Homeಮುಖಪುಟಹತ್ರಾಸ್‌| ರಜೆಗಾಗಿ ಎರಡನೇ ತರಗತಿ ಬಾಲಕನನ್ನು ಕೊಂದ ವಸತಿ ಶಾಲೆ ಹಿರಿಯ ವಿದ್ಯಾರ್ಥಿ?

ಹತ್ರಾಸ್‌| ರಜೆಗಾಗಿ ಎರಡನೇ ತರಗತಿ ಬಾಲಕನನ್ನು ಕೊಂದ ವಸತಿ ಶಾಲೆ ಹಿರಿಯ ವಿದ್ಯಾರ್ಥಿ?

- Advertisement -
- Advertisement -

ಹತ್ರಾಸ್‌ನಲ್ಲಿರುವ ಡಿಎಲ್ ಪಬ್ಲಿಕ್ ಸ್ಕೂಲ್‌ನ ವಸತಿ ಹಾಸ್ಟೆಲ್‌ನಲ್ಲಿ 11 ವರ್ಷದ 2 ನೇ ತರಗತಿ ವಿದ್ಯಾರ್ಥಿ ಕೃತಾರ್ಥ್ ಎಂಬ ಬಾಳಕನ ಭೀಕರ ಹತ್ಯೆ ಪ್ರಕರಣ ಆಘಾತ ಮೂಡಿಸಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಸುರಕ್ಷತೆ ಮತ್ತು ಹೊಣೆಗಾರಿಕೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಬಾಲಕನ ಕೊಲೆಗೆ ಕಾರಣ ಕೇಳಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

“ಶಾಲೆಗೆ ರಜೆ ಘೋಷಿಸಬೇಕು ಎಂಬ ಕಾರಣಕ್ಕಾಗಿ ಕೃತಾರ್ಥ್‌ನನ್ನು ಕೊಂದಿದ್ದಾನೆ” ಎಂದು ಆರೋಪಿಸಿ ಪೊಲೀಸರು ಹಿರಿಯ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಆದರೂ, ಕೃತಾರ್ಥ್ ಅವರ ಕುಟುಂಬವು ಈ ಹೇಳಿಕೆಯನ್ನು ತಿರಸ್ಕರಿಸಿದ್ದಾರೆ. ಶಾಲೆಯ ಆಡಳಿತದ ನಿರ್ಲಕ್ಷ್ಯವಿದೆ ಎಂದು ಆರೋಪಿಸಿರುವ ಅವರು, ಸಾವಿನ ಕುರಿತು ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಚಂದ್ಪಾದಲ್ಲಿನ ಚುರ್ಸೆನ್ ಗ್ರಾಮದ ನಿವಾಸಿ ಕೃತಾರ್ಥ್, ಸೆಪ್ಟೆಂಬರ್ 23, 2024 ರಂದು ಶಾಲಾ ವ್ಯವಸ್ಥಾಪಕ ದಿನೇಶ್ ಬಾಘೆಲ್ ಅವರ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದ. ಪೊಲೀಸ್ ವರದಿಗಳ ಪ್ರಕಾರ, ಆರೋಪಿ, ಮಥುರಾದ 8 ನೇ ತರಗತಿ ವಿದ್ಯಾರ್ಥಿ, ಸೆಪ್ಟೆಂಬರ್ 22 ರ ರಾತ್ರಿ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳು ಮಲಗಿದ್ದಾಗ ಕೃತಾರ್ಥ್ ಅವರನ್ನು ಟವೆಲ್‌ನಿಂದ ಕತ್ತು ಹಿಸುಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಗಂಭೀರ ಘಟನೆಗಳು ಅಥವಾ ಸಾವಿನ ಪ್ರಕರಣಗಳಲ್ಲಿ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚುವುದನ್ನು ಆನ್‌ಲೈನ್‌ನಲ್ಲಿ ನೋಡಿದ್ದೇನೆ ಎಂದು ಆರೋಪಿ ವಿಚಾರಣೆಯ ಸಮಯದಲ್ಲಿ ಹೇಳಿಕೊಂಡಿದ್ದಾನೆ. ಇದನ್ನು ನಂಬಿದ ಆತ ಜೂನಿಯರ್ ವಿದ್ಯಾರ್ಥಿಯನ್ನು ಕೊಲ್ಲಲು ಯೋಜನೆ ರೂಪಿಸಿದ್ದ. “ನಾನು ಕಿರಿಯ ಮಗುವನ್ನು ಕತ್ತು ಹಿಸುಕಿದರೆ, ಇದು ತಕ್ಷಣ ಶಾಲೆಯನ್ನು ಮುಚ್ಚಲು ಕಾರಣವಾಗುತ್ತದೆ ಎಂದು ನಾನು ಭಾವಿಸಿದೆ” ಎಂದು ಬಾಲಕ ಪೊಲೀಸರಿಗೆ ಹೇಳಿದ್ದಾನೆ.

