Homeಮುಖಪುಟಹತ್ರಾಸ್ ಅತ್ಯಾಚಾರ ಪ್ರಕರಣ: ವೈದ್ಯರು ಸೂಚಿಸಿದ್ದು ಏಮ್ಸ್‌ಗೆ, ದಾಖಲಿಸಿದ್ದು ದೆಹಲಿ ಸಫ್ದರ್‌ಜಂಗ್ ಆಸ್ಪತ್ರೆಗೆ!

ಹತ್ರಾಸ್ ಅತ್ಯಾಚಾರ ಪ್ರಕರಣ: ವೈದ್ಯರು ಸೂಚಿಸಿದ್ದು ಏಮ್ಸ್‌ಗೆ, ದಾಖಲಿಸಿದ್ದು ದೆಹಲಿ ಸಫ್ದರ್‌ಜಂಗ್ ಆಸ್ಪತ್ರೆಗೆ!

"ಸೆಪ್ಟೆಂಬರ್ 28 ರ ರಾತ್ರಿ, ಸಂತ್ರಸ್ತೆಯ ಕುಟುಂಬವು ಅವಳನ್ನು ಸ್ಥಳಾಂತರಿಸಲು ಅನುಮತಿ ಕೋರಿತು. ಹಾಗಾಗಿ ನಾವು ಸ್ವಯಿಚ್ಚೆಯಿಂದ ಆಕೆಯನ್ನು ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದ್ದೆವು" ಎಂದು ಪ್ರಾಂಶುಪಾಲರು ಹೇಳಿದರು.

- Advertisement -
- Advertisement -

“ಹತ್ರಾಸ್ ಅತ್ಯಾಚಾರ ಸಂತ್ರಸ್ತ ಯುವತಿಯನ್ನು ಏಮ್ಸ್‌ಗೆ ದಾಖಲಿಸಲು ಸೂಚಿಸಿದ್ದಾಗ್ಯೂ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಯಾಕೆ ಸೇರಿಸದರೆಂದು ತಿಳಿಯುತ್ತಿಲ್ಲ” ಎಂದು ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು (JNMC) ಆಸ್ಪತ್ರೆಯ ಪ್ರಾಂಶುಪಾಲರು ಹೇಳಿದ್ದಾರೆ. ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ, ಯುವತಿ JNMC ಆಸ್ಪತ್ರೆಯಲ್ಲಿ 2 ವಾರಕ್ಕಿಂತ ಹೆಚ್ಚುಕಾಲ ಚಿಕಿತ್ಸೆ ತೆಗೆದುಕೊಂಡಿದ್ದರು.

“ನಾವು ಏಮ್ಸ್‌ಗೆ ಸೂಚಿಸಿದಾಗ್ಯೂ, ಯುವತಿಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಯಾಕೆ ಸೇರಿಸಲಾಯಿತು ಎಂಬುದನ್ನು ನಾವು ವಿವರಿಸುವ ಸ್ಥಿತಿಯಲ್ಲಿಲ್ಲ” ಎಂದು ಪ್ರೊ.ಶಾಹಿದ್ ಸಿದ್ದಿಕಿ ಹೇಳಿದ್ದಾರೆ.

“ಸೆಪ್ಟೆಂಬರ್ 28 ರ ರಾತ್ರಿ, ಸಂತ್ರಸ್ತೆಯ ಕುಟುಂಬವು ಅವಳನ್ನು ಸ್ಥಳಾಂತರಿಸಲು ಅನುಮತಿ ಕೋರಿತು. ಹಾಗಾಗಿ ನಾವು ಸ್ವಯಿಚ್ಚೆಯಿಂದ ಆಕೆಯನ್ನು ಏಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲು ಸೂಚಿಸಿದ್ದೆವು” ಎಂದು ಅವರು ಹೇಳಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಮತ್ತೊಬ್ಬ ದಲಿತ ಯುವತಿ ಮೇಲೆ ಅತ್ಯಾಚಾರ, ಕೊಲೆ

