Homeಮುಖಪುಟಹತ್ರಾಸ್ ಅತ್ಯಾಚಾರ ಪ್ರಕರಣ ಸಿಬಿಐಗೆ: ನಿನ್ನೆ ಪ್ರಿಯಾಂಕ, ರಾಹುಲ್ ಹತ್ರಾಸ್‌ಗೆ ಬೇಟಿ ನೀಡಿದ್ದರು

ಹತ್ರಾಸ್ ಅತ್ಯಾಚಾರ ಪ್ರಕರಣ ಸಿಬಿಐಗೆ: ನಿನ್ನೆ ಪ್ರಿಯಾಂಕ, ರಾಹುಲ್ ಹತ್ರಾಸ್‌ಗೆ ಬೇಟಿ ನೀಡಿದ್ದರು

ಕ್ರೂರವಾದ ಲೈಂಗಿಕ ದೌರ್ಜನ್ಯದಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬ ಹೇಳಿದೆ. ಆದರೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್, “ಯುವತಿಯ ಕುತ್ತಿಗೆಗೆ ಪೆಟ್ಟಾಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ. ವಿಧಿವಿಜ್ಞಾನದ ವರದಿಗಳಲ್ಲಿ ಯಾವುದೇ ವೀರ್ಯದ ಸಾಕ್ಷ್ಯ ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ತನಿಖೆ ನಡೆಸಲು ವಹಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಶನಿವಾರ ಸಂಜೆ ತಿಳಿಸಿದೆ. ನಿನ್ನೆ ರಾತ್ರಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಆದೇಶ ಹೊರಬಿದ್ದಿದೆ.

“ಇಡೀ ಹತ್ರಾಸ್ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸಿಬಿಐಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ” ಎಂದು ಯುಪಿ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ಶುಕ್ರವಾರ, ರಾಷ್ಟ್ರೀಯ ರಾಜಧಾನಿ ದೆಹಲಿಯಲ್ಲಿ ಸೇರಿದಂತೆ ದೇಶಾದ್ಯಂತ ಪೊಲೀಸರು ಮತ್ತು ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗಿದ್ದು, ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಹಾಜರಿದ್ದು ನಾಲ್ವರು ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದರು.

ಎರಡು ದಿನಗಳ ಹಿಂದೆಯಷ್ಟೇ ಹತ್ರಾಸ್ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಹೊರಟಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿಯನ್ನು ಉತ್ತರ ಪ್ರದೇಶದ ಪೊಲೀಸರು ತಳ್ಳಾಡಿ ಬಂಧಿಸಿದ್ದರು. ಆದರೆ ಅವರು ನಿನ್ನೆ ಪಟ್ಟು ಬಿಡದೆ ಹತ್ರಾಸ್‌ಗೆ ಪ್ರಯಾಣಿಸಿದ್ದರು.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ಮುಂದೆಯೇ ಪ್ರತಿಭಟನೆ ನಡೆಸಿ, ಇದನ್ನು 2012ರ ನಿರ್ಭಯಾ ಪ್ರಕರಣದೊಂದಿಗೆ ಸಮೀಕರಿಸಿ ತಮ್ಮ ಆಕ್ರೋಶವನ್ನು ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ಹೊರಹಾಕಿದ್ದರು. ನಿನ್ನೆ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆದಿತ್ತು. ದೆಹಲಿಯ ಜಂತರ್ ಮಂತರ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಭೀಮ್ ಆರ್ಮಿಯ ಹೋರಾಟಗಾರರು ಸೇರಿದಂತೆ ನೂರಾರು ನಾಗರೀಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಯೋಗಿ ಸರ್ಕಾರದ ವಿರುದ್ಧ ಜನಾಕ್ರೋಶ ಮತ್ತು ಪ್ರತಿಭಟನೆಗಳು ಮುಗಿಲುಮುಟ್ಟಿದ್ದು, ಯೋಗಿ ರಾಜಿನಾಮೆ ನೀಡಬೇಕು, ಮತ್ತು ರಾಷ್ಟ್ರಪತಿ ಆಡಳಿತವನ್ನು ಹೇರಬೆಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಪ್ರಸ್ತುತ ಉತ್ತರಪ್ರದೇಶದ ಸ್ಥಿತಿ ಪ್ರಕ್ಷುಬ್ದ ವಾತಾವರಣದಲ್ಲಿದ್ದು, ಮಾಧ್ಯಮ ಸೇರಿದಂತೆ ಯಾವುದೇ ರಾಜಕಾರಣಿಗಳನ್ನೂ ಸಂತ್ರಸ್ತೆಯ ಕುಟುಂಬದ ಭೇಟಿಗೆ ಅನುಮತಿಸುತ್ತಿಲ್ಲ. ಗುರುವಾರ ಅವರ ಭೇಟಿಗಾಗಿ ಹೊರಟಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ತಡೆದು, ಅವರೊಟ್ಟಿಗೆ ಯುಪಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ನಿನ್ನೆ ಸಂತ್ರಸ್ತೆಯ ಸಹೋದರನೊಬ್ಬ ಯುಪಿ ಪೊಲೀಸರ ಗೃಹಬಂಧನದಿಂದ ತಪ್ಪಿಸಿಕೊಂಡು ಬಂದು, ಜಿಲ್ಲಾಡಳಿತ ಮತ್ತು ಪೊಲೀಸರು ತಮಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಮಾಧ್ಯಮಗಳ ಮುಂದೆ ಆರೋಪಿಸಿದ್ದ. ಇನ್ನು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ವಕೀಲೆ ಸೀಮಾ ಅವರನ್ನೂ ಪೊಲೀಸರು ತಡೆದಿದ್ದಾರೆ.

ಈ ವಿಷಯವನ್ನು ಸ್ವಯಂ ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳಿಗೆ ಸಮನ್ಸ್ ಕಳುಹಿಸಿತ್ತು.

ಇದನ್ನೂ ಓದಿ: ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಕ್ರೂರವಾದ ಲೈಂಗಿಕ ದೌರ್ಜನ್ಯದಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬ ಹೇಳಿದೆ. ಆದರೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್, “ಯುವತಿಯ ಕುತ್ತಿಗೆಗೆ ಪೆಟ್ಟಾಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ. ವಿಧಿವಿಜ್ಞಾನದ ವರದಿಗಳಲ್ಲಿ ಯಾವುದೇ ವೀರ್ಯದ ಸಾಕ್ಷ್ಯ ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

ಇದರ ನಡುವೆ ನಿನ್ನೆ, ಆದಿತ್ಯನಾಥ್, “ತಮ್ಮ ಸರ್ಕಾರ ಮಹಿಳೆಯರ ಸ್ವಾಭಿಮಾನವನ್ನು ಕಾಪಾಡಲು ಬದ್ಧ” ಎಂದು ಹೇಳಿಕೆ ನೀಡಿದ್ದಾರೆ.

ಆದರೆ ಹತ್ರಾಸ್ ಜಿಲ್ಲೆಯಾದ್ಯಂತ ಒಂದು ತಿಂಗಳವರೆಗೆ ನಿಷೇದಾಜ್ಞೆಯನ್ನು ಹೇರಲಾಗಿದ್ದು, ವಿರೋಧ ಪಕ್ಷ ಸೇರಿದಂತೆ ದೇಶದ ಮಾಧ್ಯಮಗಳು ಮತ್ತು ಹಲವು ಜನರು ಇದನ್ನು ವ್ಯಾಪಕವಾಗಿ ಖಂಡಿಸಿದ್ದಾರೆ.


ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...