Homeಮುಖಪುಟಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

ಹತ್ರಾಸ್ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ

- Advertisement -
- Advertisement -

2020ರ ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ದಲಿತ ಯುವತಿಯ ಕುಟುಂಬವನ್ನು ಗುರುವಾರ ಭೇಟಿಯಾಗಿದ್ದಾರೆ. ಬೆಳಗ್ಗೆ 11.15 ರ ಸುಮಾರಿಗೆ ಬೂಲ್ ಗರ್ಹಿ ಗ್ರಾಮವನ್ನು ತಲುಪಿದ ಅವರು, ಸಂತ್ರಸ್ತೆಯ ಮನೆಯಲ್ಲಿ ಅವರ ಕುಟುಂಬದೊಂದಿಗೆ ಸುಮಾರು 35 ನಿಮಿಷಗಳ ಕಾಲ ಕಳೆದು, ಅವರೊಂದಿಗೆ ಸಂವಾದ ನಡೆಸಿದ್ದಾರೆ. ಅದಾಗ್ಯೂ, ಅವರ ಭೇಟಿಗೆಂದು ಗ್ರಾಮದಲ್ಲಿ ನೆರೆದಿದ್ದ ಮಾಧ್ಯಮದ ಗುಂಪಿನೊಂದಿಗೆ ಮಾತನಾಡದೆ ಅವರು ನಿರ್ಗಮಿಸಿದ್ದಾರೆ. ಹತ್ರಾಸ್ ಅತ್ಯಾಚಾರ-ಕೊಲೆ

ರಾಹುಲ್ ಭೇಟಿಯ ಕಾರಣಕ್ಕೆ ಕುಗ್ರಾಮ ಮತ್ತು ಅದರ ಸುತ್ತಮುತ್ತ ಪೊಲೀಸ್ ನಿಯೋಜನೆಯನ್ನು ಹೆಚ್ಚಿಸಲಾಗಿತ್ತು. ರಾಹುಲ್ ಗಾಂಧಿ ಅವರ ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹತ್ರಾಸ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಚಂದ್ರಗುಪ್ತ ವಿಕ್ರಮಾದಿತ್ಯ, “ರಾಹುಲ್ ಗಾಂಧಿ ಅವರಿಗೆ ಈ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರು ಯಾವಾಗಲೂ ಅವರನ್ನು ಬೆಂಬಲಿಸುತ್ತಿದ್ದು, ಅದನ್ನು ಮುಂದುವರಿಸುತ್ತಾರೆ. ಅವರು ಇಂದು ಅವರ ಸಮಸ್ಯೆಗಳನ್ನು ಆಲಿಸಲು ಬಂದಿದ್ದು, ಅವರು ಸಮಸ್ಯೆಗಳ ಬಗ್ಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಾಹುಲ್ ಗಾಂಧಿ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹಿಂಸಾಚಾರ ಪೀಡಿತ ಸಂಭಾಲ್ ಜಿಲ್ಲೆಗೆ ಹೋಗಲು ಪ್ರಯತ್ನಿಸಿದ್ದರು. ಆದರೆ, ಡಿಸೆಂಬರ್ 10 ರವರೆಗೆ ಸಾರ್ವಜನಿಕ ಪ್ರತಿನಿಧಿಗಳು ಸೇರಿದಂತೆ ಹೊರಗಿನವರ ಪ್ರವೇಶವನ್ನು ರಾಜ್ಯ ಸರ್ಕಾರ ನಿಷೇಧಿಸಿದ್ದರಿಂದ ಸ್ಥಳೀಯ ಅಧಿಕಾರಿಗಳು ಅವರನ್ನು ತಡೆದಿದ್ದರು. ಹತ್ರಾಸ್ ಅತ್ಯಾಚಾರ-ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದಕ್ಕೂ ಮುನ್ನ ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ತಂದೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕಾಂಗ್ರೆಸ್ ಗುರುವಾರ ಹಂಚಿಕೊಂಡಿದೆ. ಅದರ ನಂತರ ರಾಹುಲ್ ಗಾಂಧಿ ಕುಟುಂಬವನ್ನು ಭೇಟಿ ಮಾಡಿದ್ದಾರೆ.
“ಹತ್ರಾಸ್‌ನ ಸಂತ್ರಸ್ತ ಕುಟುಂಬವು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿದೆ. ಈ ಪತ್ರದ ನಂತರ, ರಾಹುಲ್ ಗಾಂಧಿ ಇಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಲು ಬಂದಿದ್ದಾರೆ” ಎಂದು ಪಕ್ಷವು ಪತ್ರವನ್ನು ಹಂಚಿಕೊಂಡಿದೆ.

ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ನೇರವಾಗಿ ಉದ್ದೇಶಿಸಿ ಬರೆದಿದ್ದ ಪತ್ರದಲ್ಲಿ, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನೀಡಿದ ಭರವಸೆಗಳನ್ನು ನಿಜವಾಗಿಯು ಈಡೇರಿಸಲು ಮತ್ತು ಸೆಪ್ಟೆಂಬರ್ 14, 2020 ರಂದು ನಡೆದ ಘಟನೆಗೆ ನ್ಯಾಯವನ್ನು ಪಡೆಯಲು ಕುಟುಂಬವು ಇನ್ನೂ ಹೇಗೆ ಕಾಯುತ್ತಿದೆ ಎಂಬುದನ್ನು ವ್ಯಕ್ತಪಡಿಸಲಾಗಿತ್ತು.

ರಾಜ್ಯದ ಅಧಿಕಾರಿಗಳು ಮತ್ತು ನ್ಯಾಯಾಲಯವು ಈ ವಿಷಯವನ್ನು ನಿಭಾಯಿಸುವ ಬಗ್ಗೆ ಹತಾಶೆ ವ್ಯಕ್ತಪಡಿಸಿದ ಸಂಸತ್ರಸ್ತೆಯ ತಂದೆ ಓಂಪ್ರಕಾಶ್, ಯುಪಿ ಆಡಳಿತವು ಕುಟುಂಬದ ಅನುಮತಿಯಿಲ್ಲದೆ ಸಂತ್ರಸ್ತೆಯ ದೇಹವನ್ನು ಅಂತ್ಯಸಂಸ್ಕಾರ ಮಾಡಿದೆ ಎಂದು ಹೇಳಿದ್ದಾರೆ.

‘‘ನನ್ನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬೆನ್ನುಮೂಳೆ ಮುರಿದು ದೇಹವನ್ನು ಛಿದ್ರಗೊಳಿಸಲಾಗಿತ್ತು. ಬಳಿಕ ನನ್ನ ಮನೆಯವರ ಅನುಮತಿಯಿಲ್ಲದೆ ರಾತ್ರಿಯ ಕತ್ತಲಲ್ಲಿ ಆಡಳಿತವು ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಮಧ್ಯಾಹ್ನ 2.30ಕ್ಕೆ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿದ್ದಾರೆ. ಯಾರ ದೇಹವನ್ನು ಸುಟ್ಟು ಹಾಕಲಾಗಿದೆ ಎಂಬುದು ನನಗೆ ಮತ್ತು ನನ್ನ ಕುಟುಂಬಕ್ಕೆ ಇಂದಿಗೂ ತಿಳಿದಿಲ್ಲ,” ಎಂದು ಪತ್ರವು ಹೇಳಿತ್ತು.

“ಗೌರವಾನ್ವಿತ ರಾಹುಲ್ ಗಾಂಧಿ ಅವರೆ, ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನನ್ನ ಕುಟುಂಬದ ಒಬ್ಬರಿಗೆ ಉದ್ಯೋಗ ಮತ್ತು ಮನೆಯನ್ನು ನೀಡುವುದಾಗಿ ನನ್ನ ಕುಟುಂಬಕ್ಕೆ ಲಿಖಿತ ಭರವಸೆ ನೀಡಿದ್ದಾರೆ. ಆದರೆ ಇಲ್ಲಿಯವರೆಗೆ ಯಾವುದೇ ಉದ್ಯೋಗವನ್ನಾಗಲಿ ಅಥವಾ ಮನೆಯನ್ನಾಗಲಿ ನೀಡಿಲ್ಲ ಎಂದು ನಾನು ನಿಮಗೆ ತಿಳಿಸಲು ಬಯಸುತ್ತೇನೆ’’ ಎಂದು ಪತ್ರದಲ್ಲಿ ತಿಳಿಸಲಾಗಿದೆ.