ಅದರೆ ಮರುದಿನ ಬೆಳಿಗ್ಗೆ, ಕುಟುಂಬ ಸದಸ್ಯರು ಯುವತಿಯೊಂದಿಗೆ ದೆಹಲಿಗೆ ತೆರಳಿದರು. ಈ ವಿಷಯದ ಬಗ್ಗೆ ಜೆಎನ್‌ಎಂಸಿ ಅಧಿಕಾರಿಗಳನ್ನು ಕೇಳಿದಾಗ, ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಈ ಪ್ರಶ್ನೆಗೆ ಹತ್ರಾಸ್ ಜಿಲ್ಲಾಡಳಿತವು ಪ್ರತಿಕ್ರಿಯಿಸಲು ಸಾಧ್ಯತೆಯಿದೆ. ಇದರಲ್ಲಿ ನಮ್ಮದು ಯಾವುದೇ ಪಾತ್ರವಿಲ್ಲ” ಹೇಳಿದೆ.

“ಸಾಮಾನ್ಯವಾಗಿ, ಉತ್ತಮ ವೈದ್ಯಕೀಯ ಸೌಲಭ್ಯಗಳಿಗಾಗಿ ರೋಗಿಯನ್ನು ಸ್ಥಳಾಂತರಿಸುವ ನಿರ್ಧಾರವನ್ನು ರೋಗಿಯ ಕುಟುಂಬದೊಂದಿಗೆ ಸಮಾಲೋಚಿಸಿ ವೈದ್ಯರು ತೆಗೆದುಕೊಳ್ಳುತ್ತಾರೆ. ಆದರೆ ಕುಟುಂಬ ಸದಸ್ಯರು ತಮ್ಮ ನಿರ್ಧಾರದಂತೆ ಹೋಗಲು ಬಯಸಿದರೆ, ಅವರು ಹಾಗೆಯೂ ಮಾಡಬಹುದು. ನಾವು ಯಾವಾಗಲೂ ಅದಕ್ಕೆ ಸಹಕರಿಸುತ್ತೇವೆ” ಎಂದು ಸಿದ್ದಿಕಿ ಹೇಳಿದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಯುವತಿಯ ಗಾಯಗಳಿಗೆ ಸಂಬಂಧಿಸಿದಂತೆ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ವರದಿಗಳ ಬಗ್ಗೆ ಪ್ರಶ್ನಿಸಿದಾಗ, “ಅದನ್ನು ತನಿಖಾಧಿಕಾರಿ ಮತ್ತು ನ್ಯಾಯಾಲಯಕ್ಕೆ ಮಾತ್ರ ಸಲ್ಲಿಸುತ್ತೇವೆ. ಊಹಾಪೂಹಗಳಿಗೆ ಅವಕಾಶವಿಲ್ಲ” ಎಂದು ಹೇಳಿದರು.

ಹತ್ರಾಸ್ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಮಂಗಳವಾರ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಅಂದು ಮಧ್ಯರಾತ್ರಿ ಪೊಲೀಸರು ಆಕೆಯ ಕುಟುಂಬದವರಿಗೂ ತಿಳಿಸದೇ ಶವಸಂಸ್ಕಾರ ಮಾಡಿದ್ದರು. ಇದರ ವಿರುದ್ಧ ದೇಶದಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಇಂತಹದ್ದೇ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಈ ಪ್ರಕರಣದ ನಾಲ್ವರು ಆರೋಪಿಗಳು ಸದ್ಯ ಜೈಲಿನಲ್ಲಿದ್ದಾರೆ. ಮೃತ ಯುವತಿ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಅತ್ಯಾಚಾರ ಆರೋಪಿಗಳು ಮೇಲ್ಜಾತಿಯವರು ಎನ್ನಲಾಗಿದೆ. ಈ ಘಟನೆ ಇತ್ತೀಚಿನ ತಿಂಗಳುಗಳಲ್ಲಿ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಸಾಕ್ಷಿಯಾಗಿದ್ದು, ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...