತೇವೆ. ಊಹಾಪೂಹಗಳಿಗೆ ಅವಕಾಶವಿಲ್ಲ” ಎಂದು ಹೇಳಿದರು.

ಹತ್ರಾಸ್ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಮಂಗಳವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಅಂದು ಮಧ್ಯರಾತ್ರಿ ಪೊಲೀಸರು ಆಕೆಯ ಕುಟುಂಬದವರಿಗೂ ತಿಳಿಸದೇ ಶವಸಂಸ್ಕಾರ ಮಾಡಿದ್ದರು. ಇದರ ವಿರುದ್ಧ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಇಂತಹದ್ದೇ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...