Homeಮುಖಪುಟಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

2020ರ ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ದಲಿತ ಯುವತಿಯ ಕುಟುಂಬವನ್ನು ಗುರುವಾರ ಭೇಟಿಯಾಗಿದ್ದಾರೆ. ಬೆಳಗ್ಗೆ 11.15 ರ ಸುಮಾರಿಗೆ ಬೂಲ್ ಗರ್ಹಿ ಗ್ರಾಮವನ್ನು ತಲುಪಿದ ಅವರು, ಸಂತ್ರಸ್ತೆಯ ಮನೆಯಲ್ಲಿ ಅವರ ಕುಟುಂಬದೊಂದಿಗೆ ಸುಮಾರು 35 ನಿಮಿಷಗಳ ಕಾಲ ಕಳೆದು, ಅವರೊಂದಿಗೆ ಸಂವಾದ ನಡೆಸಿದ್ದಾರೆ. ಅದಾಗ್ಯೂ, ಅವರ ಭೇಟಿಗೆಂದು ಗ್ರಾಮದಲ್ಲಿ ನೆರೆದಿದ್ದ ಮಾಧ್ಯಮದ ಗುಂಪಿನೊಂದಿಗೆ ಮಾತನಾಡದೆ ಅವರು ನಿರ್ಗಮಿಸಿದ್ದಾರೆ. ಹತ್ರಾಸ್ ಅತ್ಯಾಚಾರ-ಕೊಲೆ

ರಾಹುಲ್ ಭೇಟಿಯ ಕಾರಣಕ್ಕೆ ಕುಗ್ರಾಮ ಮತ್ತು ಅದರ ಸುತ್ತಮುತ್ತ ಪೊಲೀಸ್ ನಿಯೋಜನೆಯನ್ನು ಹೆಚ್ಚಿಸಲಾಗಿತ್ತು. ರಾಹುಲ್ ಗಾಂಧಿ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹತ್ರಾಸ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಚಂದ್ರಗುಪ್ತ ವಿಕ್ರಮಾದಿತ್ಯ, “ರಾಹುಲ್ ಗಾಂಧಿ ಅವರಿಗೆ ಈ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಯಾವಾಗಲೂ ಅವರನ್ನು ಬೆಂಬಲಿಸುತ್ತಿದ್ದು, ಅದನ್ನು ಮುಂದುವರಿಸುತ್ತಾರೆ. ಅವರು ಇಂದು ಅವರ ಸಮಸ್ಯೆಗಳನ್ನು ಆಲಿಸಲು ಬಂದಿದ್ದು, ಅವರು ಸಮಸ್ಯೆಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಾಹುಲ್ ಗಾಂಧಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಹೋಗಲು ಪ್ರಯತ್ನಿಸಿದ್ದರು. ಆದರೆ, ಡಿಸೆಂಬರ್ 10 ರವರೆಗೆ ಸಾರ್ವಜನಿಕ ಪ್ರತಿನಿಧಿಗಳು ಸೇರಿದಂತೆ ಹೊರಗಿನವರ ಪ್ರವೇಶವನ್ನು ರಾಜ್ಯ ಸರ್ಕಾರ ನಿಷೇಧಿಸಿದ್ದರಿಂದ ಸ್ಥಳೀಯ ಅಧಿಕಾರಿಗಳು ಅವರನ್ನು ತಡೆದಿದ್ದರು. ಹತ್ರಾಸ್ ಅತ್ಯಾಚಾರ-ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದಕ್ಕೂ ಮುನ್ನ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ತಂದೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕಾಂಗ್ರೆಸ್ ಗುರುವಾರ ಹಂಚಿಕೊಂಡಿದೆ. ಅದರ ನಂತರ ರಾಹುಲ್ ಗಾಂಧಿ ಕುಟುಂಬವನ್ನು ಭೇಟಿ ಮಾಡಿದ್ದಾರೆ.
“ಹತ್ರಾಸ್‌ನ ಸಂತ್ರಸ್ತ ಕುಟುಂಬವು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ. ಈ ಪತ್ರದ ನಂತರ, ರಾಹುಲ್ ಗಾಂಧಿ ಇಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಬಂದಿದ್ದಾರೆ” ಎಂದು ಪಕ್ಷವು ಪತ್ರವನ್ನು ಹಂಚಿಕೊಂಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ನೇರವಾಗಿ ಉದ್ದೇಶಿಸಿ ಬರೆದಿದ್ದ ಪತ್ರದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ಭರವಸೆಗಳನ್ನು ನಿಜವಾಗಿಯು ಈಡೇರಿಸಲು ಮತ್ತು ಸೆಪ್ಟೆಂಬರ್ 14, 2020 ರಂದು ನಡೆದ ಘಟನೆಗೆ ನ್ಯಾಯವನ್ನು ಪಡೆಯಲು ಕುಟುಂಬವು ಇನ್ನೂ ಹೇಗೆ ಕಾಯುತ್ತಿದೆ ಎಂಬುದನ್ನು ವ್ಯಕ್ತಪಡಿಸಲಾಗಿತ್ತು.

ರಾಜ್ಯದ ಅಧಿಕಾರಿಗಳು ಮತ್ತು ನ್ಯಾಯಾಲಯವು ಈ ವಿಷಯವನ್ನು ನಿಭಾಯಿಸುವ ಬಗ್ಗೆ ಹತಾಶೆ ವ್ಯಕ್ತಪಡಿಸಿದ ಸಂಸತ್ರಸ್ತೆಯ ತಂದೆ ಓಂಪ್ರಕಾಶ್, ಯುಪಿ ಆಡಳಿತವು ಕುಟುಂಬದ ಅನುಮತಿಯಿಲ್ಲದೆ ಸಂತ್ರಸ್ತೆಯ ದೇಹವನ್ನು ಅಂತ್ಯಸಂಸ್ಕಾರ ಮಾಡಿದೆ ಎಂದು ಹೇಳಿದ್ದಾರೆ.

