Homeಮುಖಪುಟಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

2020ರ ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ದಲಿತ ಯುವತಿಯ ಕುಟುಂಬವನ್ನು ಗುರುವಾರ ಭೇಟಿಯಾಗಿದ್ದಾರೆ. ಬೆಳಗ್ಗೆ 11.15 ರ ಸುಮಾರಿಗೆ ಬೂಲ್ ಗರ್ಹಿ ಗ್ರಾಮವನ್ನು ತಲುಪಿದ ಅವರು, ಸಂತ್ರಸ್ತೆಯ ಮನೆಯಲ್ಲಿ ಅವರ ಕುಟುಂಬದೊಂದಿಗೆ ಸುಮಾರು 35 ನಿಮಿಷಗಳ ಕಾಲ ಕಳೆದು, ಅವರೊಂದಿಗೆ ಸಂವಾದ ನಡೆಸಿದ್ದಾರೆ. ಅದಾಗ್ಯೂ, ಅವರ ಭೇಟಿಗೆಂದು ಗ್ರಾಮದಲ್ಲಿ ನೆರೆದಿದ್ದ ಮಾಧ್ಯಮದ ಗುಂಪಿನೊಂದಿಗೆ ಮಾತನಾಡದೆ ಅವರು ನಿರ್ಗಮಿಸಿದ್ದಾರೆ. ಹತ್ರಾಸ್ ಅತ್ಯಾಚಾರ-ಕೊಲೆ

ರಾಹುಲ್ ಭೇಟಿಯ ಕಾರಣಕ್ಕೆ ಕುಗ್ರಾಮ ಮತ್ತು ಅದರ ಸುತ್ತಮುತ್ತ ಪೊಲೀಸ್ ನಿಯೋಜನೆಯನ್ನು ಹೆಚ್ಚಿಸಲಾಗಿತ್ತು. ರಾಹುಲ್ ಗಾಂಧಿ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹತ್ರಾಸ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಚಂದ್ರಗುಪ್ತ ವಿಕ್ರಮಾದಿತ್ಯ, “ರಾಹುಲ್ ಗಾಂಧಿ ಅವರಿಗೆ ಈ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಯಾವಾಗಲೂ ಅವರನ್ನು ಬೆಂಬಲಿಸುತ್ತಿದ್ದು, ಅದನ್ನು ಮುಂದುವರಿಸುತ್ತಾರೆ. ಅವರು ಇಂದು ಅವರ ಸಮಸ್ಯೆಗಳನ್ನು ಆಲಿಸಲು ಬಂದಿದ್ದು, ಅವರು ಸಮಸ್ಯೆಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಾಹುಲ್ ಗಾಂಧಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಹೋಗಲು ಪ್ರಯತ್ನಿಸಿದ್ದರು. ಆದರೆ, ಡಿಸೆಂಬರ್ 10 ರವರೆಗೆ ಸಾರ್ವಜನಿಕ ಪ್ರತಿನಿಧಿಗಳು ಸೇರಿದಂತೆ ಹೊರಗಿನವರ ಪ್ರವೇಶವನ್ನು ರಾಜ್ಯ ಸರ್ಕಾರ ನಿಷೇಧಿಸಿದ್ದರಿಂದ ಸ್ಥಳೀಯ ಅಧಿಕಾರಿಗಳು ಅವರನ್ನು ತಡೆದಿದ್ದರು. ಹತ್ರಾಸ್ ಅತ್ಯಾಚಾರ-ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದಕ್ಕೂ ಮುನ್ನ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ತಂದೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕಾಂಗ್ರೆಸ್ ಗುರುವಾರ ಹಂಚಿಕೊಂಡಿದೆ. ಅದರ ನಂತರ ರಾಹುಲ್ ಗಾಂಧಿ ಕುಟುಂಬವನ್ನು ಭೇಟಿ ಮಾಡಿದ್ದಾರೆ.
“ಹತ್ರಾಸ್‌ನ ಸಂತ್ರಸ್ತ ಕುಟುಂಬವು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ. ಈ ಪತ್ರದ ನಂತರ, ರಾಹುಲ್ ಗಾಂಧಿ ಇಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಬಂದಿದ್ದಾರೆ” ಎಂದು ಪಕ್ಷವು ಪತ್ರವನ್ನು ಹಂಚಿಕೊಂಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ನೇರವಾಗಿ ಉದ್ದೇಶಿಸಿ ಬರೆದಿದ್ದ ಪತ್ರದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ಭರವಸೆಗಳನ್ನು ನಿಜವಾಗಿಯು ಈಡೇರಿಸಲು ಮತ್ತು ಸೆಪ್ಟೆಂಬರ್ 14, 2020 ರಂದು ನಡೆದ ಘಟನೆಗೆ ನ್ಯಾಯವನ್ನು ಪಡೆಯಲು ಕುಟುಂಬವು ಇನ್ನೂ ಹೇಗೆ ಕಾಯುತ್ತಿದೆ ಎಂಬುದನ್ನು ವ್ಯಕ್ತಪಡಿಸಲಾಗಿತ್ತು.

ರಾಜ್ಯದ ಅಧಿಕಾರಿಗಳು ಮತ್ತು ನ್ಯಾಯಾಲಯವು ಈ ವಿಷಯವನ್ನು ನಿಭಾಯಿಸುವ ಬಗ್ಗೆ ಹತಾಶೆ ವ್ಯಕ್ತಪಡಿಸಿದ ಸಂಸತ್ರಸ್ತೆಯ ತಂದೆ ಓಂಪ್ರಕಾಶ್, ಯುಪಿ ಆಡಳಿತವು ಕುಟುಂಬದ ಅನುಮತಿಯಿಲ್ಲದೆ ಸಂತ್ರಸ್ತೆಯ ದೇಹವನ್ನು ಅಂತ್ಯಸಂಸ್ಕಾರ ಮಾಡಿದೆ ಎಂದು ಹೇಳಿದ್ದಾರೆ.

