Homeಮುಖಪುಟಹತ್ರಾಸ್ ಅತ್ಯಾಚಾರ ಪ್ರಕರಣ ಸಿಬಿಐಗೆ: ನಿನ್ನೆ ಪ್ರಿಯಾಂಕ, ರಾಹುಲ್ ಹತ್ರಾಸ್‌ಗೆ ಬೇಟಿ ನೀಡಿದ್ದರು

ಹತ್ರಾಸ್ ಅತ್ಯಾಚಾರ ಪ್ರಕರಣ ಸಿಬಿಐಗೆ: ನಿನ್ನೆ ಪ್ರಿಯಾಂಕ, ರಾಹುಲ್ ಹತ್ರಾಸ್‌ಗೆ ಬೇಟಿ ನೀಡಿದ್ದರು

ಕ್ರೂರವಾದ ಲೈಂಗಿಕ ದೌರ್ಜನ್ಯದಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬ ಹೇಳಿದೆ. ಆದರೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್, “ಯುವತಿಯ ಕುತ್ತಿಗೆಗೆ ಪೆಟ್ಟಾಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ. ವಿಧಿವಿಜ್ಞಾನದ ವರದಿಗಳಲ್ಲಿ ಯಾವುದೇ ವೀರ್ಯದ ಸಾಕ್ಷ್ಯ ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ತನಿಖೆ ನಡೆಸಲು ವಹಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಶನಿವಾರ ಸಂಜೆ ತಿಳಿಸಿದೆ. ನಿನ್ನೆ ರಾತ್ರಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಆದೇಶ ಹೊರಬಿದ್ದಿದೆ.

“ಇಡೀ ಹತ್ರಾಸ್ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ” ಎಂದು ಯುಪಿ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಶುಕ್ರವಾರ, ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಸೇರಿದಂತೆ ದೇಶಾದ್ಯಂತ ಪೊಲೀಸರು ಮತ್ತು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗಿದ್ದು, ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹಾಜರಿದ್ದು ನಾಲ್ವರು ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು.

ಎರಡು ದಿನಗಳ ಹಿಂದೆಯಷ್ಟೇ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನು ಉತ್ತರ ಪ್ರದೇಶದ ಪೊಲೀಸರು ತಳ್ಳಾಡಿ ಬಂಧಿಸಿದ್ದರು. ಆದರೆ ಅವರು ನಿನ್ನೆ ಪಟ್ಟು ಬಿಡದೆ ಹತ್ರಾಸ್‌ಗೆ ಪ್ರಯಾಣಿಸಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ಮುಂದೆಯೇ ಪ್ರತಿಭಟನೆ ನಡೆಸಿ, ಇದನ್ನು 2012ರ ನಿರ್ಭಯಾ ಪ್ರಕರಣದೊಂದಿಗೆ ಸಮೀಕರಿಸಿ ತಮ್ಮ ಆಕ್ರೋಶವನ್ನು ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ಹೊರಹಾಕಿದ್ದರು. ನಿನ್ನೆ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆದಿತ್ತು. ದೆಹಲಿಯ ಜಂತರ್ ಮಂತರ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಭೀಮ್ ಆರ್ಮಿಯ ಹೋರಾಟಗಾರರು ಸೇರಿದಂತೆ ನೂರಾರು ನಾಗರೀಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಯೋಗಿ ಸರ್ಕಾರದ ವಿರುದ್ಧ ಜನಾಕ್ರೋಶ ಮತ್ತು ಪ್ರತಿಭಟನೆಗಳು ಮುಗಿಲುಮುಟ್ಟಿದ್ದು, ಯೋಗಿ ರಾಜಿನಾಮೆ ನೀಡಬೇಕು, ಮತ್ತು ರಾಷ್ಟ್ರಪತಿ ಆಡಳಿತವನ್ನು ಹೇರಬೆಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಪ್ರಸ್ತುತ ಉತ್ತರಪ್ರದೇಶದ ಸ್ಥಿತಿ ಪ್ರಕ್ಷುಬ್ದ ವಾತಾವರಣದಲ್ಲಿದ್ದು, ಮಾಧ್ಯಮ ಸೇರಿದಂತೆ ಯಾವುದೇ ರಾಜಕಾರಣಿಗಳನ್ನೂ ಸಂತ್ರಸ್ತೆಯ ಕುಟುಂಬದ ಭೇಟಿಗೆ ಅನುಮತಿಸುತ್ತಿಲ್ಲ. ಗುರುವಾರ ಅವರ ಭೇಟಿಗಾಗಿ ಹೊರಟಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ತಡೆದು, ಅವರೊಟ್ಟಿಗೆ ಯುಪಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ನಿನ್ನೆ ಸಂತ್ರಸ್ತೆಯ ಸಹೋದರನೊಬ್ಬ ಯುಪಿ ಪೊಲೀಸರ ಗೃಹಬಂಧನದಿಂದ ತಪ್ಪಿಸಿಕೊಂಡು ಬಂದು, ಜಿಲ್ಲಾಡಳಿತ ಮತ್ತು ಪೊಲೀಸರು ತಮಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಮಾಧ್ಯಮಗಳ ಮುಂದೆ ಆರೋಪಿಸಿದ್ದ. ಇನ್ನು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ವಕೀಲೆ ಸೀಮಾ ಅವರನ್ನೂ ಪೊಲೀಸರು ತಡೆದಿದ್ದಾರೆ.

ಈ ವಿಷಯವನ್ನು ಸ್ವಯಂ ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳಿಗೆ ಸಮನ್ಸ್ ಕಳುಹಿಸಿತ್ತು.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಕ್ರೂರವಾದ ಲೈಂಗಿಕ ದೌರ್ಜನ್ಯದಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬ ಹೇಳಿದೆ. ಆದರೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್, “ಯುವತಿಯ ಕುತ್ತಿಗೆಗೆ ಪೆಟ್ಟಾಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ. ವಿಧಿವಿಜ್ಞಾನದ ವರದಿಗಳಲ್ಲಿ ಯಾವುದೇ ವೀರ್ಯದ ಸಾಕ್ಷ್ಯ ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

ಇದರ ನಡುವೆ ನಿನ್ನೆ, ಆದಿತ್ಯನಾಥ್, “ತಮ್ಮ ಸರ್ಕಾರ ಮಹಿಳೆಯರ ಸ್ವಾಭಿಮಾನವನ್ನು ಕಾಪಾಡಲು ಬದ್ಧ” ಎಂದು ಹೇಳಿಕೆ ನೀಡಿದ್ದಾರೆ.

ಆದರೆ ಹತ್ರಾಸ್ ಜಿಲ್ಲೆಯಾದ್ಯಂತ ಒಂದು ತಿಂಗಳವರೆಗೆ ನಿಷೇದಾಜ್ಞೆಯನ್ನು ಹೇರಲಾಗಿದ್ದು, ವಿರೋಧ ಪಕ್ಷ ಸೇರಿದಂತೆ ದೇಶದ ಮಾಧ್ಯಮಗಳು ಮತ್ತು ಹಲವು ಜನರು ಇದನ್ನು ವ್ಯಾಪಕವಾಗಿ ಖಂಡಿಸಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...