‘‘ನನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆನ್ನುಮೂಳೆ ಮುರಿದು ದೇಹವನ್ನು ಛಿದ್ರಗೊಳಿಸಲಾಗಿತ್ತು. ಬಳಿಕ ನನ್ನ ಮನೆಯವರ ಅನುಮತಿಯಿಲ್ಲದೆ ರಾತ್ರಿಯ ಕತ್ತಲಲ್ಲಿ ಆಡಳಿತವು ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಮಧ್ಯಾಹ್ನ 2.30ಕ್ಕೆ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿದ್ದಾರೆ. ಯಾರ ದೇಹವನ್ನು ಸುಟ್ಟು ಹಾಕಲಾಗಿದೆ ಎಂಬುದು ನನಗೆ ಮತ್ತು ನನ್ನ ಕುಟುಂಬಕ್ಕೆ ಇಂದಿಗೂ ತಿಳಿದಿಲ್ಲ,” ಎಂದು ಪತ್ರವು ಹೇಳಿತ್ತು.

“ಗೌರವಾನ್ವಿತ ರಾಹುಲ್ ಗಾಂಧಿ ಅವರೆ, ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನನ್ನ ಕುಟುಂಬದ ಒಬ್ಬರಿಗೆ ಉದ್ಯೋಗ ಮತ್ತು ಮನೆಯನ್ನು ನೀಡುವುದಾಗಿ ನನ್ನ ಕುಟುಂಬಕ್ಕೆ ಲಿಖಿತ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಉದ್ಯೋಗವನ್ನಾಗಲಿ ಅಥವಾ ಮನೆಯನ್ನಾಗಲಿ ನೀಡಿಲ್ಲ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ’’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘ಸಿಆರ್‌ಪಿಎಫ್ ಭದ್ರತೆಯಲ್ಲಿ ಜೈಲುವಾಸ’

ಸಂತ್ರಸ್ತೆಯ ಕುಟುಂಬವು ಸಿಆರ್‌ಪಿಎಫ್ ಒದಗಿಸಿದ ಭದ್ರತೆಯ ಅಡಿಯಲ್ಲಿ “ಜೈಲುವಾಸ” ಅನುಭವಿಸಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. “ಜೊತೆಗೆ ಉದ್ಯೋಗವಿಲ್ಲ ಮತ್ತು ಯಾರೂ ಉದ್ಯೋಗಕ್ಕಾಗಿ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಜಾಮೀನು ಪಡೆದಿರುವ ಆರೋಪಿಗಳು ಮುಕ್ತವಾಗಿ ತಿರುಗಾಡುತ್ತಿದ್ದು, ನಾವು ಮನೆಯಲ್ಲಿಯೇ ಇದ್ದು ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದೇವೆ’’ ಎಂದು ತಂದೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬೃಜೇಶ್ ಪಾಠಕ್, “ಈ ಪ್ರಕರಣದ ಬಗ್ಗೆ ಸಿಬಿಐ ಈಗಾಗಲೇ ವಿಚಾರಣೆ ನಡೆಸಿದೆ. ಬಿಜೆಪಿ ಆಡಳಿತದಲ್ಲಿ ಯಾವುದೇ ಅಪರಾಧಿಗಳನ್ನು ತಪ್ಪಿಸಿಕೊಳ್ಳಲು ಅವಕಾಶವಿಲ್ಲ. ಸಂಭಾಲ್ ಇರಲಿ ಅಥವಾ ಹತ್ರಾಸ್ ಆಗಿರಲಿ, ಅವರು (ಗಾಂಧಿ) ಅವರನ್ನು ಪ್ರಚಾರದಲ್ಲಿರಲು ಭೇಟಿ ನೀಡುತ್ತಾರೆಯೇ ಹೊರತು ಬೇರೆ ಯಾವುದೇ ಕಾರಣಕ್ಕಾಗಿ ಅಲ್ಲ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 3, 2020 ರಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು ಮತ್ತು ಮೃತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಹೋರಾಡುವುದಾಗಿ ಘೋಷಿಸಿದ್ದರು.

19 ವರ್ಷದ ಯುವತಿ ಮೇಲೆ ಸೆಪ್ಟೆಂಬರ್ 14, 2020 ರಂದು ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಈ ವೇಳೆ ತೀವ್ರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಅಲಿಘರ್‌ಗೆ ಮತ್ತು ನಂತರ ದೆಹಲಿಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಸೆಪ್ಟೆಂಬರ್ 29, 2020 ರಂದು ಸಾವನ್ನಪ್ಪಿದ್ದರು. ಅಕ್ಟೋಬರ್ 30 ರ ಮುಂಜಾನೆ ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರ ಅನುಮತಿಯಿಲ್ಲದೆ ನಡೆಸಲಾಗಿತ್ತು ಎಂದು ಅವರ ಕುಟುಂಬವು ಆರೋಪಿಸಿತ್ತು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, “ಕುಟುಂಬದವರ ಇಚ್ಛೆಯಂತೆ” ಶವಸಂಸ್ಕಾರವನ್ನು ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆಯ ನಂತರ, ಸಿಬಿಐ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ ಮತ್ತು ಎಲ್ಲಾ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...