‘ಸಿಆರ್‌ಪಿಎಫ್ ಭದ್ರತೆಯಲ್ಲಿ ಜೈಲುವಾಸ’

ಸಂತ್ರಸ್ತೆಯ ಕುಟುಂಬವು ಸಿಆರ್‌ಪಿಎಫ್ ಒದಗಿಸಿದ ಭದ್ರತೆಯ ಅಡಿಯಲ್ಲಿ “ಜೈಲುವಾಸ” ಅನುಭವಿಸಿದೆ ಎಂದು ಪತ್ರದಲ್ಲಿ ಹೇಳಲಾಗಿದೆ. “ಜೊತೆಗೆ ಉದ್ಯೋಗವಿಲ್ಲ ಮತ್ತು ಯಾರೂ ಉದ್ಯೋಗಕ್ಕಾಗಿ ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ಜಾಮೀನು ಪಡೆದಿರುವ ಆರೋಪಿಗಳು ಮುಕ್ತವಾಗಿ ತಿರುಗಾಡುತ್ತಿದ್ದು, ನಾವು ಮನೆಯಲ್ಲಿಯೇ ಇದ್ದು ನಾಲ್ಕು ವರ್ಷಗಳಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದೇವೆ’’ ಎಂದು ತಂದೆ ಪತ್ರದಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿಯವರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬೃಜೇಶ್ ಪಾಠಕ್, “ಈ ಪ್ರಕರಣದ ಬಗ್ಗೆ ಸಿಬಿಐ ಈಗಾಗಲೇ ವಿಚಾರಣೆ ನಡೆಸಿದೆ. ಬಿಜೆಪಿ ಆಡಳಿತದಲ್ಲಿ ಯಾವುದೇ ಅಪರಾಧಿಗಳನ್ನು ತಪ್ಪಿಸಿಕೊಳ್ಳಲು ಅವಕಾಶವಿಲ್ಲ. ಸಂಭಾಲ್ ಇರಲಿ ಅಥವಾ ಹತ್ರಾಸ್ ಆಗಿರಲಿ, ಅವರು (ಗಾಂಧಿ) ಅವರನ್ನು ಪ್ರಚಾರದಲ್ಲಿರಲು ಭೇಟಿ ನೀಡುತ್ತಾರೆಯೇ ಹೊರತು ಬೇರೆ ಯಾವುದೇ ಕಾರಣಕ್ಕಾಗಿ ಅಲ್ಲ” ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 3, 2020 ರಂದು ಸಂತ್ರಸ್ತ ಕುಟುಂಬವನ್ನು ಭೇಟಿಯಾಗಿದ್ದರು ಮತ್ತು ಮೃತರಿಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಹೋರಾಡುವುದಾಗಿ ಘೋಷಿಸಿದ್ದರು.

19 ವರ್ಷದ ಯುವತಿ ಮೇಲೆ ಸೆಪ್ಟೆಂಬರ್ 14, 2020 ರಂದು ಸಾಮೂಹಿಕ ಅತ್ಯಾಚಾರವೆಸಗಲಾಗಿತ್ತು. ಈ ವೇಳೆ ತೀವ್ರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಅಲಿಘರ್‌ಗೆ ಮತ್ತು ನಂತರ ದೆಹಲಿಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಸೆಪ್ಟೆಂಬರ್ 29, 2020 ರಂದು ಸಾವನ್ನಪ್ಪಿದ್ದರು. ಅಕ್ಟೋಬರ್ 30 ರ ಮುಂಜಾನೆ ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರ ಅನುಮತಿಯಿಲ್ಲದೆ ನಡೆಸಲಾಗಿತ್ತು ಎಂದು ಅವರ ಕುಟುಂಬವು ಆರೋಪಿಸಿತ್ತು. ಆದರೆ ಪೊಲೀಸರು ಇದನ್ನು ನಿರಾಕರಿಸಿದ್ದು, “ಕುಟುಂಬದವರ ಇಚ್ಛೆಯಂತೆ” ಶವಸಂಸ್ಕಾರವನ್ನು ನಡೆಸಲಾಯಿತು ಎಂದು ತಿಳಿಸಿದ್ದಾರೆ.

ಪ್ರಕರಣದ ಪ್ರಾಥಮಿಕ ತನಿಖೆಯ ನಂತರ, ಸಿಬಿಐ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ ಮತ್ತು ಎಲ್ಲಾ ನಾಲ್ವರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.

ಇದನ್ನೂ ಓದಿ: ‘ವೈಕಂ ಪ್ರಶಸ್ತಿ’ ಸ್ವೀಕರಿಸಿದ ದೇವನೂರ ಮಹಾದೇವ; ಕನ್ನಡದ ಸಾಹಿತಿಗೆ ಗೌರವ ಸೂಚಿಸಿದ ಪಿಣರಾಯಿ-ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...