ಕೃತಾರ್ಥ್ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢಪಟ್ಟಿದೆ. ಆತನ ಕುತ್ತಿಗೆಯ ಮೇಲೆ ಗಾಯದ ಗುರುತುಗಳು ಗೋಚರಿಸಿದ್ದು, ಪೊಲೀಸರ ಹೇಳಿಕೆಯನ್ನು ದೃಢಪಡಿಸುತ್ತದೆ.

ಕೊಲೆಯಾಗುವ ನಾಲ್ಕು ದಿನಗಳ ಮೊದಲು ಆರೋಪಿಗಳು ಸಿಕ್ಕಿಬೀಳುವುದನ್ನು ತಪ್ಪಿಸಲು ಹಾಸ್ಟೆಲ್ ಮೆಟ್ಟಿಲುಗಳ ಬಳಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಒಡೆದಿದ್ದರು. ಈ ಹಿಂದೆ ಇನ್ನಿಬ್ಬರು ವಿದ್ಯಾರ್ಥಿಗಳನ್ನು ಕೊಲ್ಲಲು ಯತ್ನಿಸಿ ವಿಫಲರಾಗಿದ್ದಾಗಿಯೂ ಆತ ತಪ್ಪೊಪ್ಪಿಕೊಂಡಿದ್ದಾನೆ.

ಕೊಲೆಯ ನಂತರ ಅಪರಾಧಕ್ಕೆ ಬಳಸಿದ ಟವೆಲ್ ಅನ್ನು ಶಾಲೆಯ ಹಿಂಭಾಗದ ಮರಗಳ ಬಳಿ ಎಸೆದಿದ್ದಾನೆ. ಆರೋಪಿಯ ಹೇಳಿಕೆಯ ಆಧಾರದ ಮೇಲೆ ಡಿಸೆಂಬರ್ 16 ರಂದು ಪೊಲೀಸರು ಟವೆಲ್ ಅನ್ನು ವಶಪಡಿಸಿಕೊಂಡರು.

ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಕೃತಾರ್ಥ್ ತಂದೆ ಶ್ರೀ ಕೃಷ್ಣ ಮತ್ತು ಚಿಕ್ಕಪ್ಪ ಪೊಲೀಸರ ಘಟನೆಗಳ ಆವೃತ್ತಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಹತ್ಯೆಗೆ ಪ್ರಾಥಮಿಕವಾಗಿ ಶಾಲಾ ಮ್ಯಾನೇಜರ್ ದಿನೇಶ್ ಬಾಘೇಲ್ ಕಾರಣ ಎಂದು ಆರೋಪಿಸಿದ್ದಾರೆ.

ಕೃತಾರ್ಥ್‌ನ ಅನಾರೋಗ್ಯದ ಬಗ್ಗೆ ಶಾಲೆಯವರು ತಿಳಿಸಿದಾಗ, ಅವರು ಹಾಸ್ಟೆಲ್‌ಗೆ ಧಾವಿಸಿದರು. ಆದರೆ, ಅವನು ಕಾಣೆಯಾಗಿರುವುದನ್ನು ಕಂಡು ಕುಟುಂಬವು ತಮ್ಮ ಸಂಕಟವನ್ನು ವಿವರಿಸಿದರು. ಬಾಘೆಲ್‌ನನ್ನು ಹಲವು ಬಾರಿ ಎದುರಿಸಿದ ನಂತರ, ಶಾಲಾ ಉಸ್ತುವಾರಿ ಅಂತಿಮವಾಗಿ ಸಾದಾಬಾದ್ ಬಳಿ ಕೃತಾರ್ಥ್‌ನ ನಿರ್ಜೀವ ದೇಹವನ್ನು ಅವನ ಕಾರಿನಲ್ಲಿ ತೋರಿಸಿದ್ದಾರೆ.

“ಪೊಲೀಸರು ನಿಜವಾದ ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ. ಮ್ಯಾನೇಜರ್ ಕಾರಿನಲ್ಲಿ ಮೃತ ದೇಹ ಪತ್ತೆಯಾಗಿದೆ, ಆದರೂ ಅವರನ್ನು ಕೊಲೆ ಆರೋಪದಿಂದ ಖುಲಾಸೆಗೊಳಿಸಲಾಗಿದೆ. ನಾವು ಹೈಕೋರ್ಟ್‌ಗೆ ಹೋಗುತ್ತೇವೆ” ಎಂದು ಘನಶ್ಯಾಮ್ ಹೇಳಿದರು.

ಇದನ್ನೂ ಓದಿ; ಹೆಚ್ಚುತ್ತಿರುವ ಆದಿವಾಸಿಗಳ ಆತ್ಮಹತ್ಯೆ: ಕೇರಳ ಸರ್ಕಾರ, ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...