‘‘ನನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆನ್ನುಮೂಳೆ ಮುರಿದು ದೇಹವನ್ನು ಛಿದ್ರಗೊಳಿಸಲಾಗಿತ್ತು. ಬಳಿಕ ನನ್ನ ಮನೆಯವರ ಅನುಮತಿಯಿಲ್ಲದೆ ರಾತ್ರಿಯ ಕತ್ತಲಲ್ಲಿ ಆಡಳಿತವು ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಮಧ್ಯಾಹ್ನ 2.30ಕ್ಕೆ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿದ್ದಾರೆ. ಯಾರ ದೇಹವನ್ನು ಸುಟ್ಟು ಹಾಕಲಾಗಿದೆ ಎಂಬುದು ನನಗೆ ಮತ್ತು ನನ್ನ ಕುಟುಂಬಕ್ಕೆ ಇಂದಿಗೂ ತಿಳಿದಿಲ್ಲ,” ಎಂದು ಪತ್ರವು ಹೇಳಿತ್ತು.

“ಗೌರವಾನ್ವಿತ ರಾಹುಲ್ ಗಾಂಧಿ ಅವರೆ, ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನನ್ನ ಕುಟುಂಬದ ಒಬ್ಬರಿಗೆ ಉದ್ಯೋಗ ಮತ್ತು ಮನೆಯನ್ನು ನೀಡುವುದಾಗಿ ನನ್ನ ಕುಟುಂಬಕ್ಕೆ ಲಿಖಿತ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಉದ್ಯೋಗವನ್ನಾಗಲಿ ಅಥವಾ ಮನೆಯನ್ನಾಗಲಿ ನೀಡಿಲ್ಲ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ’’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘ಸಿಆರ್‌ಪಿಎಫ್ ಭದ್ರತೆಯಲ್ಲಿ ಜೈಲುವಾಸ’

ಸಂತ್ರಸ್ತೆಯ ಕುಟುಂಬವು ಸಿಆರ್‌ಪಿಎಫ್ ಒದಗಿಸಿದ ಭದ್ರತೆಯ ಅಡಿಯಲ್ಲಿ “ಜೈಲುವಾಸ” ಅನುಭವಿಸಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. “ಜೊತೆಗೆ ಉದ್ಯೋಗವಿಲ್ಲ ಮತ್ತು ಯಾರೂ ಉದ್ಯೋಗಕ್ಕಾಗಿ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಜಾಮೀನು ಪಡೆದಿರುವ ಆರೋಪಿಗಳು ಮುಕ್ತವಾಗಿ ತಿರುಗಾಡುತ್ತಿದ್ದು, ನಾವು ಮನೆಯಲ್ಲಿಯೇ ಇದ್ದು ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದೇವೆ’’ ಎಂದು ತಂದೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬೃಜೇಶ್ ಪಾಠಕ್, “ಈ ಪ್ರಕರಣದ ಬಗ್ಗೆ ಸಿಬಿಐ ಈಗಾಗಲೇ ವಿಚಾರಣೆ ನಡೆಸಿದೆ. ಬಿಜೆಪಿ ಆಡಳಿತದಲ್ಲಿ ಯಾವುದೇ ಅಪರಾಧಿಗಳನ್ನು ತಪ್ಪಿಸಿಕೊಳ್ಳಲು ಅವಕಾಶವಿಲ್ಲ. ಸಂಭಾಲ್ ಇರಲಿ ಅಥವಾ ಹತ್ರಾಸ್ ಆಗಿರಲಿ, ಅವರು (ಗಾಂಧಿ) ಅವರನ್ನು ಪ್ರಚಾರದಲ್ಲಿರಲು ಭೇಟಿ ನೀಡುತ್ತಾರೆಯೇ ಹೊರತು ಬೇರೆ ಯಾವುದೇ ಕಾರಣಕ್ಕಾಗಿ ಅಲ್ಲ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 3, 2020 ರಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು ಮತ್ತು ಮೃತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಹೋರಾಡುವುದಾಗಿ ಘೋಷಿಸಿದ್ದರು.

19 ವರ್ಷದ ಯುವತಿ ಮೇಲೆ ಸೆಪ್ಟೆಂಬರ್ 14, 2020 ರಂದು ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಈ ವೇಳೆ ತೀವ್ರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಅಲಿಘರ್‌ಗೆ ಮತ್ತು ನಂತರ ದೆಹಲಿಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಸೆಪ್ಟೆಂಬರ್ 29, 2020 ರಂದು ಸಾವನ್ನಪ್ಪಿದ್ದರು. ಅಕ್ಟೋಬರ್ 30 ರ ಮುಂಜಾನೆ ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರ ಅನುಮತಿಯಿಲ್ಲದೆ ನಡೆಸಲಾಗಿತ್ತು ಎಂದು ಅವರ ಕುಟುಂಬವು ಆರೋಪಿಸಿತ್ತು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, “ಕುಟುಂಬದವರ ಇಚ್ಛೆಯಂತೆ” ಶವಸಂಸ್ಕಾರವನ್ನು ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆಯ ನಂತರ, ಸಿಬಿಐ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ ಮತ್ತು ಎಲ್ಲಾ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...